AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಬಾಲಿವುಡ್ ಸಿನಿಮಾ ​ ಸೋಲುತ್ತಿರಲು ಕಾರಣ ಏನು? ಎಂದು ಹೇಳಿದ ರಿಷಬ್​ ಶೆಟ್ಟಿ

ರಿಷಬ್​ ಶೆಟ್ಟಿ ಅವರ ಪ್ರಕಾರ ಬಾಲಿವುಡ್​ (bollywood)ಸಿನಿಮಾ ಅತಿಯಾಗಿ ಪಾಶ್ಚಿಮಾತ್ಯ ಪ್ರಭಾವದಿಂದ ಕೂಡಿದೆ. ಇದನ್ನು ಬಿಟ್ಟು ಸ್ಥಳೀಯ ಪ್ರದೇಶದ ಜನ ಸಾಮಾನ್ಯರ ಬದುಕಿನ ಬಗ್ಗೆ ತಿಳಿದಿರುವ ಕಥೆಗಳನ್ನ ಜನರ ಬಳಿ ಕೊಂಡೊಯ್ಯಬೇಕು.

Rishab Shetty: ಬಾಲಿವುಡ್ ಸಿನಿಮಾ ​ ಸೋಲುತ್ತಿರಲು ಕಾರಣ ಏನು? ಎಂದು ಹೇಳಿದ ರಿಷಬ್​ ಶೆಟ್ಟಿ
ರಿಷಬ್
TV9 Web
| Edited By: |

Updated on: Nov 06, 2022 | 11:33 AM

Share

ರಿಷಬ್​ ಶೆಟ್ಟಿ ಅವರ ಪ್ರಕಾರ ಬಾಲಿವುಡ್(bollywood)ಸಿನಿಮಾ ಅತಿಯಾಗಿ ಪಾಶ್ಚಿಮಾತ್ಯ ಪ್ರಭಾವದಿಂದ ಕೂಡಿದೆ. ಇದನ್ನು ಬಿಟ್ಟು ಸ್ಥಳೀಯ ಪ್ರದೇಶದ ಜನ ಸಾಮಾನ್ಯರ ಬದುಕಿನ ಬಗ್ಗೆ ತಿಳಿದಿರುವ ಕಥೆಗಳನ್ನ ಜನರ ಬಳಿ ಕೊಂಡೊಯ್ಯಬೇಕು ಇದರಿಂದ ಸ್ಥಳೀಯ ಪ್ರೇಕ್ಷಕರನ್ನು ಸೆಳೆಯಲು ಸಾಧ್ಯ ಇದನ್ನು ಇಂದಿನ ಬಾಲಿವುಡ್​ ನಿರ್ಮಾಪಕರು ಮರೆತುಬಿಟ್ಟಿದ್ದಾರೆ ಎಂದಿದ್ದಾರೆ.

ಕಾಂತಾರ (kantara) ಒಂದು ಕಾಲ್ಪನಿಕ ಕಥೆಯಾಗಿದ್ದು ಪ್ರಾದೇಶಿಕ ಜನರ ಜೀವನವನ್ನಾಧರಿಸಿದೆ ಇನ್ನು ಈ ಸಿನಿಮಾವನ್ನು 16 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು ಭಾರತೀಯ ಸಿನಿಮಾದಲ್ಲಿ 2022 ರ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾಗಳಲ್ಲಿ ಕಾಂತಾರ ಕೂಡ ಒಂದಾಗಿದೆ.

ಕಾಂತಾರ ಸಿನಿಮಾ ಈಗಾಗಲೇ ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು ಈಗಾಗಲೇ 325ಕೋಟಿಗೂ ಅಧಿಕ ರೂಪಾಯಿ ಗಳಿಸಿದೆ ಹಿಂದಿಯಲ್ಲಿ 53ಕೋಟಿ ರೂಪಾಯಿ ಗಳಿಸುವುದರೊಂದಿಗೆ ಉತ್ತಮ ಪ್ರದರ್ಶನ ನೀಡುತ್ತಿದೆ. ಜೊತೆಗೆ ಇತರೆ ಭಾಷೆಗಳಲ್ಲಿ ರಿಮೇಕ್​ ಮಾಡುವ ಮಾತುಕತೆಗಳು ಕೇಳಿಬರುತ್ತಿವೆ ಇದರ ಬಗ್ಗೆ ರಿಷಬ್​ ಊಹೆ ಮಾಡಲಾರೆ ಎನ್ನುತ್ತಾರೆ.

ನಾವು ‘ಸಿನಿಮಾವನ್ನು ಪ್ರೇಕ್ಷಕರಿಗಾಗಿ ನಿರ್ಮಿಸುತ್ತೇವೆ ನಮಗಾಗಿ ಅಲ್ಲ. ನಾವು ಅವರ ಭಾವನೆಗಳನ್ನ ಮನಸ್ಸಿನಲ್ಲಿಟ್ಟುಕೊಂಡು ಅವರ ಮೌಲ್ಯಗಳು ಮತ್ತು ಜೀವನ ವಿಧಾನಗಳು ಯಾವುವು ಎಂಬುದನ್ನು ನೋಡಬೇಕಾಗಿದೆ. ಈಗ ಹೆಚ್ಚು ವಿದೇಶಿ ವ್ಯಾಮೋಹ ಮತ್ತು ಹಾಲಿವುಡ್ ಪ್ರಭಾವ ಅದೇ ತರಹದ ಸಿನಿಮಾ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದನ್ನು ನಿವೇಕೆ ಮಾಡುತ್ತಿರಿ? ಜನರು ಈಗಾಗಲೇ ಅಂತಹ ಸಿನಿಮಾಗಳನ್ನು ನೋಡಿದ್ದಾರೆ ಎಂದು ಹೇಳುತ್ತಾರೆ.

ಕಾಂತಾರ ಸಿನಿಮಾವನ್ನು ನಾನು ನೋಡುವ ದೃಷ್ಟಿ ಕೋನದಿಂದ ನೋಡಿದರೆ ಎಲ್ಲಾ ಸಿನಿಮಾದಲ್ಲೂ ಇರುವ ಹಾಗೆ ಹೀರೋ, ವಿಲನ್​, ರೋಮ್ಯಾನ್ಸ್ ಇದೆ. ಇದರ ಜೊತೆ ನಾನು ನೋಡಿದ ನನ್ನ ಹಳ್ಳಿಯ ಕಥೆಯನ್ನು ಪ್ರಸ್ತುತ ಪಡಿಸಿದ್ದೇನೆ ಬಹುಶಃ ನಿರ್ಮಾಪಕರು ತಮ್ಮ ಪ್ರದೇಶದಲ್ಲಿನ ಸಂಸ್ರ್ಕತಿಯನ್ನ ಕಂಡುಕೊಂಡ ಸಿನಿಮಾ ಮಾಡಿದರೆ ಅದು ಗೆಲ್ಲಬಹುದು ಆದರೂ ಅದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

ಇತ್ತಿಚೀನ ದಿನಗಳಲ್ಲಿ ಭಾರತೀಯತೆಯೊಂದಿಗೆ ಸಂಪರ್ಕ ಹೊಂದಿದ ಬಹುತೇಕ ಸಿನಿಮಾಗಳು ಯಶಸ್ಸು ಕಂಡಿವೆ ಗಂಗೂಬಾಯಿ ಕಥಿಯಾವಾಡಿ, ದಿ ಕಾಶ್ಮೀರಿ ಪೈಲ್ಸ್​, ಭೂಲ್​ ಭುಲೈಯಾ-2 ಇವುಗಳು ಹೆಚ್ಚಾಗಿ ಪ್ರಾದೇಶಿಕತೆಯನ್ನು ಸಾರುತ್ತವೆ ಅದನ್ನೇ ಜನರ ಬಳಿಗೆ ಕೊಂಡೊಯ್ಯಬೇಕು ಎಂದು ಸಿನಿಮಾ ನಿರ್ಮಾಪಕರಿಗೆ ಹೇಳಿದ್ದಾರೆ.

ಮತ್ತಷ್ಟು ಮನರಂಜನಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​