AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈವಕ್ಕೆ ಅಪಮಾನ, ಆಕ್ಷೇಪ ವ್ಯಕ್ತಪಡಿಸಿದ ರಿಷಬ್ ಶೆಟ್ಟಿ

Rishab Shetty: ರಣ್ವೀರ್ ಸಿಂಗ್ ಅವರು ‘ಕಾಂತಾರ’ ಸಿನಿಮಾ ಬಗ್ಗೆ ಮಾತನಾಡುತ್ತಾ ದೈವದ ಅನುಕರಣೆ ಮಾಡಿದ್ದರು. ‘ದೈವ’ವನ್ನು ದೆವ್ವ ಎಂದು ಕರೆದಿದ್ದರು. ರಣ್ವೀರ್ ಸಿಂಗ್ ಅವರ ಕೆಟ್ಟ ಅನುಕರಣೆ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ದೂರುಗಳು ಸಹ ದಾಖಲಾಗಿದ್ದವು. ಆದರೆ ರಿಷಬ್ ಶೆಟ್ಟಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ ಈಗ ಈ ಬಗ್ಗೆ ರಿಷಬ್ ಮಾತನಾಡಿದ್ದಾರೆ.

ದೈವಕ್ಕೆ ಅಪಮಾನ, ಆಕ್ಷೇಪ ವ್ಯಕ್ತಪಡಿಸಿದ ರಿಷಬ್ ಶೆಟ್ಟಿ
Rishab Shetty Ranveer Singh
ಮಂಜುನಾಥ ಸಿ.
|

Updated on:Dec 14, 2025 | 5:33 PM

Share

ಕೆಲ ದಿನಗಳ ಹಿಂದಷ್ಟೆ ಗೋವಾ ಸಿನಿಮೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ನಟ ರಿಷಬ್ ಶೆಟ್ಟಿ (Rishab Shetty) ಭಾಗವಹಿಸಿದ್ದರು. ಅದೇ ಕಾರ್ಯಕ್ರಮದಲ್ಲಿ ರಣ್ವೀರ್ ಸಿಂಗ್ ಸಹ ಅತಿಥಿಯಾಗಿ ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ರಣ್ವೀರ್ ಸಿಂಗ್ ಅವರು ‘ಕಾಂತಾರ’ ಸಿನಿಮಾ ಬಗ್ಗೆ ಮಾತನಾಡುತ್ತಾ ದೈವದ ಅನುಕರಣೆ ಮಾಡಿದ್ದರು. ‘ದೈವ’ವನ್ನು ದೆವ್ವ ಎಂದು ಕರೆದಿದ್ದರು. ರಣ್ವೀರ್ ಸಿಂಗ್ ಅವರ ಕೆಟ್ಟ ಅನುಕರಣೆ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ದೂರುಗಳು ಸಹ ದಾಖಲಾಗಿದ್ದವು. ಆದರೆ ರಿಷಬ್ ಶೆಟ್ಟಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ ಈಗ ಈ ಬಗ್ಗೆ ರಿಷಬ್ ಮಾತನಾಡಿದ್ದಾರೆ.

ಚೆನ್ನೈನಲ್ಲಿ ನಡೆದ ಬಿಹೈಂಡ್ ವೂಡ್ಸ್ ಗೋಲ್ಡ್ ಮೆಡಲ್ ಕಾರ್ಯಕ್ರಮದಲ್ಲಿ ಗೋಲ್ಡ್ ಮೆಡಲ್ ಸ್ವೀಕರಿಸಿದ ರಿಷಬ್ ಶೆಟ್ಟಿ, ದೈವದ ಅನುಕರಣೆಯ ಬಗ್ಗೆ ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿರುವ ರಿಷಬ್ ಶೆಟ್ಟಿ, ‘ಕಾಂತಾರ’ ಸಿನಿಮಾದ ಆಚರಣೆ ನಮ್ಮ ಮನೆಗೆ ನಮ್ಮ ಸಮುದಾಯದ, ಪ್ರಾಂತ್ಯಕ್ಕೆ ಸೇರಿದ ಆಚರಣೆ. ನಾನು ನೋಡಿದ್ದು, ಕೇಳಿದ್ದ ಕತೆಗಳನ್ನೇ ನಾನು ಸಿನಿಮಾ ಮಾಡಿದ್ದೇನೆ. ನಾನು ಸ್ವತಃ ದೈವವನ್ನು ನಂಬುವವ, ಆಚರಿಸುವವ ಹಾಗಾಗಿ ನನಗೆ ಅದು ಅತ್ಯಂತ ಪವಿತ್ರವಾದುದು’ ಎಂದಿದ್ದಾರೆ.

ಮುಂದುವರೆದು ಮಾತನಾಡಿ, ‘ಪಾಪ್ ಕಲ್ಚರ್​​ನಲ್ಲಿ ಹೇಗಾಗಿ ಬಿಡುತ್ತದೆ ಎಂದರೆ, ಸಿನಿಮಾನಲ್ಲಿ ತೋರಿಸಲಾಗಿದೆ ಎಂದ ಕೂಡಲೇ ಅದನ್ನು ಅನುಕರಣೆ ಮಾಡುವುದು, ವೇದಿಕೆಗೆ ತೆಗೆದುಕೊಂಡು ಹೋಗುವುದು, ವೇದಿಕೆ ಮೇಲೆ ಪ್ರದರ್ಶನ ಮಾಡುವುದು. ರೀಲ್ಸ್ ಮಾಡುವುದು, ಅನುಕರಣೆ ಮಾಡುವುದು, ಅವಹೇಳನ ಮಾಡುವುದು ಮಾಡಲಾಗುತ್ತದೆ. ಅದು ನನಗೆ ಬೇಸರ ಮೂಡಿಸುತ್ತವೆ. ಏಕೆಂದರೆ ಅದು ಕೇವಲ ಸಿನಿಮಾ ಮಾತ್ರವಲ್ಲ, ನಮ್ಮ ನಂಬಿಕೆ ಸಹ’ ಎಂದಿದ್ದಾರೆ ರಿಷಬ್ ಶೆಟ್ಟಿ.

ಇದನ್ನೂ ಓದಿ:ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಪ್ರೀತಿಯಿಂದ ವಿಶ್ ಮಾಡಿದ ರಿಷಬ್ ಶೆಟ್ಟಿ

‘ನಾವು ಸಿನಿಮಾ ಮಾಡಬೇಕಾದರೂ ಸಹ ಹಿರಿಯರನ್ನು, ದೈವದ ಬಗ್ಗೆ ಜ್ಞಾನಿಗಳನ್ನು ಆಹ್ವಾನಿಸಿ, ಅವರೊಂದಿಗೆ ಪ್ರತಿ ಹೆಜ್ಜೆಯನ್ನೂ ಚರ್ಚಿಸಿ, ದೈವಕ್ಕೆ, ಆಚರಣೆಗೆ, ನಂಬಿಕೆಗೆ ಎಲ್ಲೂ ಮುಕ್ಕಾಗದ ರೀತಿಯಲ್ಲಿ ನೇಮ ಮಾಡಿ ಸಿನಿಮಾ ಮಾಡಿದ್ದೇವೆ. ಇದೇ ಕಾರಣಕ್ಕೆ ನಾನು ಹೋದಲ್ಲೆಲ್ಲ, ದೈವವನ್ನು ಅನುಕರಣೆ ಮಾಡಬೇಡಿ ಎಂದು ಮನವಿ ಮಾಡುತ್ತೇನೆ. ‘ಕಾಂತಾರ’ ಸಿನಿಮಾದ ಎಲ್ಲ ದೃಶ್ಯಗಳೂ ಸಿನಿಮಾ ಎಂಬುದು ನಿಜ ಆದರೆ ದೈವದ ದೃಶ್ಯಗಳು ಕೇವಲ ಸಿನಿಮಾ ಮಾತ್ರವಲ್ಲ, ಅದು ನಮ್ಮ ನಂಬಿಕೆ’ ಎಂದಿದ್ದಾರೆ ರಿಷಬ್ ಶೆಟ್ಟಿ.

ರಣ್ವೀರ್ ಸಿಂಗ್ ಅವರ ಹೆಸರು ಹೇಳದೆ ರಿಷಬ್ ಅವರು, ‘ದೈವದ ಅನುಕರಣೆ ಮಾಡುವುದು ತಮಗೆ ಬೇಸರ ಮೂಡಿಸುತ್ತದೆ’ ಎಂದಿದ್ದಾರೆ. ರಣ್ವೀರ್ ಸಿಂಗ್ ಸಹ ತಮ್ಮ ವರ್ತನೆಯ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:30 pm, Sun, 14 December 25

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ