AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮಕ್ಕೂ ಮುನ್ನ..’;  ಅಯೋಧ್ಯೆಯಿಂದ ಫೋಟೋ ಹಂಚಿಕೊಂಡ ರಿಷಬ್ ಶೆಟ್ಟಿ

ಪ್ರಾಣ ಪ್ರತಿಷ್ಠಾಪನೆಗೂ ಮೊದಲು ಅಲ್ಲಿರುವ ಹಲವು ದೇವಾಲಯಕ್ಕೆ ರಿಷಬ್ ಭೇಟಿ ನೀಡಿದ್ದಾರೆ. ‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮಕ್ಕೂ ಮುನ್ನ.. ಹನುಮನ ದರ್ಶನ’ ಎಂದು ಅವರು ಬರೆದುಕೊಂಡಿದ್ದಾರೆ.

‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮಕ್ಕೂ ಮುನ್ನ..’;  ಅಯೋಧ್ಯೆಯಿಂದ ಫೋಟೋ ಹಂಚಿಕೊಂಡ ರಿಷಬ್ ಶೆಟ್ಟಿ
ಪ್ರಗತಿ-ರಿಷಬ್
ರಾಜೇಶ್ ದುಗ್ಗುಮನೆ
|

Updated on:Jan 22, 2024 | 8:00 AM

Share

ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ಹಲವು ಸೆಲೆಬ್ರಿಟಿಗಳು ಈಗಾಗಲೇ ಅಯೋಧ್ಯೆ ತಲುಪಿದ್ದಾರೆ. ಬಾಲಿವುಡ್ ನಟ ಅಮಿತಾಭ್ ಬಚ್ಚನ್ (Amitabh Bachchan), ಕನ್ನಡದ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಮೊದಲದಾದವರು ಅಯೋಧ್ಯೆ ತಲುಪಿದ್ದಾರೆ. ರಿಷಬ್ ಶೆಟ್ಟಿ ಕೂಡ ಈ ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಅಯೋಧ್ಯೆಗೆ ತೆರಳಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪ್ರಾಣ ಪ್ರತಿಷ್ಠಾಪನೆಗೂ ಮೊದಲು ಅಲ್ಲಿರುವ ಹಲವು ದೇವಾಲಯಕ್ಕೆ ರಿಷಬ್ ಭೇಟಿ ನೀಡಿದ್ದಾರೆ. ‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮಕ್ಕೂ ಮುನ್ನ.. ಹನುಮನ ದರ್ಶನ’ ಎಂದು ಅವರು ಬರೆದುಕೊಂಡಿದ್ದಾರೆ. ರಿಷಬ್ ಶೆಟ್ಟಿ ಜೊತೆ ಅವರ ಪತ್ನಿಯೂ ಅಯೋಧ್ಯೆಗೆ ತೆರಳಿದ್ದಾರೆ. ರಿಷಬ್ ಅವರು ಹೆಗಲಿಗೆ ಶಾಲು ಹೊದ್ದಿದ್ದಾರೆ. ಹಣೆಗೆ ಅರಿಶಿಣದ ಪಟ್ಟಿ ಬಳಿದುಕೊಂಡಿದ್ದಾರೆ.

ಆಮಂತ್ರಣ ಪತ್ರದ ಬಗ್ಗೆ

ಇತ್ತೀಚೆಗೆ ರಿಷಬ್ ಶೆಟ್ಟಿ ಅವರಿಗೆ ಪ್ರಾಣ ಪ್ರತಿಷ್ಠಾಪನೆಯ ಆಮಂತ್ರಣಪತ್ರ ತಲುಪಿತ್ತು. ಅಯೋಧ್ಯೆಯಿಂದ ಬಂದ ಆಹ್ವಾನ ಪತ್ರಿಕೆಯನ್ನು ಅವರು ಪಡೆದಿದ್ದರು. ಈ ಫೋಟೋನ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ: ಅಯೋಧ್ಯೆ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಪ್ರಧಾನಿ ಮೋದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಹಾರೈಕೆ

‘ಶ್ರೀರಾಮ ಜಯ ರಾಮ ಜಯ ಜಯ ರಾಮ. ನಮ್ಮ ಮನೆಗಳಲ್ಲಿ ಬಾಲ್ಯದಿಂದಲೂ ರಾಮನಾಮವ ಭಜಿಸುತ್ತಾ, ಆದರ್ಶಪ್ರಾಯ ಜೀವನದ ಕಥೆಗಳನ್ನು ಗುರು ಹಿರಿಯರಿಂದ ಕೇಳುತ್ತಾ ಬೆಳೆದವರು ನಾವು. ಆ ಶ್ರೀರಾಮ ತಾನು ಮಗುವಾಗಿ ಆಡಿದ, ಪ್ರಭುವಾಗಿ ಆಳಿದ ಅಯೋಧ್ಯೆಗೆ ಬರುವಂತೆ ಆಮಂತ್ರಣ ಕಳುಹಿಸಿದ್ದಾನೆ. ಇದು ನನ್ನ ಪೂರ್ವ ಜನ್ಮದ ಪುಣ್ಯ. ಅಯೋಧ್ಯೆಗೆ ಜಯವಾಗಲಿ, ಶ್ರೀರಾಮನಿಗೆ ಜಯವಾಗಲಿ’ ಎಂದು ರಿಷಬ್​ ಶೆಟ್ಟಿ ಪೋಸ್ಟ್​ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:33 am, Mon, 22 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು