AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ, ದೀಪಿಕಾ, ಕತ್ರಿನಾ​ ಅಲ್ಲ, ರಣಬೀರ್​ ಕಪೂರ್ ಮದುವೆಯನ್ನು​ ಬೇರೆಯವರ ಜತೆ ನಿಶ್ಚಯಿಸಿದ್ದ ರಿಷಿ ಕಪೂರ್​

ರಣಬೀರ್ ಮದುವೆ ಬಗ್ಗ ರಿಷಿ ಚಿಂತಿಸಿದ್ದು ನಿಜ. ರಣಬೀರ್​ ಮದುವೆಯನ್ನು ಯಾರ ಜತೆ ಮಾಡಬೇಕು ಎಂಬುದು ರಿಷಿ ಆಲೋಚನೆ ಆಗಿತ್ತು ಎಂಬುದು ಗೊತ್ತೇ? ಅದಕ್ಕೆ ಇಲ್ಲಿದೆ ಉತ್ತರ.

ಆಲಿಯಾ, ದೀಪಿಕಾ, ಕತ್ರಿನಾ​ ಅಲ್ಲ, ರಣಬೀರ್​ ಕಪೂರ್ ಮದುವೆಯನ್ನು​ ಬೇರೆಯವರ ಜತೆ ನಿಶ್ಚಯಿಸಿದ್ದ ರಿಷಿ ಕಪೂರ್​
ರಿಷಿ ಕಪೂರ್​ - ರಣಬೀರ್​ ಕಪೂರ್​
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:May 28, 2021 | 6:36 PM

Share

ಬಾಲಿವುಡ್​ ನಟ ರಣಬೀರ್​ ಕಪೂರ್​ ಸಿನಿಮಾಗಳ ಜತೆಗೆ ವೈಯಕ್ತಿಕ ಜೀವನದ ಮೂಲಕವೂ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಅವರು ಬಾಲಿವುಡ್​ನ ಹಲವು ಹೀರೋಯಿನ್​ಗಳ ಜತೆ ಡೇಟಿಂಗ್​ ನಡೆಸಿದ್ದಾರೆ. ಅಂತಿಮವಾಗಿ ಈಗ ಅವರು ಬಾಲಿವುಡ್​ ನಟಿ ಆಲಿಯಾ ಭಟ್​ ಅವರನ್ನು ಮದುವೆ ಆಗುತ್ತಿದ್ದಾರೆ. ಆದರೆ, ತಂದೆ ರಿಷಿ ಕಪೂರ್ ಬೇರೆಯವರ ಜತೆ ರಣಬೀರ್​ ಮದುವೆ ಮಾಡಲು ನಿಶ್ಚಯಿಸಿದ್ದರಂತೆ!

ರಣಬೀರ್ ಕಪೂರ್​ ಹಾಗೂ ಆಲಿಯಾ ಭಟ್​ ಪರಸ್ಪರ ಪ್ರೀತಿಸುತ್ತಿದ್ದಾರೆ. ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸುತ್ತಿದ್ದಾರೆ. ಇನ್ನು, ಇಬ್ಬರೂ ರಜೆಯ ಮಜ ಕಳೆಯೋಕೆ ಸಾಕಷ್ಟು ಬಾರಿ ವಿದೇಶಕ್ಕೆ ಹೋಗಿ ಬಂದಿದ್ದಾರೆ. ರಣಬೀರ್​ ಮದುವೆ ನೋಡಬೇಕು ಎಂಬುದು ತಂದೆ ರಿಷಿ ಅವರ ಕೊನೆ ಆಸೆ ಆಗಿತ್ತು. ಆದರೆ, ಅದು ಈಡೇರುವ ಮೊದಲೇ ರಿಷಿ ಮೃತಪಟ್ಟರು.

ರಣಬೀರ್ ಮದುವೆ ಬಗ್ಗೆ ರಿಷಿ ಚಿಂತಿಸಿದ್ದು ನಿಜ. ರಣಬೀರ್​ ಮದುವೆಯನ್ನು ಯಾರ ಜತೆ ಮಾಡಬೇಕು ಎಂಬುದು ರಿಷಿ ಆಲೋಚನೆ ಆಗಿತ್ತು ಎಂಬುದು ಗೊತ್ತೇ? ನಿರ್ದೇಶಕ ಅಯಾನ್​ ಮುಖರ್ಜಿ! ಹೌದು, ಹೀಗೊಂದು ಆಲೋಚನೆಯನ್ನು ರಿಷಿ ಮಾಡಿದ್ದರಂತೆ. 2018ರಲ್ಲಿ ಈ ಬಗ್ಗೆ ಟ್ವೀಟ್​ ಮಾಡಿದ್ದ ರಿಷಿ, ಅಯಾನ್​-ರಣಬೀರ್​ ಫೋಟೋ ಹಾಕಿ, ಬೆಸ್ಟ್​ ಫ್ರೆಂಡ್ಸ್​! ಇಬ್ಬರೂ ಮದುವೆ ಆದರೆ ಹೇಗಿರುತ್ತದೆ? ಎಂದು ಪ್ರಶ್ನೆ ಮಾಡಿದ್ದರು. ಈ ಟ್ವೀಟ್​ ಸಾಕಷ್ಟು ಚರ್ಚೆ ಕೂಡ ಹುಟ್ಟು ಹಾಕಿತ್ತು. ಕೆಲವರು ಇದನ್ನು ಟ್ರೋಲ್​ ಮಾಡಿದ್ದರು.

‘ವೇಕ್​ ಅಪ್​ ಸಿದ್​’​ ಸಿನಿಮಾವನ್ನು ಅಯಾನ್​ ಮುಖರ್ಜಿ ನಿರ್ದೇಶನ ಮಾಡಿದ್ದರು. ಈ ಚಿತ್ರದಲ್ಲಿ ರಣಬೀರ್​ ಕಪೂರ್​ ನಟಿಸಿದ್ದರು. ಇದಾದ ನಂತರದಲ್ಲಿ ಇಬ್ಬರ ನಡುವೆ ಉತ್ತಮ ಗೆಳೆತನ ಬೆಳೆದಿತ್ತು. ರಣಬೀರ್​-ಅಯಾನ್​ ಸಾಕಷ್ಟು ಪಾರ್ಟಿಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು.

ರಣಬೀರ್​ ಹಾಗೂ ಆಲಿಯಾ ಪ್ರೀತಿ ವಿಚಾರಕ್ಕೆ ಮನೆಯವರ ಒಪ್ಪಿಗೆ ಸಿಕ್ಕಿ ವರ್ಷಗಳೇ ಕಳೆದಿವೆ. 2020ರಲ್ಲಿ ಇಬ್ಬರೂ ಮದುವೆ ಆಗುವ ಆಲೋಚನೆ ಇಟ್ಟುಕೊಂಡಿದ್ದರು. ಇವರದ್ದು ಡೆಸ್ಟಿನೇಷನ್​ ಮದುವೆ ಎನ್ನುವ ಮಾತು ಕೂಡ ಕೇಳಿ ಬಂದಿತ್ತು. ಆದರೆ, ಕೊರೊನಾ ಇವರ ಪ್ಲ್ಯಾನ್​ಅನ್ನು ತಲೆಕೆಳಗೆ ಮಾಡಿತ್ತು. ಈ ಬಾರಿ ಇವರ ವಿವಾಹ ನಡೆಯಲಿದೆ ಎನ್ನಲಾಗಿತ್ತು. ಈ ಬಾರಿಯೂ ಕೊರೊನಾ ಕಾರಣದಿಂದ ಮದುವೆ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ: ದೀಪಿಕಾ, ಕತ್ರಿನಾ ಮಾತ್ರವಲ್ಲ, ಅನುಷ್ಕಾ ಶೆಟ್ಟಿ ಮೇಲೂ ಕಣ್ಣಿಟ್ಟಿದ್ದ ರಣಬೀರ್; ಬಹಿರಂಗವಾಗಿ ಹೇಳಿಕೊಂಡಿದ್ದ ನಟ

Published On - 5:03 pm, Fri, 28 May 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ