AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ, ದೀಪಿಕಾ, ಕತ್ರಿನಾ​ ಅಲ್ಲ, ರಣಬೀರ್​ ಕಪೂರ್ ಮದುವೆಯನ್ನು​ ಬೇರೆಯವರ ಜತೆ ನಿಶ್ಚಯಿಸಿದ್ದ ರಿಷಿ ಕಪೂರ್​

ರಣಬೀರ್ ಮದುವೆ ಬಗ್ಗ ರಿಷಿ ಚಿಂತಿಸಿದ್ದು ನಿಜ. ರಣಬೀರ್​ ಮದುವೆಯನ್ನು ಯಾರ ಜತೆ ಮಾಡಬೇಕು ಎಂಬುದು ರಿಷಿ ಆಲೋಚನೆ ಆಗಿತ್ತು ಎಂಬುದು ಗೊತ್ತೇ? ಅದಕ್ಕೆ ಇಲ್ಲಿದೆ ಉತ್ತರ.

ಆಲಿಯಾ, ದೀಪಿಕಾ, ಕತ್ರಿನಾ​ ಅಲ್ಲ, ರಣಬೀರ್​ ಕಪೂರ್ ಮದುವೆಯನ್ನು​ ಬೇರೆಯವರ ಜತೆ ನಿಶ್ಚಯಿಸಿದ್ದ ರಿಷಿ ಕಪೂರ್​
ರಿಷಿ ಕಪೂರ್​ - ರಣಬೀರ್​ ಕಪೂರ್​
ರಾಜೇಶ್ ದುಗ್ಗುಮನೆ
| Edited By: |

Updated on:May 28, 2021 | 6:36 PM

Share

ಬಾಲಿವುಡ್​ ನಟ ರಣಬೀರ್​ ಕಪೂರ್​ ಸಿನಿಮಾಗಳ ಜತೆಗೆ ವೈಯಕ್ತಿಕ ಜೀವನದ ಮೂಲಕವೂ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಅವರು ಬಾಲಿವುಡ್​ನ ಹಲವು ಹೀರೋಯಿನ್​ಗಳ ಜತೆ ಡೇಟಿಂಗ್​ ನಡೆಸಿದ್ದಾರೆ. ಅಂತಿಮವಾಗಿ ಈಗ ಅವರು ಬಾಲಿವುಡ್​ ನಟಿ ಆಲಿಯಾ ಭಟ್​ ಅವರನ್ನು ಮದುವೆ ಆಗುತ್ತಿದ್ದಾರೆ. ಆದರೆ, ತಂದೆ ರಿಷಿ ಕಪೂರ್ ಬೇರೆಯವರ ಜತೆ ರಣಬೀರ್​ ಮದುವೆ ಮಾಡಲು ನಿಶ್ಚಯಿಸಿದ್ದರಂತೆ!

ರಣಬೀರ್ ಕಪೂರ್​ ಹಾಗೂ ಆಲಿಯಾ ಭಟ್​ ಪರಸ್ಪರ ಪ್ರೀತಿಸುತ್ತಿದ್ದಾರೆ. ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸುತ್ತಿದ್ದಾರೆ. ಇನ್ನು, ಇಬ್ಬರೂ ರಜೆಯ ಮಜ ಕಳೆಯೋಕೆ ಸಾಕಷ್ಟು ಬಾರಿ ವಿದೇಶಕ್ಕೆ ಹೋಗಿ ಬಂದಿದ್ದಾರೆ. ರಣಬೀರ್​ ಮದುವೆ ನೋಡಬೇಕು ಎಂಬುದು ತಂದೆ ರಿಷಿ ಅವರ ಕೊನೆ ಆಸೆ ಆಗಿತ್ತು. ಆದರೆ, ಅದು ಈಡೇರುವ ಮೊದಲೇ ರಿಷಿ ಮೃತಪಟ್ಟರು.

ರಣಬೀರ್ ಮದುವೆ ಬಗ್ಗೆ ರಿಷಿ ಚಿಂತಿಸಿದ್ದು ನಿಜ. ರಣಬೀರ್​ ಮದುವೆಯನ್ನು ಯಾರ ಜತೆ ಮಾಡಬೇಕು ಎಂಬುದು ರಿಷಿ ಆಲೋಚನೆ ಆಗಿತ್ತು ಎಂಬುದು ಗೊತ್ತೇ? ನಿರ್ದೇಶಕ ಅಯಾನ್​ ಮುಖರ್ಜಿ! ಹೌದು, ಹೀಗೊಂದು ಆಲೋಚನೆಯನ್ನು ರಿಷಿ ಮಾಡಿದ್ದರಂತೆ. 2018ರಲ್ಲಿ ಈ ಬಗ್ಗೆ ಟ್ವೀಟ್​ ಮಾಡಿದ್ದ ರಿಷಿ, ಅಯಾನ್​-ರಣಬೀರ್​ ಫೋಟೋ ಹಾಕಿ, ಬೆಸ್ಟ್​ ಫ್ರೆಂಡ್ಸ್​! ಇಬ್ಬರೂ ಮದುವೆ ಆದರೆ ಹೇಗಿರುತ್ತದೆ? ಎಂದು ಪ್ರಶ್ನೆ ಮಾಡಿದ್ದರು. ಈ ಟ್ವೀಟ್​ ಸಾಕಷ್ಟು ಚರ್ಚೆ ಕೂಡ ಹುಟ್ಟು ಹಾಕಿತ್ತು. ಕೆಲವರು ಇದನ್ನು ಟ್ರೋಲ್​ ಮಾಡಿದ್ದರು.

‘ವೇಕ್​ ಅಪ್​ ಸಿದ್​’​ ಸಿನಿಮಾವನ್ನು ಅಯಾನ್​ ಮುಖರ್ಜಿ ನಿರ್ದೇಶನ ಮಾಡಿದ್ದರು. ಈ ಚಿತ್ರದಲ್ಲಿ ರಣಬೀರ್​ ಕಪೂರ್​ ನಟಿಸಿದ್ದರು. ಇದಾದ ನಂತರದಲ್ಲಿ ಇಬ್ಬರ ನಡುವೆ ಉತ್ತಮ ಗೆಳೆತನ ಬೆಳೆದಿತ್ತು. ರಣಬೀರ್​-ಅಯಾನ್​ ಸಾಕಷ್ಟು ಪಾರ್ಟಿಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು.

ರಣಬೀರ್​ ಹಾಗೂ ಆಲಿಯಾ ಪ್ರೀತಿ ವಿಚಾರಕ್ಕೆ ಮನೆಯವರ ಒಪ್ಪಿಗೆ ಸಿಕ್ಕಿ ವರ್ಷಗಳೇ ಕಳೆದಿವೆ. 2020ರಲ್ಲಿ ಇಬ್ಬರೂ ಮದುವೆ ಆಗುವ ಆಲೋಚನೆ ಇಟ್ಟುಕೊಂಡಿದ್ದರು. ಇವರದ್ದು ಡೆಸ್ಟಿನೇಷನ್​ ಮದುವೆ ಎನ್ನುವ ಮಾತು ಕೂಡ ಕೇಳಿ ಬಂದಿತ್ತು. ಆದರೆ, ಕೊರೊನಾ ಇವರ ಪ್ಲ್ಯಾನ್​ಅನ್ನು ತಲೆಕೆಳಗೆ ಮಾಡಿತ್ತು. ಈ ಬಾರಿ ಇವರ ವಿವಾಹ ನಡೆಯಲಿದೆ ಎನ್ನಲಾಗಿತ್ತು. ಈ ಬಾರಿಯೂ ಕೊರೊನಾ ಕಾರಣದಿಂದ ಮದುವೆ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ: ದೀಪಿಕಾ, ಕತ್ರಿನಾ ಮಾತ್ರವಲ್ಲ, ಅನುಷ್ಕಾ ಶೆಟ್ಟಿ ಮೇಲೂ ಕಣ್ಣಿಟ್ಟಿದ್ದ ರಣಬೀರ್; ಬಹಿರಂಗವಾಗಿ ಹೇಳಿಕೊಂಡಿದ್ದ ನಟ

Published On - 5:03 pm, Fri, 28 May 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು