AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಹೀರೋ ಆದ ರಿಷಿಕುಮಾರ ಸ್ವಾಮಿ; ‘ಸರ್ವಸ್ಯ ನಾಟ್ಯಂ’ ಚಿತ್ರದಲ್ಲಿ ಗೆಟಪ್​ ಚೇಂಜ್​

ಈ ಹಿಂದೆ ಬಿಗ್​ಬಾಸ್​ಗೆ ತೆರಳಿ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡಿದ್ದ ರಿಷಿಕುಮಾರ ಸ್ವಾಮಿ ಈಗ ‘ಸರ್ವಸ್ಯ ನಾಟ್ಯಂ’ ಸಿನಿಮಾದಲ್ಲಿ ಡ್ಯಾನ್ಸ್​ ಟೀಚರ್​ ಪಾತ್ರ ಮಾಡಿದ್ದಾರೆ.

ಸಿನಿಮಾ ಹೀರೋ ಆದ ರಿಷಿಕುಮಾರ ಸ್ವಾಮಿ; ‘ಸರ್ವಸ್ಯ ನಾಟ್ಯಂ’ ಚಿತ್ರದಲ್ಲಿ ಗೆಟಪ್​ ಚೇಂಜ್​
ರಿಷಿಕುಮಾರ ಸ್ವಾಮಿ
TV9 Web
| Edited By: |

Updated on: Jan 13, 2022 | 3:49 PM

Share

ಹಲವು ವಿಚಾರಗಳ ಮೂಲಕ ಸದ್ದು ಮಾಡಿದ್ದ ರಿಷಿಕುಮಾರ ಸ್ವಾಮೀಜಿ ಅವರು ಈಗ ಸಿನಿಮಾ ಹೀರೋ ಕೂಡ ಆಗಿದ್ದಾರೆ. ಈ ಹಿಂದೆಯೂ ಅವರು ಬಣ್ಣ ಹಚ್ಚುವ ಪ್ರಯತ್ನ ಮಾಡಿದ್ದರು. ಆದರೆ ಆ ಚಿತ್ರದ ಕೆಲಸಗಳು ಕೊಂಚ ವಿಳಂಬ ಆದವು. ಈಗ ಅವರ ‘ಸರ್ವಸ್ಯ ನಾಟ್ಯಂ’ ಶೀರ್ಷಿಕೆಯ ಸಿನಿಮಾ ಮೂಲಕ ಜನರನ್ನು ರಂಜಿಸಲು ಸಜ್ಜಾಗಿದ್ದಾರೆ. ಈ ಸಿನಿಮಾದ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಈ ಸಿನಿಮಾಗೆ ಡ್ಯಾನ್ಸ್​ ಮಾಸ್ಟರ್​ ವಿಜಯನಗರ ಮಂಜು ಅವರು ನಿರ್ದೇಶನ ಮಾಡಿದ್ದಾರೆ. ಮನೋಜ್​ ಶರ್ಮಾ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದ ಹಾಡುಗಳಿಗೆ ಎ.ಟಿ. ರವೀಶ್​ ಅವರ ಸಂಗೀತ ನಿರ್ದೇಶನವಿದೆ.

ಈ ಹಿಂದೆ ಬಿಗ್​ಬಾಸ್​ಗೆ ತೆರಳಿ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡಿದ್ದ ರಿಷಿಕುಮಾರ ಸ್ವಾಮಿ ‘ಸರ್ವಸ್ಯ ನಾಟ್ಯಂ’ ಸಿನಿಮಾದಲ್ಲಿ ಡ್ಯಾನ್ಸ್​ ಟೀಚರ್​ ಪಾತ್ರ ಮಾಡಿದ್ದಾರೆ. ಅವರ ಸಿನಿಮಾ ಪ್ರಯತ್ನಕ್ಕೆ ಬೆಂಬಲ ನೀಡಲು ಬಂದು ಆಡಿಯೋ ರಿಲೀಸ್​ ಮಾಡಿದ್ದಾರೆ ಹನುಮಂತನಾಥ ಮಹಾಸ್ವಾಮಿಗಳು ಹಾಗೂ ಸಿದ್ದಲಿಂಗ ಮಹಾಸ್ವಾಮಿಗಳು.

ತಮ್ಮ ಪಾತ್ರದ ಬಗ್ಗೆ ರಿಷಿಕುಮಾರ ಸ್ವಾಮಿ ಮಾಹಿತಿ ನೀಡಿದ್ದಾರೆ. ‘ಎಲ್ಲ ಡ್ಯಾನ್ಸ್​ ಟೀಚರ್​ಗಳು ತುಳಿತಕ್ಕೆ ಸಿಕ್ಕು ನೋವು ಅನುಭವಿಸಿರುತ್ತಾರೆ. ಅಂತಹ ಒಬ್ಬ ಡ್ಯಾನ್ಸ್​ ಶಿಕ್ಷಕನ ಪಾತ್ರವನ್ನು ನಾನು ಮಾಡಿದ್ದೇನೆ. ಅನಾಥ ಮಕ್ಕಳಿಗೆ ನೃತ್ಯ ಕಲಿಸಿ, ಅವರನ್ನು ದೊಡ್ಡ ಸ್ಪರ್ಧೆಗೆ ಸಜ್ಜುಗೊಳಿಸುವವನ ಪಾತ್ರ ಅದು. ಈ ಸಿನಿಮಾದ ನಿರ್ದೇಶಕ ಮಂಜು ಅವರ ತಾಳ್ಮೆ ದೊಡ್ಡದು. ಅನೇಕ ಮಕ್ಕಳು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಅವರನ್ನು ನಿಭಾಯಿಸುವುದು ಸುಲಭ ಆಗಿರಲಿಲ್ಲ. ನಿರ್ಮಾಪಕ ಮನೋಜ್​ ವರ್ಮಾ ಅವರು ಈ ಸಿನಿಮಾ ನಿರ್ಮಾಣ ಮಾಡುವ ಮೂಲಕ ಅನೇಕರಿಗೆ ಅವಕಾಶ ನೀಡಿದ್ದಾರೆ’ ಎಂದಿದ್ದಾರೆ ರಿಷಿಕುಮಾರ ಸ್ವಾಮಿ.

‘ಒಬ್ಬ ಸ್ವಾಮಿ ಸಿನಿಮಾ ಮಾಡಿದ್ದಾರೆ ಅಂತ ಟೀಕೆ ಮಾಡಿದವರು ಹಲವು ಜನರು ಇದ್ದಾರೆ. ಕಲ್ಲು ಹೊಡೆಯುವವರು ಜಾಸ್ತಿ ಜನರು ಇರುತ್ತಾರೆ. ಆ ಕಲ್ಲುಗಳನ್ನೇ ಬಳಸಿಕೊಂಡು ನಾವು ಮನೆಕಟ್ಟಬೇಕು’ ಎಂದು ತಮ್ಮ ಟೀಕಾಕಾರರಿಗೆ ರಿಷಿಕುಮಾರ ಸ್ವಾಮಿ ತಿರುಗೇಟು ನೀಡಿದ್ದಾರೆ. ರಿಯಾಲಿಟಿ ಶೋಗಳಲ್ಲಿ ನಡೆಯುವ ಕೆಲವು ವಿಚಾರಗಳನ್ನು ಇಟ್ಟುಕೊಂಡು ವಿಜಯನಗರ ಮಂಜು ಅವರು ಈ ಸಿನಿಮಾ ನಿರ್ದೇಶಿಸಿದ್ದಾರೆ. ಯುಗಾದಿ ವೇಳೆಗೆ ಸಿನಿಮಾವನ್ನು ತೆರೆಕಾಣಿಸುವ ಗುರಿಯನ್ನು ಚಿತ್ರತಂಡ ಇಟ್ಟುಕೊಂಡಿದೆ. ಸಿರಿ ಮ್ಯೂಸಿಕ್​ ಮೂಲಕ ‘ಸರ್ವಸ್ಯ ನಾಟ್ಯಂ’ ಚಿತ್ರದ ಹಾಡು ಬಿಡುಗಡೆ ಆಗಿದೆ.

ಇದನ್ನೂ ಓದಿ:

ಮೂವರು ಸುಂದರಿಯರ ಜತೆ ಧರ್ಮ ಕೀರ್ತಿರಾಜ್​; ‘ಸುಮನ್​’ ಚಿತ್ರದ ಹಾಡುಗಳು ರಿಲೀಸ್​

ನಂದಕಿಶೋರ್​, ಧರ್ಮ ಕೀರ್ತಿರಾಜ್​ ಫ್ರೆಂಡ್​ಶಿಪ್​ ಮೆಲುಕು; ಗೆಳೆಯನ ಚಿತ್ರಕ್ಕೆ ‘ಪೊಗರು’ ಡೈರೆಕ್ಟರ್​ ಸಾಥ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ