AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಹೀರೋ ಆದ ರಿಷಿಕುಮಾರ ಸ್ವಾಮಿ; ‘ಸರ್ವಸ್ಯ ನಾಟ್ಯಂ’ ಚಿತ್ರದಲ್ಲಿ ಗೆಟಪ್​ ಚೇಂಜ್​

ಈ ಹಿಂದೆ ಬಿಗ್​ಬಾಸ್​ಗೆ ತೆರಳಿ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡಿದ್ದ ರಿಷಿಕುಮಾರ ಸ್ವಾಮಿ ಈಗ ‘ಸರ್ವಸ್ಯ ನಾಟ್ಯಂ’ ಸಿನಿಮಾದಲ್ಲಿ ಡ್ಯಾನ್ಸ್​ ಟೀಚರ್​ ಪಾತ್ರ ಮಾಡಿದ್ದಾರೆ.

ಸಿನಿಮಾ ಹೀರೋ ಆದ ರಿಷಿಕುಮಾರ ಸ್ವಾಮಿ; ‘ಸರ್ವಸ್ಯ ನಾಟ್ಯಂ’ ಚಿತ್ರದಲ್ಲಿ ಗೆಟಪ್​ ಚೇಂಜ್​
ರಿಷಿಕುಮಾರ ಸ್ವಾಮಿ
TV9 Web
| Edited By: |

Updated on: Jan 13, 2022 | 3:49 PM

Share

ಹಲವು ವಿಚಾರಗಳ ಮೂಲಕ ಸದ್ದು ಮಾಡಿದ್ದ ರಿಷಿಕುಮಾರ ಸ್ವಾಮೀಜಿ ಅವರು ಈಗ ಸಿನಿಮಾ ಹೀರೋ ಕೂಡ ಆಗಿದ್ದಾರೆ. ಈ ಹಿಂದೆಯೂ ಅವರು ಬಣ್ಣ ಹಚ್ಚುವ ಪ್ರಯತ್ನ ಮಾಡಿದ್ದರು. ಆದರೆ ಆ ಚಿತ್ರದ ಕೆಲಸಗಳು ಕೊಂಚ ವಿಳಂಬ ಆದವು. ಈಗ ಅವರ ‘ಸರ್ವಸ್ಯ ನಾಟ್ಯಂ’ ಶೀರ್ಷಿಕೆಯ ಸಿನಿಮಾ ಮೂಲಕ ಜನರನ್ನು ರಂಜಿಸಲು ಸಜ್ಜಾಗಿದ್ದಾರೆ. ಈ ಸಿನಿಮಾದ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಈ ಸಿನಿಮಾಗೆ ಡ್ಯಾನ್ಸ್​ ಮಾಸ್ಟರ್​ ವಿಜಯನಗರ ಮಂಜು ಅವರು ನಿರ್ದೇಶನ ಮಾಡಿದ್ದಾರೆ. ಮನೋಜ್​ ಶರ್ಮಾ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದ ಹಾಡುಗಳಿಗೆ ಎ.ಟಿ. ರವೀಶ್​ ಅವರ ಸಂಗೀತ ನಿರ್ದೇಶನವಿದೆ.

ಈ ಹಿಂದೆ ಬಿಗ್​ಬಾಸ್​ಗೆ ತೆರಳಿ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡಿದ್ದ ರಿಷಿಕುಮಾರ ಸ್ವಾಮಿ ‘ಸರ್ವಸ್ಯ ನಾಟ್ಯಂ’ ಸಿನಿಮಾದಲ್ಲಿ ಡ್ಯಾನ್ಸ್​ ಟೀಚರ್​ ಪಾತ್ರ ಮಾಡಿದ್ದಾರೆ. ಅವರ ಸಿನಿಮಾ ಪ್ರಯತ್ನಕ್ಕೆ ಬೆಂಬಲ ನೀಡಲು ಬಂದು ಆಡಿಯೋ ರಿಲೀಸ್​ ಮಾಡಿದ್ದಾರೆ ಹನುಮಂತನಾಥ ಮಹಾಸ್ವಾಮಿಗಳು ಹಾಗೂ ಸಿದ್ದಲಿಂಗ ಮಹಾಸ್ವಾಮಿಗಳು.

ತಮ್ಮ ಪಾತ್ರದ ಬಗ್ಗೆ ರಿಷಿಕುಮಾರ ಸ್ವಾಮಿ ಮಾಹಿತಿ ನೀಡಿದ್ದಾರೆ. ‘ಎಲ್ಲ ಡ್ಯಾನ್ಸ್​ ಟೀಚರ್​ಗಳು ತುಳಿತಕ್ಕೆ ಸಿಕ್ಕು ನೋವು ಅನುಭವಿಸಿರುತ್ತಾರೆ. ಅಂತಹ ಒಬ್ಬ ಡ್ಯಾನ್ಸ್​ ಶಿಕ್ಷಕನ ಪಾತ್ರವನ್ನು ನಾನು ಮಾಡಿದ್ದೇನೆ. ಅನಾಥ ಮಕ್ಕಳಿಗೆ ನೃತ್ಯ ಕಲಿಸಿ, ಅವರನ್ನು ದೊಡ್ಡ ಸ್ಪರ್ಧೆಗೆ ಸಜ್ಜುಗೊಳಿಸುವವನ ಪಾತ್ರ ಅದು. ಈ ಸಿನಿಮಾದ ನಿರ್ದೇಶಕ ಮಂಜು ಅವರ ತಾಳ್ಮೆ ದೊಡ್ಡದು. ಅನೇಕ ಮಕ್ಕಳು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಅವರನ್ನು ನಿಭಾಯಿಸುವುದು ಸುಲಭ ಆಗಿರಲಿಲ್ಲ. ನಿರ್ಮಾಪಕ ಮನೋಜ್​ ವರ್ಮಾ ಅವರು ಈ ಸಿನಿಮಾ ನಿರ್ಮಾಣ ಮಾಡುವ ಮೂಲಕ ಅನೇಕರಿಗೆ ಅವಕಾಶ ನೀಡಿದ್ದಾರೆ’ ಎಂದಿದ್ದಾರೆ ರಿಷಿಕುಮಾರ ಸ್ವಾಮಿ.

‘ಒಬ್ಬ ಸ್ವಾಮಿ ಸಿನಿಮಾ ಮಾಡಿದ್ದಾರೆ ಅಂತ ಟೀಕೆ ಮಾಡಿದವರು ಹಲವು ಜನರು ಇದ್ದಾರೆ. ಕಲ್ಲು ಹೊಡೆಯುವವರು ಜಾಸ್ತಿ ಜನರು ಇರುತ್ತಾರೆ. ಆ ಕಲ್ಲುಗಳನ್ನೇ ಬಳಸಿಕೊಂಡು ನಾವು ಮನೆಕಟ್ಟಬೇಕು’ ಎಂದು ತಮ್ಮ ಟೀಕಾಕಾರರಿಗೆ ರಿಷಿಕುಮಾರ ಸ್ವಾಮಿ ತಿರುಗೇಟು ನೀಡಿದ್ದಾರೆ. ರಿಯಾಲಿಟಿ ಶೋಗಳಲ್ಲಿ ನಡೆಯುವ ಕೆಲವು ವಿಚಾರಗಳನ್ನು ಇಟ್ಟುಕೊಂಡು ವಿಜಯನಗರ ಮಂಜು ಅವರು ಈ ಸಿನಿಮಾ ನಿರ್ದೇಶಿಸಿದ್ದಾರೆ. ಯುಗಾದಿ ವೇಳೆಗೆ ಸಿನಿಮಾವನ್ನು ತೆರೆಕಾಣಿಸುವ ಗುರಿಯನ್ನು ಚಿತ್ರತಂಡ ಇಟ್ಟುಕೊಂಡಿದೆ. ಸಿರಿ ಮ್ಯೂಸಿಕ್​ ಮೂಲಕ ‘ಸರ್ವಸ್ಯ ನಾಟ್ಯಂ’ ಚಿತ್ರದ ಹಾಡು ಬಿಡುಗಡೆ ಆಗಿದೆ.

ಇದನ್ನೂ ಓದಿ:

ಮೂವರು ಸುಂದರಿಯರ ಜತೆ ಧರ್ಮ ಕೀರ್ತಿರಾಜ್​; ‘ಸುಮನ್​’ ಚಿತ್ರದ ಹಾಡುಗಳು ರಿಲೀಸ್​

ನಂದಕಿಶೋರ್​, ಧರ್ಮ ಕೀರ್ತಿರಾಜ್​ ಫ್ರೆಂಡ್​ಶಿಪ್​ ಮೆಲುಕು; ಗೆಳೆಯನ ಚಿತ್ರಕ್ಕೆ ‘ಪೊಗರು’ ಡೈರೆಕ್ಟರ್​ ಸಾಥ್​

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ