AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಗ ದಾನ ಮಾಡುವ ಘೋಷಣೆ ಮಾಡಿದ ಜೆನಿಲಿಯಾ-ರಿತೇಷ್

ಅಂಗಾಗ ದಾನಕ್ಕೆ ಬದುಕಿದ್ದಾಗಲೇ ಸಹಿ ಹಾಕಬೇಕು. ಈ ರೀತಿ ಸಹಿ ಹಾಕಿದ ವ್ಯಕ್ತಿ ನಿಧನ ಹೊಂದಿದ ಬಳಿಕ ಕಣ್ಣು ಮೊದಲಾದ ಅಂಗಾಗಳನ್ನು ಪಡೆಯಲಾಗುತ್ತದೆ. ರಿತೇಷ್ ಹಾಗೂ ಜೆನಿಲಿಯಾ ಕೂಡ ಇದೇ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ದಂಪತಿ ಬಾಲಿವುಡ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ಅಂಗಾಗ ದಾನ ಮಾಡುವ ಘೋಷಣೆ ಮಾಡಿದ ಜೆನಿಲಿಯಾ-ರಿತೇಷ್
ಜೆನಿಲಿಯಾ-ರಿತೇಷ್
ರಾಜೇಶ್ ದುಗ್ಗುಮನೆ
|

Updated on: Jul 08, 2024 | 10:45 AM

Share

ಬಾಲಿವುಡ್​ನ ಖ್ಯಾತ ಸೆಲೆಬ್ರಿಟಿ ಜೋಡಿಗಳಲ್ಲಿ ಜೆನಿಲಿಯಾ ಡಿಸೋಜಾ ಹಾಗು ರಿತೇಷ್ ದೇಶ್​ಮುಖ್ ಕೂಡ ಒಬ್ಬರು. ಇಬ್ಬರೂ ಪ್ರೀತಿಸಿ ಮದುವೆ ಆದವರು. ಈಗ ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ಸೆಲೆಬ್ರಿಟಿ ಜೋಡಿ ಅಂಗಾಗ ದಾನ ಮಾಡುವ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ ದಂಪತಿಗೆ ಧನ್ಯವಾದ ಹೇಳಿದೆ. ರಿತೇಷ್ ಅವರ ವಿಡಿಯೋನ ಇವರು ಪೋಸ್ಟ್ ಮಾಡಿದ್ದಾರೆ.

ಬದುಕಿದ್ದಾಗಲೇ ಅಂಗಾಗ ದಾನಕ್ಕೆ ಸಹಿ ಹಾಕಬೇಕು. ಈ ರೀತಿ ಸಹಿ ಹಾಕಿದ ವ್ಯಕ್ತಿ ನಿಧನ ಹೊಂದಿದ ಬಳಿಕ ಕಣ್ಣು ಮೊದಲಾದ ಅಂಗಾಗಳನ್ನು ಪಡೆಯಲಾಗುತ್ತದೆ. ಇದನ್ನು ಅಗತ್ಯ ಇರೋ ವ್ಯಕ್ತಿಗಳಿಗೆ ನೀಡಲಾಗುತ್ತದೆ. ರಿತೇಷ್ ಹಾಗೂ ಜೆನಿಲಿಯಾ ಕೂಡ ಇದೇ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ.

ಈ ಮೊದಲು ರಿತೇಷ್ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ‘ನಾನು ಹಾಗೂ ಜೆನಿಲಿಯಾ ನಮ್ಮ ಅಂಗಾಗ ದಾನ ಮಾಡುವ ಪ್ರತಿಜ್ಞೆ ಮಾಡಿದ್ದೇವೆ’ ಎಂದು ರಿತೇಷ್ ಹೇಳಿದ್ದರು. ಈ ವಿಚಾರವನ್ನು ಜೆನಿಲಿಯಾ ಕೂಡ ಖಚಿತಪಡಿಸಿದ್ದರು. ಈ ವಿಡಿಯೋನ ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ ಹಂಚಿಕೊಂಡಿದೆ. ‘ರಿತೇಷ್ ಹಾಗೂ ಜೆನಿಲಿಯಾ ದಂಪತಿಗೆ ಧನ್ಯವಾದಗಳು. ಅವರು ಅಂಗಾಗ ದಾನ ಮಾಡುವ ಪ್ರತಿಜ್ಞೆ ಮಾಡಿದ್ದಾರೆ. ಇವರ ನಿರ್ಧಾರ ಅನೇಕರಿಗೆ ಸ್ಫೂರ್ತಿದಾಯಕವಾಗಲಿ’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ‘ಹೌಸ್​ಫುಲ್ 5’ ಸಿನಿಮಾದ ಭಾಗವಾಗಲಿದ್ದಾರೆ ಅಭಿಷೇಕ್ ಬಚ್ಚನ್; ನಗಿಸೋಕೆ ರೆಡಿ ಆದ ಸ್ಟಾರ್ ಹೀರೋ

ಸಿನಿಮಾ ವಿಚಾರಕ್ಕೆ ಬರೋದಾದರೆ ಸೋನಾಕ್ಷಿ ಸಿನ್ಹಾ, ಶಖೀಬ್ ಸಲೀಮ್ ಜೊತೆ ರಿತೇಷ್ ಅವರು ‘ಕಕುಡಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದಿತ್ಯ ಸರ್​​ಪೋತ್​ದಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಜುಲೈ 12ರಂದು ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ