AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಗ ದಾನ ಮಾಡುವ ಘೋಷಣೆ ಮಾಡಿದ ಜೆನಿಲಿಯಾ-ರಿತೇಷ್

ಅಂಗಾಗ ದಾನಕ್ಕೆ ಬದುಕಿದ್ದಾಗಲೇ ಸಹಿ ಹಾಕಬೇಕು. ಈ ರೀತಿ ಸಹಿ ಹಾಕಿದ ವ್ಯಕ್ತಿ ನಿಧನ ಹೊಂದಿದ ಬಳಿಕ ಕಣ್ಣು ಮೊದಲಾದ ಅಂಗಾಗಳನ್ನು ಪಡೆಯಲಾಗುತ್ತದೆ. ರಿತೇಷ್ ಹಾಗೂ ಜೆನಿಲಿಯಾ ಕೂಡ ಇದೇ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ದಂಪತಿ ಬಾಲಿವುಡ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ಅಂಗಾಗ ದಾನ ಮಾಡುವ ಘೋಷಣೆ ಮಾಡಿದ ಜೆನಿಲಿಯಾ-ರಿತೇಷ್
ಜೆನಿಲಿಯಾ-ರಿತೇಷ್
ರಾಜೇಶ್ ದುಗ್ಗುಮನೆ
|

Updated on: Jul 08, 2024 | 10:45 AM

Share

ಬಾಲಿವುಡ್​ನ ಖ್ಯಾತ ಸೆಲೆಬ್ರಿಟಿ ಜೋಡಿಗಳಲ್ಲಿ ಜೆನಿಲಿಯಾ ಡಿಸೋಜಾ ಹಾಗು ರಿತೇಷ್ ದೇಶ್​ಮುಖ್ ಕೂಡ ಒಬ್ಬರು. ಇಬ್ಬರೂ ಪ್ರೀತಿಸಿ ಮದುವೆ ಆದವರು. ಈಗ ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ಸೆಲೆಬ್ರಿಟಿ ಜೋಡಿ ಅಂಗಾಗ ದಾನ ಮಾಡುವ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ ದಂಪತಿಗೆ ಧನ್ಯವಾದ ಹೇಳಿದೆ. ರಿತೇಷ್ ಅವರ ವಿಡಿಯೋನ ಇವರು ಪೋಸ್ಟ್ ಮಾಡಿದ್ದಾರೆ.

ಬದುಕಿದ್ದಾಗಲೇ ಅಂಗಾಗ ದಾನಕ್ಕೆ ಸಹಿ ಹಾಕಬೇಕು. ಈ ರೀತಿ ಸಹಿ ಹಾಕಿದ ವ್ಯಕ್ತಿ ನಿಧನ ಹೊಂದಿದ ಬಳಿಕ ಕಣ್ಣು ಮೊದಲಾದ ಅಂಗಾಗಳನ್ನು ಪಡೆಯಲಾಗುತ್ತದೆ. ಇದನ್ನು ಅಗತ್ಯ ಇರೋ ವ್ಯಕ್ತಿಗಳಿಗೆ ನೀಡಲಾಗುತ್ತದೆ. ರಿತೇಷ್ ಹಾಗೂ ಜೆನಿಲಿಯಾ ಕೂಡ ಇದೇ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ.

ಈ ಮೊದಲು ರಿತೇಷ್ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ‘ನಾನು ಹಾಗೂ ಜೆನಿಲಿಯಾ ನಮ್ಮ ಅಂಗಾಗ ದಾನ ಮಾಡುವ ಪ್ರತಿಜ್ಞೆ ಮಾಡಿದ್ದೇವೆ’ ಎಂದು ರಿತೇಷ್ ಹೇಳಿದ್ದರು. ಈ ವಿಚಾರವನ್ನು ಜೆನಿಲಿಯಾ ಕೂಡ ಖಚಿತಪಡಿಸಿದ್ದರು. ಈ ವಿಡಿಯೋನ ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ ಹಂಚಿಕೊಂಡಿದೆ. ‘ರಿತೇಷ್ ಹಾಗೂ ಜೆನಿಲಿಯಾ ದಂಪತಿಗೆ ಧನ್ಯವಾದಗಳು. ಅವರು ಅಂಗಾಗ ದಾನ ಮಾಡುವ ಪ್ರತಿಜ್ಞೆ ಮಾಡಿದ್ದಾರೆ. ಇವರ ನಿರ್ಧಾರ ಅನೇಕರಿಗೆ ಸ್ಫೂರ್ತಿದಾಯಕವಾಗಲಿ’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ‘ಹೌಸ್​ಫುಲ್ 5’ ಸಿನಿಮಾದ ಭಾಗವಾಗಲಿದ್ದಾರೆ ಅಭಿಷೇಕ್ ಬಚ್ಚನ್; ನಗಿಸೋಕೆ ರೆಡಿ ಆದ ಸ್ಟಾರ್ ಹೀರೋ

ಸಿನಿಮಾ ವಿಚಾರಕ್ಕೆ ಬರೋದಾದರೆ ಸೋನಾಕ್ಷಿ ಸಿನ್ಹಾ, ಶಖೀಬ್ ಸಲೀಮ್ ಜೊತೆ ರಿತೇಷ್ ಅವರು ‘ಕಕುಡಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದಿತ್ಯ ಸರ್​​ಪೋತ್​ದಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಜುಲೈ 12ರಂದು ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ