AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಗ ದಾನ ಮಾಡುವ ಘೋಷಣೆ ಮಾಡಿದ ಜೆನಿಲಿಯಾ-ರಿತೇಷ್

ಅಂಗಾಗ ದಾನಕ್ಕೆ ಬದುಕಿದ್ದಾಗಲೇ ಸಹಿ ಹಾಕಬೇಕು. ಈ ರೀತಿ ಸಹಿ ಹಾಕಿದ ವ್ಯಕ್ತಿ ನಿಧನ ಹೊಂದಿದ ಬಳಿಕ ಕಣ್ಣು ಮೊದಲಾದ ಅಂಗಾಗಳನ್ನು ಪಡೆಯಲಾಗುತ್ತದೆ. ರಿತೇಷ್ ಹಾಗೂ ಜೆನಿಲಿಯಾ ಕೂಡ ಇದೇ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ದಂಪತಿ ಬಾಲಿವುಡ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ಅಂಗಾಗ ದಾನ ಮಾಡುವ ಘೋಷಣೆ ಮಾಡಿದ ಜೆನಿಲಿಯಾ-ರಿತೇಷ್
ಜೆನಿಲಿಯಾ-ರಿತೇಷ್
ರಾಜೇಶ್ ದುಗ್ಗುಮನೆ
|

Updated on: Jul 08, 2024 | 10:45 AM

Share

ಬಾಲಿವುಡ್​ನ ಖ್ಯಾತ ಸೆಲೆಬ್ರಿಟಿ ಜೋಡಿಗಳಲ್ಲಿ ಜೆನಿಲಿಯಾ ಡಿಸೋಜಾ ಹಾಗು ರಿತೇಷ್ ದೇಶ್​ಮುಖ್ ಕೂಡ ಒಬ್ಬರು. ಇಬ್ಬರೂ ಪ್ರೀತಿಸಿ ಮದುವೆ ಆದವರು. ಈಗ ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ಸೆಲೆಬ್ರಿಟಿ ಜೋಡಿ ಅಂಗಾಗ ದಾನ ಮಾಡುವ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ ದಂಪತಿಗೆ ಧನ್ಯವಾದ ಹೇಳಿದೆ. ರಿತೇಷ್ ಅವರ ವಿಡಿಯೋನ ಇವರು ಪೋಸ್ಟ್ ಮಾಡಿದ್ದಾರೆ.

ಬದುಕಿದ್ದಾಗಲೇ ಅಂಗಾಗ ದಾನಕ್ಕೆ ಸಹಿ ಹಾಕಬೇಕು. ಈ ರೀತಿ ಸಹಿ ಹಾಕಿದ ವ್ಯಕ್ತಿ ನಿಧನ ಹೊಂದಿದ ಬಳಿಕ ಕಣ್ಣು ಮೊದಲಾದ ಅಂಗಾಗಳನ್ನು ಪಡೆಯಲಾಗುತ್ತದೆ. ಇದನ್ನು ಅಗತ್ಯ ಇರೋ ವ್ಯಕ್ತಿಗಳಿಗೆ ನೀಡಲಾಗುತ್ತದೆ. ರಿತೇಷ್ ಹಾಗೂ ಜೆನಿಲಿಯಾ ಕೂಡ ಇದೇ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ.

ಈ ಮೊದಲು ರಿತೇಷ್ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ‘ನಾನು ಹಾಗೂ ಜೆನಿಲಿಯಾ ನಮ್ಮ ಅಂಗಾಗ ದಾನ ಮಾಡುವ ಪ್ರತಿಜ್ಞೆ ಮಾಡಿದ್ದೇವೆ’ ಎಂದು ರಿತೇಷ್ ಹೇಳಿದ್ದರು. ಈ ವಿಚಾರವನ್ನು ಜೆನಿಲಿಯಾ ಕೂಡ ಖಚಿತಪಡಿಸಿದ್ದರು. ಈ ವಿಡಿಯೋನ ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ ಹಂಚಿಕೊಂಡಿದೆ. ‘ರಿತೇಷ್ ಹಾಗೂ ಜೆನಿಲಿಯಾ ದಂಪತಿಗೆ ಧನ್ಯವಾದಗಳು. ಅವರು ಅಂಗಾಗ ದಾನ ಮಾಡುವ ಪ್ರತಿಜ್ಞೆ ಮಾಡಿದ್ದಾರೆ. ಇವರ ನಿರ್ಧಾರ ಅನೇಕರಿಗೆ ಸ್ಫೂರ್ತಿದಾಯಕವಾಗಲಿ’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ‘ಹೌಸ್​ಫುಲ್ 5’ ಸಿನಿಮಾದ ಭಾಗವಾಗಲಿದ್ದಾರೆ ಅಭಿಷೇಕ್ ಬಚ್ಚನ್; ನಗಿಸೋಕೆ ರೆಡಿ ಆದ ಸ್ಟಾರ್ ಹೀರೋ

ಸಿನಿಮಾ ವಿಚಾರಕ್ಕೆ ಬರೋದಾದರೆ ಸೋನಾಕ್ಷಿ ಸಿನ್ಹಾ, ಶಖೀಬ್ ಸಲೀಮ್ ಜೊತೆ ರಿತೇಷ್ ಅವರು ‘ಕಕುಡಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದಿತ್ಯ ಸರ್​​ಪೋತ್​ದಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಜುಲೈ 12ರಂದು ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ