AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಉದ್ಯಮಕ್ಕೆ ಕೈ ಹಾಕಿದ ‘ರಾಬರ್ಟ್’​ ವಿಲನ್ ಜಗಪತಿ ಬಾಬು; ಏನದು?

ಕೆಲವರ ಜತೆಗೂಡಿ ಜಗಪತಿ ಬಾಬು ಆಯುರ್ವೇದ ಉದ್ಯಮಕ್ಕೆ ಇಳಿಯುತ್ತಿದ್ದಾರೆ. ಹೈದರಾಬಾದ್​ನ ಜುಬ್ಲಿ ಹಿಲ್ಸ್​ನಲ್ಲಿ ಅವರು ಆಸ್ಪತ್ರೆಯನ್ನು ಕೂಡ ನಿರ್ಮಾಣ ಮಾಡುತ್ತಿದ್ದಾರೆ.

ಹೊಸ ಉದ್ಯಮಕ್ಕೆ ಕೈ ಹಾಕಿದ ‘ರಾಬರ್ಟ್’​ ವಿಲನ್ ಜಗಪತಿ ಬಾಬು; ಏನದು?
ಸಿನಿಮಾ ಬಿಟ್ಟು ಹೊಸ ಉದ್ಯಮಕ್ಕೆ ಕೈ ಹಾಕಿದ ‘ರಾಬರ್ಟ್’​ ವಿಲನ್ ಜಗಪತಿ ಬಾಬು
ರಾಜೇಶ್ ದುಗ್ಗುಮನೆ
|

Updated on: Jun 11, 2021 | 9:42 PM

Share

ಸ್ಟಾರ್​ ಕಲಾವಿದರು ಸಿನಿಮಾ ಜತೆ ಜತೆಗೆ ಬೇರೆ ಉದ್ಯಮಗಳಲ್ಲೂ ತೊಡಗಿಕೊಂಡಿರುತ್ತಾರೆ. ಈಗಾಗಲೇ ಸಾಕಷ್ಟು ಹೀರೋಗಳು ತಮ್ಮದೇ ಉದ್ಯಮ ಆರಂಭಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಖಳ ಪಾತ್ರಗಳ ಮೂಲಕ ಹೆಚ್ಚು ಗುರುತಿಸಿಕೊಂಡಿರುವ ನಟ ಜಗಪತಿ ಬಾಬು ಕೂಡ ಈಗ ಉದ್ಯಮವೊಂದಕ್ಕೆ ಕೈ ಹಾಕುತ್ತಿದ್ದಾರೆ.  

ಹೌದು, ಇತ್ತೀಚೆಗೆ ಜಗಪತಿ ಬಾಬು ಆನಂದಯ್ಯ ಮೆಡಿಸಿನ್​ಗೆ ಬೆಂಬಲ ನೀಡಿದ್ದರು. ಅಷ್ಟೇ ಅಲ್ಲ, ಇದನ್ನು ಬೆಂಬಲಿಸುವಂತೆ ಕರೆ ನೀಡಿದ್ದರು. ಈ ವಿಚಾರ ಸಾಕಷ್ಟು ಜನರಲ್ಲಿ ಅಚ್ಚರಿ ಮೂಡಿಸಿತ್ತು. ಜಗಪತಿ ಬಾಬು ಈ ರೀತಿ ಮಾಡುವುದಕ್ಕೂ ಒಂದು ಕಾರಣವಿದೆ.  ಜಗಪತಿ ಬಾಬು ಶೀಘ್ರವೇ  ಆಯುರ್ವೇದ ಉದ್ಯಮದಲ್ಲಿ ತೊಡಗಿಕೊಳ್ಳಲಿದ್ದಾರಂತೆ. ಈ ಕಾರಣಕ್ಕೆ ಜಗಪತಿ ಬಾಬು ಈ ರೀತಿಯ ಹೇಳಿಕೆ ನೀಡಿದ್ದರು.

ಕೆಲವರ ಜತೆಗೂಡಿ ಜಗಪತಿ ಬಾಬು ಆಯುರ್ವೇದ ಉದ್ಯಮಕ್ಕೆ ಇಳಿಯುತ್ತಿದ್ದಾರೆ. ಹೈದರಾಬಾದ್​ನ ಜುಬ್ಲಿ ಹಿಲ್ಸ್​ನಲ್ಲಿ ಅವರು ಆಸ್ಪತ್ರೆಯನ್ನು ಕೂಡ ನಿರ್ಮಾಣ ಮಾಡುತ್ತಿದ್ದಾರೆ. ಕೆಲವೇ ತಿಂಗಳಲ್ಲಿ ಆಸ್ಪತ್ರೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದ್ದು, ಜಗಪತಿ ಬಾಬು ಇದರ ನಿರ್ದೇಶಕರಾಗಲಿದ್ದಾರೆ.

ಹಾಗಾದರೆ, ಜಗಪತಿ ಬಾಬು ನಟನೆಯಿಂದ ದೂರ ಉಳಿಯುತ್ತಾರಾ? ಖಂಡಿತವಾಗಿಯೂ ಇಲ್ಲ. ಜಗಪತಿ ಬಾಬು ನಟನೆ ಜತೆಗೆ ಬೇರೆ ಬೇರೆ ಉದ್ಯಮಗಳಲ್ಲೂ ತೊಡಗಿಕೊಳ್ಳಬೇಕು ಎನ್ನುವ ಇಚ್ಛೆ ಹೊಂದಿದ್ದಾರೆ. ಈ ಕಾರಣಕ್ಕೆ ಅವರು ಬೇರೆ ಬೇರೆ ಉದ್ಯಮಗಳಿಗೆ ಕೈಹಾಕುತ್ತಿದ್ದಾರೆ.

ಈ ವರ್ಷ ತೆರೆಗೆ ಬಂದ ರಾಬರ್ಟ್​ ಸಿನಿಮಾದಲ್ಲಿ ಜಗಪತಿ ಬಾಬು ವಿಲನ್​ ಆಗಿ ಕಾಣಿಸಿಕೊಂಡಿದ್ದರು. ಈ ಮೂಲಕ ದರ್ಶನ್​ ಎದುರು ಖಡಕ್​ ಆಗಿ ಕಾಣಿಸಿಕೊಂಡಿದ್ದರು. ಅವರ ನಟನೆಗೆ ಎಲ್ಲ ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು.

ಇದನ್ನೂ ಓದಿ: Darshan: ದರ್ಶನ್​ ಹೇಳಿದ ಒಂದೇ ಮಾತಿಗೆ 6 ದಿನದಲ್ಲಿ ಹರಿದು ಬಂತು 1 ಕೋಟಿ ರೂ.! ಯಾವ ಮೃಗಾಲಯಕ್ಕೆ ಎಷ್ಟು ಲಕ್ಷ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್