AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಉದ್ಯಮಕ್ಕೆ ಕೈ ಹಾಕಿದ ‘ರಾಬರ್ಟ್’​ ವಿಲನ್ ಜಗಪತಿ ಬಾಬು; ಏನದು?

ಕೆಲವರ ಜತೆಗೂಡಿ ಜಗಪತಿ ಬಾಬು ಆಯುರ್ವೇದ ಉದ್ಯಮಕ್ಕೆ ಇಳಿಯುತ್ತಿದ್ದಾರೆ. ಹೈದರಾಬಾದ್​ನ ಜುಬ್ಲಿ ಹಿಲ್ಸ್​ನಲ್ಲಿ ಅವರು ಆಸ್ಪತ್ರೆಯನ್ನು ಕೂಡ ನಿರ್ಮಾಣ ಮಾಡುತ್ತಿದ್ದಾರೆ.

ಹೊಸ ಉದ್ಯಮಕ್ಕೆ ಕೈ ಹಾಕಿದ ‘ರಾಬರ್ಟ್’​ ವಿಲನ್ ಜಗಪತಿ ಬಾಬು; ಏನದು?
ಸಿನಿಮಾ ಬಿಟ್ಟು ಹೊಸ ಉದ್ಯಮಕ್ಕೆ ಕೈ ಹಾಕಿದ ‘ರಾಬರ್ಟ್’​ ವಿಲನ್ ಜಗಪತಿ ಬಾಬು
ರಾಜೇಶ್ ದುಗ್ಗುಮನೆ
|

Updated on: Jun 11, 2021 | 9:42 PM

Share

ಸ್ಟಾರ್​ ಕಲಾವಿದರು ಸಿನಿಮಾ ಜತೆ ಜತೆಗೆ ಬೇರೆ ಉದ್ಯಮಗಳಲ್ಲೂ ತೊಡಗಿಕೊಂಡಿರುತ್ತಾರೆ. ಈಗಾಗಲೇ ಸಾಕಷ್ಟು ಹೀರೋಗಳು ತಮ್ಮದೇ ಉದ್ಯಮ ಆರಂಭಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಖಳ ಪಾತ್ರಗಳ ಮೂಲಕ ಹೆಚ್ಚು ಗುರುತಿಸಿಕೊಂಡಿರುವ ನಟ ಜಗಪತಿ ಬಾಬು ಕೂಡ ಈಗ ಉದ್ಯಮವೊಂದಕ್ಕೆ ಕೈ ಹಾಕುತ್ತಿದ್ದಾರೆ.  

ಹೌದು, ಇತ್ತೀಚೆಗೆ ಜಗಪತಿ ಬಾಬು ಆನಂದಯ್ಯ ಮೆಡಿಸಿನ್​ಗೆ ಬೆಂಬಲ ನೀಡಿದ್ದರು. ಅಷ್ಟೇ ಅಲ್ಲ, ಇದನ್ನು ಬೆಂಬಲಿಸುವಂತೆ ಕರೆ ನೀಡಿದ್ದರು. ಈ ವಿಚಾರ ಸಾಕಷ್ಟು ಜನರಲ್ಲಿ ಅಚ್ಚರಿ ಮೂಡಿಸಿತ್ತು. ಜಗಪತಿ ಬಾಬು ಈ ರೀತಿ ಮಾಡುವುದಕ್ಕೂ ಒಂದು ಕಾರಣವಿದೆ.  ಜಗಪತಿ ಬಾಬು ಶೀಘ್ರವೇ  ಆಯುರ್ವೇದ ಉದ್ಯಮದಲ್ಲಿ ತೊಡಗಿಕೊಳ್ಳಲಿದ್ದಾರಂತೆ. ಈ ಕಾರಣಕ್ಕೆ ಜಗಪತಿ ಬಾಬು ಈ ರೀತಿಯ ಹೇಳಿಕೆ ನೀಡಿದ್ದರು.

ಕೆಲವರ ಜತೆಗೂಡಿ ಜಗಪತಿ ಬಾಬು ಆಯುರ್ವೇದ ಉದ್ಯಮಕ್ಕೆ ಇಳಿಯುತ್ತಿದ್ದಾರೆ. ಹೈದರಾಬಾದ್​ನ ಜುಬ್ಲಿ ಹಿಲ್ಸ್​ನಲ್ಲಿ ಅವರು ಆಸ್ಪತ್ರೆಯನ್ನು ಕೂಡ ನಿರ್ಮಾಣ ಮಾಡುತ್ತಿದ್ದಾರೆ. ಕೆಲವೇ ತಿಂಗಳಲ್ಲಿ ಆಸ್ಪತ್ರೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದ್ದು, ಜಗಪತಿ ಬಾಬು ಇದರ ನಿರ್ದೇಶಕರಾಗಲಿದ್ದಾರೆ.

ಹಾಗಾದರೆ, ಜಗಪತಿ ಬಾಬು ನಟನೆಯಿಂದ ದೂರ ಉಳಿಯುತ್ತಾರಾ? ಖಂಡಿತವಾಗಿಯೂ ಇಲ್ಲ. ಜಗಪತಿ ಬಾಬು ನಟನೆ ಜತೆಗೆ ಬೇರೆ ಬೇರೆ ಉದ್ಯಮಗಳಲ್ಲೂ ತೊಡಗಿಕೊಳ್ಳಬೇಕು ಎನ್ನುವ ಇಚ್ಛೆ ಹೊಂದಿದ್ದಾರೆ. ಈ ಕಾರಣಕ್ಕೆ ಅವರು ಬೇರೆ ಬೇರೆ ಉದ್ಯಮಗಳಿಗೆ ಕೈಹಾಕುತ್ತಿದ್ದಾರೆ.

ಈ ವರ್ಷ ತೆರೆಗೆ ಬಂದ ರಾಬರ್ಟ್​ ಸಿನಿಮಾದಲ್ಲಿ ಜಗಪತಿ ಬಾಬು ವಿಲನ್​ ಆಗಿ ಕಾಣಿಸಿಕೊಂಡಿದ್ದರು. ಈ ಮೂಲಕ ದರ್ಶನ್​ ಎದುರು ಖಡಕ್​ ಆಗಿ ಕಾಣಿಸಿಕೊಂಡಿದ್ದರು. ಅವರ ನಟನೆಗೆ ಎಲ್ಲ ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು.

ಇದನ್ನೂ ಓದಿ: Darshan: ದರ್ಶನ್​ ಹೇಳಿದ ಒಂದೇ ಮಾತಿಗೆ 6 ದಿನದಲ್ಲಿ ಹರಿದು ಬಂತು 1 ಕೋಟಿ ರೂ.! ಯಾವ ಮೃಗಾಲಯಕ್ಕೆ ಎಷ್ಟು ಲಕ್ಷ?

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ