Madhavan: ಹೆಂಡತಿ ಎದುರು ನಾನು ಅಸಮರ್ಥ; ನಟ ಮಾಧವನ್​ ಬಹಿರಂಗವಾಗಿ ಹೀಗೆ ಹೇಳಲು ಕಾರಣ ಏನು?

ಮಾಧವನ್​ ಅವರ ಪತ್ನಿ ಸರಿತಾ ಅವರು ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ. ಕೊವಿಡ್​ನ ಈ ಕಡುಕಷ್ಟದ ಸಂದರ್ಭದಲ್ಲಿ ಅವರು ಬಡಮಕ್ಕಳಿಗೆ ಆನ್​ಲೈನ್​ ಮೂಲಕ ಪಾಠ ಹೇಳಿಕೊಡುತ್ತಿದ್ದಾರೆ.

Madhavan: ಹೆಂಡತಿ ಎದುರು ನಾನು ಅಸಮರ್ಥ; ನಟ ಮಾಧವನ್​ ಬಹಿರಂಗವಾಗಿ ಹೀಗೆ ಹೇಳಲು ಕಾರಣ ಏನು?
ಆರ್​. ಮಾಧವನ್​
Follow us
| Updated By: Digi Tech Desk

Updated on:May 01, 2021 | 9:52 AM

ಬಹುಭಾಷಾ ನಟ ಆರ್​. ಮಾಧವನ್​ ಅವರು ಸದ್ಯ ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ದೇಶಾದ್ಯಂತ ಹರಡಿರುವ ಕೊರೊನಾ ವೈರಸ್​ನಿಂದಾಗಿ ಅವರು ಎಲ್ಲ ಶೂಟಿಂಗ್ ಚಟುವಟಿಕೆಗಳಿಗೆ ಬ್ರೇಕ್​ ಹಾಕಿದ್ದಾರೆ. ಕುಟುಂಬದವರ ಜೊತೆ ಸಮಯ ಕಳೆಯುತ್ತಿದ್ದಾರೆ. ಈಗ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿರುವ ಒಂದು ವಿಡಿಯೋ ವೈರಲ್​ ಆಗುತ್ತಿದೆ. ‘ಹೆಂಡತಿ ಎದುರಿನಲ್ಲಿ ನಾನು ಅಸಮರ್ಥ ಎನಿಸುತ್ತಿದೆ’ ಎಂದು ಮಾಧವನ್​ ಹೇಳಿದ್ದಾರೆ. ಅದಕ್ಕೆ ಬಲವಾದ ಕಾರಣ ಕೂಡ ಇದೆ.

ವಿಷಯ ಏನೆಂದರೆ, ಮಾಧವನ್​ ಅವರ ಪತ್ನಿ ಸರಿತಾ ಅವರು ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ. ಕೊವಿಡ್​ನ ಈ ಕಡುಕಷ್ಟದ ಸಂದರ್ಭದಲ್ಲಿ ಶಾಲೆಗಳು ಬಂದ್​ ಆಗಿವೆ. ಹಾಗಾಗಿ, ಸರಿತಾ ಅವರು ಬಡಮಕ್ಕಳಿಗೆ ಆನ್​ಲೈನ್​ ಮೂಲಕ ಪಾಠ ಹೇಳಿಕೊಡುತ್ತಿದ್ದಾರೆ. ಈ ವಿಡಿಯೋವನ್ನು ಮಾಧವನ್​ ಶೆರ್​ ಮಾಡಿಕೊಂಡಿದ್ದು, ಪತ್ನಿ ಮಾಡುತ್ತಿರುವ ಈ ಕೆಲಸದ ಮುಂದೆ ತಾವು ಅಸಮರ್ಥ ಎನಿಸುತ್ತಿದೆ ಎಂದು ಹೇಳಿದ್ದಾರೆ. ಈ ವಿಡಿಯೋ ವೈರಲ್​ ಆಗುತ್ತಿದೆ.

ಏಪ್ರಿಲ್​ನಲ್ಲಿ ಮಾಧವನ್​ ಅವರಿಗೆ ಕೊರೊನಾ ವೈರಸ್​ ಪಾಸಿಟಿವ್​ ಆಗಿತ್ತು. ಈಗ ಅವರು ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಆದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ಮನೆಯಲ್ಲೇ ಇದ್ದಾರೆ. ಅವರ ಕುಟುಂಬದ ಇತರೆ ಸದಸ್ಯರ ಕೊವಿಡ್​ ಪರೀಕ್ಷೆ ಕೂಡ ನೆಗೆಟಿವ್​ ಆಗಿದೆ. ದೇವರ ದಯೆಯಿಂದ ನಾವೆಲ್ಲ ಈಗ ಸದೃಢ ಮತ್ತು ಸುರಕ್ಷತೆಯಿಂದ ಇದ್ದೇವೆ ಎಂದು ಅವರು ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.

View this post on Instagram

A post shared by R. Madhavan (@actormaddy)

ಸಿನಿಮಾ ವಿಚಾರಕ್ಕೆ ಬರುವುದಾದರೆ ಮಾಧವನ್​ ನಟನೆ ಮತ್ತು ನಿರ್ದೇಶನದ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಸಿನಿಮಾದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಈಗಾಗಲೇ ರಿಲೀಸ್​ ಆಗಿರುವ ಟ್ರೇಲರ್​ ಭಾರಿ ಕೌತುಕ ಮೂಡಿಸಿದೆ. ಟ್ರೇಲರ್​ನಲ್ಲಿ​ ಮಾಧವನ್​ ಅವರ ಕೆಲಸ ಕಂಡು ಎಲ್ಲರೂ ಶಹಭಾಷ್​ ಎಂದಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೆ ಸೆಲೆಬ್ರಿಟಿಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟ್ರೇಲರ್ ನೋಡಿರುವ ನರೇಂದ್ರ ಮೋದಿ, ಅಮಿತಾಬ್​ ಬಚ್ಚನ್​, ಪ್ರಿಯಾಂಕಾ ಚೋಪ್ರಾ, ಹೃತಿಕ್​ ರೋಷನ್​, ಅಭಿಷೇಕ್​ ಬಚ್ಚನ್​ ಮುಂತಾದವರು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗಾಗಿ ಎಲ್ಲರೂ ಕಾದಿದ್ದಾರೆ.

ಇದನ್ನೂ ಓದಿ: Rocketry Trailer: ದೇಶದ್ರೋಹ ಆರೋಪ ಹೊತ್ತಿದ್ದ ನಂಬಿ ನಾರಾಯಣ್​ ಬಗ್ಗೆ ಮಾಧವನ್​ ಸಿನಿಮಾ! ‘ರಾಕೆಟ್ರಿ’ ಚಿತ್ರದ ರಿಯಲ್​ ಕಥೆ ಏನು?

Rocketry: ರಾಕೆಟ್ರಿ ಸಿನಿಮಾ, ನಂಬಿ ನಾರಾಯಣನ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ

Published On - 8:28 am, Sat, 1 May 21

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ