AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhavan: ಹೆಂಡತಿ ಎದುರು ನಾನು ಅಸಮರ್ಥ; ನಟ ಮಾಧವನ್​ ಬಹಿರಂಗವಾಗಿ ಹೀಗೆ ಹೇಳಲು ಕಾರಣ ಏನು?

ಮಾಧವನ್​ ಅವರ ಪತ್ನಿ ಸರಿತಾ ಅವರು ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ. ಕೊವಿಡ್​ನ ಈ ಕಡುಕಷ್ಟದ ಸಂದರ್ಭದಲ್ಲಿ ಅವರು ಬಡಮಕ್ಕಳಿಗೆ ಆನ್​ಲೈನ್​ ಮೂಲಕ ಪಾಠ ಹೇಳಿಕೊಡುತ್ತಿದ್ದಾರೆ.

Madhavan: ಹೆಂಡತಿ ಎದುರು ನಾನು ಅಸಮರ್ಥ; ನಟ ಮಾಧವನ್​ ಬಹಿರಂಗವಾಗಿ ಹೀಗೆ ಹೇಳಲು ಕಾರಣ ಏನು?
ಆರ್​. ಮಾಧವನ್​
ಮದನ್​ ಕುಮಾರ್​
| Edited By: |

Updated on:May 01, 2021 | 9:52 AM

Share

ಬಹುಭಾಷಾ ನಟ ಆರ್​. ಮಾಧವನ್​ ಅವರು ಸದ್ಯ ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ದೇಶಾದ್ಯಂತ ಹರಡಿರುವ ಕೊರೊನಾ ವೈರಸ್​ನಿಂದಾಗಿ ಅವರು ಎಲ್ಲ ಶೂಟಿಂಗ್ ಚಟುವಟಿಕೆಗಳಿಗೆ ಬ್ರೇಕ್​ ಹಾಕಿದ್ದಾರೆ. ಕುಟುಂಬದವರ ಜೊತೆ ಸಮಯ ಕಳೆಯುತ್ತಿದ್ದಾರೆ. ಈಗ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿರುವ ಒಂದು ವಿಡಿಯೋ ವೈರಲ್​ ಆಗುತ್ತಿದೆ. ‘ಹೆಂಡತಿ ಎದುರಿನಲ್ಲಿ ನಾನು ಅಸಮರ್ಥ ಎನಿಸುತ್ತಿದೆ’ ಎಂದು ಮಾಧವನ್​ ಹೇಳಿದ್ದಾರೆ. ಅದಕ್ಕೆ ಬಲವಾದ ಕಾರಣ ಕೂಡ ಇದೆ.

ವಿಷಯ ಏನೆಂದರೆ, ಮಾಧವನ್​ ಅವರ ಪತ್ನಿ ಸರಿತಾ ಅವರು ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ. ಕೊವಿಡ್​ನ ಈ ಕಡುಕಷ್ಟದ ಸಂದರ್ಭದಲ್ಲಿ ಶಾಲೆಗಳು ಬಂದ್​ ಆಗಿವೆ. ಹಾಗಾಗಿ, ಸರಿತಾ ಅವರು ಬಡಮಕ್ಕಳಿಗೆ ಆನ್​ಲೈನ್​ ಮೂಲಕ ಪಾಠ ಹೇಳಿಕೊಡುತ್ತಿದ್ದಾರೆ. ಈ ವಿಡಿಯೋವನ್ನು ಮಾಧವನ್​ ಶೆರ್​ ಮಾಡಿಕೊಂಡಿದ್ದು, ಪತ್ನಿ ಮಾಡುತ್ತಿರುವ ಈ ಕೆಲಸದ ಮುಂದೆ ತಾವು ಅಸಮರ್ಥ ಎನಿಸುತ್ತಿದೆ ಎಂದು ಹೇಳಿದ್ದಾರೆ. ಈ ವಿಡಿಯೋ ವೈರಲ್​ ಆಗುತ್ತಿದೆ.

ಏಪ್ರಿಲ್​ನಲ್ಲಿ ಮಾಧವನ್​ ಅವರಿಗೆ ಕೊರೊನಾ ವೈರಸ್​ ಪಾಸಿಟಿವ್​ ಆಗಿತ್ತು. ಈಗ ಅವರು ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಆದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ಮನೆಯಲ್ಲೇ ಇದ್ದಾರೆ. ಅವರ ಕುಟುಂಬದ ಇತರೆ ಸದಸ್ಯರ ಕೊವಿಡ್​ ಪರೀಕ್ಷೆ ಕೂಡ ನೆಗೆಟಿವ್​ ಆಗಿದೆ. ದೇವರ ದಯೆಯಿಂದ ನಾವೆಲ್ಲ ಈಗ ಸದೃಢ ಮತ್ತು ಸುರಕ್ಷತೆಯಿಂದ ಇದ್ದೇವೆ ಎಂದು ಅವರು ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.

View this post on Instagram

A post shared by R. Madhavan (@actormaddy)

ಸಿನಿಮಾ ವಿಚಾರಕ್ಕೆ ಬರುವುದಾದರೆ ಮಾಧವನ್​ ನಟನೆ ಮತ್ತು ನಿರ್ದೇಶನದ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಸಿನಿಮಾದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಈಗಾಗಲೇ ರಿಲೀಸ್​ ಆಗಿರುವ ಟ್ರೇಲರ್​ ಭಾರಿ ಕೌತುಕ ಮೂಡಿಸಿದೆ. ಟ್ರೇಲರ್​ನಲ್ಲಿ​ ಮಾಧವನ್​ ಅವರ ಕೆಲಸ ಕಂಡು ಎಲ್ಲರೂ ಶಹಭಾಷ್​ ಎಂದಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೆ ಸೆಲೆಬ್ರಿಟಿಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟ್ರೇಲರ್ ನೋಡಿರುವ ನರೇಂದ್ರ ಮೋದಿ, ಅಮಿತಾಬ್​ ಬಚ್ಚನ್​, ಪ್ರಿಯಾಂಕಾ ಚೋಪ್ರಾ, ಹೃತಿಕ್​ ರೋಷನ್​, ಅಭಿಷೇಕ್​ ಬಚ್ಚನ್​ ಮುಂತಾದವರು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗಾಗಿ ಎಲ್ಲರೂ ಕಾದಿದ್ದಾರೆ.

ಇದನ್ನೂ ಓದಿ: Rocketry Trailer: ದೇಶದ್ರೋಹ ಆರೋಪ ಹೊತ್ತಿದ್ದ ನಂಬಿ ನಾರಾಯಣ್​ ಬಗ್ಗೆ ಮಾಧವನ್​ ಸಿನಿಮಾ! ‘ರಾಕೆಟ್ರಿ’ ಚಿತ್ರದ ರಿಯಲ್​ ಕಥೆ ಏನು?

Rocketry: ರಾಕೆಟ್ರಿ ಸಿನಿಮಾ, ನಂಬಿ ನಾರಾಯಣನ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ

Published On - 8:28 am, Sat, 1 May 21

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!