AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rocketry Trailer: ದೇಶದ್ರೋಹ ಆರೋಪ ಹೊತ್ತಿದ್ದ ನಂಬಿ ನಾರಾಯಣ್​ ಬಗ್ಗೆ ಮಾಧವನ್​ ಸಿನಿಮಾ! ‘ರಾಕೆಟ್ರಿ’ ಚಿತ್ರದ ರಿಯಲ್​ ಕಥೆ ಏನು?

R Madhavan: ‘ರಾಕೆಟ್ರಿ: ದಿ ನಂಬಿ ಎಫೆಕ್ಟ್​’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ಮಾಧವನ್​ ಅವರ ಕೆಲಸ ಕಂಡು ಎಲ್ಲರೂ ಶಹಭಾಷ್​ ಎನ್ನುತ್ತಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೆ ಸೆಲೆಬ್ರಿಟಿಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Rocketry Trailer: ದೇಶದ್ರೋಹ ಆರೋಪ ಹೊತ್ತಿದ್ದ ನಂಬಿ ನಾರಾಯಣ್​ ಬಗ್ಗೆ ಮಾಧವನ್​ ಸಿನಿಮಾ! ‘ರಾಕೆಟ್ರಿ’ ಚಿತ್ರದ ರಿಯಲ್​ ಕಥೆ ಏನು?
ಆರ್​. ಮಾಧವನ್​ - ನಂಬಿ ನಾರಾಯಣ್​
ಮದನ್​ ಕುಮಾರ್​
| Edited By: |

Updated on: Apr 03, 2021 | 8:26 AM

Share

ಬಹುಭಾಷಾ ನಟ ಆರ್​. ಮಾಧವನ್​ ಅವರು ಇದೇ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಇಷ್ಟು ವರ್ಷಗಳ ಅನುಭವವನ್ನು ಇಟ್ಟುಕೊಂಡು ಈಗ ಅವರು ‘ರಾಕೆಟ್ರಿ: ದಿ ನಂಬಿ ಎಫೆಕ್ಟ್​’ ಸಿನಿಮಾ ನಿರ್ದೇಶಿಸಿದ್ದಾರೆ. ಈಗ ಈ ಚಿತ್ರದ ಟ್ರೇಲರ್​ ಬಿಡುಗಡೆ ಆಗಿದೆ. ಮಾಧವನ್​ ಅವರ ಕೆಲಸ ಕಂಡು ಎಲ್ಲರೂ ಶಹಭಾಷ್​ ಎನ್ನುತ್ತಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೆ ಸೆಲೆಬ್ರಿಟಿಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟ್ರೇಲರ್ ನೋಡಿರುವ ಅಮಿತಾಬ್​ ಬಚ್ಚನ್​, ಪ್ರಿಯಾಂಕಾ ಚೋಪ್ರಾ, ಹೃತಿಕ್​ ರೋಷನ್​, ಅಭಿಷೇಕ್​ ಬಚ್ಚನ್​ ಮುಂತಾದವರು ಫಿದಾ ಆಗಿದ್ದಾರೆ.

ತಮ್ಮ ಚೊಚ್ಚಲ ನಿರ್ದೇಶನದ ಸಿನಿಮಾಗೆ ಮಾಧವನ್​ ಯಾವುದೋ ಕಾಲ್ಪನಿಕ ಕಥೆಯನ್ನು ಆಯ್ಕೆ ಮಾಡಿಕೊಂಡಿಲ್ಲ. ಬದಲಿಗೆ, ಜಾಗತಿಕ ಮಟ್ಟದಲ್ಲಿ ಗಮನ ಸೆಳೆದ ಒಂದು ನೈಜ ಘಟನೆಯನ್ನೇ ಇಟ್ಟುಕೊಂಡು ಸಿನಿಮಾ ಮಾಡಿದ್ದಾರೆ. ಇಸ್ರೋದ ಮಾಜಿ ರಾಕೆಟ್​ ಸೈನ್ಸ್​ ವಿಜ್ಞಾನಿ ನಂಬಿ ನಾರಾಯಣ್​ ಅವರ ಬಯೋಪಿಕ್​ ಆಗಿ ಈ ಸಿನಿಮಾ ಮೂಡಿಬಂದಿದೆ. ಕಮರ್ಷಿಯಲ್​ ಸ್ಯಾಟಲೈಟ್​ ಮಾರುಕಟ್ಟೆಯಲ್ಲಿ ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುವಂತೆ ಮಾಡಲು ಪ್ರಯತ್ನಿಸಿದ ವ್ಯಕ್ತಿಯೇ ನಂಬಿ ನಾರಾಯಣ್​. ಆದರೆ ಅಂಥ ವಿಜ್ಞಾನಿ ಜೈಲು ಸೇರಬೇಕಾಗಿ ಬಂದದ್ದು ಮಾತ್ರ ವಿಪರ್ಯಾಸ!

ನಂಬಿ ನಾರಾಯಣ್​ ಒಬ್ಬ ಅಪ್ರತಿಮ ದೇಶಭಕ್ತರಾಗಿದ್ದರು. ಆದರೆ ಅವರ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಯಿತು. ಇಸ್ರೋದ ಕೆಲವು ಮಾಹಿತಿಗಳನ್ನು ಬೇರೆ ದೇಶಗಳಿಗೆ, ಅದರಲ್ಲೂ ಮುಖ್ಯವಾಗಿ ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಆರೋಪ ನಂಬಿ ನಾರಾಯಣ್​ ಮೇಲೆ ಕೇಳಿಬಂತು.

1994ರಲ್ಲಿ ಕೇರಳ ಪೊಲೀಸರು ವಿದೇಶಿ ಮಹಿಳೆಯೊಬ್ಬರನ್ನು ಬಂಧಿಸಿದರು. ಆಕೆಯ ಮೂಲಕ ಇಸ್ರೋ ವಿಜ್ಞಾನಿಗಳು ಕೆಲವು ಗುಪ್ತ ಮಾಹಿತಿಯನ್ನು ಪಾಕಿಸ್ತಾನಕ್ಕೆ ನೀಡಿದ್ದಾರೆ ಎಂಬುದು ತನಿಖೆ ವೇಳೆ ಗೊತ್ತಾಯಿತು. ಅದೇ ತನಿಖೆಯ ಮುಂದುವರಿದ ಭಾಗವಾಗಿ ನಂಬಿ ನಾರಾಯಣ್​ ಜೊತೆಗೆ ಇಸ್ರೋದ ಮತ್ತೋರ್ವ ವಿಜ್ಞಾನಿ ಡಿ. ಶಶಿಕುಮಾರನ್​ ಅವರನ್ನು ಬಂಧಿಸಿದರು.

ಈ ಘಟನೆ ನಡೆದ 20 ದಿನಗಳ ಒಳಗೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಯಿತು. 1996ರಲ್ಲಿ ನ್ಯಾಯಾಲಯಕ್ಕೆ ಸಿಬಿಐ ತನ್ನ ವರದಿ ಒಪ್ಪಿಸಿತು. ನಂಬಿ ನಾರಾಯಣ್​ ಮೇಲೆ ಹೊರಿಸಿದ್ದ ಎಲ್ಲ ಆರೋಪಗಳು ಸುಳ್ಳು ಎಂದು ಈ ವರದಿಯಲ್ಲಿ ತಿಳಿಸಲಾಗಿತ್ತು. ನಂತರ ಆ ಪ್ರಕರಣದ ಮರುತನಿಖೆ ಮಾಡಿಸುವ ಪ್ರಯತ್ನವನ್ನು ಮಾಡಲಾಯಿತಾದರೂ ಅದನ್ನು ಸುಪ್ರೀಂ ಕೋರ್ಟ್​ ನಿರಾಕರಿಸಿತು.

ಒಟ್ಟಾರೆ ಘಟನೆಗಳಿಂದಾಗಿ ನಂಬಿ ನಾರಾಯಣ್​ ಅವರ ಬದುಕಿಗೆ ಬಹುದೊಡ್ಡ ನಷ್ಟವಾಯಿತು. ಈ ಎಲ್ಲ ವಿವರಗಳನ್ನು ಇಟ್ಟುಕೊಂಡು ಮಾಧವನ್​ ಈ ಸಿನಿಮಾ ಮಾಡಿದ್ದಾರೆ. ನಂಬಿ ನಾರಾಯಣ್​ ಅವರ ಪಾತ್ರದಲ್ಲಿ ಸ್ವತಃ ಮಾಧವನ್​ ನಟಿಸಿದ್ದಾರೆ. ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಅವರೇ ನಿಭಾಯಿಸಿದ್ದಾರೆ. ಹಲವು ಭಾಷೆಗಳಿಗೆ ಡಬ್​ ಆಗಿ ಈ ಚಿತ್ರ ಮೂಡಿಬರುತ್ತಿದೆ. ಸೂರ್ಯ, ಶಾರುಖ್​ ಖಾನ್​ ಅಥಿತಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ನಿಮ್ಮ ಮೇಲೆ ಕ್ರಶ್ ಆಗಿದೆ ಎಂದ ಅಭಿಮಾನಿಗಳಿಗೆ ಮಾಧವನ್‌ ಕೊಟ್ಟ ಉತ್ತರವೇನು ಗೊತ್ತಾ?

(Rocketry The Nambi effect Trailer: Here is the real story of R Madhavan directorial film)

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?