AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಮತ್ತೆ ಬಕ್ರಾ ಆದ ರೂಪೇಶ್ ರಾಜಣ್ಣ; ಅವರ ಪಾಡು ಯಾರಿಗೂ ಬೇಡ

ಈ ವಾರ ಗೊಂಬೆ ಮಾಡುವ ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್​​ ಆಡುವ ವೇಳೆ ರೂಪೇಶ್ ರಾಜಣ್ಣ ಅವರು ಚಿನ್ನದ ಉಂಗುರ ಹಾಗೂ ಬ್ರೆಸ್​ಲೆಟ್​ ಅನ್ನು ಕಳೆದುಕೊಂಡಿದ್ದರು. ಇದು ರೂಪೇಶ್ ಶೆಟ್ಟಿಗೆ ಸಿಕ್ಕಿತ್ತು.

ಬಿಗ್ ಬಾಸ್ ಮನೆಯಲ್ಲಿ ಮತ್ತೆ ಬಕ್ರಾ ಆದ ರೂಪೇಶ್ ರಾಜಣ್ಣ; ಅವರ ಪಾಡು ಯಾರಿಗೂ ಬೇಡ
ರೂಪೇಶ್ ರಾಜಣ್ಣ
TV9 Web
| Edited By: |

Updated on: Nov 17, 2022 | 9:55 PM

Share

ರೂಪೇಶ ರಾಜಣ್ಣ (Roopesh Rajanna) ಅವರು ಬಿಗ್ ಬಾಸ್ (Bigg Boss) ಮನೆಯಲ್ಲಿ ಆಟದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅವರು ಕೆಲವೊಮ್ಮೆ ಮುಗ್ಧರಂತೆ ನಡೆದುಕೊಳ್ಳುವುದು ಅನೇಕರಿಗೆ ಇಷ್ಟವಾಗುತ್ತಿದೆ. ಕೆಲ ವಾರಗಳ ಹಿಂದೆ ರೂಪೇಶ್ ರಾಜಣ್ಣ ಅವರನ್ನು ಸಾನ್ಯ ಐಯ್ಯರ್ ಕುರಿ ಮಾಡಿದ್ದರು. ಆ ಎಪಿಸೋಡ್ ವೀಕ್ಷಕರಿಗೆ ಸಖತ್ ಮನರಂಜನೆ ನೀಡಿತ್ತು. ಈಗ ಬಕ್ರಾ ಪ್ರೋಗ್ರಾಂ ಮತ್ತೆ ಮುಂದುವರಿದಿದೆ. ಈ ಬಾರಿ ರೂಪೇಶ್ ರಾಜಣ್ಣ ಮತ್ತೆ ಕುರಿ ಆಗಿದ್ದಾರೆ.

ಈ ವಾರ ಗೊಂಬೆ ಮಾಡುವ ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್​​ ಆಡುವ ವೇಳೆ ರೂಪೇಶ್ ರಾಜಣ್ಣ ಅವರು ಚಿನ್ನದ ಉಂಗುರ ಹಾಗೂ ಬ್ರೆಸ್​ಲೆಟ್​ ಅನ್ನು ಕಳೆದುಕೊಂಡಿದ್ದರು. ಇದು ರೂಪೇಶ್ ಶೆಟ್ಟಿಗೆ ಸಿಕ್ಕಿತ್ತು. ಅಮೂಲ್ಯ ವಸ್ತು ಕಳೆದುಕೊಂಡಿದ್ದು ರೂಪೇಶ್ ರಾಜಣ್ಣ ಅವರಿಗೆ ಸಾಕಷ್ಟು ಬೇಸರ ತರಿಸಿತ್ತು. ಮನೆಯಲ್ಲಿ ಅವರು ಎಲ್ಲ ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು.

ಈ ಸಂದರ್ಭಕ್ಕೆ ಸರಿಯಾಗಿ ರೂಪೇಶ್ ಶೆಟ್ಟಿ ಬಂದು ರೂಪೇಶ್ ರಾಜಣ್ಣ ಕಿವಿಯಲ್ಲಿ ಕೆಲ ವಿಚಾರ ಹೇಳಿದ್ದಾರೆ. ‘ರೂಪೇಶ್ ರಾಜಣ್ಣ ಅವರೇ ಹೀಗೆಲ್ಲ ಮಾಡಿದ್ರೆ ಸಿಗಲ್ಲ. ಬಿಗ್ ಬಾಸ್ ಎಲ್ಲವನ್ನೂ ನೋಡ್ತಾ ಇರ್ತಾರೆ. ಅವರಿಗೆ ಉಂಗುರ ಎಲ್ಲಿದೆ ಅನ್ನೋದು ಗೊತ್ತಿರುತ್ತದೆ. ಅವರ ಬಳಿ ಗಂಭೀರವಾಗಿ ಬೇಡಿಕೊಳ್ಳಿ’ ಎಂದರು. ಇದನ್ನು ನಂಬಿದ ರೂಪೇಶ್ ರಾಜಣ್ಣ ಅವರು ತುಂಬಾನೇ ಗಂಭೀರವಾಗಿ ಕುಳಿತು, ಕೈ ಮುಗಿದು ಬೇಡಿಕೊಂಡರು. ಬಿಗ್ ಬಾಸ್​ನ ಖುಷಿಪಡಿಸಲು ಉರುಳುಸೇವೆ ಕೂಡ ಮಾಡಿದರು. ಆದರೆ, ಬಿಗ್ ಬಾಸ್ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಈ ವಿಚಾರದಲ್ಲಿ ಆರ್ಯವರ್ಧನ್​ ಗುರೂಜಿ ಕೂಡ ಸೇರಿಕೊಂಡರು. ತಮ್ಮ ದಿವ್ಯ ಶಕ್ತಿಯಿಂದ ಉಂಗುರ ಹಾಗೂ ಬ್ರೆಸ್​ಲೆಟ್ ಎಲ್ಲಿದೆ ಎಂಬುದನ್ನು ಕಂಡು ಹಿಡಿಯುತ್ತೇನೆ ಎಂದು ಹೇಳಿದರು ಆರ್ಯವರ್ಧನ್​. ಅಡುಗೆ ಮನೆಯಿಂದ ಮೆಣಸಿನ ಕಾಯಿ, ಆಲೂಗಡ್ಡೆ ಮತ್ತಿತರ ತರಕಾರಿ ತಂದು ಮಂತ್ರ ಮಾಡುವ ರೀತಿ ಮಾಡಿದರು. ಇದೇ ಸಂದರ್ಭಕ್ಕೆ ಸರಿಯಾಗಿ ರೂಪೇಶ್ ಶೆಟ್ಟಿ ಗಾರ್ಡನ್ ಏರಿಯಾದಲ್ಲಿ ಉಂಗುರ ಹಾಗೂ ಬ್ರೆಸ್​ಲೆಟ್ ಅನ್ನು ಅಡಗಿಸಿಟ್ಟು ಬಂದರು. ಗುರೂಜಿ ಅದೇ ಜಾಗವನ್ನು ಸರಿಯಾಗಿ ನೋಡಿ ಆಲೂಗಡ್ಡೆ ಎಸೆದರು.

ಇದನ್ನೂ ಓದಿ: ರೂಪೇಶ್ ರಾಜಣ್ಣ ಮಾಡಿದ ನೋವಿಗೆ ಭಿನ್ನವಾಗಿ ಸೇಡು ತೀರಿಸಿಕೊಂಡ ದಿವ್ಯಾ ಉರುಡುಗ

ಗುರೂಜಿ ಅವರ ಅದೃಷ್ಟ ಎಂಬಂತೆ ಉಂಗುರ ಹಾಗೂ ಬ್ರೆಸ್​ಲೆಟ್ ಇದ್ದ ಜಾಗಕ್ಕೆ ಆಲೂಗಡ್ಡೆ ಹೋಗಿ ನಿಂತಿತು. ಅಲ್ಲಿ ಹುಡುಕಿ ಎಂದು ಗುರೂಜಿ ಹೇಳಿದರು. ಹೋಗಿ ಹುಡುಕಿದಾಗ ರೂಪೇಶ್ ರಾಜಣ್ಣ ಕಳೆದುಕೊಂಡ ವಸ್ತುಗಳು ಸಿಕ್ಕವು. ಇದೊಂದು ಪವಾಡ ಎಂದೇ ರೂಪೇಶ್ ರಾಜಣ್ಣ ಭಾವಿಸಿದ್ದಾರೆ. ಈ ಮೂಲಕ ಮತ್ತೆ ಕುರಿ ಆಗಿದ್ದಾರೆ ಅವರು.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್