AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR: ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ರಾಜಮೌಳಿ, ಆಲಿಯಾ ಇವರಲ್ಲಿ ಹೆಚ್ಚು ಸಂಭಾವನೆ ಪಡೆದವರು ಯಾರು?

‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಅವರಿಗೆ ಭಾರತೀಯ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ಅವರು ಈ ಸಿನಿಮಾದ ಲಾಭದಲ್ಲಿ ಶೇ.30ರಷ್ಟು ಪಾಲು ಪಡೆಯಲಿದ್ದಾರೆ ಎನ್ನಲಾಗಿದೆ.

RRR: ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ರಾಜಮೌಳಿ, ಆಲಿಯಾ ಇವರಲ್ಲಿ ಹೆಚ್ಚು ಸಂಭಾವನೆ ಪಡೆದವರು ಯಾರು?
ಜ್ಯೂ. ಎನ್​ಟಿಆರ್​, ರಾಜಮೌಳಿ, ರಾಮ್​ ಚರಣ್​, ಆಲಿಯಾ ಭಟ್​
TV9 Web
| Updated By: Digi Tech Desk|

Updated on:Dec 25, 2021 | 12:36 PM

Share

ತುಂಬ ಅದ್ದೂರಿಯಾಗಿ ‘ಆರ್​ಆರ್​ಆರ್​’ ಸಿನಿಮಾ (RRR Movie) ಮೂಡಿಬಂದಿದೆ. 2022ರ ಜ.7ರಂದು ವಿಶ್ವಾದ್ಯಂತ ಈ ಚಿತ್ರ ಬಿಡುಗಡೆ ಆಗಲಿದೆ. ಈಗಾಗಲೇ ಟ್ರೇಲರ್ ಧೂಳೆಬ್ಬಿಸಿದೆ. ರಾಮ್​ ಚರಣ್​ (Ram Charan), ಜ್ಯೂ. ಎನ್​ಟಿಆರ್ (Jr NTR)​ ಅಭಿಮಾನಿಗಳು ಈ ಸಿನಿಮಾ ಮೇಲೆ ಸಖತ್​ ಭರವಸೆ ಇಟ್ಟುಕೊಂಡಿದ್ದಾರೆ. ರಾಜಮೌಳಿ (SS Rajamouli) ನಿರ್ದೇಶನದ ಸಿನಿಮಾ ಆದ್ದರಿಂದ ನಿರೀಕ್ಷೆ ಡಬಲ್​ ಆಗಿದೆ. ಬೃಹತ್​ ಸೆಟ್​ಗಳು, ಅದ್ದೂರಿ ಗ್ರಾಫಿಕ್ಸ್​ ತಂತ್ರಜ್ಞಾನವು ಈ ಚಿತ್ರದ ಟ್ರೇಲರ್​ನಲ್ಲಿ ಹೈಲೈಟ್​ ಆಗಿದೆ. ಈಗ ‘ಆರ್​ಆರ್​ಆರ್​’ ತಂಡದವರ ಸಂಭಾವನೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ಅಜಯ್​ ದೇವಗನ್​, ಆಲಿಯಾ ಭಟ್​ (Alia Bhatt) ಮತ್ತು ರಾಜಮೌಳಿ ಇವರಲ್ಲಿ ಹೆಚ್ಚು ಸಂಭಾವನೆ ಪಡೆದವರು ಯಾರು ಎಂಬ ಪ್ರಶ್ನೆ ಎದ್ದಿದೆ. ಅದಕ್ಕೆ ಉತ್ತರ ಇಲ್ಲಿದೆ.

ಸಂಭಾವನೆ ವಿಚಾರವನ್ನು ಯಾರೂ ಬಹಿರಂಗವಾಗಿ ಮಾತನಾಡಿಲ್ಲ. ಆದರೆ ಮೂಲಗಳ ಪ್ರಕಾರ ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಅವರು ಸಮನಾಗಿ ಸಂಭಾವನೆ ಪಡೆದಿದ್ದಾರೆ. ಅಂದರೆ ಇಬ್ಬರೂ ಕೂಡ ತಲಾ 45 ಕೋಟಿ ರೂಪಾಯಿ ಸಂಬಳ ಪಡೆದಿದ್ದಾರೆ ಎನ್ನಲಾಗಿದೆ. ಇನ್ನು, ಆಲಿಯಾ ಭಟ್​ ಅವರಿಗೆ 9 ಕೋಟಿ ರೂ. ನೀಡಲಾಗಿದೆ. ಅದೇ ರೀತಿ ಬಾಲಿವುಡ್​ ಕಲಾವಿದ ಅಜಯ್​ ದೇವಗನ್​ ಅವರು 25 ಕೋಟಿ ರೂ. ಸಂಭಾವನೆಯನ್ನು ಪಡೆದಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಬ್ಯಾಕ್​ ಟು ಬ್ಯಾಕ್​ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡುತ್ತಿರುವ ರಾಜಮೌಳಿ ಅವರಿಗೆ ಭಾರತೀಯ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ಅವರು ಈ ಸಿನಿಮಾದ ಲಾಭದಲ್ಲಿ ಶೇ.30ರಷ್ಟು ಪಾಲು ಪಡೆಯಲಿದ್ದಾರೆ ಎನ್ನಲಾಗಿದೆ. ಅದೇ ಅವರ ಸಂಭಾವನೆ ಆಗಿರಲಿದೆ. ಆದರೆ ಈ ಯಾವ ವಿಚಾರಗಳ ಬಗ್ಗೆಯೂ ಚಿತ್ರತಂಡ ಅಧಿಕೃತವಾಗಿ ಮಾತನಾಡಿಲ್ಲ. ಈ ಸಿನಿಮಾವನ್ನು ಡಿವಿವಿ ದಾನಯ್ಯ ನಿರ್ಮಾಣ ಮಾಡಿದ್ದಾರೆ.

ನಟಿ ಆಲಿಯಾ ಭಟ್​ ಅವರಿಗೆ ದಕ್ಷಿಣ ಭಾರತದಲ್ಲಿ ಇದು ಮೊದಲ ಸಿನಿಮಾ. ಈ ಚಿತ್ರ ಕನ್ನಡಕ್ಕೂ ಡಬ್​ ಆಗಿದೆ. ಸದ್ಯ ಪ್ರಚಾರ ಕಾರ್ಯದಲ್ಲಿ ‘ಆರ್​ಆರ್​ಆರ್​’ ಚಿತ್ರತಂಡ ಬ್ಯುಸಿ ಆಗಿದೆ. ಕೆಲವೇ ದಿನಗಳ ಹಿಂದೆ ಬೆಂಗಳೂರಿಗೂ ಬಂದಿದ್ದ ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ರಾಜಮೌಳಿ ಮತ್ತು ಆಲಿಯಾ ಭಟ್​ ಅವರು ಮಾಧ್ಯಮಗಳ ಮಾತುಕತೆ ನಡೆಸಿದ್ದರು.

ಇದನ್ನೂ ಓದಿ:

ಹಾಲಿವುಡ್​ ಆಫರ್​ ಬಗ್ಗೆ ಅಚ್ಚರಿಯ ಪ್ರತಿಕ್ರಿಯೆ ನೀಡಿದ ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ

ಆರ್​ಆರ್​ಆರ್​ ಚಿತ್ರ ಓಟಿಟಿಯಲ್ಲಿ ಬರೋದು ಯಾವಾಗ? ಕಾತರದ ಪ್ರಶ್ನೆಗೆ ಸಿಕ್ತು ಉತ್ತರ

Published On - 9:57 am, Sat, 25 December 21

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?