AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR: ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ರಾಜಮೌಳಿ, ಆಲಿಯಾ ಇವರಲ್ಲಿ ಹೆಚ್ಚು ಸಂಭಾವನೆ ಪಡೆದವರು ಯಾರು?

‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಅವರಿಗೆ ಭಾರತೀಯ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ಅವರು ಈ ಸಿನಿಮಾದ ಲಾಭದಲ್ಲಿ ಶೇ.30ರಷ್ಟು ಪಾಲು ಪಡೆಯಲಿದ್ದಾರೆ ಎನ್ನಲಾಗಿದೆ.

RRR: ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ರಾಜಮೌಳಿ, ಆಲಿಯಾ ಇವರಲ್ಲಿ ಹೆಚ್ಚು ಸಂಭಾವನೆ ಪಡೆದವರು ಯಾರು?
ಜ್ಯೂ. ಎನ್​ಟಿಆರ್​, ರಾಜಮೌಳಿ, ರಾಮ್​ ಚರಣ್​, ಆಲಿಯಾ ಭಟ್​
TV9 Web
| Edited By: |

Updated on:Dec 25, 2021 | 12:36 PM

Share

ತುಂಬ ಅದ್ದೂರಿಯಾಗಿ ‘ಆರ್​ಆರ್​ಆರ್​’ ಸಿನಿಮಾ (RRR Movie) ಮೂಡಿಬಂದಿದೆ. 2022ರ ಜ.7ರಂದು ವಿಶ್ವಾದ್ಯಂತ ಈ ಚಿತ್ರ ಬಿಡುಗಡೆ ಆಗಲಿದೆ. ಈಗಾಗಲೇ ಟ್ರೇಲರ್ ಧೂಳೆಬ್ಬಿಸಿದೆ. ರಾಮ್​ ಚರಣ್​ (Ram Charan), ಜ್ಯೂ. ಎನ್​ಟಿಆರ್ (Jr NTR)​ ಅಭಿಮಾನಿಗಳು ಈ ಸಿನಿಮಾ ಮೇಲೆ ಸಖತ್​ ಭರವಸೆ ಇಟ್ಟುಕೊಂಡಿದ್ದಾರೆ. ರಾಜಮೌಳಿ (SS Rajamouli) ನಿರ್ದೇಶನದ ಸಿನಿಮಾ ಆದ್ದರಿಂದ ನಿರೀಕ್ಷೆ ಡಬಲ್​ ಆಗಿದೆ. ಬೃಹತ್​ ಸೆಟ್​ಗಳು, ಅದ್ದೂರಿ ಗ್ರಾಫಿಕ್ಸ್​ ತಂತ್ರಜ್ಞಾನವು ಈ ಚಿತ್ರದ ಟ್ರೇಲರ್​ನಲ್ಲಿ ಹೈಲೈಟ್​ ಆಗಿದೆ. ಈಗ ‘ಆರ್​ಆರ್​ಆರ್​’ ತಂಡದವರ ಸಂಭಾವನೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ಅಜಯ್​ ದೇವಗನ್​, ಆಲಿಯಾ ಭಟ್​ (Alia Bhatt) ಮತ್ತು ರಾಜಮೌಳಿ ಇವರಲ್ಲಿ ಹೆಚ್ಚು ಸಂಭಾವನೆ ಪಡೆದವರು ಯಾರು ಎಂಬ ಪ್ರಶ್ನೆ ಎದ್ದಿದೆ. ಅದಕ್ಕೆ ಉತ್ತರ ಇಲ್ಲಿದೆ.

ಸಂಭಾವನೆ ವಿಚಾರವನ್ನು ಯಾರೂ ಬಹಿರಂಗವಾಗಿ ಮಾತನಾಡಿಲ್ಲ. ಆದರೆ ಮೂಲಗಳ ಪ್ರಕಾರ ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಅವರು ಸಮನಾಗಿ ಸಂಭಾವನೆ ಪಡೆದಿದ್ದಾರೆ. ಅಂದರೆ ಇಬ್ಬರೂ ಕೂಡ ತಲಾ 45 ಕೋಟಿ ರೂಪಾಯಿ ಸಂಬಳ ಪಡೆದಿದ್ದಾರೆ ಎನ್ನಲಾಗಿದೆ. ಇನ್ನು, ಆಲಿಯಾ ಭಟ್​ ಅವರಿಗೆ 9 ಕೋಟಿ ರೂ. ನೀಡಲಾಗಿದೆ. ಅದೇ ರೀತಿ ಬಾಲಿವುಡ್​ ಕಲಾವಿದ ಅಜಯ್​ ದೇವಗನ್​ ಅವರು 25 ಕೋಟಿ ರೂ. ಸಂಭಾವನೆಯನ್ನು ಪಡೆದಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಬ್ಯಾಕ್​ ಟು ಬ್ಯಾಕ್​ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡುತ್ತಿರುವ ರಾಜಮೌಳಿ ಅವರಿಗೆ ಭಾರತೀಯ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ಅವರು ಈ ಸಿನಿಮಾದ ಲಾಭದಲ್ಲಿ ಶೇ.30ರಷ್ಟು ಪಾಲು ಪಡೆಯಲಿದ್ದಾರೆ ಎನ್ನಲಾಗಿದೆ. ಅದೇ ಅವರ ಸಂಭಾವನೆ ಆಗಿರಲಿದೆ. ಆದರೆ ಈ ಯಾವ ವಿಚಾರಗಳ ಬಗ್ಗೆಯೂ ಚಿತ್ರತಂಡ ಅಧಿಕೃತವಾಗಿ ಮಾತನಾಡಿಲ್ಲ. ಈ ಸಿನಿಮಾವನ್ನು ಡಿವಿವಿ ದಾನಯ್ಯ ನಿರ್ಮಾಣ ಮಾಡಿದ್ದಾರೆ.

ನಟಿ ಆಲಿಯಾ ಭಟ್​ ಅವರಿಗೆ ದಕ್ಷಿಣ ಭಾರತದಲ್ಲಿ ಇದು ಮೊದಲ ಸಿನಿಮಾ. ಈ ಚಿತ್ರ ಕನ್ನಡಕ್ಕೂ ಡಬ್​ ಆಗಿದೆ. ಸದ್ಯ ಪ್ರಚಾರ ಕಾರ್ಯದಲ್ಲಿ ‘ಆರ್​ಆರ್​ಆರ್​’ ಚಿತ್ರತಂಡ ಬ್ಯುಸಿ ಆಗಿದೆ. ಕೆಲವೇ ದಿನಗಳ ಹಿಂದೆ ಬೆಂಗಳೂರಿಗೂ ಬಂದಿದ್ದ ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ರಾಜಮೌಳಿ ಮತ್ತು ಆಲಿಯಾ ಭಟ್​ ಅವರು ಮಾಧ್ಯಮಗಳ ಮಾತುಕತೆ ನಡೆಸಿದ್ದರು.

ಇದನ್ನೂ ಓದಿ:

ಹಾಲಿವುಡ್​ ಆಫರ್​ ಬಗ್ಗೆ ಅಚ್ಚರಿಯ ಪ್ರತಿಕ್ರಿಯೆ ನೀಡಿದ ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ

ಆರ್​ಆರ್​ಆರ್​ ಚಿತ್ರ ಓಟಿಟಿಯಲ್ಲಿ ಬರೋದು ಯಾವಾಗ? ಕಾತರದ ಪ್ರಶ್ನೆಗೆ ಸಿಕ್ತು ಉತ್ತರ

Published On - 9:57 am, Sat, 25 December 21

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ