AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR Box Office Collection: ಮೊದಲ ದಿನವೇ ಬಾಕ್ಸ್​ ಆಫೀಸ್​ನಲ್ಲಿ ‘ಆರ್​ಆರ್​ಆರ್​’ ಅಬ್ಬರ; ವಿಶ್ವಾದ್ಯಂತ ಧೂಳೆಬ್ಬಿಸಿತು ರಾಜಮೌಳಿ ಸಿನಿಮಾ

RRR First Day Box Office Collection: ‘ಆರ್​ಆರ್​ಆರ್​’ ಸಿನಿಮಾ ಮೊದಲ ದಿನ ಮಾಡಿರಬಹುದಾದ ಕಲೆಕ್ಷನ್​ ಬಗ್ಗೆ ಚಿತ್ರರಂಗದ ಕೆಲವು ಟ್ರೇಡ್​ ವಿಶ್ಲೇಷಕರು ಪೋಸ್ಟ್​ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

RRR Box Office Collection: ಮೊದಲ ದಿನವೇ ಬಾಕ್ಸ್​ ಆಫೀಸ್​ನಲ್ಲಿ ‘ಆರ್​ಆರ್​ಆರ್​’ ಅಬ್ಬರ; ವಿಶ್ವಾದ್ಯಂತ ಧೂಳೆಬ್ಬಿಸಿತು ರಾಜಮೌಳಿ ಸಿನಿಮಾ
ಆರ್​ಆರ್​ಆರ್​
TV9 Web
| Edited By: |

Updated on: Mar 26, 2022 | 9:59 AM

Share

ಬೃಹತ್​ ಬಜೆಟ್​ನಲ್ಲಿ ರಾಜಮೌಳಿ (SS Rajamouli) ನಿರ್ದೇಶನದ ಸಿನಿಮಾಗಳು ಸಿದ್ಧವಾಗುತ್ತವೆ. ಈಗ ಬಿಡುಗಡೆ ಆಗಿರುವ ‘ಆರ್​ಆರ್​ಆರ್​’ ಸಿನಿಮಾ (RRR Movie) ಕೂಡ ಅದೇ ಪ್ರಕಾರಕ್ಕೆ ಸೇರುವಂತದ್ದು. ಈ ಸಿನಿಮಾಗೆ ಹಾಕಿದ ಬಂಡವಾಳಕ್ಕೆ ಎಷ್ಟು ಲಾಭ ಬಂತು ಎಂಬುದನ್ನು ತಿಳಿದುಕೊಳ್ಳಲು ನಿರ್ಮಾಪಕರಿಗಿಂತಲೂ ಹೆಚ್ಚಾಗಿ ಜನರಿಗೆ ಕುತೂಹಲ ಇರುತ್ತದೆ. ಜ್ಯೂ. ಎನ್​ಟಿಆರ್​ ಮತ್ತು ರಾಮ್​ ಚರಣ್​ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ‘ಆರ್​ಆರ್​ಆರ್​’ ಸಿನಿಮಾದ ಬಾಕ್ಸ್​ ಆಫೀಸ್​ ಕಲೆಕ್ಷನ್​ (RRR Box Office Collection) ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತವಾಗಿ ಮಾಹಿತಿ ಹೊರಬೀಳಬೇಕಿದೆ. ಈ ಸಿನಿಮಾ ಮೊದಲ ದಿನ ಮಾಡಿರಬಹುದಾದ ಬಾಕ್ಸ್​ ಆಫೀಸ್​ ಕಲೆಕ್ಷನ್​ ಬಗ್ಗೆ ಚಿತ್ರರಂಗದ ಕೆಲವು ಟ್ರೇಡ್​ ವಿಶ್ಲೇಷಕರು ಪೋಸ್ಟ್​ ಮಾಡಿದ್ದಾರೆ. ಅದರ ಆಧಾರದಲ್ಲಿ ನೋಡುವುದಾದರೆ ‘ಆರ್​ಆರ್​ಆರ್’ ಚಿತ್ರ ಮೊದಲ ದಿನವೇ ಧೂಳೆಬ್ಬಿಸಿದೆ. ವಿಶ್ವಾದ್ಯಂತ ಬಾಕ್ಸ್ ಆಫೀಸ್​ನಲ್ಲಿ ರಾಜಮೌಳಿ ಸಿನಿಮಾ ಅಬ್ಬರಿಸಿದೆ. ಒಂದು ಅಂದಾಜಿನ ಪ್ರಕಾರ ಈ ಸಿನಿಮಾ ಫಸ್ಟ್​ ಡೇ ವಿಶ್ವಾದ್ಯಂತ 260 ಕೋಟಿ ರೂಪಾಯಿ ಗಳಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆಲಿಯಾ ಭಟ್​, ಅಜಯ್​ ದೇವಗನ್​ ಅವರು ಈ ಚಿತ್ರದಲ್ಲಿ ನಟಿಸಿದ್ದು, ಹಿಂದಿ ಪ್ರೇಕ್ಷಕರನ್ನು ಕೂಡ ಬಹುವಾಗಿ ಆಕರ್ಷಿಸಿದೆ.

‘ಆರ್​ಆರ್​ಆರ್​’ ಸಿನಿಮಾ ಸೃಷ್ಟಿ ಮಾಡಿದ ಕ್ರೇಜ್​ ಅಷ್ಟಿಷ್ಟಲ್ಲ. ಶುಕ್ರವಾರ (ಮಾ.25) ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ರಿಲೀಸ್​ ಆಯಿತು. ವಿದೇಶದಲ್ಲೂ ‘ಆರ್​ಆರ್​ಆರ್​’ ತೆರೆಕಂಡು ಅಬ್ಬರಿಸುತ್ತಿದೆ. ಮಾ.24ರ ರಾತ್ರಿಯಿಂದಲೇ ಶೋ ಆರಂಭ ಆಯಿತು. ಮಾ.25ರ ಎಲ್ಲ ಪ್ರದರ್ಶನಗಳು ಹೌಸ್​ಫುಲ್​ ಆದವು. ಎಲ್ಲ ಚಿತ್ರಮಂದಿರಗಳಲ್ಲೂ ಅಭಿಮಾನಿಗಳು ಈ ಸಿನಿಮಾ ನೋಡಲು ಮುಗಿಬಿದ್ದರು. ಇದರ ಪರಿಣಾಮವಾಗಿ ‘ಆರ್​ಆರ್​ಆರ್​’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಚಿನ್ನದ ಬೆಳೆ ತೆಗೆದಿದೆ ಎಂದು ಹೇಳಲಾಗುತ್ತಿದೆ.

ಆಂಧ್ರ ಮತ್ತು ತೆಲಂಗಾಣದಲ್ಲಿ 120 ಕೋಟಿ ರೂಪಾಯಿ, ತಮಿಳುನಾಡಲ್ಲಿ 10 ಕೋಟಿ ರೂಪಾಯಿ, ಹಿಂದಿ ವರ್ಷನ್​ನಿಂದ 25 ಕೋಟಿ ರೂಪಾಯಿ, ಕರ್ನಾಟಕದಲ್ಲಿ 14 ಕೋಟಿ ರೂಪಾಯಿ, ಕೇರಳದಲ್ಲಿ 4 ಕೋಟಿ ರೂಪಾಯಿ ಹಾಗೂ ವಿದೇಶದಿಂದ 75 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ ಎಂದು ಅಂದಾಜಿಸಲಾಗಿದೆ. ಆದರೆ ಇದರ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತ ರಿಪೋರ್ಟ್​ ಹೊರಬರಬೇಕಿದೆ.

ವಿಶ್ವಾದ್ಯಂತ 8 ಸಾವಿರಕ್ಕೂ ಅಧಿಕ ಪರದೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಟಿಕೆಟ್​ ಬೆಲೆ ಎಷ್ಟೇ ದುಬಾರಿ ಆಗಿದ್ದರೂ ಕೂಡ ಅಭಿಮಾನಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ. ಬೆಂಗಳೂರಿನಲ್ಲೇ ಈ ಚಿತ್ರದ ಟಿಕೆಟ್​ ಬೆಲೆ 250ರಿಂದ 1000 ರೂಪಾಯಿ ಮೀರಿದೆ. ಆದರೂ ಕೂಡ ಎಲ್ಲ ಕಡೆ ಹೌಸ್​ಫುಲ್​ ಆಗಿದೆ. ಚಿತ್ರಮಂದಿರಗಳ ಎದುರಲ್ಲಿ ಜನರು ಕುಣಿದು ಕುಪ್ಪಳಿಸುತ್ತಿದ್ದಾರೆ. ರಾಮ್​ ಚರಣ್​, ಜ್ಯೂ. ಎನ್​ಟಿಆರ್ ಮತ್ತು ರಾಜಮೌಳಿಗೆ ಜೈಕಾರ ಹಾಕಿ, ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ರಾಜಮೌಳಿ ಅವರು ಈ ಸಿನಿಮಾವನ್ನು ಅದ್ದೂರಿಯಾಗಿ ಕಟ್ಟಿಕೊಟ್ಟಿದ್ದಾರೆ. ಇದೊಂದು ದೃಶ್ಯವೈಭವ ಎಂದು ಜನರು ಬಣ್ಣಿಸುತ್ತಿದ್ದಾರೆ. ಆದರೆ ‘ಬಾಹುಬಲಿ’ ಚಿತ್ರಕ್ಕೆ ಹೋಲಿಸಿದರೆ ‘ಆರ್​ಆರ್​ಆರ್​’ ಸಿನಿಮಾ ಸ್ವಲ್ಪ ಸಪ್ಪೆ ಎನಿಸುತ್ತದೆ ಎಂಬ ಅಭಿಪ್ರಾಯ ಕೂಡ ಪ್ರೇಕ್ಷಕರಿಂದ ವ್ಯಕ್ತವಾಗಿದೆ. ಅದೇನೇ ಇರಲಿ, ಇನ್ನೂ ಒಂದು ವಾರಗಳ ಕಾಲ ಈ ಸಿನಿಮಾ ಬಹುತೇಕ ಕಡೆಗಳಲ್ಲೂ ಹೌಸ್​ಫುಲ್ ಪ್ರದರ್ಶನ ಕಾಣುವುದು ಖಚಿತ. ಮುಂಗಡ ಟಿಕೆಟ್​ ಬುಕಿಂಗ್​ಗೆ ಜನರು ತೋರಿಸುತ್ತಿರುವ ಆಸಕ್ತಿಯೇ ಇದಕ್ಕೆ ಸಾಕ್ಷಿ. ಶನಿವಾರ (ಮಾ.26) ಮತ್ತು ಭಾನುವಾರ (ಮಾ.27) ದೊಡ್ಡ ಮಟ್ಟದ ಕಲೆಕ್ಷನ್​ ಆಗಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ:

RRR Twitter Review: ನಿದ್ದೆ ಬಿಟ್ಟು ‘ಆರ್​ಆರ್​ಆರ್​’ ಸಿನಿಮಾ ನೋಡಿ ಬಂದ ಪ್ರೇಕ್ಷಕರು ಏನಂದ್ರು?

‘ಆರ್​ಆರ್​ಆರ್​’ ಸಿನಿಮಾದಲ್ಲಿ ಅಬ್ಬರಿಸಿದ ಜ್ಯೂ. ಎನ್​ಟಿಆರ್​

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!