AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಾದ್ಯಂತ ಧೂಳೆಬ್ಬಿಸಿದೆ ‘ಆರ್​ಆರ್​ಆರ್​’ ಸಿನಿಮಾ; 3 ದಿನಕ್ಕೆ 500 ಕೋಟಿ ರೂ. ಕಲೆಕ್ಷನ್​

RRR Movie Collection: ಮೊದಲ ದಿನವೇ ‘ಆರ್​ಆರ್​ಆರ್​’ ಚಿತ್ರ ವಿಶ್ವಾದ್ಯಂತ 223 ಕೋಟಿ ರೂಪಾಯಿ ಕಮಾಯಿ ಮಾಡಿದೆ ಎಂದು ವರದಿ ಆಗಿತ್ತು. ಈಗ ಮೂರು ದಿನ ಕಳೆಯುವುದರೊಳಗೆ 500 ಕೋಟಿ ರೂಪಾಯಿ ಗಡಿ ಮುಟ್ಟಿದೆ.

ವಿಶ್ವಾದ್ಯಂತ ಧೂಳೆಬ್ಬಿಸಿದೆ ‘ಆರ್​ಆರ್​ಆರ್​’ ಸಿನಿಮಾ; 3 ದಿನಕ್ಕೆ 500 ಕೋಟಿ ರೂ. ಕಲೆಕ್ಷನ್​
ಆರ್​ಆರ್​ಆರ್​ ಸಿನಿಮಾ ಬಾಕ್ಸ್​ ಆಫೀಸ್​ ಕಲೆಕ್ಷನ್​
TV9 Web
| Edited By: |

Updated on: Mar 28, 2022 | 2:32 PM

Share

ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ನಿರ್ದೇಶಕ ರಾಜಮೌಳಿ (Rajamouli) ಅವರು ಮತ್ತೊಮ್ಮೆ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಪಡಿಸಿದ್ದಾರೆ. ಅವರ ಬತ್ತಳಿಕೆಯಿಂದ ಬಂದಿರುವ ‘ಆರ್​ಆರ್​ಆರ್​’ ಸಿನಿಮಾ (RRR Movie) ಗಲ್ಲಾಪೆಟ್ಟಿಗೆಯಲ್ಲಿ ದೂಳೆಬ್ಬಿಸುತ್ತಿದೆ. ಮೂಲತಃ ತೆಲುಗಿನಲ್ಲಿ ಸಿದ್ಧವಾದ ಈ ಚಿತ್ರ ಕನ್ನಡ, ಹಿಂದಿ, ಮಲಯಾಳಂ, ತಮಿಳು ಭಾಷೆಗೆ ಡಬ್​ ಆಗಿ ತೆರೆ ಕಂಡಿದೆ. ಮಾ.25ರಂದು ಅದ್ದೂರಿಯಾಗಿ ವಿಶ್ವಾದ್ಯಂತ ‘ಆರ್​ಆರ್​ಆರ್’​ ಸಿನಿಮಾ ರಿಲೀಸ್​ ಆಯಿತು. ಮೂರು ದಿನ ಕಳೆಯುವುದರೊಳಗೆ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಬಂಗಾರದ ಬೆಳೆ ತೆಗೆದಿದೆ. ಆ ಮೂಲಕ ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಅವರ ವೃತ್ತಿಜೀವನಕ್ಕೆ ಒಳ್ಳೆಯ ಮೈಲೇಜ್​ ಸಿಕ್ಕಿದೆ. ಆಲಿಯಾ ಭಟ್​ ಮತ್ತು ಅಜಯ್​ ದೇವಗನ್​ ಅವರು ಚಿಕ್ಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಈ ಸಿನಿಮಾದಿಂದ ಅವರ ಫೇಮ್​ ಹೆಚ್ಚಿದೆ. ಎಲ್ಲ ಭಾಷೆಯಲ್ಲೂ ‘ಆರ್​ಆರ್​ಆರ್​’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಶುಕ್ರವಾರ, ಶನಿವಾರ ಮತ್ತು ಭಾನುವಾರ ಸೇರಿ ಬಾಕ್ಸ್​ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಕಲೆಕ್ಷನ್​ (RRR Box Office Collection) ಆಗಿದೆ!

ಮೊದಲ ದಿನವೇ ‘ಆರ್​ಆರ್​ಆರ್​’ ಚಿತ್ರಕ್ಕೆ ಭರ್ಜರಿ ಓಪನಿಂಗ್​ ಸಿಕ್ಕಿತು. ಶುಕ್ರವಾರ (ಮಾ.25) ವಿಶ್ವಾದ್ಯಂತ 223 ಕೋಟಿ ರೂಪಾಯಿ ಕಮಾಯಿ ಆಗಿದೆ ಎಂದು ವರದಿ ಆಗಿತ್ತು. ಮೂರು ದಿನ ಕಳೆಯುವುದರೊಳಗೆ 500 ಕೋಟಿ ರೂಪಾಯಿ ಗಡಿ ಮುಟ್ಟಿರುವುದು ‘ಆರ್​ಆರ್​ಆರ್​’ ಸಿನಿಮಾದ ಹೆಚ್ಚುಗಾರಿಕೆ. ಈ ಬಗ್ಗೆ ಟ್ರೇಡ್​ ಅನಾಲಿಸಿಸ್ಟ್​ ತರಣ್​ ಆದರ್ಶ್​, ರಮೇಶ್​ ಬಾಲಾ​ ಮುಂತಾದವರು ಪೋಸ್ಟ್​ ಮಾಡಿದ್ದಾರೆ.

ರಾಜಮೌಳಿ ಸಿನಿಮಾ ಎಂದರೆ ಅಭಿಮಾನಿಗಳು ಸಹಜವಾಗಿಯೇ ಅದ್ದೂರಿತನ ಬಯಸುತ್ತಾರೆ. ಅದಕ್ಕೆ ತಕ್ಕಂತೆಯೇ ‘ಆರ್​ಆರ್​ಆರ್​’ ಸಿನಿಮಾ ಮೂಡಿಬಂದಿದೆ. ಜ್ಯೂ. ಎನ್​ಟಿಆರ್​ ಮತ್ತು ರಾಮ್​ ಚರಣ್​ ಅವರು ಸಖತ್​ ಆ್ಯಕ್ಷನ್​ ಮೆರೆದಿದ್ದಾರೆ. ಜೊತೆಗೆ ಸೆಂಟಿಮೆಂಟ್​ ಕೂಡ ಸಿನಿಮಾದಲ್ಲಿ ಹೈಲೈಟ್​ ಆಗಿದೆ. ಈ ಎಲ್ಲ ಕಾರಣಗಳಿಂದಾಗಿ ಪ್ರೇಕ್ಷಕರಿಗೆ ಸಿನಿಮಾ ಇಷ್ಟ ಆಗಿದೆ. ಮೊದಲ ದಿನವೇ ಎಲ್ಲ ಕಡೆಗಳಿಂದ ಉತ್ತಮ ವಿಮರ್ಶೆ ವ್ಯಕ್ತವಾಗಿದ್ದು ಚಿತ್ರತಂಡಕ್ಕೆ ಪ್ಲಸ್​ ಪಾಯಿಂಟ್​ ಆಯಿತು.

‘ಆರ್​ಆರ್​ಆರ್​’ ಸಿನಿಮಾ ಬಿಡುಗಡೆ ಆಗುವುದಕ್ಕೂ ಮುನ್ನ ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಉತ್ತಮ ಗಳಕೆ ಮಾಡುತ್ತಿತ್ತು. ‘ಆರ್​ಆರ್​ಆರ್​’ ತೆರೆಕಂಡಿರುವುದರಿಂದ ಆ ಸಿನಿಮಾದ ಕಲೆಕ್ಷನ್​ಗೆ ಪೆಟ್ಟು ಬಿದ್ದಿದೆ. ಹಿಂದಿ ಭಾಷಿಕ ರಾಜ್ಯಗಳಲ್ಲಿ ಕೂಡ ‘ಆರ್​ಆರ್​ಆರ್​’ ಸಿನಿಮಾ ತನ್ನ ಬಲ ವೃದ್ಧಿಸಿಕೊಂಡಿದೆ. ಉತ್ತರ ಭಾರತದಲ್ಲಿ ಹಿಂದಿ ಡಬ್ಬಿಂಗ್​ ವರ್ಷನ್​ ಅನ್ನು ಪ್ರೇಕ್ಷಕರು ಮುಗಿಬಿದ್ದು ನೋಡುತ್ತಿದ್ದಾರೆ. ಹಿಂದಿ ವರ್ಷನ್​ನಿಂದ ಶುಕ್ರವಾರ 19 ಕೋಟಿ ರೂಪಾಯಿ, ಶನಿವಾರ 24 ಕೋಟಿ ರೂಪಾಯಿ ಹಾಗೂ ಭಾನುವಾರ 31.50 ಕೋಟಿ ರೂಪಾಯಿ ಗಳಿಕೆ ಆಗಿದೆ. ಸೋಮವಾರ ಕೂಡ ಹಲವು ಕಡೆಗಳಲ್ಲಿ ಹೌಸ್​ ಫುಲ್​ ಆಗುತ್ತಿದೆ.

ದಕ್ಷಿಣ ಭಾರತದ ಸಿನಿಮವೊಂದು ಈ ರೀತಿ ಹಿಂದಿ ವರ್ಷನ್​ನಿಂದ ಭರ್ಜರಿ ಗೆಲುವು ಕಾಣುತ್ತಿರುವುದಕ್ಕೆ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ದಿನದಿಂದ ದಿನಕ್ಕೆ ಬಾಲಿವುಡ್​ ಮಾರುಕಟ್ಟೆಯನ್ನು ದಕ್ಷಿಣ ಭಾರತದ ಸಿನಿಮಾಗಳು ಆಕ್ರಮಿಸಿಕೊಳ್ಳುತ್ತಿವೆ. ಏ.14ರಂದು ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ರಿಲೀಸ್​ ಆಗುತ್ತಿದೆ. ಆ ಚಿತ್ರ ಕೂಡ ಇದೇ ರೀತಿ ದೊಡ್ಡ ಮಟ್ಟದಲ್ಲಿ ಕಲೆಕ್ಷನ್​ ಮಾಡುವ ನಿರೀಕ್ಷೆ ಇದೆ. ಈಗಾಗಲೇ ‘ಕೆಜಿಎಫ್​ 2’ ಸಿನಿಮಾದ ಟ್ರೇಲರ್​ ಹಿಂದಿಯಲ್ಲಿ ಸೂಪರ್​ ಹಿಟ್​ ಆಗುವ ಮೂಲಕ ಹೈಪ್​ ಸೃಷ್ಟಿ ಮಾಡಿದೆ.

ಇದನ್ನೂ ಓದಿ:

Alia Bhatt: ‘ಆರ್​ಆರ್​ಆರ್​’ ಚಿತ್ರ ನೋಡಿ ನಿರಾಸೆಗೊಂಡ ಆಲಿಯಾ ಭಟ್​ ಫ್ಯಾನ್ಸ್

‘ಆರ್​ಆರ್​ಆರ್​’ ಸಿನಿಮಾದಲ್ಲಿ ಅಬ್ಬರಿಸಿದ ಜ್ಯೂ. ಎನ್​ಟಿಆರ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ