ಜಪಾನ್​ನಲ್ಲಿ ಭೂಕಂಪಕ್ಕೆ ಬೆಚ್ಚಿದ ರಾಜಮೌಳಿ, ಕಾರ್ತಿಕೇಯ: ನಂತರ ಏನಾಯ್ತು?

‘ನಮಗೆ ಜಪಾನ್​ನಲ್ಲಿ ಈಗತಾನೆ ಭಯಂಕರ ಭೂಕಂಪದ ಅನುಭವ ಆಯಿತು. ನಾವು 28ನೇ ಫ್ಲೋರ್​ನಲ್ಲಿ ಇದ್ದೆವು. ನಿಧಾನವಾಗಿ ನೆಲ ಅಲುಗಾಡಲು ಆರಂಭಿಸಿತು’ ಎಂಬ ಆ ಅನುಭವವನ್ನು ರಾಜಮೌಳಿ ಪುತ್ರ ಎಸ್.ಎಸ್​. ಕಾರ್ತಿಕೇಯ ವಿವರಿಸಿದ್ದಾರೆ. ಸದ್ಯ ಅವರು ಸೇಫ್​ ಆಗಿದ್ದಾರೆ ಎಂಬುದು ತಿಳಿದು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಜಪಾನ್​ನಲ್ಲಿ ಭೂಕಂಪಕ್ಕೆ ಬೆಚ್ಚಿದ ರಾಜಮೌಳಿ, ಕಾರ್ತಿಕೇಯ: ನಂತರ ಏನಾಯ್ತು?
ಕಾರ್ತಿಕೇಯ, ರಾಜಮೌಳಿ
Follow us
|

Updated on: Mar 21, 2024 | 3:51 PM

2022ರ ಮಾರ್ಚ್​ ತಿಂಗಳಲ್ಲಿ ಬಿಡುಗಡೆಯಾದ ‘ಆರ್​ಆರ್​ಆರ್​’ (RRR) ಸಿನಿಮಾ ಜಾಗತಿಕ ಮಟ್ಟದಲ್ಲಿ ಅಬ್ಬರಿಸಿತು. ರಿಲೀಸ್​ ಆಗಿ ಎರಡು ವರ್ಷ ಕಳೆದರೂ ಈ ಸಿನಿಮಾದ ಹವಾ ಕಡಿಮೆ ಆಗಿಲ್ಲ. ಜಪಾನ್​ನಲ್ಲಿ ಈಗಲೂ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಅಲ್ಲಿನ ಪ್ರೇಕ್ಷಕರಿಗೆ ‘ಆರ್​ಆರ್​ಆರ್​’ ಸಿನಿಮಾ ತುಂಬ ಇಷ್ಟ ಆಗಿದೆ. ಇತ್ತೀಚೆಗೆ ನಿರ್ದೇಶಕ ರಾಜಮೌಳಿ (Rajamouli), ಅವರ ಪುತ್ರ ಕಾರ್ತಿಕೇಯ ಮುಂತಾದವರು ಜಪಾನ್​ಗೆ ಭೇಟಿ ನೀಡಿದ್ದಾರೆ. ಅಲ್ಲಿ ಅವರಿಗೆ ಭೂಕಂಪದ ಅನುಭವ ಆಗಿದೆ. ಆ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅಚ್ಚರಿ ಏನೆಂದರೆ ಭೂಕಂಪ (Earthquake) ಆದಾಗ ಅವರು 28ನೇ ಮಹಡಿಯಲ್ಲಿ ಇದ್ದರು!

‘ಜಪಾನ್​ನಲ್ಲಿ ಈಗಷ್ಟೇ ಭಯಂಕರ ಭೂಕಂಪದ ಅನುಭವ ಆಯಿತು. ನಾವು 28ನೇ ಫ್ಲೋರ್​ನಲ್ಲಿ ಇದ್ದೆವು. ನಿಧಾನವಾಗಿ ನೆಲ ಅಲುಗಾಡಲು ಆರಂಭಿಸಿತು. ಅದು ಭೂಕಂಪ ಅಂತ ತಿಳಿಯಲು ನಮಗೆ ಕೆಲವು ನಿಮಿಷ ಬೇಕಾಯಿತು. ನಾನು ಭಯಗೊಳ್ಳುವವನಿದ್ದೆ. ಆದರೆ ಸುತ್ತಮುತ್ತ ಇದ್ದ ಜಪಾನ್​ ಮಂದಿ ಕಿಂಚಿತ್ತೂ ಅಲ್ಲಾಡಲಿಲ್ಲ. ಇನ್ನೇನು ಮಳೆ ಬರುತ್ತಿದೆ ಎಂಬಷ್ಟು ಸಹಜವಾಗಿ ಅವರಿದ್ದರು’ ಎಂದು ರಾಜಮೌಳಿ ಅವರ ಪುತ್ರ ಎಸ್​ಎಸ್​ ಕಾರ್ತಿಕೇಯ ಅವರು ಎಕ್ಸ್​ (ಟ್ವಿಟರ್​) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾರ್ತಿಕೇಯ ಅವರ ಸ್ಮಾರ್ಟ್​ ವಾಚ್​ನಲ್ಲಿ ಭೂಕಂಪದ ಮುನ್ಸೂಚನೆ ಬಗ್ಗೆ ಮೆಸೇಜ್​ ಕಾಣಿಸಿಕೊಂಡಿದೆ. ಅದರ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ‘ಭೂಕಂಪದ ಮುನ್ಸೂಚನೆಯ ಎಚ್ಚರಿಕೆ: ಶೀಘ್ರದಲ್ಲೇ ದೊಡ್ಡ ಕಂಪನ ಆಗುವ ಸಾಧ್ಯತೆ ಇದೆ. ಶಾಂತವಾಗಿರಿ ಮತ್ತು ಹತ್ತಿರದಲ್ಲಿ ಆಶ್ರಯ ಪಡೆಯಿರಿ’ ಎಂದು ಜಪಾನ್​ನ ಹವಾಮಾನ ಇಲಾಖೆಯವರು ಕಾರ್ತಿಕೇಯ ಅವರಿಗೆ ಸಂದೇಶ ಕಳಿಸಿದ್ದು ಈ ಫೋಟೋದಲ್ಲಿದೆ.

ಇದನ್ನೂ ಓದಿ: RRR ಶೂಟಿಂಗ್​ ಲೊಕೇಷನ್​ ನೋಡಲು ಜಪಾನ್​ನಿಂದ ಬಂದ ಫ್ಯಾನ್ಸ್​

ರಾಜಮೌಳಿ ಮತ್ತು ಅವರ ತಂಡಕ್ಕೆ ಜಪಾನ್​ನಲ್ಲಿ ಸಾಕಷ್ಟು ಪ್ರೀತಿ ಸಿಕ್ಕಿದೆ. ರಾಜಮೌಳಿಗೆ ಇನ್ನಷ್ಟು ಯಶಸ್ಸು ಮತ್ತು ಆರೋಗ್ಯ ಸಿಗಲಿ ಎಂದು ಹಾರೈಸಿ 83 ವರ್ಷ ವಯಸ್ಸಿನ ಮಹಿಳೆಯೊಬ್ಬರು ವಿಶೇಷ ಉಡುಗೊರೆ ನೀಡಿದ್ದಾರೆ. ಆ ಸಂದರ್ಭದ ಫೋಟೋವನ್ನು ರಾಜಮೌಳಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಜಪಾನ್​ನಲ್ಲಿ ‘ಆರ್​ಆರ್​ಆರ್​’ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿರುವ ಬಗ್ಗೆ ಇತ್ತೀಚೆಗೆ ಚಿತ್ರತಂಡದವರು ಮಾಹಿತಿ ನೀಡಿದ್ದರು. ಜಪಾನ್​ನಿಂದ ಕೆಲವು ಅಭಿಮಾನಿಗಳು ಭಾರತಕ್ಕೆ ಬಂದು ‘ಆರ್​ಆರ್​ಆರ್​’ ಶೂಟಿಂಗ್​ ಸ್ಥಳಕ್ಕೆ ಭೇಟಿ ನೀಡಿದ್ದು ಕೂಡ ಇತ್ತೀಚೆಗೆ ಸುದ್ದಿ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ