AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಮನವಿಗೂ ಬಗ್ಗದ ರಾಜಮೌಳಿ; ಬಿಗ್​ ಬಾಸ್​ ವೇದಿಕೆಯಲ್ಲಿ ಸತ್ಯ ಬಯಲು

‘ಆರ್​ಆರ್​ಆರ್​ ಚಿತ್ರ ಹೇಗೆ ಮೂಡಿಬರುತ್ತಿದೆ? ನೀವು ಈಗಾಗಲೇ ಸಿನಿಮಾವನ್ನು ನೋಡಿದ್ದೀರಾ’ ಎಂದು ನಾಗಾರ್ಜುನ ಪ್ರಶ್ನಿಸಿದ್ದಾರೆ. ಅದಕ್ಕೆ ರಾಮ್​ ಚರಣ್​ ಕಡೆಯಿಂದ ನಿರಾಸೆಯ ಉತ್ತರ ಬಂದಿದೆ.

ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಮನವಿಗೂ ಬಗ್ಗದ ರಾಜಮೌಳಿ; ಬಿಗ್​ ಬಾಸ್​ ವೇದಿಕೆಯಲ್ಲಿ ಸತ್ಯ ಬಯಲು
ರಾಮ್​ ಚರಣ್​, ಜ್ಯೂ. ಎನ್​ಟಿಆರ್​
TV9 Web
| Edited By: |

Updated on: Sep 20, 2021 | 8:50 AM

Share

ಬಹುನಿರೀಕ್ಷಿತ ‘ಆರ್​ಆರ್​ಆರ್​’ ಚಿತ್ರಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಕೊರೊನಾ ವೈರಸ್​ ಕಾರಣದಿಂದಾಗಿ ಈ ಸಿನಿಮಾದ ಕೆಲಸಗಳು ತಡವಾಗಿವೆ. ಸದ್ಯ ಶೂಟಿಂಗ್​ ಮುಗಿದಿದ್ದು, ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ತಂಡ ಬ್ಯುಸಿ ಆಗಿದೆ. ಸ್ಟಾರ್​ ನಿರ್ದೇಶಕ ರಾಜಮೌಳಿ ಅವರು ಈ ಸಿನಿಮಾದ ಬಗ್ಗೆ ಭಾರಿ ಸೀಕ್ರೆಟ್​ ಕಾಪಾಡಿಕೊಳ್ಳುತ್ತಿದ್ದಾರೆ. ಅದು ಎಷ್ಟರಮಟ್ಟಿಗೆಂದರೆ, ಈ ಚಿತ್ರದ ಹೀರೋಗಳಾದ ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಅವರಿಗೂ ಕೂಡ ಯಾವುದೇ ದೃಶ್ಯಗಳನ್ನು ರಾಜಮೌಳಿ ತೋರಿಸುತ್ತಿಲ್ಲ! ಹಾಗಂತ ಇದು ಗಾಸಿಪ್​ ಅಲ್ಲ, ಸ್ವತಃ ರಾಮ್​ ಚರಣ್​ ಅವರೇ ಈ ಬಗ್ಗೆ ಬಹಿರಂಗವಾಗಿ ಬಾಯಿ ಬಿಟ್ಟಿದ್ದಾರೆ.

ಇತ್ತೀಚೆಗೆ ರಾಮ್​ ಚರಣ್​ ಅವರು ‘ಬಿಗ್​ ಬಾಸ್​ ತೆಲುಗು ಸೀಸನ್​ 5’ ವೇದಿಕೆಗೆ ಆಗಮಿಸಿದ್ದರು. ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​ ಸಂಸ್ಥೆಯ ತೆಲುಗು ವಿಭಾಗಕ್ಕೆ ರಾಯಭಾರಿ ಆಗಿರುವ ಅವರು ಅದರ ಪ್ರಚಾರದ ಸಲುವಾಗಿ ಬಿಗ್​ ಬಾಸ್​ ಕಾರ್ಯಕ್ರಮಕ್ಕೆ ಬಂದಿದ್ದರು. ಆಗ ನಿರೂಪಕ ನಾಗಾರ್ಜುನ ಒಂದು ಪ್ರಶ್ನೆ ಕೇಳಿದರು. ‘ಆರ್​ಆರ್​ಆರ್​ ಚಿತ್ರ ಹೇಗೆ ಮೂಡಿಬರುತ್ತಿದೆ? ನೀವು ಈಗಾಗಲೇ ಸಿನಿಮಾವನ್ನು ನೋಡಿದ್ದೀರಾ’ ನಾಗಾರ್ಜುನ ಪ್ರಶ್ನಿಸಿದರು. ಅದಕ್ಕೆ ರಾಮ್​ ಚರಣ್​ ಕಡೆಯಿಂದ ನಿರಾಸೆಯ ಉತ್ತರ ಬಂತು.

‘ಇಲ್ಲ ಸರ್​. ಸಿನಿಮಾದ ಯಾವುದೇ ದೃಶ್ಯವನ್ನೂ ನಾನು ನೋಡಿಲ್ಲ. ಪ್ರತಿ ದಿನ ಡಬ್ಬಿಂಗ್ ಮಾಡುವಾಗ ಕೊನೇ ಪಕ್ಷ ಒಂದು ಹಾಡನ್ನಾದರೂ ತೋರಿಸಿ ಎಂದು ರಾಜಮೌಳಿ ಬಳಿ ಮನವಿ ಮಾಡಿಕೊಳ್ಳುತ್ತೇವೆ. ನಾನು ಮತ್ತು ಜ್ಯೂ. ಎನ್​ಟಿಆರ್​ ಒಂದೊಂದು ಹಾಡಿಗಾಗಿ 10-15 ದಿನ ಕೆಲಸ ಮಾಡಿದ್ದೇವೆ. ಅದು ಹೇಗೆ ಮೂಡಿಬಂದಿದೆ ನೋಡೋಣ ಎಂದರೂ ನಮಗೆ ಅವಕಾಶ ಕೊಡುತ್ತಿಲ್ಲ. ಅಷ್ಟರಮಟ್ಟಿಗೆ ರಾಜಮೌಳಿ ಗುಟ್ಟು ಮಾಡುತ್ತಿದ್ದಾರೆ’ ಎಂದು ರಾಮ್​ ಚರಣ್​ ಹೇಳಿದ್ದಾರೆ.

ರಾಮ್​ ಚರಣ್​ ಹೇಳಿದ ಈ ಮಾತು ಕೇಳಿ ಪ್ರೇಕ್ಷಕರಿಗೆ ಮಾತ್ರವಲ್ಲದೇ ನಾಗಾರ್ಜುನ ಅವರಿಗೂ ಅಚ್ಚರಿ ಆಯಿತು. ‘ರಾಜಮೌಳಿ ಅವರೇ.. ಇದು ಸರಿಯೇ? ರಾಮ್​ ಚರಣ್​ಗೆ ಅಲ್ಲದಿದ್ದರೆ, ಕೊನೆ ಪಕ್ಷ ನನಗಾದರೂ ತೋರಿಸಿ’ ಎಂದು ನಾಗಾರ್ಜುನ ತಮಾಷೆ ಮಾಡಿದರು. ರಾಜಮೌಳಿ ಸಿನಿಮಾದಲ್ಲಿ ಗ್ರಾಫಿಕ್ಸ್​ಗೆ ಹೆಚ್ಚು ಮಹತ್ವ ನೀಡಲಾಗುತ್ತದೆ. ಸಂಪೂರ್ಣವಾಗಿ ಆ ಕೆಲಸಗಳು ಮುಗಿದ ನಂತರವೇ ಅವರು ಕಲ್ಪಿಸಿಕೊಂಡ ದೃಶ್ಯಕ್ಕೆ ಅರ್ಥ ಬರುತ್ತದೆ. ಹಾಗಾಗಿ ಅರೆಬರೆ ಕೆಲಸ ಆಗಿರುವಾಗ ಆ ದೃಶ್ಯಗಳನ್ನು ತೋರಿಸುವುದು ಬೇಡ ಎಂಬುದು ಅವರ ಕಾಳಜಿ ಆಗಿರಬಹುದು.

ಆರ್​ಆರ್​ಆರ್​ ಸಿನಿಮಾದಲ್ಲಿ ಬಾಲಿವುಡ್​ ನಟಿ ಆಲಿಯಾ ಭಟ್​ ಅಭಿನಯಿಸಿದ್ದಾರೆ. ಇದು ದಕ್ಷಿಣ ಭಾರತದಲ್ಲಿ ಅವರಿಗೆ ಮೊದಲ ಸಿನಿಮಾ. ಅದೇ ರೀತಿ ಅಜಯ್​ ದೇವಗನ್​ ಕೂಡ ಪ್ರಮುಖ ಪಾತ್ರ ಮಾಡಿದ್ದಾರೆ. ಕೊರೊನಾ ಹಾವಳಿಯಿಂದಾಗಿ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ:

ಮುಗಿಯಿತೇ ರಾಜಮೌಳಿಯ ಅಚ್ಛೇ ದಿನ್​? ಯಶಸ್ಸಿಗಾಗಿ ಕುಟುಂಬದವರು ಬೇರೆ ದಾರಿ ಹಿಡಿದಿರುವ ಶಂಕೆ

Junior NTR: ಅಬ್ಬಾ, RRR​ ಚಿತ್ರದಲ್ಲಿ ಹೀರೋಗೂ ಇದೆ ಐಡಿ ಕಾರ್ಡ್; ಅದಕ್ಕೆ ರಾಜಮೌಳಿ ರಿಯಾಕ್ಷನ್ ಏನು?

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ