AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರನ್ನು ನೆಲದಲ್ಲಿ ಕೂರಿಸಿದ್ರು, ಬೀದಿ ನಾಯಿ ತೋರಿಸಿದ್ರು’; ನಿರ್ದೇಶಕ ರಾಜಮೌಳಿ ತೀವ್ರ ಬೇಸರ

Delhi Airport: ವಿದೇಶದಿಂದ ಬರುವ ಅತಿಥಿಗಳು ವಿಮಾನ ನಿಲ್ದಾಣದಲ್ಲೇ ಇಂಥ ವಾತಾವರಣವನ್ನು ನೋಡಿದರೆ ಭಾರತದ ಬಗ್ಗೆ ಒಳ್ಳೆಯ ಭಾವನೆ ಮೂಡುವುದಿಲ್ಲ. ದಯವಿಟ್ಟು ಈ ಬಗ್ಗೆ ಗಮನ ಹರಿಸಿ ಎಂದು ರಾಜಮೌಳಿ ಮನವಿ ಮಾಡಿಕೊಂಡಿದ್ದಾರೆ.

‘ಅವರನ್ನು ನೆಲದಲ್ಲಿ ಕೂರಿಸಿದ್ರು, ಬೀದಿ ನಾಯಿ ತೋರಿಸಿದ್ರು’; ನಿರ್ದೇಶಕ ರಾಜಮೌಳಿ ತೀವ್ರ ಬೇಸರ
ಎಸ್​ಎಸ್​ ರಾಜಮೌಳಿ
ಮದನ್​ ಕುಮಾರ್​
|

Updated on: Jul 02, 2021 | 12:49 PM

Share

ಖ್ಯಾತ ನಿರ್ದೇಶಕ ಎಸ್​.ಎಸ್. ರಾಜಮೌಳಿ ಅವರು ‘ಆರ್​ಆರ್​ಆರ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಅವರು ಸಿನಿಮಾ ಹೊರತಾದ ಕಾರಣವೊಂದರಿಂದ ಸುದ್ದಿ ಆಗುತ್ತಿದ್ದಾರೆ. ವಿದೇಶದಿಂದ ಬಂದ ಅತಿಥಿಗಳನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆಸಿಕೊಂಡ ರೀತಿಯ ಬಗ್ಗೆ ಅವರು ತೀವ್ರ ಬೇಸರ ಹೊರಹಾಕಿದ್ದಾರೆ. ಇತ್ತೀಚೆಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ತಾವು ಕಂಡ ಚಿತ್ರಣವನ್ನು ಅವರು ಸೋಷಿಯಲ್​ ಮೀಡಿಯಾ ಮೂಲಕ ವಿವರಿಸಿದ್ದಾರೆ. ದಯವಿಟ್ಟು ಭಾರತವನ್ನು ​ಕೆಟ್ಟ ರೀತಿಯಲ್ಲಿ ಬಿಂಬಿಸಬೇಡಿ ಎಂದು ಅವರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

‘ರಾತ್ರಿ 1 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದೆ. ಆರ್​ಟಿಪಿಸಿಆರ್​ ಟೆಸ್ಟ್​ ಸಲುವಾಗಿ ಫಾರ್ಮ್​ ತುಂಬಲು ನೀಡಿದರು. ಎಲ್ಲ ಪ್ರಯಾಣಿಕರು ನೆಲದ ಮೇಲೆ ಕುಳಿತುಕೊಂಡು, ಗೋಡೆಗೆ ಒರಗಿಸಿಕೊಂಡು ಫಾರ್ಮ್​ ತುಂಬುತ್ತಿದ್ದರು. ಅದು ಸರಿ ಎನಿಸುವುದಿಲ್ಲ. ಕನಿಷ್ಠ ಟೇಬಲ್​ ಒದಗಿಸುವುದು ಸರಳ ಸೇವೆ’ ಎಂದು ರಾಜಮೌಳಿ ಟ್ವೀಟ್​ ಮಾಡಿದ್ದಾರೆ.

ವಿಮಾನ ನಿಲ್ದಾಣದ ಒಳಗೆ ಈ ಪರಿಸ್ಥಿತಿಯಾದರೆ ಹೊರಗೆ ಬೇರೆಯದೇ ವಾತಾವರಣ ಇದೆ. ವಿಮಾನ ನಿಲ್ದಾಣದಿಂದ ಹೊರಗೆ ಬರುವ ಗೇಟ್​ನಲ್ಲಿ ಅನೇಕ ಬೀದಿ ನಾಯಿಗಳು ಕಾಣಿಸಿಕೊಳ್ಳುತ್ತಿವೆ. ವಿದೇಶದಿಂದ ಬರುವ ಅತಿಥಿಗಳು ವಿಮಾನ ನಿಲ್ದಾಣದಲ್ಲೇ ಇಂಥ ವಾತಾವರಣವನ್ನು ನೋಡಿದರೆ ಭಾರತದ ಬಗ್ಗೆ ಒಳ್ಳೆಯ ಭಾವನೆ ಮೂಡುವುದಿಲ್ಲ. ದಯವಿಟ್ಟು ಈ ಬಗ್ಗೆ ಗಮನ ಹರಿಸಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ರಾಜಮೌಳಿ ಮನವಿ ಮಾಡಿಕೊಂಡಿದ್ದಾರೆ. ಈ ವಿಚಾರ ದೊಡ್ಡಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಹಿಂದೆ ಅನೇಕ ಸೆಲೆಬ್ರಿಟಿಗಳು ಇಂಥ ಅನುಭವವನ್ನು ತೆರೆದಿಟ್ಟಿದ್ದರು.

ಸಿನಿಮಾ ವಿಚಾರಕ್ಕೆ ಬರುವುದಾದರೆ, ‘ಆರ್​ಆರ್​ಆರ್​’ ಚಿತ್ರದ ಶೂಟಿಂಗ್​ಗೆ ರಾಜಮೌಳಿ ಇತ್ತೀಚೆಗೆ ಮರು ಚಾಲನೆ ನೀಡಿದ್ದಾರೆ. ‘ಬಾಹುಬಲಿ’ ಬಳಿಕ ಅವರು ನಿರ್ದೇಶಿಸುತ್ತಿರುವ ಸಿನಿಮಾ ಇದಾಗಿರುವುದರಿಂದ ನಿರೀಕ್ಷೆ ಹೆಚ್ಚಿದೆ. ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ರಾಮ್​ ಚರಣ್​, ಜ್ಯೂ. ಎನ್​ಟಿಆರ್, ಆಲಿಯಾ ಭಟ್​, ಅಜಯ್​ ದೇವಗನ್​ ಮುಂತಾದವರು ನಟಿಸುತ್ತಿದ್ದಾರೆ. ಇತ್ತೀಚೆಗೆ ಚಿತ್ರತಂಡ ರಿಲೀಸ್​ ಮಾಡಿದ ಒಂದು ಪೋಸ್ಟರ್​ ಸಖತ್​ ವೈರಲ್​ ಆಗಿದೆ.

ಇದನ್ನೂ ಓದಿ:

ಮಹೇಶ್​ ಬಾಬು-ರಾಜಮೌಳಿ ಹೊಸ ಚಿತ್ರದಲ್ಲಿ ‘ಅವನೇ ಶ್ರೀಮನ್ನಾರಾಯಣ’ ಕಥೆ; ಏನಿದು ಹೊಸ ಗಾಸಿಪ್​?

ರಾಜಮೌಳಿ ತಂದೆ ಮೊಬೈಲ್​ ವಾಲ್​ಪೇಪರ್​ನಲ್ಲಿ ನಿರ್ದೇಶಕ ಪುರಿ ಜಗನ್ನಾಥ್ ಫೋಟೋ; ಕಾರಣ ಏನು?

3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ