‘ಅವರನ್ನು ನೆಲದಲ್ಲಿ ಕೂರಿಸಿದ್ರು, ಬೀದಿ ನಾಯಿ ತೋರಿಸಿದ್ರು’; ನಿರ್ದೇಶಕ ರಾಜಮೌಳಿ ತೀವ್ರ ಬೇಸರ

Delhi Airport: ವಿದೇಶದಿಂದ ಬರುವ ಅತಿಥಿಗಳು ವಿಮಾನ ನಿಲ್ದಾಣದಲ್ಲೇ ಇಂಥ ವಾತಾವರಣವನ್ನು ನೋಡಿದರೆ ಭಾರತದ ಬಗ್ಗೆ ಒಳ್ಳೆಯ ಭಾವನೆ ಮೂಡುವುದಿಲ್ಲ. ದಯವಿಟ್ಟು ಈ ಬಗ್ಗೆ ಗಮನ ಹರಿಸಿ ಎಂದು ರಾಜಮೌಳಿ ಮನವಿ ಮಾಡಿಕೊಂಡಿದ್ದಾರೆ.

‘ಅವರನ್ನು ನೆಲದಲ್ಲಿ ಕೂರಿಸಿದ್ರು, ಬೀದಿ ನಾಯಿ ತೋರಿಸಿದ್ರು’; ನಿರ್ದೇಶಕ ರಾಜಮೌಳಿ ತೀವ್ರ ಬೇಸರ
ಎಸ್​ಎಸ್​ ರಾಜಮೌಳಿ
Follow us
|

Updated on: Jul 02, 2021 | 12:49 PM

ಖ್ಯಾತ ನಿರ್ದೇಶಕ ಎಸ್​.ಎಸ್. ರಾಜಮೌಳಿ ಅವರು ‘ಆರ್​ಆರ್​ಆರ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಅವರು ಸಿನಿಮಾ ಹೊರತಾದ ಕಾರಣವೊಂದರಿಂದ ಸುದ್ದಿ ಆಗುತ್ತಿದ್ದಾರೆ. ವಿದೇಶದಿಂದ ಬಂದ ಅತಿಥಿಗಳನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆಸಿಕೊಂಡ ರೀತಿಯ ಬಗ್ಗೆ ಅವರು ತೀವ್ರ ಬೇಸರ ಹೊರಹಾಕಿದ್ದಾರೆ. ಇತ್ತೀಚೆಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ತಾವು ಕಂಡ ಚಿತ್ರಣವನ್ನು ಅವರು ಸೋಷಿಯಲ್​ ಮೀಡಿಯಾ ಮೂಲಕ ವಿವರಿಸಿದ್ದಾರೆ. ದಯವಿಟ್ಟು ಭಾರತವನ್ನು ​ಕೆಟ್ಟ ರೀತಿಯಲ್ಲಿ ಬಿಂಬಿಸಬೇಡಿ ಎಂದು ಅವರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

‘ರಾತ್ರಿ 1 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದೆ. ಆರ್​ಟಿಪಿಸಿಆರ್​ ಟೆಸ್ಟ್​ ಸಲುವಾಗಿ ಫಾರ್ಮ್​ ತುಂಬಲು ನೀಡಿದರು. ಎಲ್ಲ ಪ್ರಯಾಣಿಕರು ನೆಲದ ಮೇಲೆ ಕುಳಿತುಕೊಂಡು, ಗೋಡೆಗೆ ಒರಗಿಸಿಕೊಂಡು ಫಾರ್ಮ್​ ತುಂಬುತ್ತಿದ್ದರು. ಅದು ಸರಿ ಎನಿಸುವುದಿಲ್ಲ. ಕನಿಷ್ಠ ಟೇಬಲ್​ ಒದಗಿಸುವುದು ಸರಳ ಸೇವೆ’ ಎಂದು ರಾಜಮೌಳಿ ಟ್ವೀಟ್​ ಮಾಡಿದ್ದಾರೆ.

ವಿಮಾನ ನಿಲ್ದಾಣದ ಒಳಗೆ ಈ ಪರಿಸ್ಥಿತಿಯಾದರೆ ಹೊರಗೆ ಬೇರೆಯದೇ ವಾತಾವರಣ ಇದೆ. ವಿಮಾನ ನಿಲ್ದಾಣದಿಂದ ಹೊರಗೆ ಬರುವ ಗೇಟ್​ನಲ್ಲಿ ಅನೇಕ ಬೀದಿ ನಾಯಿಗಳು ಕಾಣಿಸಿಕೊಳ್ಳುತ್ತಿವೆ. ವಿದೇಶದಿಂದ ಬರುವ ಅತಿಥಿಗಳು ವಿಮಾನ ನಿಲ್ದಾಣದಲ್ಲೇ ಇಂಥ ವಾತಾವರಣವನ್ನು ನೋಡಿದರೆ ಭಾರತದ ಬಗ್ಗೆ ಒಳ್ಳೆಯ ಭಾವನೆ ಮೂಡುವುದಿಲ್ಲ. ದಯವಿಟ್ಟು ಈ ಬಗ್ಗೆ ಗಮನ ಹರಿಸಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ರಾಜಮೌಳಿ ಮನವಿ ಮಾಡಿಕೊಂಡಿದ್ದಾರೆ. ಈ ವಿಚಾರ ದೊಡ್ಡಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಹಿಂದೆ ಅನೇಕ ಸೆಲೆಬ್ರಿಟಿಗಳು ಇಂಥ ಅನುಭವವನ್ನು ತೆರೆದಿಟ್ಟಿದ್ದರು.

ಸಿನಿಮಾ ವಿಚಾರಕ್ಕೆ ಬರುವುದಾದರೆ, ‘ಆರ್​ಆರ್​ಆರ್​’ ಚಿತ್ರದ ಶೂಟಿಂಗ್​ಗೆ ರಾಜಮೌಳಿ ಇತ್ತೀಚೆಗೆ ಮರು ಚಾಲನೆ ನೀಡಿದ್ದಾರೆ. ‘ಬಾಹುಬಲಿ’ ಬಳಿಕ ಅವರು ನಿರ್ದೇಶಿಸುತ್ತಿರುವ ಸಿನಿಮಾ ಇದಾಗಿರುವುದರಿಂದ ನಿರೀಕ್ಷೆ ಹೆಚ್ಚಿದೆ. ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ರಾಮ್​ ಚರಣ್​, ಜ್ಯೂ. ಎನ್​ಟಿಆರ್, ಆಲಿಯಾ ಭಟ್​, ಅಜಯ್​ ದೇವಗನ್​ ಮುಂತಾದವರು ನಟಿಸುತ್ತಿದ್ದಾರೆ. ಇತ್ತೀಚೆಗೆ ಚಿತ್ರತಂಡ ರಿಲೀಸ್​ ಮಾಡಿದ ಒಂದು ಪೋಸ್ಟರ್​ ಸಖತ್​ ವೈರಲ್​ ಆಗಿದೆ.

ಇದನ್ನೂ ಓದಿ:

ಮಹೇಶ್​ ಬಾಬು-ರಾಜಮೌಳಿ ಹೊಸ ಚಿತ್ರದಲ್ಲಿ ‘ಅವನೇ ಶ್ರೀಮನ್ನಾರಾಯಣ’ ಕಥೆ; ಏನಿದು ಹೊಸ ಗಾಸಿಪ್​?

ರಾಜಮೌಳಿ ತಂದೆ ಮೊಬೈಲ್​ ವಾಲ್​ಪೇಪರ್​ನಲ್ಲಿ ನಿರ್ದೇಶಕ ಪುರಿ ಜಗನ್ನಾಥ್ ಫೋಟೋ; ಕಾರಣ ಏನು?

ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​