AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಸಿನಿಮಾದ ಶೂಟಿಂಗ್​ ಸೆಟ್​ಗೆ ಭೇಟಿ ಕೊಟ್ಟ ಸ್ಟಾರ್​ ನಿರ್ದೇಶಕ ರಾಜಮೌಳಿ

‘ಆರ್​ಆರ್​ಆರ್​’ ಬಳಿಕ ಡೈರೆಕ್ಟರ್​ ರಾಜಮೌಳಿ ಅವರು ಹೊಸ ಸಿನಿಮಾದ ಶೂಟಿಂಗ್​ ಇನ್ನೂ ಶುರು ಮಾಡಿಲ್ಲ. ಸದ್ಯಕ್ಕೆ ಕೊಂಚ ಬಿಡುವಿನಲ್ಲಿರುವ ಅವರು ‘ಪುಷ್ಪ 2’ ಸಿನಿಮಾದ ಚಿತ್ರೀಕರಣದ ಸೆಟ್​ಗೆ ಹೋಗಿದ್ದಾರೆ. ತಮ್ಮ ಸಿನಿಮಾದ ಸೆಟ್​ಗೆ ರಾಜಮೌಳಿ ಬಂದಿದ್ದಕ್ಕೆ ನಿರ್ದೇಶಕ ಸುಕುಮಾರ್​ ಅವರು ಸಂಭ್ರಮಿಸಿದ್ದಾರೆ. ಆ ಕ್ಷಣದ ಫೋಟೋ ವೈರಲ್​ ಆಗಿದೆ.

‘ಪುಷ್ಪ 2’ ಸಿನಿಮಾದ ಶೂಟಿಂಗ್​ ಸೆಟ್​ಗೆ ಭೇಟಿ ಕೊಟ್ಟ ಸ್ಟಾರ್​ ನಿರ್ದೇಶಕ ರಾಜಮೌಳಿ
‘ಪುಷ್ಪ 2’ ಸೆಟ್​ನಲ್ಲಿ ರಾಜಮೌಳಿ
ಮದನ್​ ಕುಮಾರ್​
|

Updated on: Sep 27, 2024 | 3:07 PM

Share

ನಿರ್ದೇಶಕ ರಾಜಮೌಳಿ ಅವರು ಮುಂದಿನ ಸಿನಿಮಾದ ತಯಾರಿಯಲ್ಲಿ ಬ್ಯುಸಿ ಆಗಿದ್ದಾರೆ. ಟಾಲಿವುಡ್​ ‘ಪ್ರಿನ್ರ್ಸ್​’ ಮಹೇಶ್​ ಬಾಬು ಜೊತೆ ಅವರು ಹೊಸ ಸಿನಿಮಾ ಮಾಡಲಿದ್ದಾರೆ. ಆ ಚಿತ್ರದ ಶೂಟಿಂಗ್​ ಆರಂಭವಾಗಲು ಇನ್ನೂ ಸಮಯ ಇದೆ. ಈ ನಡುವೆ ರಾಜಮೌಳಿ ಅವರು ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಸೆಟ್​ಗೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋ ವೈರಲ್​ ಆಗಿದೆ. ರಾಜಮೌಳಿ ಅವರನ್ನು ನೋಡಿ ‘ಪುಷ್ಪ 2’ ಸಿನಿಮಾದ ನಿರ್ದೇಶಕ ಸುಕುಮಾರ್​ ಅವರು ಖುಷಿಪಟ್ಟಿದ್ದಾರೆ. ಅಲ್ಲು ಅರ್ಜುನ್​ ಅಭಿಮಾನಿಗಳಿಗೂ ತುಂಬ ಖುಷಿ ಆಗಿದೆ.

ರಾಜಮೌಳಿ ಅವರು ತುಂಬ ಸಿಂಪಲ್ ವ್ಯಕ್ತಿ. ವಿಶ್ವಾದ್ಯಂತ ಖ್ಯಾತಿ ಹೊಂದಿದ್ದರೂ ಕೂಡ ಅವರು ಜಂಭ ತೋರುವವರಲ್ಲ. ಅದಕ್ಕೆ ಈ ಭೇಟಿಯೇ ಲೇಟೆಸ್ಟ್​ ಉದಾಹರಣೆ. ಚಿತ್ರರಂಗದ ಇತರೆ ನಿರ್ದೇಶಕರ ಜೊತೆ ರಾಜಮೌಳಿ ಅವರು ಸ್ನೇಹ ಹೊಂದಿದ್ದಾರೆ. ನಿರ್ದೇಶಕ ಸುಕುಮಾರ್​ ಜೊತೆಗೂ ಅವರಿಗೆ ಒಳ್ಳೆಯ ಬಾಂಧವ್ಯ ಇದೆ. ಈ ಹಿನ್ನೆಲೆಯಲ್ಲಿ ಅವರು ‘ಪುಷ್ಪ 2’ ಚಿತ್ರದ ಸೆಟ್​ಗೆ ಭೇಟಿ ಕೊಟ್ಟಿದ್ದಾರೆ.

View this post on Instagram

A post shared by Sukumar B (@aryasukku)

ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಕಲಾವಿದರು ನಟಿಸುತ್ತಿರುವ ‘ಪುಷ್ಪ 2’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಆ ನಿರೀಕ್ಷೆಗೆ ತಕ್ಕಂತೆ ನಿರ್ದೇಶಕ ಸುಕುಮಾರ್​ ಅವರು ಸಿನಿಮಾವನ್ನು ಕಟ್ಟಿಕೊಡುತ್ತಿದ್ದಾರೆ. ಈ ನಡುವೆ ರಾಜಮೌಳಿ ಅವರು ಸಿನಿಮಾದ ಸೆಟ್​ನಲ್ಲಿ ಕಾಣಿಸಿಕೊಂಡಿದ್ದಕ್ಕೆ ನಿರ್ದಿಷ್ಟ ಕಾರಣ ಏನಾದರೂ ಇದೆಯಾ ಎಂಬ ಪ್ರಶ್ನೆ ಫ್ಯಾನ್ಸ್​ ತಲೆಯಲ್ಲಿ ಕೊರೆಯುತ್ತಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣಗೆ ಅಪಘಾತ; ಕ್ಷಣಿಕ ಜೀವನದ ಬಗ್ಗೆ ಮಾತನಾಡಿದ ‘ಪುಷ್ಪ 2’ ನಟಿ

‘ನಮ್ಮ ಪುಷ್ಪ 2 ಸಿನಿಮಾದ ಸೆಟ್​ಗೆ ನಿರ್ದೇಶಕರ ಬಾಹುಬಲಿ ರಾಜಮೌಳಿ ಬಂದಿದ್ದಾರೆ. ಅವರನ್ನು ಇಲ್ಲಿ ಭೇಟಿ ಮಾಡಿದ್ದು ಮರೆಯಲಾಗದ ಕ್ಷಣ. ಅವರ ಉಪಸ್ಥಿತಿಯಿಂದಾಗಿ ಸೆಟ್​ಗೆ ಇನ್ನಷ್ಟು ಹುಮ್ಮಸ್ಸು ಬಂತು’ ಎಂದು ಸುಕುಮಾರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ. ಸುಕುಮಾರ್​ ಮತ್ತು ರಾಜಮೌಳಿ ಜೊತೆ ಛಾಯಾಗ್ರಾಹಕ ಮಿರೋಸ್ಲಾ ಬ್ರೋಸೆಜ್​ ಕೂಡ ಈ ಫೋಟೋದಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!