AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಸಿನಿಮಾದ ಶೂಟಿಂಗ್​ ಸೆಟ್​ಗೆ ಭೇಟಿ ಕೊಟ್ಟ ಸ್ಟಾರ್​ ನಿರ್ದೇಶಕ ರಾಜಮೌಳಿ

‘ಆರ್​ಆರ್​ಆರ್​’ ಬಳಿಕ ಡೈರೆಕ್ಟರ್​ ರಾಜಮೌಳಿ ಅವರು ಹೊಸ ಸಿನಿಮಾದ ಶೂಟಿಂಗ್​ ಇನ್ನೂ ಶುರು ಮಾಡಿಲ್ಲ. ಸದ್ಯಕ್ಕೆ ಕೊಂಚ ಬಿಡುವಿನಲ್ಲಿರುವ ಅವರು ‘ಪುಷ್ಪ 2’ ಸಿನಿಮಾದ ಚಿತ್ರೀಕರಣದ ಸೆಟ್​ಗೆ ಹೋಗಿದ್ದಾರೆ. ತಮ್ಮ ಸಿನಿಮಾದ ಸೆಟ್​ಗೆ ರಾಜಮೌಳಿ ಬಂದಿದ್ದಕ್ಕೆ ನಿರ್ದೇಶಕ ಸುಕುಮಾರ್​ ಅವರು ಸಂಭ್ರಮಿಸಿದ್ದಾರೆ. ಆ ಕ್ಷಣದ ಫೋಟೋ ವೈರಲ್​ ಆಗಿದೆ.

‘ಪುಷ್ಪ 2’ ಸಿನಿಮಾದ ಶೂಟಿಂಗ್​ ಸೆಟ್​ಗೆ ಭೇಟಿ ಕೊಟ್ಟ ಸ್ಟಾರ್​ ನಿರ್ದೇಶಕ ರಾಜಮೌಳಿ
‘ಪುಷ್ಪ 2’ ಸೆಟ್​ನಲ್ಲಿ ರಾಜಮೌಳಿ
ಮದನ್​ ಕುಮಾರ್​
|

Updated on: Sep 27, 2024 | 3:07 PM

Share

ನಿರ್ದೇಶಕ ರಾಜಮೌಳಿ ಅವರು ಮುಂದಿನ ಸಿನಿಮಾದ ತಯಾರಿಯಲ್ಲಿ ಬ್ಯುಸಿ ಆಗಿದ್ದಾರೆ. ಟಾಲಿವುಡ್​ ‘ಪ್ರಿನ್ರ್ಸ್​’ ಮಹೇಶ್​ ಬಾಬು ಜೊತೆ ಅವರು ಹೊಸ ಸಿನಿಮಾ ಮಾಡಲಿದ್ದಾರೆ. ಆ ಚಿತ್ರದ ಶೂಟಿಂಗ್​ ಆರಂಭವಾಗಲು ಇನ್ನೂ ಸಮಯ ಇದೆ. ಈ ನಡುವೆ ರಾಜಮೌಳಿ ಅವರು ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಸೆಟ್​ಗೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋ ವೈರಲ್​ ಆಗಿದೆ. ರಾಜಮೌಳಿ ಅವರನ್ನು ನೋಡಿ ‘ಪುಷ್ಪ 2’ ಸಿನಿಮಾದ ನಿರ್ದೇಶಕ ಸುಕುಮಾರ್​ ಅವರು ಖುಷಿಪಟ್ಟಿದ್ದಾರೆ. ಅಲ್ಲು ಅರ್ಜುನ್​ ಅಭಿಮಾನಿಗಳಿಗೂ ತುಂಬ ಖುಷಿ ಆಗಿದೆ.

ರಾಜಮೌಳಿ ಅವರು ತುಂಬ ಸಿಂಪಲ್ ವ್ಯಕ್ತಿ. ವಿಶ್ವಾದ್ಯಂತ ಖ್ಯಾತಿ ಹೊಂದಿದ್ದರೂ ಕೂಡ ಅವರು ಜಂಭ ತೋರುವವರಲ್ಲ. ಅದಕ್ಕೆ ಈ ಭೇಟಿಯೇ ಲೇಟೆಸ್ಟ್​ ಉದಾಹರಣೆ. ಚಿತ್ರರಂಗದ ಇತರೆ ನಿರ್ದೇಶಕರ ಜೊತೆ ರಾಜಮೌಳಿ ಅವರು ಸ್ನೇಹ ಹೊಂದಿದ್ದಾರೆ. ನಿರ್ದೇಶಕ ಸುಕುಮಾರ್​ ಜೊತೆಗೂ ಅವರಿಗೆ ಒಳ್ಳೆಯ ಬಾಂಧವ್ಯ ಇದೆ. ಈ ಹಿನ್ನೆಲೆಯಲ್ಲಿ ಅವರು ‘ಪುಷ್ಪ 2’ ಚಿತ್ರದ ಸೆಟ್​ಗೆ ಭೇಟಿ ಕೊಟ್ಟಿದ್ದಾರೆ.

View this post on Instagram

A post shared by Sukumar B (@aryasukku)

ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಕಲಾವಿದರು ನಟಿಸುತ್ತಿರುವ ‘ಪುಷ್ಪ 2’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಆ ನಿರೀಕ್ಷೆಗೆ ತಕ್ಕಂತೆ ನಿರ್ದೇಶಕ ಸುಕುಮಾರ್​ ಅವರು ಸಿನಿಮಾವನ್ನು ಕಟ್ಟಿಕೊಡುತ್ತಿದ್ದಾರೆ. ಈ ನಡುವೆ ರಾಜಮೌಳಿ ಅವರು ಸಿನಿಮಾದ ಸೆಟ್​ನಲ್ಲಿ ಕಾಣಿಸಿಕೊಂಡಿದ್ದಕ್ಕೆ ನಿರ್ದಿಷ್ಟ ಕಾರಣ ಏನಾದರೂ ಇದೆಯಾ ಎಂಬ ಪ್ರಶ್ನೆ ಫ್ಯಾನ್ಸ್​ ತಲೆಯಲ್ಲಿ ಕೊರೆಯುತ್ತಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣಗೆ ಅಪಘಾತ; ಕ್ಷಣಿಕ ಜೀವನದ ಬಗ್ಗೆ ಮಾತನಾಡಿದ ‘ಪುಷ್ಪ 2’ ನಟಿ

‘ನಮ್ಮ ಪುಷ್ಪ 2 ಸಿನಿಮಾದ ಸೆಟ್​ಗೆ ನಿರ್ದೇಶಕರ ಬಾಹುಬಲಿ ರಾಜಮೌಳಿ ಬಂದಿದ್ದಾರೆ. ಅವರನ್ನು ಇಲ್ಲಿ ಭೇಟಿ ಮಾಡಿದ್ದು ಮರೆಯಲಾಗದ ಕ್ಷಣ. ಅವರ ಉಪಸ್ಥಿತಿಯಿಂದಾಗಿ ಸೆಟ್​ಗೆ ಇನ್ನಷ್ಟು ಹುಮ್ಮಸ್ಸು ಬಂತು’ ಎಂದು ಸುಕುಮಾರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ. ಸುಕುಮಾರ್​ ಮತ್ತು ರಾಜಮೌಳಿ ಜೊತೆ ಛಾಯಾಗ್ರಾಹಕ ಮಿರೋಸ್ಲಾ ಬ್ರೋಸೆಜ್​ ಕೂಡ ಈ ಫೋಟೋದಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!