AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್​’ ನಿರ್ಮಾಪಕನ ಖಾತೆಯಿಂದ ಪ್ರಭಾಸ್​ಗೆ ವರ್ಗಾವಣೆ ಆಯ್ತು 50 ಕೋಟಿ ರೂಪಾಯಿ?  

ಪ್ರಭಾಸ್ ನಟನೆಯ ‘ಬಾಹುಬಲಿ’ ಮೊದಲ ಭಾಗಕ್ಕೆ ಬರೋಬ್ಬರಿ 180 ಕೋಟಿ ರೂಪಾಯಿ ವೆಚ್ಛ ಮಾಡಲಾಗಿತ್ತು. ಬಾಹುಬಲಿ ಎರಡನೇ ಭಾಗಕ್ಕೆ 250 ಕೋಟಿ ರೂಪಾಯಿ ವೆಚ್ಛ ತಗುಲಿತ್ತು. ಈ ಸಿನಿಮಾಗಳಿಗೆ ಪ್ರಭಾಸ್​ ದೊಡ್ಡ ಸಂಭಾವನೆ ಪಡೆದಿದ್ದರು.

‘ಆರ್​ಆರ್​ಆರ್​’ ನಿರ್ಮಾಪಕನ ಖಾತೆಯಿಂದ ಪ್ರಭಾಸ್​ಗೆ ವರ್ಗಾವಣೆ ಆಯ್ತು 50 ಕೋಟಿ ರೂಪಾಯಿ?  
ದಾನಯ್ಯ- ಪ್ರಭಾಸ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jan 25, 2022 | 10:44 AM

Share

ನಟ ಪ್ರಭಾಸ್​ಗೆ (Prabhas)  ಭಾರೀ ಬೇಡಿಕೆ ಇದೆ. ‘ಬಾಹುಬಲಿ’ ಬಳಿಕ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ. ಬಿಗ್​ ಬಜೆಟ್​ ಚಿತ್ರಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ‘ಬಾಹುಬಲಿ’ ಬಳಿಕ ತೆರೆಕಂಡ ‘ಸಾಹೋ’ ಚಿತ್ರ ಹೀನಾಯವಾಗಿ ಸೋತಿತ್ತು. ಆದರೆ, ಅದು ಪ್ರಭಾಸ್​ ವೃತ್ತಿ ಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಅವರ ಕೈಯಲ್ಲಿ ದೊಡ್ಡ ಬಜೆಟ್​ನ ಮೂರು ಚಿತ್ರಗಳಿವೆ. ಈಗ ಪ್ರಭಾಸ್​ ಬಗ್ಗೆ ಹೊಸ ಅಪ್​ಡೇಟ್​ ಒಂದು ಕೇಳಿ ಬಂದಿದೆ. ‘ಆರ್​ಆರ್​ಆರ್​’ ನಿರ್ಮಾಪಕ ಡಿವಿವಿ ದಾನಯ್ಯ (DVV Danayya)ಅವರ ಖಾತೆಯಿಂದ ಪ್ರಭಾಸ್​ಗೆ 50 ಕೋಟಿ ರೂಪಾಯಿ ವರ್ಗಾವಣೆ ಆಗಿದೆ ಎನ್ನುವ ಮಾತಿದೆ. ಈ ಬೆನ್ನಲ್ಲೇ ಅವರ ಹೊಸ ಸಿನಿಮಾ ಬಗ್ಗೆ ಚರ್ಚೆ ಶುರುವಾಗಿದೆ. ಈ ಸಿನಿಮಾ ಯಾವಾಗ ಸೆಟ್ಟೇರಲಿದೆ ಎನ್ನುವ ಕುತೂಹಲ ಮೂಡಿದೆ.

ಪ್ರಭಾಸ್ ನಟನೆಯ ‘ಬಾಹುಬಲಿ’ ಮೊದಲ ಭಾಗಕ್ಕೆ ಬರೋಬ್ಬರಿ 180 ಕೋಟಿ ರೂಪಾಯಿ ವೆಚ್ಛ ಮಾಡಲಾಗಿತ್ತು. ಬಾಹುಬಲಿ ಎರಡನೇ ಭಾಗಕ್ಕೆ 250 ಕೋಟಿ ರೂಪಾಯಿ ವೆಚ್ಛ ತಗುಲಿತ್ತು. ಈ ಸಿನಿಮಾಗಳಿಗೆ ಪ್ರಭಾಸ್​ ದೊಡ್ಡ ಸಂಭಾವನೆ ಪಡೆದಿದ್ದರು. ಆ ಬಳಿಕ ಅವರ ಮಾರುಕಟ್ಟೆ ವ್ಯಾಲ್ಯೂ ಹೆಚ್ಚಾಯಿತು. ಈಗ ‘ಆರ್​ಆರ್​ಆರ್​’ ಸಿನಿಮಾ ನಿರ್ಮಾಪಕ ಡಿವಿವಿ ದಾನಯ್ಯ ದೊಡ್ಡ ಸ್ಟಾರ್​ಗಳ ಜತೆಗೆ ದೊಡ್ಡ ಬಜೆಟ್​ನ ಚಿತ್ರ ಮಾಡೋಕೆ ಉತ್ಸುಕರಾಗಿದ್ದಾರೆ. ಈಗ ಅವರು ಪ್ರಭಾಸ್​ ಕಾಲ್​ಶೀಟ್​ ಪಡೆಯಲು 50 ಕೋಟಿ ರೂಪಾಯಿ ಅಡ್ವಾನ್ಸ್ ನೀಡಿದ್ದಾರೆ ಎನ್ನಲಾಗುತ್ತಿದೆ.

ಪ್ರಭಾಸ್​ ನಟನೆಯ ‘ರಾಧೆ ಶ್ಯಾಮ್​’ ಸಿನಿಮಾ ಸಂಕ್ರಾಂತಿ ಪ್ರಯುಕ್ತ ಜನವರಿ 14ರಂದು ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಈ ಚಿತ್ರವಲ್ಲದೇ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್​’ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಆದಿಪುರುಷ್’ ಚಿತ್ರದ ಕೆಲಸಗಳೂ ನಡೆಯುತ್ತಿವೆ. ಇವುಗಳ ಕೆಲಸಗಳು ಪೂರ್ಣಗೊಳ್ಳಲು ಇನ್ನೂ ಸಾಕಷ್ಟು ಸಮಯಬೇಕು. ಅದಕ್ಕೂ ಮೊದಲೇ ದಾನಯ್ಯ ಅವರು ಪ್ರಭಾಸ್ ಖಾತೆಗೆ ಅಡ್ವಾನ್ಸ್​ ವರ್ಗಾವಣೆ ಮಾಡಿದ್ದಾರೆ ಎಂದು ವರದಿ ಆಗಿದೆ.

ಪ್ರಭಾಸ್​ಗೆ 50 ಕೋಟಿ ರೂಪಾಯಿ ಅಡ್ವಾನ್ಸ್​ ವರ್ಗಾವಣೆ ಮಾಡಿದ್ದಾರೆ ಎಂದಾದರೆ ಅವರ ಸಂಭಾವನೆ ಎಷ್ಟಿರಬಹುದು? ಈ ಚಿತ್ರದ ಬಜೆಟ್​ ಎಷ್ಟಾಗಬಹುದು? ಇದನ್ನು ಯಾರು ನಿರ್ದೇಶನ ಮಾಡುತ್ತಾರೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸದ್ಯಕ್ಕಂತೂ ಘೋಷಣೆ ಆಗುವುದು ಅನುಮಾನ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

ದೇಶದಲ್ಲಿ ಅನಿಶ್ಚಿತತೆ ಮುಂದುವರಿದಿದೆ. ಕೊವಿಡ್​ ಅತಿಯಾಗಿ ಹೆಚ್ಚುತ್ತಿದೆಯಾದರೂ ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡಿಲ್ಲ. ಹೀಗಾಗಿ, ಜನರು ಕೊರೊನಾ ಜತೆಯೇ ಜೀವಿಸುವುದನ್ನು ಕಲಿಯುತ್ತಿದ್ದಾರೆ. ಹೀಗಾಗಿ, ಮುಂದಿನ ಕೆಲವೇ ತಿಂಗಳಲ್ಲಿ ಪರಿಸ್ಥಿತಿ ಸಮಸ್ಥಿತಿಗೆ ಬರಬಹುದು ಎನ್ನುವ ನಿರೀಕ್ಷೆ ಎಲ್ಲರಲ್ಲಿಯೂ ಇದೆ. ಈ ಕಾರಣಕ್ಕೆ ದಾನಯ್ಯ ನಿರ್ಮಾಣದ ‘ಆರ್​ಆರ್​ಆರ್​’ ಚಿತ್ರ ತಂಡ ಹೊಸ ರಿಲೀಸ್​ ದಿನಾಂಕ ಘೋಷಣೆ ಮಾಡಿದೆ. ‘ಆರ್​ಆರ್​ಆರ್​’ ತಂಡ ಮಾರ್ಚ್ 18ರಂದು ಸಿನಿಮಾ ರಿಲೀಸ್​ ಮಾಡಲು ನಿರ್ಧರಿಸಿದೆ. ಒಂದೊಮ್ಮೆ ಆ ದಿನಾಂಕದ ಒಳಗೆ ಪರಿಸ್ಥಿತಿ ಸಮಸ್ಥಿತಿಗೆ ಬರದಿದ್ದರೆ ಏಪ್ರಿಲ್​ 28ರಂದು ಚಿತ್ರ ರಿಲೀಸ್​ ಆಗಲಿದೆ. ‘ಆರ್​ಆರ್​ಆರ್​’ ತಂಡದಲ್ಲಿ ರಿಲೀಸ್ ದಿನಾಂಕದ ಬಗ್ಗೆ ಇನ್ನೂ ಗೊಂದಲ ಇದೆ. ಮಾರ್ಚ್​ ವೇಳೆಗೆ ಪರಿಸ್ಥಿತಿ ಸಮಸ್ಥಿತಿಗೆ ಬರಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: ‘ಆರ್​ಆರ್​ಆರ್​’ ಹೊಸ ರಿಲೀಸ್​ ದಿನಾಂಕ ಘೋಷಣೆ; ಆದರೂ ಮುಗಿಯಲಿಲ್ಲ ಗೊಂದಲ

ಪುನೀತ್​ ನಟನೆಯ ‘ಜೇಮ್ಸ್​’ ಎದುರು ‘ಆರ್​ಆರ್​ಆರ್​’ ರಿಲೀಸ್​? ರಾಜಮೌಳಿಗೆ ಧರ್ಮಸಂಕಟ

Published On - 9:53 am, Tue, 25 January 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು