Upasana Pregnant: ಮದುವೆ ಆಗಿ 10 ವರ್ಷದ ಬಳಿಕ ಸಿಹಿ ಸುದ್ದಿ​ ನೀಡಿದ ರಾಮ್​ ಚರಣ್​-ಉಪಾಸನಾ

Ram Charan | Upasana: ರಾಮ್​ ಚರಣ್​ ಮತ್ತು ಉಪಾಸನಾ 2012ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬರೋಬ್ಬರಿ 10 ವರ್ಷಗಳ ಬಳಿಕ ಉಪಾಸನಾ ಅವರು ಮೊದಲ ಮಗುವಿಗೆ ಜನ್ಮ ನೀಡಲು ಸಜ್ಜಾಗಿದ್ದಾರೆ.

Upasana Pregnant: ಮದುವೆ ಆಗಿ 10 ವರ್ಷದ ಬಳಿಕ ಸಿಹಿ ಸುದ್ದಿ​ ನೀಡಿದ ರಾಮ್​ ಚರಣ್​-ಉಪಾಸನಾ
ರಾಮ್ ಚರಣ್, ಉಪಾಸನಾ
Follow us
| Updated By: ಮದನ್​ ಕುಮಾರ್​

Updated on:Dec 13, 2022 | 8:38 AM

ಟಾಲಿವುಡ್​ ಸ್ಟಾರ್​ ನಟ ರಾಮ್​ ಚರಣ್​ (Ram Charan) ಅವರು ಖುಷಿಯಲ್ಲಿದ್ದಾರೆ. ಅದಕ್ಕೆ ಕಾರಣ ಅವರ ‘ಆರ್​ಆರ್​ಆರ್​’ ಸಿನಿಮಾ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿಗೆ ನಾಮಿನೇಟ್​ ಆಗಿರುವುದು. ಅಷ್ಟೇ ಅಲ್ಲ, ಅವರ ಖುಷಿಯನ್ನು ನೂರು ಪಟ್ಟು ಜಾಸ್ತಿ ಮಾಡುವಂತಹ ಮತ್ತೊಂದು ಸುದ್ದಿ ಸಿಕ್ಕಿದೆ. ರಾಮ್​ ಚರಣ್​ ಅವರು ತಂದೆ ಆಗುತ್ತಿದ್ದಾರೆ. ಮದುವೆ ಆಗಿ ಹತ್ತು ವರ್ಷದ ಬಳಿಕ ರಾಮ್​ ಚರಣ್​ ಹಾಗೂ ಉಪಾಸನಾ (Upasana Kamineni) ದಂಪತಿ ಈ ಗುಡ್​ ನ್ಯೂಸ್​ ಹಂಚಿಕೊಂಡಿದ್ದಾರೆ. ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಈ ಜೋಡಿಗೆ ಅಭಿಮಾನಿಗಳು ಮತ್ತು ಆಪ್ತರು ಶುಭ ಹಾರೈಸುತ್ತಿದ್ದಾರೆ. ‘ಮೆಗಾ ಸ್ಟಾರ್​’ ಚಿರಂಜೀವಿ (Megastar Chiranjeevi) ಕುಟುಂಬದಲ್ಲಿ ಸಂತಸ ಮನೆ ಮಾಡಿದೆ.

ರಾಮ್​ ಚರಣ್​ ಅವರು ಟಾಲಿವುಡ್​ನಲ್ಲಿ ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರು ನಟಿಸಿದ ‘ಆರ್​ಆರ್​ಆರ್​’ ಸಿನಿಮಾ ಈ ವರ್ಷ ತೆರೆಕಂಡು ಬ್ಲಾಕ್ ಬಸ್ಟರ್​ ಹಿಟ್​ ಆಯಿತು. ಆ ಖುಷಿ ಒಂದು ಕಡೆಯಾದರೆ, ತಾವು ತಂದೆ ಆಗುತ್ತಿರುವ ಸಂಭ್ರಮ ಮತ್ತೊಂದೆಡೆ. ‘ಹನುಮಾನ್​ ದೇವರ ಆಶೀರ್ವಾದದಿಂದ ರಾಮ್​ ಚರಣ್​ ಮತ್ತು ಉಪಾಸನಾ ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ’ ಎಂದು ಈ ಜೋಡಿಯ ಪಾಲಕರು ಶುಭ ಸಮಾಚಾರ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
ನರ್ತನ್ ಚಿತ್ರಕ್ಕೆ ರಾಮ್​ ಚರಣ್ ಗ್ರೀನ್ ಸಿಗ್ನಲ್​? ಕೇಳಿ ಬರ್ತಿದೆ ಹೊಸ ಸುದ್ದಿ
Image
‘ಆರ್​ಆರ್​ಆರ್​’ನಿಂದ ರಾಮ್​ ಚರಣ್​ಗೆ ಹೆಚ್ಚಿತು ಬೇಡಿಕೆ; ಬಾಲಿವುಡ್​ನಿಂದ ಬಂತು ಎರಡೆರಡು ಆಫರ್​
Image
ನೆಟ್​ಫ್ಲಿಕ್ಸ್​ ಜತೆ ಕೈ ಜೋಡಿಸಲಿರುವ ರಾಮ್​ ಚರಣ್​? ಹೊಸ ಡೀಲ್​ ಸಲುವಾಗಿ ಮುಂಬೈನಲ್ಲಿ ಮಾತುಕತೆ
Image
ವಿವಾದದಲ್ಲಿ ರಾಮ್​ ಚರಣ್​ ಪತ್ನಿ ಉಪಾಸನಾ; ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ

ಇದನ್ನೂ ಓದಿ: ನೆಟ್​ಫ್ಲಿಕ್ಸ್​ ಜತೆ ಕೈ ಜೋಡಿಸಲಿರುವ ರಾಮ್​ ಚರಣ್​? ಹೊಸ ಡೀಲ್​ ಸಲುವಾಗಿ ಮುಂಬೈನಲ್ಲಿ ಮಾತುಕತೆ

ಚಿಕ್ಕ ವಯಸ್ಸಿನಿಂದಲೂ ರಾಮ್​ ಚರಣ್​ ಮತ್ತು ಉಪಾಸನಾ ನಡುವೆ ಗೆಳೆತನ ಇತ್ತು. 2011ರಲ್ಲಿ ಅವರಿಬ್ಬರ ನಿಶ್ಚಿತಾರ್ಥ ನೆರವೇರಿತು. 2012ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈಗ ಬರೋಬ್ಬರಿ 10 ವರ್ಷಗಳ ಬಳಿಕ ಉಪಾಸನಾ ಅವರು ಮೊದಲ ಮಗುವಿಗೆ ಜನ್ಮ ನೀಡಲು ಸಜ್ಜಾಗಿದ್ದಾರೆ. ಸಂಸಾರವನ್ನು ನಿಭಾಯಿಸುವುದರ ಜೊತೆಗೆ ಪತಿಯ ಸಿನಿಮಾ ಪಯಣಕ್ಕೂ ಬೆಂಬಲವಾಗಿ ನಿಂತಿದ್ದಾರೆ ಉಪಾಸನಾ.

ಇದನ್ನೂ ಓದಿ: ವಿವಾದದಲ್ಲಿ ರಾಮ್​ ಚರಣ್​ ಪತ್ನಿ ಉಪಾಸನಾ; ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ

‘ಆರ್​ಆರ್​ಆರ್​’ ಚಿತ್ರದ ಗೆಲುವಿನ ಬಳಿಕ ರಾಮ್​ ಚರಣ್​ ಅವರು ಹೊಸ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಆರ್​ಸಿ 15’ ಎಂದು ಕರೆಯಲಾಗುತ್ತಿದೆ. ಸಿನಿಮಾದ ಶೀರ್ಷಿಕೆ ಇನ್ನಷ್ಟೇ ಬಹಿರಂಗ ಆಗಬೇಕಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಶಂಕರ್​ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ರಾಮ್​ ಚರಣ್​ ಅವರಿಗೆ ಜೋಡಿಯಾಗಿ ಕಿಯಾರಾ ಅಡ್ವಾನಿ ನಟಿಸುತ್ತಿದ್ದಾರೆ.

‘ಆರ್​ಸಿ 15’ ಸಿನಿಮಾ ಮೂಲಕ ನಿರ್ದೇಶಕ ಶಂಕರ್​ ಅವರು ಟಾಲಿವುಡ್​ಗೆ ಎಂಟ್ರಿ ನೀಡುತ್ತಿದ್ದಾರೆ. ಆ ಕಾರಣದಿಂದಲೂ ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಚಿತ್ರ ನಿರ್ಮಾಣ ಆಗುತ್ತಿದೆ. ಇದರ ಶೂಟಿಂಗ್​ ಪ್ರಗತಿಯಲ್ಲಿದ್ದು, 2023ರ ಮಧ್ಯ ಭಾಗದಲ್ಲಿ ರಿಲೀಸ್​ ಆಗುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:38 am, Tue, 13 December 22

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್