AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jr NTR: ಆಸ್ಕರ್​ ಸಮಾರಂಭ ಮುಗಿಸಿ ಬಂದ ಜೂ. ಎನ್​ಟಿಆರ್​; ಹೈದರಾಬಾದ್​ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ

Jr NTR at Hyderabad Airport: ‘ನಾಟು ನಾಟು..’ ಗೀತೆ ಆಸ್ಕರ್​ ಪ್ರಶಸ್ತಿ ಗೆದ್ದ ಬಳಿಕ ಜೂನಿಯರ್​ ಎನ್​ಟಿಆರ್​ ಅವರ ಜನಪ್ರಿಯತೆ ಹೆಚ್ಚಾಗಿದೆ. ಅವರ ಅಭಿಮಾನಿ ಬಳಗ ಕೂಡ ಹಿರಿದಾಗಿದೆ.

Jr NTR: ಆಸ್ಕರ್​ ಸಮಾರಂಭ ಮುಗಿಸಿ ಬಂದ ಜೂ. ಎನ್​ಟಿಆರ್​; ಹೈದರಾಬಾದ್​ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ
ಜೂನಿಯರ್​ ಎನ್​ಟಿಆರ್
Follow us
ಮದನ್​ ಕುಮಾರ್​
|

Updated on: Mar 15, 2023 | 11:39 AM

ನಟ ಜೂನಿಯರ್​ ಎನ್​ಟಿಆರ್​ (Jr NTR) ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ಅವರು ನಟಿಸಿದ ‘ಆರ್​ಆರ್​ಆರ್​’ ಸಿನಿಮಾ ವಿಶ್ವಮಟ್ಟದಲ್ಲಿ ಸದ್ದು ಮಾಡಿದೆ. ಈ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್​ ಪ್ರಶಸ್ತಿ ಗೆದ್ದಿದೆ. ಲಾಸ್​ ಏಂಜಲಿಸ್​ನ ಡಾಲ್ಬಿ ಥಿಯೇಟರ್​ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿ ಆಗಲು ಜೂನಿಯರ್​ ಎನ್​ಟಿಆರ್​ ಅಮೆರಿಕಕ್ಕೆ ತೆರಳಿದ್ದರು. ಈಗ ಅವರು ಭಾರತಕ್ಕೆ ವಾಪಸ್​ ಬಂದಿದ್ದಾರೆ. ಹೈದರಾಬಾದ್​ನ ವಿಮಾನ ನಿಲ್ದಾಣದಲ್ಲಿ (Hyderabad Airport) ಅವರನ್ನು ಭರ್ಜರಿಯಾಗಿ ಸ್ವಾಗತಿಸಲಾಗಿದೆ. ಏರ್​ಪೋರ್ಟ್​ನಿಂದ ಹೊರಬರುತ್ತಿದ್ದಂತೆಯೇ ಅಭಿಮಾನಿಗಳು (Jr NTR Fans) ಅವರ ಕಾರನ್ನು ಮುತ್ತಿಕೊಂಡಿದ್ದಾರೆ. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

‘ನಾಟು ನಾಟು..’ ಹಾಡಿನಲ್ಲಿ ರಾಮ್​ ಚರಣ್​ ಜೊತೆಗೆ ಜೂನಿಯರ್​ ಎನ್​ಟಿಆರ್​ ಅವರು ಡ್ಯಾನ್ಸ್​ ಮಾಡಿದ ಪರಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಎಂಎಂ ಕೀರವಾಣಿ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಈ ಹಾಡನ್ನು ಜಗತ್ತಿನಾದ್ಯಂತ ಇರುವ ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಈ ಗೀತೆಯು ಪ್ರತಿಷ್ಠಿತ ಪ್ರಶಸ್ತಿಗಳನ್ನು ಗೆದ್ದ ಬಳಿಕ ಜೂನಿಯರ್​ ಎನ್​ಟಿಆರ್​ ಅವರ ಜನಪ್ರಿಯತೆ ಹೆಚ್ಚಾಗಿದೆ.

ಇದನ್ನೂ ಓದಿ
Image
ಜೂನಿಯರ್ ಎನ್​ಟಿಆರ್ ಧರಿಸಿದ ಈ ವಾಚ್​ನ ಬೆಲೆ ಎಷ್ಟು ಕೋಟಿ ರೂಪಾಯಿ?
Image
NTR 30: ಜೂನಿಯರ್​ ಎನ್​ಟಿಆರ್​ 30ನೇ ಚಿತ್ರಕ್ಕೆ ಜಾನ್ವಿ ಕಪೂರ್​ ನಾಯಕಿ; ಇಲ್ಲಿದೆ ಫಸ್ಟ್​ ಲುಕ್​
Image
ಸಿನಿಮಾ ತೊರೆದು ರಾಜಕೀಯಕ್ಕೆ ಹೊರಳಲಿದ್ದಾರೆ ಜೂ.ಎನ್​ಟಿಆರ್​? ನಟನಿಗೆ ಬಂತು ಆಹ್ವಾನ
Image
JR NTR: ಅಮೆರಿಕದಲ್ಲಿ ಜೂ.ಎನ್​ಟಿಆರ್​​ನ​​ ಭೇಟಿ ಮಾಡಲು ಫ್ಯಾನ್ಸ್ ಮುತ್ತಿಗೆ; ವಿಡಿಯೋ ವೈರಲ್

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜೂನಿಯರ್​ ಎನ್​ಟಿಆರ್​ ಹಾಗೂ ರಾಮ್​ ಚರಣ್​ ಅವರು ‘ನಾಟು ನಾಟು..’ ಹಾಡಿಗೆ ಆಸ್ಕರ್​ ವೇದಿಕೆ ಮೇಲೆ ಹೆಜ್ಜೆ ಹಾಕಬೇಕಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಸೂಕ್ತ ರಿಹರ್ಸಲ್​ ಮಾಡಲು ಸಮಯ ಸಿಕ್ಕಿಲ್ಲ ಎಂಬ ಕಾರಣಕ್ಕೆ ಅವರು ಆಸ್ಕರ್​ ವೇದಿಕೆ ಏರಲಿಲ್ಲ. ಆ ಬಗ್ಗೆ ಅವರು ಮೊದಲೇ ಮಾಹಿತಿ ಹಂಚಿಕೊಂಡಿದ್ದರು. ‘ನಾನು ಡ್ಯಾನ್ಸ್​ ಮಾಡಬೇಕು ಅಂತ ಅಂದುಕೊಂಡಿದ್ದೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಯಾಕೆಂದರೆ ರಿಹರ್ಸಲ್​ ಮಾಡಲು ನಮಗೆ ಸಮಯ ಸಿಕ್ಕಿಲ್ಲ. ನಾವು ಸೂಕ್ತ ತಯಾರಿ ಮಾಡಿಕೊಳ್ಳದೇ ಜಗತ್ತಿನ ಅತಿ ದೊಡ್ಡ ವೇದಿಕೆ ಏರಲು ಆಗುವುದಿಲ್ಲ’ ಎಂದು ಜೂನಿಯರ್​ ಎನ್​ಟಿಆರ್​ ಹೇಳಿದ್ದರು.

ಇದನ್ನೂ ಓದಿ: ಜೂನಿಯರ್ ಎನ್​ಟಿಆರ್ ಧರಿಸಿದ ಈ ವಾಚ್​ನ ಬೆಲೆ ಎಷ್ಟು ಕೋಟಿ ರೂಪಾಯಿ?

ಜೂನಿಯರ್​ ಎನ್​ಟಿಆರ್​ ಅಭಿನಯದ ಹೊಸ ಸಿನಿಮಾಗೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಸದ್ಯಕ್ಕೆ ‘ಎನ್​ಟಿಆರ್​ 30’ ಎಂದು ಕರೆಯಲಾಗುತ್ತಿದೆ. ಖ್ಯಾತ ನಿರ್ದೇಶಕ ಕೊರಟಾಲ ಶಿವ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ಗೆ ಜೋಡಿಯಾಗಿ ಜಾನ್ವಿ ಕಪೂರ್​ ನಟಿಸುತ್ತಿದ್ದಾರೆ. ‘ಎನ್​ಟಿಆರ್​ 30’ ಪೂರ್ಣಗೊಂಡ ಬಳಿಕ ಜೂನಿಯರ್​ ಎನ್​ಟಿಆರ್​ ಅವರು ಪ್ರಶಾಂತ್​ ನೀಲ್​ ಜೊತೆ ಕೈ ಜೋಡಿಸಲಿದ್ದಾರೆ. ಆ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಆ ಚಿತ್ರಕ್ಕೆ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
ಪಂಜಾಬ್​ನಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ, 4 ಮಂದಿ ಸಾವು, 25 ಜನರಿಗೆ ಗಾಯ
ಪಂಜಾಬ್​ನಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ, 4 ಮಂದಿ ಸಾವು, 25 ಜನರಿಗೆ ಗಾಯ
ಈ ರೀತಿ ಕುತ್ತಿಗೆ ತೂಗು ಹಾಕುವ ವಿಧಾನದಿಂದ ಈ ಗಂಭೀರ ಕಾಯಿಲೆ ಮಾಯ
ಈ ರೀತಿ ಕುತ್ತಿಗೆ ತೂಗು ಹಾಕುವ ವಿಧಾನದಿಂದ ಈ ಗಂಭೀರ ಕಾಯಿಲೆ ಮಾಯ