AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jr NTR: ಆಸ್ಕರ್​ ಸಮಾರಂಭ ಮುಗಿಸಿ ಬಂದ ಜೂ. ಎನ್​ಟಿಆರ್​; ಹೈದರಾಬಾದ್​ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ

Jr NTR at Hyderabad Airport: ‘ನಾಟು ನಾಟು..’ ಗೀತೆ ಆಸ್ಕರ್​ ಪ್ರಶಸ್ತಿ ಗೆದ್ದ ಬಳಿಕ ಜೂನಿಯರ್​ ಎನ್​ಟಿಆರ್​ ಅವರ ಜನಪ್ರಿಯತೆ ಹೆಚ್ಚಾಗಿದೆ. ಅವರ ಅಭಿಮಾನಿ ಬಳಗ ಕೂಡ ಹಿರಿದಾಗಿದೆ.

Jr NTR: ಆಸ್ಕರ್​ ಸಮಾರಂಭ ಮುಗಿಸಿ ಬಂದ ಜೂ. ಎನ್​ಟಿಆರ್​; ಹೈದರಾಬಾದ್​ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ
ಜೂನಿಯರ್​ ಎನ್​ಟಿಆರ್
ಮದನ್​ ಕುಮಾರ್​
|

Updated on: Mar 15, 2023 | 11:39 AM

Share

ನಟ ಜೂನಿಯರ್​ ಎನ್​ಟಿಆರ್​ (Jr NTR) ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ಅವರು ನಟಿಸಿದ ‘ಆರ್​ಆರ್​ಆರ್​’ ಸಿನಿಮಾ ವಿಶ್ವಮಟ್ಟದಲ್ಲಿ ಸದ್ದು ಮಾಡಿದೆ. ಈ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್​ ಪ್ರಶಸ್ತಿ ಗೆದ್ದಿದೆ. ಲಾಸ್​ ಏಂಜಲಿಸ್​ನ ಡಾಲ್ಬಿ ಥಿಯೇಟರ್​ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿ ಆಗಲು ಜೂನಿಯರ್​ ಎನ್​ಟಿಆರ್​ ಅಮೆರಿಕಕ್ಕೆ ತೆರಳಿದ್ದರು. ಈಗ ಅವರು ಭಾರತಕ್ಕೆ ವಾಪಸ್​ ಬಂದಿದ್ದಾರೆ. ಹೈದರಾಬಾದ್​ನ ವಿಮಾನ ನಿಲ್ದಾಣದಲ್ಲಿ (Hyderabad Airport) ಅವರನ್ನು ಭರ್ಜರಿಯಾಗಿ ಸ್ವಾಗತಿಸಲಾಗಿದೆ. ಏರ್​ಪೋರ್ಟ್​ನಿಂದ ಹೊರಬರುತ್ತಿದ್ದಂತೆಯೇ ಅಭಿಮಾನಿಗಳು (Jr NTR Fans) ಅವರ ಕಾರನ್ನು ಮುತ್ತಿಕೊಂಡಿದ್ದಾರೆ. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

‘ನಾಟು ನಾಟು..’ ಹಾಡಿನಲ್ಲಿ ರಾಮ್​ ಚರಣ್​ ಜೊತೆಗೆ ಜೂನಿಯರ್​ ಎನ್​ಟಿಆರ್​ ಅವರು ಡ್ಯಾನ್ಸ್​ ಮಾಡಿದ ಪರಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಎಂಎಂ ಕೀರವಾಣಿ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಈ ಹಾಡನ್ನು ಜಗತ್ತಿನಾದ್ಯಂತ ಇರುವ ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಈ ಗೀತೆಯು ಪ್ರತಿಷ್ಠಿತ ಪ್ರಶಸ್ತಿಗಳನ್ನು ಗೆದ್ದ ಬಳಿಕ ಜೂನಿಯರ್​ ಎನ್​ಟಿಆರ್​ ಅವರ ಜನಪ್ರಿಯತೆ ಹೆಚ್ಚಾಗಿದೆ.

ಇದನ್ನೂ ಓದಿ
Image
ಜೂನಿಯರ್ ಎನ್​ಟಿಆರ್ ಧರಿಸಿದ ಈ ವಾಚ್​ನ ಬೆಲೆ ಎಷ್ಟು ಕೋಟಿ ರೂಪಾಯಿ?
Image
NTR 30: ಜೂನಿಯರ್​ ಎನ್​ಟಿಆರ್​ 30ನೇ ಚಿತ್ರಕ್ಕೆ ಜಾನ್ವಿ ಕಪೂರ್​ ನಾಯಕಿ; ಇಲ್ಲಿದೆ ಫಸ್ಟ್​ ಲುಕ್​
Image
ಸಿನಿಮಾ ತೊರೆದು ರಾಜಕೀಯಕ್ಕೆ ಹೊರಳಲಿದ್ದಾರೆ ಜೂ.ಎನ್​ಟಿಆರ್​? ನಟನಿಗೆ ಬಂತು ಆಹ್ವಾನ
Image
JR NTR: ಅಮೆರಿಕದಲ್ಲಿ ಜೂ.ಎನ್​ಟಿಆರ್​​ನ​​ ಭೇಟಿ ಮಾಡಲು ಫ್ಯಾನ್ಸ್ ಮುತ್ತಿಗೆ; ವಿಡಿಯೋ ವೈರಲ್

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜೂನಿಯರ್​ ಎನ್​ಟಿಆರ್​ ಹಾಗೂ ರಾಮ್​ ಚರಣ್​ ಅವರು ‘ನಾಟು ನಾಟು..’ ಹಾಡಿಗೆ ಆಸ್ಕರ್​ ವೇದಿಕೆ ಮೇಲೆ ಹೆಜ್ಜೆ ಹಾಕಬೇಕಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಸೂಕ್ತ ರಿಹರ್ಸಲ್​ ಮಾಡಲು ಸಮಯ ಸಿಕ್ಕಿಲ್ಲ ಎಂಬ ಕಾರಣಕ್ಕೆ ಅವರು ಆಸ್ಕರ್​ ವೇದಿಕೆ ಏರಲಿಲ್ಲ. ಆ ಬಗ್ಗೆ ಅವರು ಮೊದಲೇ ಮಾಹಿತಿ ಹಂಚಿಕೊಂಡಿದ್ದರು. ‘ನಾನು ಡ್ಯಾನ್ಸ್​ ಮಾಡಬೇಕು ಅಂತ ಅಂದುಕೊಂಡಿದ್ದೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಯಾಕೆಂದರೆ ರಿಹರ್ಸಲ್​ ಮಾಡಲು ನಮಗೆ ಸಮಯ ಸಿಕ್ಕಿಲ್ಲ. ನಾವು ಸೂಕ್ತ ತಯಾರಿ ಮಾಡಿಕೊಳ್ಳದೇ ಜಗತ್ತಿನ ಅತಿ ದೊಡ್ಡ ವೇದಿಕೆ ಏರಲು ಆಗುವುದಿಲ್ಲ’ ಎಂದು ಜೂನಿಯರ್​ ಎನ್​ಟಿಆರ್​ ಹೇಳಿದ್ದರು.

ಇದನ್ನೂ ಓದಿ: ಜೂನಿಯರ್ ಎನ್​ಟಿಆರ್ ಧರಿಸಿದ ಈ ವಾಚ್​ನ ಬೆಲೆ ಎಷ್ಟು ಕೋಟಿ ರೂಪಾಯಿ?

ಜೂನಿಯರ್​ ಎನ್​ಟಿಆರ್​ ಅಭಿನಯದ ಹೊಸ ಸಿನಿಮಾಗೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಸದ್ಯಕ್ಕೆ ‘ಎನ್​ಟಿಆರ್​ 30’ ಎಂದು ಕರೆಯಲಾಗುತ್ತಿದೆ. ಖ್ಯಾತ ನಿರ್ದೇಶಕ ಕೊರಟಾಲ ಶಿವ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ಗೆ ಜೋಡಿಯಾಗಿ ಜಾನ್ವಿ ಕಪೂರ್​ ನಟಿಸುತ್ತಿದ್ದಾರೆ. ‘ಎನ್​ಟಿಆರ್​ 30’ ಪೂರ್ಣಗೊಂಡ ಬಳಿಕ ಜೂನಿಯರ್​ ಎನ್​ಟಿಆರ್​ ಅವರು ಪ್ರಶಾಂತ್​ ನೀಲ್​ ಜೊತೆ ಕೈ ಜೋಡಿಸಲಿದ್ದಾರೆ. ಆ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಆ ಚಿತ್ರಕ್ಕೆ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ