AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: ರಾಮ್​ ಚರಣ್​, ಜೂ. ಎನ್​ಟಿಆರ್​ಗೆ ಮಣೆಹಾಕಿ ರಾಜಮೌಳಿಯನ್ನು ಕಡೆಗಣಿಸಿದ ಆಸ್ಕರ್​; ಅಭಿಮಾನಿಗಳಿಗೆ ಅಸಮಾಧಾನ

Academy Members: ಜಾಗತಿಕ ಮಟ್ಟದಲ್ಲಿ ‘ಆರ್​ಆರ್​ಆರ್​’ ಸಿನಿಮಾಗೆ ಮನ್ನಣೆ ಸಿಗಲು ರಾಜಮೌಳಿ ಅವರ ಕೊಡುಗೆ ದೊಡ್ಡದು. ಅವರಿಗೆ ಆಸ್ಕರ್​ ಸದಸ್ಯತ್ವ ಸಿಗಬೇಕು ಎಂಬುದು ಫ್ಯಾನ್ಸ್ ಒತ್ತಾಯ.

SS Rajamouli: ರಾಮ್​ ಚರಣ್​, ಜೂ. ಎನ್​ಟಿಆರ್​ಗೆ ಮಣೆಹಾಕಿ ರಾಜಮೌಳಿಯನ್ನು ಕಡೆಗಣಿಸಿದ ಆಸ್ಕರ್​; ಅಭಿಮಾನಿಗಳಿಗೆ ಅಸಮಾಧಾನ
ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​, ಎಸ್​ಎಸ್​ ರಾಜಮೌಳಿ
ಮದನ್​ ಕುಮಾರ್​
|

Updated on: Jun 30, 2023 | 12:37 PM

Share

ಭಾರತದಲ್ಲಿ ಆಸ್ಕರ್​ ಪ್ರಶಸ್ತಿ (Oscars) ಬಗ್ಗೆ ಮತ್ತೆ ಚರ್ಚೆ ಆಗುತ್ತಿದೆ. ಕೆಲವೇ ತಿಂಗಳ ಹಿಂದೆ ‘ಆರ್​ಆರ್​ಆರ್​’ (RRR Movie) ಸಿನಿಮಾದ ‘ನಾಟು ನಾಟು..’ ಹಾಡಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಸಿಕ್ಕಾಗ ಎಲ್ಲರೂ ಸಂಭ್ರಮಿಸಿದ್ದರು. ಆ ಹಾಡಿನಲ್ಲಿ ರಾಮ್​ ಚರಣ್​ ಹಾಗೂ ಜೂನಿಯರ್​ ಎನ್​ಟಿಆರ್​ ಮಾಡಿದ ಡ್ಯಾನ್ಸ್​ ಸಖತ್​ ಟ್ರೆಂಡ್​ ಆಗಿತ್ತು. ಆಸ್ಕರ್​ ವೇದಿಕೆ ಏರಿದ್ದ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಮತ್ತು ಗೀತರಚನಾಕಾರ ಚಂದ್ರಬೋಸ್​ ಅವರಿಗೆ ಅಭಿನಂದನೆಗಳ ಮಹಾಪೂರ ಹರಿದುಬಂದಿತ್ತು. ಈಗ ಇನ್ನೂ ಹೆಚ್ಚು ಖುಷಿಪಡುವಂತಹ ಬೆಳವಣಿಗೆ ಆಗಿದೆ. ‘ಆರ್​ಆರ್​ಆರ್​’ ತಂಡದ 6 ಜನರಿಗೆ ಆಸ್ಕರ್​ ಸದಸ್ಯತ್ವ ನೀಡಲಾಗಿದೆ. ಆದರೆ ನಿರ್ದೇಶಕ ಎಸ್​ಎಸ್​ ರಾಜಮೌಳಿ (SS Rajamouli) ಅವರಿಗೆ ಈ ಗೌರವ ಸಿಕ್ಕಿಲ್ಲ ಎಂಬುದು ಅಭಿಮಾನಿಗಳ ಅಸಮಾಧಾನಕ್ಕೆ ಕಾರಣ ಆಗಿದೆ.

‘ಆರ್​ಆರ್​ಆರ್​’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​, ಸಂಗೀತ ನಿರ್ದೇಶಕ ಎಂಎಂ ಕೀರವಾಣಿ, ಸಾಹಿತಿ ಚಂದ್ರಬೋಸ್​, ಕ್ಯಾಮೆರಾಮ್ಯಾನ್​ ಸೆಂಥಿಲ್ ಕುಮಾರ್ ಮತ್ತು ಪ್ರೊಡಕ್ಷನ್ ಡಿಸೈನರ್ ಸಾಬು ಸಿರೀಲ್ ಅವರಿಗೆ ಆಸ್ಕರ್​ ಸದಸ್ಯತ್ವ ಸಿಕ್ಕಿದೆ. ಮುಂದಿನ ವರ್ಷ ಆಸ್ಕರ್​ ಪ್ರಶಸ್ತಿಗೆ ಹಣಾಹಣಿ ನಡೆಸುವ ಸಿನಿಮಾ ಮತ್ತು ಸೆಲೆಬ್ರಿಟಿಗಳಿಗೆ ಈ ಸದಸ್ಯರು ವೋಟ್​ ಮಾಡುವ ಅಧಿಕಾರ ಪಡೆದಿದ್ದಾರೆ. ಆದರೆ ಆಸ್ಕರ್​ ಸಮಿತಿಯವರು ರಾಜಮೌಳಿಯನ್ನು ಕಡೆಗಣಿಸಿರುವುದು ಯಾಕೆ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: SS Rajamouli: ಆಸ್ಕರ್​ ಸದಸ್ಯತ್ವ ಪಡೆದವರಿಗೆ ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಕಡೆಯಿಂದ ಅಭಿನಂದನೆ

ಜಾಗತಿಕ ಮಟ್ಟದಲ್ಲಿ ‘ಆರ್​ಆರ್​ಆರ್​’ ಸಿನಿಮಾಗೆ ಮನ್ನಣೆ ಸಿಗಲು ರಾಜಮೌಳಿ ಅವರ ಕೊಡುಗೆ ಜಾಸ್ತಿ ಇದೆ. ದೊಡ್ಡ ಕ್ಯಾನ್ವಾಸ್​ನಲ್ಲಿ ಸಿನಿಮಾ ಮಾಡುವುದು ಹೇಗೆ ಎಂಬ ಕಲೆ ಅವರಿಗೆ ಸಿದ್ಧಿಸಿದೆ. ಬಿಗ್​ ಪ್ರಾಜೆಕ್ಟ್​ಗಳನ್ನು ಯಶಸ್ವಿಯಾಗಿ ನಿರ್ವಹಿಸುವ ಅವರು ಈಗ ವಿಶ್ವಾದ್ಯಂತ ಹೆಸರು ಮಾಡಿದ್ದಾರೆ. ‘ಆರ್​ಆರ್​ಆರ್​’ ಚಿತ್ರದ ಮಾಸ್ಟರ್​ ಮೈಂಡ್​​ ಅವರು. ಅಂಥ ನಿರ್ದೇಶಕನಿಗೆ ಆಸ್ಕರ್​ ಸದಸ್ಯತ್ವ ಸಿಗಬೇಕು ಎಂಬುದು ಫ್ಯಾನ್ಸ್ ಒತ್ತಾಯ.

ಇದನ್ನೂ ಓದಿ: SS Rajamouli: ಡಬಲ್ ರೋಲ್​ನಲ್ಲಿ ಮಿಂಚಿದ ನಟ ಎಸ್​.ಎಸ್. ರಾಜಮೌಳಿ; ಅರೆ ಇದೇನಿದು ಹೊಸ ಅಪ್​ಡೇಟ್?

ತಮಗೆ ಆಸ್ಕರ್​ ಸದಸ್ಯತ್ವ ಸಿಕ್ಕಿಲ್ಲ ಎಂದು ರಾಜಮೌಳಿ ಕಿಂಚಿತ್ತೂ ಬೇಸರ ಮಾಡಿಕೊಳ್ಳಲಿಲ್ಲ. ತಮ್ಮ ತಂಡದವರಿಗೆ ಗೌರವ ಸಿಕ್ಕಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಟ್ವಿಟರ್​ ಮೂಲಕ ಎಲ್ಲರಿಗೂ ಅಭಿನಂದನೆ ತಿಳಿಸಿದ್ದಾರೆ. ‘ಆಸ್ಕರ್​ ಸದಸ್ಯತ್ವ ಪಡೆಯಲು ನಮ್ಮ RRR ಸಿನಿಮಾ ತಂಡದ 6 ಜನರಿಗೆ ಈ ವರ್ಷ ಆಹ್ವಾನ ಬಂದಿರುವುದಕ್ಕೆ ನನಗೆ ತುಂಬ ಹೆಮ್ಮೆಯೆನಿಸುತ್ತಿದೆ. ತಾರಕ್​, ಚರಣ್​, ಪೆದ್ದಣ್ಣ, ಸಾಬು ಸರ್​, ಸೇಂಥಿಲ್​ ಹಾಗೂ ಚಂದ್ರಬೋಸ್​ ಅವರಿಗೆ ನನ್ನ ಅಭಿನಂದನೆ. ಆಸ್ಕರ್​ ಸದಸ್ಯತ್ವಕ್ಕೆ ಆಹ್ವಾನಿತರಾಗಿರುವ ಭಾರತೀಯ ಚಿತ್ರರಂಗದ ಇತರರಿಗೂ ಅಭಿನಂದನೆ ತಿಳಿಸುತ್ತೇನೆ’ ಎಂದು ರಾಜಮೌಳಿ ಪೋಸ್ಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ