Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: ರಾಮ್​ ಚರಣ್​, ಜೂ. ಎನ್​ಟಿಆರ್​ಗೆ ಮಣೆಹಾಕಿ ರಾಜಮೌಳಿಯನ್ನು ಕಡೆಗಣಿಸಿದ ಆಸ್ಕರ್​; ಅಭಿಮಾನಿಗಳಿಗೆ ಅಸಮಾಧಾನ

Academy Members: ಜಾಗತಿಕ ಮಟ್ಟದಲ್ಲಿ ‘ಆರ್​ಆರ್​ಆರ್​’ ಸಿನಿಮಾಗೆ ಮನ್ನಣೆ ಸಿಗಲು ರಾಜಮೌಳಿ ಅವರ ಕೊಡುಗೆ ದೊಡ್ಡದು. ಅವರಿಗೆ ಆಸ್ಕರ್​ ಸದಸ್ಯತ್ವ ಸಿಗಬೇಕು ಎಂಬುದು ಫ್ಯಾನ್ಸ್ ಒತ್ತಾಯ.

SS Rajamouli: ರಾಮ್​ ಚರಣ್​, ಜೂ. ಎನ್​ಟಿಆರ್​ಗೆ ಮಣೆಹಾಕಿ ರಾಜಮೌಳಿಯನ್ನು ಕಡೆಗಣಿಸಿದ ಆಸ್ಕರ್​; ಅಭಿಮಾನಿಗಳಿಗೆ ಅಸಮಾಧಾನ
ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​, ಎಸ್​ಎಸ್​ ರಾಜಮೌಳಿ
Follow us
ಮದನ್​ ಕುಮಾರ್​
|

Updated on: Jun 30, 2023 | 12:37 PM

ಭಾರತದಲ್ಲಿ ಆಸ್ಕರ್​ ಪ್ರಶಸ್ತಿ (Oscars) ಬಗ್ಗೆ ಮತ್ತೆ ಚರ್ಚೆ ಆಗುತ್ತಿದೆ. ಕೆಲವೇ ತಿಂಗಳ ಹಿಂದೆ ‘ಆರ್​ಆರ್​ಆರ್​’ (RRR Movie) ಸಿನಿಮಾದ ‘ನಾಟು ನಾಟು..’ ಹಾಡಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಸಿಕ್ಕಾಗ ಎಲ್ಲರೂ ಸಂಭ್ರಮಿಸಿದ್ದರು. ಆ ಹಾಡಿನಲ್ಲಿ ರಾಮ್​ ಚರಣ್​ ಹಾಗೂ ಜೂನಿಯರ್​ ಎನ್​ಟಿಆರ್​ ಮಾಡಿದ ಡ್ಯಾನ್ಸ್​ ಸಖತ್​ ಟ್ರೆಂಡ್​ ಆಗಿತ್ತು. ಆಸ್ಕರ್​ ವೇದಿಕೆ ಏರಿದ್ದ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಮತ್ತು ಗೀತರಚನಾಕಾರ ಚಂದ್ರಬೋಸ್​ ಅವರಿಗೆ ಅಭಿನಂದನೆಗಳ ಮಹಾಪೂರ ಹರಿದುಬಂದಿತ್ತು. ಈಗ ಇನ್ನೂ ಹೆಚ್ಚು ಖುಷಿಪಡುವಂತಹ ಬೆಳವಣಿಗೆ ಆಗಿದೆ. ‘ಆರ್​ಆರ್​ಆರ್​’ ತಂಡದ 6 ಜನರಿಗೆ ಆಸ್ಕರ್​ ಸದಸ್ಯತ್ವ ನೀಡಲಾಗಿದೆ. ಆದರೆ ನಿರ್ದೇಶಕ ಎಸ್​ಎಸ್​ ರಾಜಮೌಳಿ (SS Rajamouli) ಅವರಿಗೆ ಈ ಗೌರವ ಸಿಕ್ಕಿಲ್ಲ ಎಂಬುದು ಅಭಿಮಾನಿಗಳ ಅಸಮಾಧಾನಕ್ಕೆ ಕಾರಣ ಆಗಿದೆ.

‘ಆರ್​ಆರ್​ಆರ್​’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​, ಸಂಗೀತ ನಿರ್ದೇಶಕ ಎಂಎಂ ಕೀರವಾಣಿ, ಸಾಹಿತಿ ಚಂದ್ರಬೋಸ್​, ಕ್ಯಾಮೆರಾಮ್ಯಾನ್​ ಸೆಂಥಿಲ್ ಕುಮಾರ್ ಮತ್ತು ಪ್ರೊಡಕ್ಷನ್ ಡಿಸೈನರ್ ಸಾಬು ಸಿರೀಲ್ ಅವರಿಗೆ ಆಸ್ಕರ್​ ಸದಸ್ಯತ್ವ ಸಿಕ್ಕಿದೆ. ಮುಂದಿನ ವರ್ಷ ಆಸ್ಕರ್​ ಪ್ರಶಸ್ತಿಗೆ ಹಣಾಹಣಿ ನಡೆಸುವ ಸಿನಿಮಾ ಮತ್ತು ಸೆಲೆಬ್ರಿಟಿಗಳಿಗೆ ಈ ಸದಸ್ಯರು ವೋಟ್​ ಮಾಡುವ ಅಧಿಕಾರ ಪಡೆದಿದ್ದಾರೆ. ಆದರೆ ಆಸ್ಕರ್​ ಸಮಿತಿಯವರು ರಾಜಮೌಳಿಯನ್ನು ಕಡೆಗಣಿಸಿರುವುದು ಯಾಕೆ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: SS Rajamouli: ಆಸ್ಕರ್​ ಸದಸ್ಯತ್ವ ಪಡೆದವರಿಗೆ ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಕಡೆಯಿಂದ ಅಭಿನಂದನೆ

ಜಾಗತಿಕ ಮಟ್ಟದಲ್ಲಿ ‘ಆರ್​ಆರ್​ಆರ್​’ ಸಿನಿಮಾಗೆ ಮನ್ನಣೆ ಸಿಗಲು ರಾಜಮೌಳಿ ಅವರ ಕೊಡುಗೆ ಜಾಸ್ತಿ ಇದೆ. ದೊಡ್ಡ ಕ್ಯಾನ್ವಾಸ್​ನಲ್ಲಿ ಸಿನಿಮಾ ಮಾಡುವುದು ಹೇಗೆ ಎಂಬ ಕಲೆ ಅವರಿಗೆ ಸಿದ್ಧಿಸಿದೆ. ಬಿಗ್​ ಪ್ರಾಜೆಕ್ಟ್​ಗಳನ್ನು ಯಶಸ್ವಿಯಾಗಿ ನಿರ್ವಹಿಸುವ ಅವರು ಈಗ ವಿಶ್ವಾದ್ಯಂತ ಹೆಸರು ಮಾಡಿದ್ದಾರೆ. ‘ಆರ್​ಆರ್​ಆರ್​’ ಚಿತ್ರದ ಮಾಸ್ಟರ್​ ಮೈಂಡ್​​ ಅವರು. ಅಂಥ ನಿರ್ದೇಶಕನಿಗೆ ಆಸ್ಕರ್​ ಸದಸ್ಯತ್ವ ಸಿಗಬೇಕು ಎಂಬುದು ಫ್ಯಾನ್ಸ್ ಒತ್ತಾಯ.

ಇದನ್ನೂ ಓದಿ: SS Rajamouli: ಡಬಲ್ ರೋಲ್​ನಲ್ಲಿ ಮಿಂಚಿದ ನಟ ಎಸ್​.ಎಸ್. ರಾಜಮೌಳಿ; ಅರೆ ಇದೇನಿದು ಹೊಸ ಅಪ್​ಡೇಟ್?

ತಮಗೆ ಆಸ್ಕರ್​ ಸದಸ್ಯತ್ವ ಸಿಕ್ಕಿಲ್ಲ ಎಂದು ರಾಜಮೌಳಿ ಕಿಂಚಿತ್ತೂ ಬೇಸರ ಮಾಡಿಕೊಳ್ಳಲಿಲ್ಲ. ತಮ್ಮ ತಂಡದವರಿಗೆ ಗೌರವ ಸಿಕ್ಕಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಟ್ವಿಟರ್​ ಮೂಲಕ ಎಲ್ಲರಿಗೂ ಅಭಿನಂದನೆ ತಿಳಿಸಿದ್ದಾರೆ. ‘ಆಸ್ಕರ್​ ಸದಸ್ಯತ್ವ ಪಡೆಯಲು ನಮ್ಮ RRR ಸಿನಿಮಾ ತಂಡದ 6 ಜನರಿಗೆ ಈ ವರ್ಷ ಆಹ್ವಾನ ಬಂದಿರುವುದಕ್ಕೆ ನನಗೆ ತುಂಬ ಹೆಮ್ಮೆಯೆನಿಸುತ್ತಿದೆ. ತಾರಕ್​, ಚರಣ್​, ಪೆದ್ದಣ್ಣ, ಸಾಬು ಸರ್​, ಸೇಂಥಿಲ್​ ಹಾಗೂ ಚಂದ್ರಬೋಸ್​ ಅವರಿಗೆ ನನ್ನ ಅಭಿನಂದನೆ. ಆಸ್ಕರ್​ ಸದಸ್ಯತ್ವಕ್ಕೆ ಆಹ್ವಾನಿತರಾಗಿರುವ ಭಾರತೀಯ ಚಿತ್ರರಂಗದ ಇತರರಿಗೂ ಅಭಿನಂದನೆ ತಿಳಿಸುತ್ತೇನೆ’ ಎಂದು ರಾಜಮೌಳಿ ಪೋಸ್ಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ