AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ ಸೆಟ್​ನಲ್ಲೇ ಶೂಟ್ ಆದ ದೃಶ್ಯಕ್ಕೆ ಇಷ್ಟೊಂದು ಗ್ರಾಫಿಕ್ಸ್​; ಇಲ್ಲಿದೆ ‘ಆರ್​ಆರ್​ಆರ್’ ಸಿನಿಮಾದ ಅಸಲಿ ವಿಡಿಯೋ

ಡಿವಿವಿ ದಾನಯ್ಯ ಅವರು ‘ಆರ್​ಆರ್​ಆರ್’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಅವರು ಈ ಚಿತ್ರಕ್ಕಾಗಿ 500 ಕೋಟಿ ರೂಪಾಯಿಗೂ ಅಧಿಕ ಹಣ ಖರ್ಚು ಮಾಡಿದ್ದಾರೆ. ನೀರಿನಂತೆ ಹಣ ಹೆಚ್ಚು ಖರ್ಚಾಗಿದ್ದರಿಂದ ಪ್ರತಿ ದೃಶ್ಯಗಳೂ ಅದ್ಭುತವಾಗಿ ಮೂಡಿ ಬಂದಿದೆ.

ಅಬ್ಬಬ್ಬಾ ಸೆಟ್​ನಲ್ಲೇ ಶೂಟ್ ಆದ ದೃಶ್ಯಕ್ಕೆ ಇಷ್ಟೊಂದು ಗ್ರಾಫಿಕ್ಸ್​; ಇಲ್ಲಿದೆ ‘ಆರ್​ಆರ್​ಆರ್’ ಸಿನಿಮಾದ ಅಸಲಿ ವಿಡಿಯೋ
ಆರ್​ಆರ್​ಆರ್ ಸಿನಿಮಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 31, 2022 | 6:49 AM

Share

‘ಆರ್​ಆರ್​ಆರ್’ ಸಿನಿಮಾ (RRR Movie) ಸಾವಿರಾರು ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಸಿನಿಮಾದಿಂದ ನಿರ್ದೇಶಕ ರಾಜಮೌಳಿ ಅವರು ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ರಾಮ್ ಚರಣ್ (Ram Charan) ಹಾಗೂ ಜ್ಯೂ.ಎನ್​ಟಿಆರ್ ಅವರು ಈ ಚಿತ್ರದಿಂದ ಗೆದ್ದು ಬೀಗಿದ್ದಾರೆ. ಈ ಚಿತ್ರದಲ್ಲಿ ಹಲವು ಮೈನವಿರೇಳಿಸುವ ದೃಶ್ಯಗಳಿವೆ. ಇದನ್ನು ಹೇಗೆ ಶೂಟ್ ಮಾಡಿರಬಹುದು ಎಂಬ ಪ್ರಶ್ನೆ ಅಭಿಮಾನಿಗಳಲ್ಲಿತ್ತು. ಇದಕ್ಕೆ ಉತ್ತರವಾಗಿ ಈಗ ‘ಆರ್​ಆರ್​ಆರ್’ ಚಿತ್ರದ (RRR Movie) ಮೇಕಿಂಗ್ ವಿಡಿಯೋ ರಿಲೀಸ್ ಆಗಿದೆ. ಇದನ್ನು ನೋಡಿದ ಫ್ಯಾನ್ಸ್ ಅವಾಕ್ಕಾಗಿದ್ದಾರೆ.

ಡಿವಿವಿ ದಾನಯ್ಯ ಅವರು ‘ಆರ್​ಆರ್​ಆರ್’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಅವರು ಈ ಚಿತ್ರಕ್ಕಾಗಿ 500 ಕೋಟಿ ರೂಪಾಯಿಗೂ ಅಧಿಕ ಹಣ ಖರ್ಚು ಮಾಡಿದ್ದಾರೆ. ನೀರಿನಂತೆ ಹಣ ಹೆಚ್ಚು ಖರ್ಚಾಗಿದ್ದರಿಂದ ಪ್ರತಿ ದೃಶ್ಯಗಳೂ ಅದ್ಭುತವಾಗಿ ಮೂಡಿ ಬಂದಿದೆ. ಆದರೆ, ಪ್ರತಿ ದೃಶ್ಯದ ಹಿಂದಿರುವ ಶ್ರಮ ಎಷ್ಟು ಎಂಬುದನ್ನು ನೋಡಿದರೆ ನಿಜಕ್ಕೂ ಅಚ್ಚರಿ ಆಗಲೇಬೇಕು.

ಇದನ್ನೂ ಓದಿ: ಒಟಿಟಿಗೆ ಬಂದ ನಂತರ ಥಿಯೇಟರ್​ನಲ್ಲಿ ರೀ-ರಿಲೀಸ್ ಆಗುತ್ತಿದೆ ‘ಆರ್​ಆರ್​ಆರ್​’ ಸಿನಿಮಾ

ಇದನ್ನೂ ಓದಿ
Image
ಜೀ5ನಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಜತೆ ಪ್ರಸಾರಕ್ಕೆ ಸಜ್ಜಾದ ಕನ್ನಡದ ‘ತಲೆದಂಡ’, ‘ಮುಗಿಲ್​ ಪೇಟೆ’ ಸಿನಿಮಾಗಳು
Image
ಒಟಿಟಿಗೆ ಕಾಲಿಟ್ಟ ‘ಮಗಳು ಜಾನಕಿ’ ಖ್ಯಾತಿಯ ಗಾನವಿ ಲಕ್ಷ್ಮಣ್ ನಟನೆಯ ‘ಭಾವಚಿತ್ರ’ ಸಿನಿಮಾ 
Image
ಮತ್ತೆ ಹಳೇ ಚಾರ್ಮ್​ ಪಡೆದ ಶಾರುಖ್​ ಖಾನ್​; ‘ಪಠಾಣ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕು 200 ಕೋಟಿ ರೂ.ಗೆ ಸೇಲ್​?
Image
‘ಕೆಜಿಎಫ್​ 2’ ಎದುರು ಸೋತ ‘ಬೀಸ್ಟ್​’ ಚಿತ್ರಕ್ಕೆ ಈಗ ಉಳಿದಿದ್ದು ಒಟಿಟಿ ಆಯ್ಕೆ ಮಾತ್ರ; ಯಾವಾಗ ರಿಲೀಸ್​?

ಕೋಮರಂ ಭೀಮ್ (ಜ್ಯೂ.ಎನ್​ಟಿಆರ್​) ಹಾಗೂ ಅಲ್ಲೂರಿ ಸೀತಾರಾಮರಾಜು (ರಾಮ್​ ಚರಣ್​) ಭೇಟಿ ಆಗುವ ದೃಶ್ಯ ಸಿನಿಮಾದ ಆರಂಭದಲ್ಲೇ ಬರುತ್ತದೆ. ಈ ದೃಶ್ಯ ನಡೆಯೋದು ಒಂದು ಸೇತುವೆ ಮೇಲೆ. ಒಂದು ಕಡೆ ಸೇತುವೆ ಮೇಲೆ ಚಲಿಸುತ್ತಿರುವ ಟ್ರೇನ್​ಗೆ ಬೆಂಕಿ ಬಿದ್ದಿರುತ್ತದೆ. ಮತ್ತೊಂದು ಕಡೆ ಅದೇ ಸೇತುವೆ ಕೆಳ ಭಾಗದಲ್ಲಿ ಬಾಲಕನೋರ್ವ ತೆಪ್ಪದ ಮೇಲೆ ಹೋಗುತ್ತಿರುತ್ತಾನೆ. ಬಾಲಕನ ರಕ್ಷಣೆಗೆ ಕೋಮರಂ ಭೀಮ್ ಹಾಗೂ ಅಲ್ಲೂರಿ ಸೀತಾರಾಮರಾಜು ಒಂದಾಗುತ್ತಾರೆ. ಈ ದೃಶ್ಯಕ್ಕೆ ಎಲ್ಲ ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು.

ಈ ದೃಶ್ಯವನ್ನು ಸಂಪೂರ್ಣವಾಗಿ ಶೂಟ್ ಮಾಡಿದು ಒಂದು ಸೆಟ್​ನಲ್ಲಿ. ಆದರೆ, ಇದಕ್ಕೆ ಬಳಕೆ ಆದ ಗ್ರಾಫಿಕ್ಸ್ ಮಾತ್ರ ಅತ್ಯುತ್ತಮ ಗುಣಮಟ್ಟದ್ದು. ಈ ಕಾರಣಕ್ಕೆ ಆ ದೃಶ್ಯ ಅಷ್ಟು ಅದ್ಭುತವಾಗಿ ಮೂಡಿ ಬಂದಿದೆ. ವಿದೇಶದ ಗ್ರಾಫಿಕ್ಸ್​ ಸಂಸ್ಥೆಗಳು ಇದಕ್ಕಾಗಿ ಕೆಲಸ ಮಾಡಿವೆ. ಈಗ ಹಂಚಿಕೊಂಡಿರುವ ಮೇಕಿಂಗ್ ವಿಡಿಯೋದಲ್ಲಿ ಆ ಬಗ್ಗೆ ಮಾಹಿತಿ ನೀಡಲಾಗಿದೆ. ಈ ವಿಡಿಯೋ ನೋಡಿದ ಫ್ಯಾನ್ಸ್ ನಿಜಕ್ಕೂ ಅಚ್ಚರಿಗೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ಶಿರಸಿ: ಐತಿಹಾಸಿಕ ಬಂಗಾರೇಶ್ವರ ದೇವಾಲಯ ಸಂಪೂರ್ಣ ಜಲಾವೃತ
ಶಿರಸಿ: ಐತಿಹಾಸಿಕ ಬಂಗಾರೇಶ್ವರ ದೇವಾಲಯ ಸಂಪೂರ್ಣ ಜಲಾವೃತ
ಪೂರ್ಣಾವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ: ಯತೀಂದ್ರ
ಪೂರ್ಣಾವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ: ಯತೀಂದ್ರ