ಕರುನಾಡಿನಲ್ಲಿ ಮಧ್ಯರಾತ್ರಿಯಿಂದಲೇ ಅಬ್ಬರಿಸಿದ ‘RRR’; ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಪೂರ್ತಿ ವಿವರ..

RRR Movie: ಎಲ್ಲ ಕಡೆಗಳಲ್ಲೂ ಆರ್​ಆರ್​ಆರ್ ಸಿನಿಮಾ​ ಅಬ್ಬರ ಜೋರಾಗಿದೆ. ಕರ್ನಾಟಕದ ಪ್ರತಿ ಜಿಲ್ಲೆಯಲ್ಲೂ ಈ ಸಿನಿಮಾ ನೋಡಲು ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಫ್ಯಾನ್ಸ್​ ಮುಗಿಬೀಳುತ್ತಿದ್ದಾರೆ.

ಕರುನಾಡಿನಲ್ಲಿ ಮಧ್ಯರಾತ್ರಿಯಿಂದಲೇ ಅಬ್ಬರಿಸಿದ ‘RRR’; ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಪೂರ್ತಿ ವಿವರ..
ಆರ್​ಆರ್​ಆರ್
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 25, 2022 | 8:27 AM

ಬಹುನಿರೀಕ್ಷಿತ ‘ಆರ್​ಆರ್​ಆರ್’ ಸಿನಿಮಾ (RRR Movie) ತೆರೆಕಂಡಿದೆ. ಮಾ.24ರ ರಾತ್ರಿ ಹಾಗೂ ಮಾ.25 ನಸುಕಿನಲ್ಲೇ ಹಲವೆಡೆ ಈ ಸಿನಿಮಾದ ಪ್ರದರ್ಶನ ಆರಂಭಗೊಂಡಿದೆ. ಇದು ತೆಲುಗು ಸಿನಿಮಾ ಆಗಿದ್ದರೂ ಕೂಡ ಕರ್ನಾಟಕದಲ್ಲಿ ಜನರು ಈ ಚಿತ್ರವನ್ನು ಹುಚ್ಚೆದ್ದು ನೋಡುತ್ತಿದ್ದಾರೆ. ರಾಜಮೌಳಿ ನಿರ್ದೇಶನದ ಸಿನಿಮಾ ಆದ್ದರಿಂದ ನಿರೀಕ್ಷೆಯ ಮಟ್ಟ ಜೋರಾಗಿಯೇ ಇದೆ. ಅದಕ್ಕೆ ತಕ್ಕಂತೆಯೇ ಕರ್ನಾಟಕದ ಎಲ್ಲ ಕಡೆಗಳಲ್ಲಿ ‘ಆರ್​ಆರ್​ಆರ್​’ ಸಿನಿಮಾಗೆ ಭರ್ಜರಿ ಓಪನಿಂಗ್​ ಸಿಂಗ್​. ಈ ಸಿನಿಮಾದಲ್ಲಿ ಟಾಲಿವುಡ್​ ಸ್ಟಾರ್​ ಕಲಾವಿದರಾದ ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ (Jr NTR) ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಬಾಲಿವುಡ್​ ಕಲಾವಿದರಾದ ಅಜಯ್​ ದೇವಗನ್​, ಆಲಿಯಾ ಭಟ್​ ಕೂಡ ಕಥೆಗೆ ಟ್ವಿಸ್ಟ್​ ನೀಡುವಂತಹ ಪಾತ್ರಗಳಲ್ಲಿ ಗಮನಾರ್ಹ ಅಭಿನಯ ನೀಡಿದ್ದಾರೆ. ಎಂದಿನಂತೆ ನಿರ್ದೇಶಕ ರಾಜಮೌಳಿ (SS Rajamouli) ಅವರು ಒಂದು ದೃಶ್ಯವೈಭವವನ್ನು ಪ್ರೇಕ್ಷಕರಿಗಾಗಿ ಕಟ್ಟಿಕೊಟ್ಟಿದ್ದಾರೆ. ಎಂಎಂ ಕೀರವಾಣಿ ಅವರ ಸಂಗೀತ ಈ ಚಿತ್ರಕ್ಕಿದೆ. ಭಾರಿ ಉತ್ಸಾಹದಿಂದ ಜನರು ಚಿತ್ರಮಂದಿರಕ್ಕೆ ಹೆಚ್ಚು ಹಾಕುತ್ತಿದ್ದಾರೆ. ಸಿನಿಪ್ರಿಯರ ಸಂಭ್ರಮ ಜೋರಾಗಿದೆ. ಟಿಕೆಟ್​ ಬೆಲೆ ಗಗನಕ್ಕೆ ಏರಿದ್ದರೂ ಕೂಡ ಜನರು ಮುಗಿಬಿದ್ದು ‘ಆರ್​ಆರ್​ಆರ್​’ ಸಿನಿಮಾ ನೋಡುತ್ತಿದ್ದಾರೆ. ಒಟ್ಟಾರೆ ಕರ್ನಾಟಕದಲ್ಲಿ ಈ ಚಿತ್ರಕ್ಕೆ ಜನರು ಯಾರ ರೀತಿ ಪ್ರತಿಕ್ರಿಯೆ ನೀಡುತ್ತಿದ್ದಾರೆ? ಆ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ..

  1. ಬೆಂಗಳೂರಿನ ಮಡಿವಾಳದ ಸಂಧ್ಯಾ ಥಿಯೇಟರ್​ನಲ್ಲಿ ಮಧ್ಯರಾತ್ರಿ 12 ಗಂಟೆಯಿಂದಲೇ ಮೊದಲ ಶೋ ಆರಂಭ ಆಯಿತು. ಅವಧಿಗೂ ಮುನ್ನವೇ ಜನರು ಬಂದು ಚಿತ್ರಮಂದಿರದ ಮುಂದೆ ಜಮಾಯಿಸಿದ್ದರು. 600 ಸೀಟ್​​ಗಳಿರುವ ಈ ಚಿತ್ರಮಂದಿರದ ಎಲ್ಲ ಟಿಕೆಟ್​ಗಳು ಸೋಲ್ಡ್ ಔಟ್ ಆಗಿದ್ದವು. ಮುಂಜಾನೆ 8 ಗಂಟೆಯಿಂದ ಮತ್ತೆ ಪ್ರದರ್ಶಗಳು ಆರಂಭ ಆಗಿವೆ.
  2. RRR ಚಿತ್ರ ನೋಡಲು ಬಳ್ಳಾರಿಯ ‘ರಾಧಿಕಾ’ ಚಿತ್ರಮಂದಿರದಲ್ಲಿ ಪೇಕ್ಷಕರ ನೂಕುನುಗ್ಗಲು ಉಂಟಾಯಿತು. ಮಧ್ಯರಾತ್ರಿ 12:45ಕ್ಕೆ ಮೊದಲ ಶೋ ಆರಂಭ ಆಯಿತು. ಪೇಕ್ಷಕರನ್ನ ನಿಭಾಯಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಪೇಕ್ಷಕರನ್ನ ನಿಭಾಯಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ಕೂಡ ನಡೆಯಿತು. ಪೇಕ್ಷಕರಿಂದ ಗೇಟ್ ಮುಂದೆ ಗಲಾಟೆ, ಕೂಗಾಟ ತಳ್ಳಾಟಕ್ಕೆ ಚಿತ್ರಮಂದಿರದ ಸಿಬ್ಬಂದಿ ಹಾಗೂ ಪೊಲೀಸರು ಸುಸ್ತಾದರು.
  3. ಚಿಕ್ಕಬಳ್ಳಾಪುರ ನಗರದ ಬಾಲಾಜಿ ಚಿತ್ರಮಂದಿರದಲ್ಲಿ ಫ್ಯಾನ್ ಶೋ ಆಯೋಜಿಸಲಾಯಿತು. ಇಂದು ಬೆಳಿಗ್ಗೆ 5 ಗಂಟೆಗೆ ಶೋ ಆರಂಭವಾಯಿತು. ಸಿನಿಮಾ ನೋಡಲು ಅಭಿಮಾನಿಗಳು ರಾತ್ರಿಯಿಡಿ ಕಾದು ಕುಳಿತಿದ್ದರು. ಚಿತ್ರಮಂದಿರದ ಬಳಿ ಪಟಾಕಿ ಹೊಡೆದು, ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದರು.
  4. ಚಿತ್ರಮಂದಿರಗಳ ಹೊರಗೆ ಅಭಿಮಾನಿಗಳು ಹಲವು ಬಗೆಯಲ್ಲಿ ಸಂಭ್ರಮಿಸುತ್ತಿದ್ದಾರೆ. ಬೆಂಗಳೂರಿನ ಭೂಮಿಕಾ ಚಿತ್ರಮಂದಿರದ ಎದುರು ತೆಂಗಿನಕಾಯಿ ಒಡೆದು, ಪಟಾಕಿ ಸಿಡಿಸುವ ಮೂಲಕ ಅಭಿಮಾನಿಗಳು ‘ಆರ್​ಆರ್​ಆರ್​’ ಸಿನಿಮಾವನ್ನು ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಇಲ್ಲಿಯೂ ಸಹ ಮಧ್ಯರಾತ್ರಿ 12 ಗಂಟೆಯಿಂದಲೇ ಶೋ ಆರಂಭಗೊಂಡಿತು.
  5. ಕೋಲಾರ ಜಿಲ್ಲೆಯಲ್ಲೂ ಆರ್​ಆರ್​ಆರ್​ ಸಿನಿಮಾದ ಹವಾ ಜೋರಾಗಿದೆ. ಜಿಲ್ಲೆಯ ಒಟ್ಟು 10 ಚಿತ್ರಮಂದಿರಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಕೋಲಾರ ನಗರದ ನಾರಾಯಣಿ ಚಿತ್ರಮಂದಿರದಲ್ಲಿ ಮೊದಲ ಪ್ಯಾನ್ ಶೋ ಆರಂಭ ಆಗಿದೆ. ಚಿತ್ರಮಂದಿರದ ಎದುರು ಹಾಕಲಾಗಿರುವ ಜೂ. ಎನ್​ಟಿಆರ್ ಹಾಗೂ ರಾಮ್ ಚರಣ್ ಕಟೌಟ್​ಗಳು ರಾರಾಜಿಸುತ್ತಿವೆ.
  6. ಚಿತ್ರದುರ್ಗದ 2 ಥಿಯೇಟರ್​ಗಳಲ್ಲಿ ‘ಆರ್​ಆರ್​ಆರ್’​ ಚಿತ್ರ ರಿಲೀಸ್ ಆಗಿದೆ. ವೆಂಕಟೇಶ್ವರ ಮತ್ತು ಪ್ರಸನ್ನ ಚಿತ್ರಮಂದಿರದಲ್ಲಿ ಸಿನಿಮಾ ಪ್ರದರ್ಶನ ಆಗುತ್ತಿದೆ. ಪ್ರತಿ ದಿನ ನಾಲ್ಕು ಶೋ ನಡೆಯಲಿದೆ. ಸಿನಿಮಾ ನೋಡಲು ಜನರು ಮುಗಿಬಿದ್ದಿದ್ದಾರೆ.
  7. ಹುಬ್ಬಳ್ಳಿಯಲ್ಲೂ ಕೂಡ ಜನರು ಆರ್​ಆರ್​ಆರ್​ ಸಿನಿಮಾಗೆ ಭರ್ಜರಿ ಸ್ವಾಗತ ನೀಡಿದ್ದಾರೆ. ಹುಬ್ಬಳಿಯಲ್ಲಿ ಎರಡು ಸಿಂಗಲ್​ಸ್ಕ್ರೀನ್ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್​ ಸೇರಿ ಒಂದೇ ದಿನ 30 ಶೋ ನಡೆಯುತ್ತಿದೆ. ಸುಧಾ ಮತ್ತು ಶೃಂಗಾರ ಥಿಯೇಟರ್, ಪಿವಿಆರ್ ಹಾಗೂ ಅರ್ಬನ್ ಒಯಾಸಿಸ್ ಮಾಲ್​ನಲ್ಲಿ ​‘ಆರ್​ಆರ್​ಆರ್​’ ಅಬ್ಬರಿಸುತ್ತಿದೆ.
  8. ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು ಹದಿನೈದು ಚಿತ್ರಮಂದಿರದಲ್ಲಿ ‘ಆರ್​ಆರ್​ಆರ್​’ ಸಿನಿಮಾ ಪ್ರದರ್ಶನ ಆಗುತ್ತಿದೆ. ಮೊದಲ ದಿನ ಎಲ್ಲ ಚಿತ್ರಮಂದಿರಗಳೂ ಹೌಸ್​ ಫುಲ್​ ಆಗುತ್ತಿವೆ. ಅಭಿಮಾನಿಗಳು ಸಿನಿಮಾ ನೋಡಿ ಸಂಭ್ರಮಿಸುತ್ತಿದ್ದಾರೆ.
  9. ಯಾದಗಿರಿಯಲ್ಲಿ ಕೊಂಚ ತಡವಾಗಿ RRR ಸಿನಿಮಾ ಆರಂಭ ಆಗುತ್ತಿದೆ. ಬೆಳಗ್ಗೆ 10:30ಕ್ಕೆ ಮೊದಲ ಶೋ ಆರಂಭ ಆಗುವ ಹಿನ್ನೆಲೆಯನ್ನು ಮುಂಜಾನೆ ಥಿಯೇಟರ್​ನತ್ತ ಅಭಿಮಾನಿಗಳು ಸುಳಿದಿಲ್ಲ. ಪ್ರೇಕ್ಷಕರಿಲ್ಲದೆ ಚಿತ್ರಮಂದಿರದ ಆವರಣ ಖಾಲಿ ಖಾಲಿಯಾಗಿತ್ತು.
  10. ಬೆಂಗಳೂರಿನ ಅಂಜನ್ ಚಿತ್ರಮಂದಿರದಲ್ಲಿ ಅಭಿಮಾನಿಗಳ ನಡುವೆ ಗಲಾಟೆ ನಡೆದಿದೆ. ಜೂ. ಎನ್‌ಟಿಆರ್ ಹಾಗೂ ಚರಣ್ ಅಭಿಮಾನಿಗಳ ಮಧ್ಯೆ ಕಿರಿಕ್​ ಆಗಿದೆ. ತಮ್ಮ ಹೀರೋನೇ ಹೆಚ್ಚೆಂಬ ವಿಚಾರಕ್ಕೆ ನಡೆದ ಈ ಗಲಾಟೆಯು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಇದರಿಂದ ಇತರೆ ಪ್ರೇಕ್ಷಕರಿಗೆ ಕಿರಿಕಿರಿ ಆಯಿತು.

ಇದನ್ನೂ ಓದಿ:

RRR Review: ಆರ್​​ಆರ್​ಆರ್​ ವಿಮರ್ಶೆ; ನೀರು-ಬೆಂಕಿ ಹಿಡಿದು ತೆರೆಮೇಲೆ ರಾಜಮೌಳಿ ಮ್ಯಾಜಿಕ್​

ಉಕ್ರೇನ್​ ಸೈನಿಕನಿಗೆ ಹಣ ಸಹಾಯ ಮಾಡಿದ ರಾಮ್​ ಚರಣ್​; ಆ ವ್ಯಕ್ತಿಯ ಜತೆ ಇದೆ ವಿಶೇಷ ನಂಟು

Published On - 8:25 am, Fri, 25 March 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ