AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್​ಗೆ ಸಿದ್ಧವಿರುವ ‘ಆರ್​ಆರ್​ಆರ್​’ ಚಿತ್ರಕ್ಕೆ ಸಂಕಷ್ಟ; ಎದುರಾಗಲಿದೆ ಕಾನೂನಿನ ದೊಡ್ಡ ತೊಡಕು?

ದೊಡ್ಡದೊಡ್ಡ ಚಿತ್ರಗಳ ರಿಲೀಸ್​ ಡೇಟ್​ ಹತ್ತಿರವಾದಾಗ ಕೆಲವರು ಸಿನಿಮಾ ಬಗ್ಗೆ ಅಪಸ್ವರ ಎತ್ತುತ್ತಾರೆ. ಈ ಮೊದಲೂ ಈ ರೀತಿ ಆದ ಉದಾಹರಣೆ ಸಾಕಷ್ಟಿದೆ. ಕನ್ನಡದ ‘ಕೆಜಿಎಫ್​’, ಹಿಂದಿಯ ‘ಪದ್ಮಾವತ್’, ‘ಗಂಗೂಬಾಯಿ ಕಾಠಿಯಾವಾಡಿ’ ಸೇರಿ ಅನೇಕ ಚಿತ್ರಗಳು ಇದೇ ಮಾದರಿಯ ಸಮಸ್ಯೆ ಎದುರಿಸಿದ್ದವು.

ರಿಲೀಸ್​ಗೆ ಸಿದ್ಧವಿರುವ ‘ಆರ್​ಆರ್​ಆರ್​’ ಚಿತ್ರಕ್ಕೆ ಸಂಕಷ್ಟ; ಎದುರಾಗಲಿದೆ ಕಾನೂನಿನ ದೊಡ್ಡ ತೊಡಕು?
ರಾಮ್​ ಚರಣ್​-ಜ್ಯೂ ಎನ್​ಟಿಆರ್
TV9 Web
| Edited By: |

Updated on: Mar 06, 2022 | 1:42 PM

Share

‘ಆರ್​​ಆರ್​ಆರ್​’ ಸಿನಿಮಾ (RRR Movie) ರಿಲೀಸ್​ಗೆ ರೆಡಿ ಇದೆ. ಮಾರ್ಚ್​ 25ರಂದು ಈ ಚಿತ್ರ ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿ ವಲಯದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈಗಾಗಲೇ ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ತಮ್ಮ ಸಿನಿಮಾ ಮೇಕಿಂಗ್​ ಮೂಲಕ ದೊಡ್ಡ ಭರವಸೆ ಸೃಷ್ಟಿಸಿದ್ದಾರೆ. ‘ಆರ್​ಆರ್​ಆರ್​’ ಟ್ರೇಲರ್​ನಲ್ಲೂ ಅದು ಸಾಬೀತಾಗಿದೆ. ಆದರೆ, ಸಿನಿಮಾ ರಿಲೀಸ್​ಗೆ ಕೆಲವೇ ದಿನಗಳು ಬಾಕಿ ಇರುವಾಗ ಚಿತ್ರತಂಡಕ್ಕೆ ದೊಡ್ಡ ಸಂಕಷ್ಟ ಒಂದು ಎದುರಾಗಿದೆ. ಇದನ್ನು ಚಿತ್ರತಂಡ ಯಾವ ರೀತಿಯಲ್ಲಿ ಹ್ಯಾಂಡಲ್​ ಮಾಡಲಿದೆ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಎದುರಾಗಿದೆ. ಒಂದೊಮ್ಮೆ ಈ ಸಮಸ್ಯೆ ದೊಡ್ಡದಾದರೆ ಚಿತ್ರಕ್ಕೆ ತೊಂದರೆ ಉಂಟಾಗಲಿದೆ.

ದೊಡ್ಡದೊಡ್ಡ ಚಿತ್ರಗಳ ರಿಲೀಸ್​ ಡೇಟ್​ ಹತ್ತಿರವಾದಾಗ ಕೆಲವರು ಸಿನಿಮಾ ಬಗ್ಗೆ ಅಪಸ್ವರ ಎತ್ತುತ್ತಾರೆ. ಈ ಮೊದಲೂ ಈ ರೀತಿ ಆದ ಉದಾಹರಣೆ ಸಾಕಷ್ಟಿದೆ. ಕನ್ನಡದ ‘ಕೆಜಿಎಫ್​’, ಹಿಂದಿಯ ‘ಪದ್ಮಾವತ್’, ‘ಗಂಗೂಬಾಯಿ ಕಾಠಿಯಾವಾಡಿ’ ಸೇರಿ ಅನೇಕ ಚಿತ್ರಗಳು ಇದೇ ಮಾದರಿಯ ಸಮಸ್ಯೆ ಎದುರಿಸಿದ್ದವು. ಈಗ ‘ಆರ್​ಆರ್​ಆರ್​’ ಚಿತ್ರಕ್ಕೂ ತೊಂದರೆ ಎದುರಾಗುವ ಸೂಚನೆ ಸಿಕ್ಕಿದೆ.

ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲುರಿ ಸೀತಾರಾಮ ರಾಜು ಮತ್ತು ಕೋಮರಾಮ್​ ಭೀಮ್ ಅವರ ಜೀವನವನ್ನು ಸ್ಫೂರ್ತಿಯಾಗಿ ಇಟ್ಟುಕೊಂಡು ‘ಆರ್​ಆರ್​ಆರ್​’ ಸಿನಿಮಾ ಸಿದ್ಧಗೊಂಡಿದೆ. ಆದರೆ, ಚಿತ್ರದ ಕಥೆ ಸಂಪೂರ್ಣ ಕಾಲ್ಪನಿಕ ಎಂದು ರಾಜಮೌಳಿ ಹೇಳಿದ್ದಾರೆ. ಸ್ವಾತಂತ್ರ್ಯ ಪೂರ್ವ ಭಾರತದ ಕಥೆಯನ್ನು ರಾಜಮೌಳಿ ಹೇಳ ಹೊರಟಿದ್ದಾರೆ.  ಜ್ಯೂ.ಎನ್​ಟಿಆರ್​ ಅವರು ಕೋಮರಾಮ್​ ಭೀಮ್​ ಆಗಿ ಕಾಣಿಸಿಕೊಂಡರೆ, ಅಲ್ಲುರಿ ಸೀತಾರಾಮ ಪಾತ್ರದಲ್ಲಿ ರಾಮ್​ ಚರಣ್​ ನಟಿಸಿದ್ದಾರೆ. ಈ ಚಿತ್ರಕ್ಕೆ ಅಲ್ಲುರಿ ಸೀತಾರಾಮ ಕುಟುಂಬ ಅಪಸ್ವರ ತೆಗೆದಿದೆ.

ಅಲ್ಲುರಿ ಸೀತಾರಾಮ ರಾಜು ಅವರ ಘನತೆಗೆ ಧಕ್ಕೆ ತರುವ ಕೆಲಸ ‘ಆರ್​ಆರ್​ಆರ್​’ ಚಿತ್ರದಲ್ಲಿ ಆಗಿದೆ ಎಂಬುದು ಅವರ ಕುಟುಂಬದ ಆರೋಪ. ಈ ಬಗ್ಗೆ ಸಾರ್ವಜನಿಕವಾಗಿ ಅಲ್ಲುರಿ ಕುಟುಂಬದವರು ಹೇಳಿಕೆ ನೀಡುತ್ತಿದ್ದಾರೆ. ಒಂದೊಮ್ಮೆ ಈ ಬಗ್ಗೆ ಕೋರ್ಟ್​ನಲ್ಲಿ ಕೇಸ್​ ದಾಖಲಿಸಿದರೆ ಸಿನಿಮಾಗೆ ತೊಂದರೆ ಎದುರಾಗಬಹುದು. ಆದರೆ, ಚಿತ್ರ ಕಾಲ್ಪನಿಕ ಕಥೆ ಆಗಿರುವುದರಿಂದ ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ಸಿನಿ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

‘ಟ್ರೇಲರ್​ನಲ್ಲಿ ಅಲ್ಲುರಿ ಅವರನ್ನು ಬ್ರಿಟಿಷರಿಗಾಗಿ ಕೆಲಸ ಮಾಡುವ ಪೋಲೀಸ್‌ ಆಗಿ ತೋರಿಸಲಾಗಿದೆ. ಕೋಮರಾಮ್ ಭೀಮ್ ಅವರನ್ನು ಅಲ್ಲುರಿ ಬಂಧಿಸುವ ದೃಶ್ಯ ಟ್ರೇಲರ್​ನಲ್ಲಿ ಇದೆ. ಆದರೆ, ವಾಸ್ತವದಲ್ಲಿ ಸಂಬಂಧವಿಲ್ಲದ ಈ ಇಬ್ಬರು ನಾಯಕರನ್ನು ಒಟ್ಟಿಗೆ ತರಲಾಗಿದೆ. ಟ್ರೇಲರ್‌ನಲ್ಲಿ ತೋರಿಸಿದ ಇಂತಹ ಘಟನೆ ನಡೆದಿದೆ ಎಂಬ ಬಗ್ಗೆ ಇತಿಹಾಸದಲ್ಲಿ ಯಾವುದೇ ಪುರಾವೆಗಳಿಲ್ಲ. ಈ ಇಬ್ಬರೂ ನಾಯಕರು ಎಂದಿಗೂ ಭೇಟಿಯಾಗಲಿಲ್ಲ’ ಎಂದು ಅಲ್ಲುರಿ ಕುಟುಂಬದವರು ವಾದ ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಸ್ಟಂಟ್​ ವಿಡಿಯೋ ಮೂಲಕ ಎಂಟ್ರಿ ಕೊಟ್ಟ ಕಿರೀಟಿ; ಶುಭಕೋರಿದ ಖ್ಯಾತ ನಟ ರಾಜಮೌಳಿ

‘ಆರ್​ಆರ್​ಆರ್​’ ನಿರ್ಮಾಪಕನ ಖಾತೆಯಿಂದ ಪ್ರಭಾಸ್​ಗೆ ವರ್ಗಾವಣೆ ಆಯ್ತು 50 ಕೋಟಿ ರೂಪಾಯಿ?  

Follow Us
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!