AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್​’ ಹೊಸ ರಿಲೀಸ್​ ದಿನಾಂಕ ಘೋಷಣೆ; ಆದರೂ ಮುಗಿಯಲಿಲ್ಲ ಗೊಂದಲ

ಕೊವಿಡ್​ ಅತಿಯಾಗಿ ಹೆಚ್ಚುತ್ತಿದೆಯಾದರೂ ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡಿಲ್ಲ. ಹೀಗಾಗಿ, ಜನರು ಕೊರೊನಾ ಜತೆಯೇ ಜೀವಿಸುವುದನ್ನು ಕಲಿಯುತ್ತಿದ್ದಾರೆ. ಹೀಗಾಗಿ, ಮುಂದಿನ ಕೆಲವೇ ತಿಂಗಳಲ್ಲಿ ಪರಿಸ್ಥಿತಿ ಸಮಸ್ಥಿತಿಗೆ ಬರಬಹುದು ಎನ್ನುವ ನಿರೀಕ್ಷೆ ಎಲ್ಲರಲ್ಲಿಯೂ ಇದೆ.

‘ಆರ್​ಆರ್​ಆರ್​’ ಹೊಸ ರಿಲೀಸ್​ ದಿನಾಂಕ ಘೋಷಣೆ; ಆದರೂ ಮುಗಿಯಲಿಲ್ಲ ಗೊಂದಲ
ಆರ್​ಆರ್​ಆರ್​ ಪೋಸ್ಟರ್​​
TV9 Web
| Edited By: |

Updated on: Jan 21, 2022 | 8:23 PM

Share

ಭಾರತದಲ್ಲಿ ಕೊವಿಡ್ ಸಂಖ್ಯೆ (Covid Cases) ಹೆಚ್ಚುತ್ತಿದೆ. ಆದರೆ, ಕೊರೊನಾದ ತೀವ್ರತೆ ಮೊದಲಿನಷ್ಟಿಲ್ಲ. ಸಾವುಗಳು ಹೆಚ್ಚು ಸಂಭವಿಸುತ್ತಿಲ್ಲ. ಇದರಿಂದ ಜನರು ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ. ನಾನಾ ರಾಜ್ಯಗಳಲ್ಲಿ ಜಾರಿಗೆ ತರಲಾದ ಕಠಿಣ ನಿಯಮಗಳನ್ನು ದಿನ ಕಳೆದಂತೆ ಸಡಿಲಿಕೆ ಮಾಡಲಾಗುತ್ತಿದೆ. ಹೀಗಾಗಿ, ಚಿತ್ರರಂಗ ಮತ್ತೆ ಆ್ಯಕ್ಟೀವ್​ ಆಗುತ್ತಿದೆ. ಶೀಘ್ರವೇ ಎಲ್ಲವೂ ಸಮಸ್ಥಿತಿಗೆ ಮರಳುವ ನಿರೀಕ್ಷೆ ಇದೆ. ಹೀಗಾಗಿ, ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟ ಬಿಗ್​ ಬಜೆಟ್​ ಚಿತ್ರಗಳು ಸಿನಿಮಾ ರಿಲೀಸ್​ ದಿನಾಂಕ ಘೋಷಣೆ ಮಾಡಿಕೊಳ್ಳುತ್ತಿವೆ. ‘ಆರ್​ಆರ್​​ಆರ್​’ ಚಿತ್ರತಂಡ (RRR Team) ಹೊಸ ರಿಲೀಸ್​ ದಿನಾಂಕ ಘೋಷಣೆ ಮಾಡಿದೆ. ಆದರೆ, ಇಲ್ಲಿಯೂ ಗೊಂದಲ ಮುಂದುವರಿದಿದೆ.

ದೇಶದಲ್ಲಿ ಅನಿಶ್ಚಿತತೆ ಮುಂದುವರಿದಿದೆ. ಕೊವಿಡ್​ ಅತಿಯಾಗಿ ಹೆಚ್ಚುತ್ತಿದೆಯಾದರೂ ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡಿಲ್ಲ. ಹೀಗಾಗಿ, ಜನರು ಕೊರೊನಾ ಜತೆಯೇ ಜೀವಿಸುವುದನ್ನು ಕಲಿಯುತ್ತಿದ್ದಾರೆ. ಹೀಗಾಗಿ, ಮುಂದಿನ ಕೆಲವೇ ತಿಂಗಳಲ್ಲಿ ಪರಿಸ್ಥಿತಿ ಸಮಸ್ಥಿತಿಗೆ ಬರಬಹುದು ಎನ್ನುವ ನಿರೀಕ್ಷೆ ಎಲ್ಲರಲ್ಲಿಯೂ ಇದೆ. ಈ ಕಾರಣಕ್ಕೆ ‘ಆರ್​ಆರ್​ಆರ್​’ ತಂಡ ಹೊಸ ರಿಲೀಸ್​ ದಿನಾಂಕ ಘೋಷಣೆ ಮಾಡಿದೆ.

ಇಂದು (ಜನವರಿ 21) ‘ಆರ್​ಆರ್​ಆರ್​’ ತಂಡ ರಿಲೀಸ್​ ದಿನಾಂಕ ಘೋಷಣೆ ಮಾಡಿದೆ. ‘ಆರ್​ಆರ್​ಆರ್​’ ತಂಡ ಮಾರ್ಚ್ 18ರಂದು ಸಿನಿಮಾ ರಿಲೀಸ್​ ಮಾಡಲು ನಿರ್ಧರಿಸಿದೆ. ಒಂದೊಮ್ಮೆ ಆ ದಿನಾಂಕದ ಒಳಗೆ ಪರಿಸ್ಥಿತಿ ಸಮಸ್ಥಿತಿಗೆ ಬರದಿದ್ದರೆ ಏಪ್ರಿಲ್​ 28ರಂದು ಚಿತ್ರ ರಿಲೀಸ್​ ಆಗಲಿದೆ. ‘ಆರ್​ಆರ್​ಆರ್​’ ತಂಡದಲ್ಲಿ ರಿಲೀಸ್ ದಿನಾಂಕದ ಬಗ್ಗೆ ಇನ್ನೂ ಗೊಂದಲ ಇದೆ. ಮಾರ್ಚ್​ ವೇಳೆಗೆ ಪರಿಸ್ಥಿತಿ ಸಮಸ್ಥಿತಿಗೆ ಬರಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಎಸ್​ಎಸ್​ ರಾಜಮೌಳಿ ನಿರ್ದೇಶನ ಇರುವ ಈ ಸಿನಿಮಾದಲ್ಲಿ, ರಾಮ್​ ಚರಣ್​ ಹಾಗೂ ಜ್ಯೂ.ಎನ್​ಟಿಆರ್​ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.  ಬಾಲಿವುಡ್​ನ ಖ್ಯಾತ ನಟಿ ಆಲಿಯಾ ಭಟ್​ ಅವರು ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ನಟ ಅಜಯ್​ ದೇವಗನ್​ ಕೂಡ ಈ ಸಿನಿಮಾದಲ್ಲಿ ಮುಖ್ಯ ಪಾತ್ರ ನಿಭಾಯಿಸಿದ್ದಾರೆ.  ಟ್ರೇಲರ್​ ನೋಡಿದ ಸಿನಿಪ್ರಿಯರು ಫಿದಾ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಚಿತ್ರತಂಡ ಮತ್ತೆ ಪ್ರಚಾರ ಕಾರ್ಯ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಮತ್ತೆ ನಾಗ ಚೈತನ್ಯ ಜೊತೆ ಸಂಸಾರ ಮಾಡ್ತಾರಾ ಸಮಂತಾ? ವಿಚ್ಛೇದನದ ಪೋಸ್ಟ್​ ಏಕಾಏಕಿ ಡಿಲೀಟ್​

‘ಆರ್​ಆರ್​ಆರ್​’ ಚಿತ್ರದ ಪ್ರಚಾರಕ್ಕೆ ಹಾಕಿದ ಹಣ ನಿಜಕ್ಕೂ ದೊಡ್ಡ ವ್ಯರ್ಥ ಎಂದ ಖ್ಯಾತ ನಿರ್ದೇಶಕ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ