AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್​’ ಹೊಸ ರಿಲೀಸ್​ ದಿನಾಂಕ ಘೋಷಣೆ; ಆದರೂ ಮುಗಿಯಲಿಲ್ಲ ಗೊಂದಲ

ಕೊವಿಡ್​ ಅತಿಯಾಗಿ ಹೆಚ್ಚುತ್ತಿದೆಯಾದರೂ ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡಿಲ್ಲ. ಹೀಗಾಗಿ, ಜನರು ಕೊರೊನಾ ಜತೆಯೇ ಜೀವಿಸುವುದನ್ನು ಕಲಿಯುತ್ತಿದ್ದಾರೆ. ಹೀಗಾಗಿ, ಮುಂದಿನ ಕೆಲವೇ ತಿಂಗಳಲ್ಲಿ ಪರಿಸ್ಥಿತಿ ಸಮಸ್ಥಿತಿಗೆ ಬರಬಹುದು ಎನ್ನುವ ನಿರೀಕ್ಷೆ ಎಲ್ಲರಲ್ಲಿಯೂ ಇದೆ.

‘ಆರ್​ಆರ್​ಆರ್​’ ಹೊಸ ರಿಲೀಸ್​ ದಿನಾಂಕ ಘೋಷಣೆ; ಆದರೂ ಮುಗಿಯಲಿಲ್ಲ ಗೊಂದಲ
ಆರ್​ಆರ್​ಆರ್​ ಪೋಸ್ಟರ್​​
TV9 Web
| Edited By: |

Updated on: Jan 21, 2022 | 8:23 PM

Share

ಭಾರತದಲ್ಲಿ ಕೊವಿಡ್ ಸಂಖ್ಯೆ (Covid Cases) ಹೆಚ್ಚುತ್ತಿದೆ. ಆದರೆ, ಕೊರೊನಾದ ತೀವ್ರತೆ ಮೊದಲಿನಷ್ಟಿಲ್ಲ. ಸಾವುಗಳು ಹೆಚ್ಚು ಸಂಭವಿಸುತ್ತಿಲ್ಲ. ಇದರಿಂದ ಜನರು ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ. ನಾನಾ ರಾಜ್ಯಗಳಲ್ಲಿ ಜಾರಿಗೆ ತರಲಾದ ಕಠಿಣ ನಿಯಮಗಳನ್ನು ದಿನ ಕಳೆದಂತೆ ಸಡಿಲಿಕೆ ಮಾಡಲಾಗುತ್ತಿದೆ. ಹೀಗಾಗಿ, ಚಿತ್ರರಂಗ ಮತ್ತೆ ಆ್ಯಕ್ಟೀವ್​ ಆಗುತ್ತಿದೆ. ಶೀಘ್ರವೇ ಎಲ್ಲವೂ ಸಮಸ್ಥಿತಿಗೆ ಮರಳುವ ನಿರೀಕ್ಷೆ ಇದೆ. ಹೀಗಾಗಿ, ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟ ಬಿಗ್​ ಬಜೆಟ್​ ಚಿತ್ರಗಳು ಸಿನಿಮಾ ರಿಲೀಸ್​ ದಿನಾಂಕ ಘೋಷಣೆ ಮಾಡಿಕೊಳ್ಳುತ್ತಿವೆ. ‘ಆರ್​ಆರ್​​ಆರ್​’ ಚಿತ್ರತಂಡ (RRR Team) ಹೊಸ ರಿಲೀಸ್​ ದಿನಾಂಕ ಘೋಷಣೆ ಮಾಡಿದೆ. ಆದರೆ, ಇಲ್ಲಿಯೂ ಗೊಂದಲ ಮುಂದುವರಿದಿದೆ.

ದೇಶದಲ್ಲಿ ಅನಿಶ್ಚಿತತೆ ಮುಂದುವರಿದಿದೆ. ಕೊವಿಡ್​ ಅತಿಯಾಗಿ ಹೆಚ್ಚುತ್ತಿದೆಯಾದರೂ ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡಿಲ್ಲ. ಹೀಗಾಗಿ, ಜನರು ಕೊರೊನಾ ಜತೆಯೇ ಜೀವಿಸುವುದನ್ನು ಕಲಿಯುತ್ತಿದ್ದಾರೆ. ಹೀಗಾಗಿ, ಮುಂದಿನ ಕೆಲವೇ ತಿಂಗಳಲ್ಲಿ ಪರಿಸ್ಥಿತಿ ಸಮಸ್ಥಿತಿಗೆ ಬರಬಹುದು ಎನ್ನುವ ನಿರೀಕ್ಷೆ ಎಲ್ಲರಲ್ಲಿಯೂ ಇದೆ. ಈ ಕಾರಣಕ್ಕೆ ‘ಆರ್​ಆರ್​ಆರ್​’ ತಂಡ ಹೊಸ ರಿಲೀಸ್​ ದಿನಾಂಕ ಘೋಷಣೆ ಮಾಡಿದೆ.

ಇಂದು (ಜನವರಿ 21) ‘ಆರ್​ಆರ್​ಆರ್​’ ತಂಡ ರಿಲೀಸ್​ ದಿನಾಂಕ ಘೋಷಣೆ ಮಾಡಿದೆ. ‘ಆರ್​ಆರ್​ಆರ್​’ ತಂಡ ಮಾರ್ಚ್ 18ರಂದು ಸಿನಿಮಾ ರಿಲೀಸ್​ ಮಾಡಲು ನಿರ್ಧರಿಸಿದೆ. ಒಂದೊಮ್ಮೆ ಆ ದಿನಾಂಕದ ಒಳಗೆ ಪರಿಸ್ಥಿತಿ ಸಮಸ್ಥಿತಿಗೆ ಬರದಿದ್ದರೆ ಏಪ್ರಿಲ್​ 28ರಂದು ಚಿತ್ರ ರಿಲೀಸ್​ ಆಗಲಿದೆ. ‘ಆರ್​ಆರ್​ಆರ್​’ ತಂಡದಲ್ಲಿ ರಿಲೀಸ್ ದಿನಾಂಕದ ಬಗ್ಗೆ ಇನ್ನೂ ಗೊಂದಲ ಇದೆ. ಮಾರ್ಚ್​ ವೇಳೆಗೆ ಪರಿಸ್ಥಿತಿ ಸಮಸ್ಥಿತಿಗೆ ಬರಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಎಸ್​ಎಸ್​ ರಾಜಮೌಳಿ ನಿರ್ದೇಶನ ಇರುವ ಈ ಸಿನಿಮಾದಲ್ಲಿ, ರಾಮ್​ ಚರಣ್​ ಹಾಗೂ ಜ್ಯೂ.ಎನ್​ಟಿಆರ್​ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.  ಬಾಲಿವುಡ್​ನ ಖ್ಯಾತ ನಟಿ ಆಲಿಯಾ ಭಟ್​ ಅವರು ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ನಟ ಅಜಯ್​ ದೇವಗನ್​ ಕೂಡ ಈ ಸಿನಿಮಾದಲ್ಲಿ ಮುಖ್ಯ ಪಾತ್ರ ನಿಭಾಯಿಸಿದ್ದಾರೆ.  ಟ್ರೇಲರ್​ ನೋಡಿದ ಸಿನಿಪ್ರಿಯರು ಫಿದಾ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಚಿತ್ರತಂಡ ಮತ್ತೆ ಪ್ರಚಾರ ಕಾರ್ಯ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಮತ್ತೆ ನಾಗ ಚೈತನ್ಯ ಜೊತೆ ಸಂಸಾರ ಮಾಡ್ತಾರಾ ಸಮಂತಾ? ವಿಚ್ಛೇದನದ ಪೋಸ್ಟ್​ ಏಕಾಏಕಿ ಡಿಲೀಟ್​

‘ಆರ್​ಆರ್​ಆರ್​’ ಚಿತ್ರದ ಪ್ರಚಾರಕ್ಕೆ ಹಾಕಿದ ಹಣ ನಿಜಕ್ಕೂ ದೊಡ್ಡ ವ್ಯರ್ಥ ಎಂದ ಖ್ಯಾತ ನಿರ್ದೇಶಕ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ