AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Critics Choice Awards 2023: ಕ್ರಿಟಿಕ್ಸ್​ ಚಾಯ್ಸ್​ ಅವಾರ್ಡ್​ನ 5 ವಿಭಾಗಗಳಲ್ಲಿ ನಾಮಿನೇಟ್​ ಆದ ‘ಆರ್​ಆರ್​ಆರ್​’ ಸಿನಿಮಾ

RRR | SS Rajamouli: 2023ರ ಜನವರಿಯಲ್ಲಿ ‘ಕ್ರಿಟಿಕ್ಸ್​ ಚಾಯ್ಸ್​ ಅವಾರ್ಡ್ಸ್​’ ಸಮಾರಂಭ ನಡೆಯಲಿದೆ. 5 ವಿಭಾಗಗಳಲ್ಲಿ ‘ಆರ್​ಆರ್​ಆರ್​’ ಚಿತ್ರ ನಾಮಿನೇಟ್​ ಆಗಿದೆ.

Critics Choice Awards 2023: ಕ್ರಿಟಿಕ್ಸ್​ ಚಾಯ್ಸ್​ ಅವಾರ್ಡ್​ನ 5 ವಿಭಾಗಗಳಲ್ಲಿ ನಾಮಿನೇಟ್​ ಆದ ‘ಆರ್​ಆರ್​ಆರ್​’ ಸಿನಿಮಾ
‘ಆರ್​ಆರ್​ಆರ್​’ ಸಿನಿಮಾ ಪೋಸ್ಟರ್​
TV9 Web
| Edited By: |

Updated on: Dec 15, 2022 | 7:37 AM

Share

ನಿರ್ದೇಶಕ ರಾಜಮೌಳಿ (SS Rajamouli) ಅವರ ‘ಆರ್​ಆರ್​ಆರ್​’ ಸಿನಿಮಾ ಹಲವು ಪ್ರತಿಷ್ಠಿತ ಪ್ರಶಸ್ತಿಗಳ ಮೇಲೆ ಕಣ್ಣಿಟ್ಟಿದೆ. ಇತ್ತೀಚೆಗಷ್ಟೇ ‘ಗೋಲ್ಡನ್​ ಗ್ಲೋಬ್​ ಅವಾರ್ಡ್’ನ ಎರಡು ವಿಭಾಗಗಳಿಗೆ ಈ ಸಿನಿಮಾ ನಾಮಿನೇಟ್​ ಆದ ಸುದ್ದಿ ಕೇಳಿ ಫ್ಯಾನ್ಸ್​ ಖುಷಿ ಆಗಿದ್ದರು. ಈಗ ಇನ್ನೊಂದು ಪ್ರತಿಷ್ಠಿತ ಪ್ರಶಸ್ತಿಯಾಗ ‘ಕ್ರಿಟಿಕ್ಸ್​ ಚಾಯ್ಸ್​ ಅವಾರ್ಡ್ಸ್​ 2023’ (Critics Choice Awards 2023) ಮೇಲೆ ಈ ಸಿನಿಮಾ ದೃಷ್ಟಿ ಹರಿಸಿದೆ. ಒಟ್ಟು 5 ವಿಭಾಗಗಳಲ್ಲಿ ನಾಮಿನೇಟ್​ ಆಗುವ ಮೂಲಕ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ರಾಮ್​ ಚರಣ್​, ಜೂನಿಯರ್ ಎನ್​ಟಿಆರ್​, ಆಲಿಯಾ ಭಟ್​, ಅಜಯ್​ ದೇವಗನ್​ ಮುಂತಾದವರು ನಟಿಸಿರುವ ‘ಆರ್​ಆರ್​ಆರ್​’ (RRR Movie) ಸಿನಿಮಾಗೆ ಅಂತಿಮವಾಗಿ ಯಾವೆಲ್ಲ ಪ್ರಶಸ್ತಿಗಳು ಒಲಿಯಲಿವೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

‘ಕ್ರಿಟಿಕ್ಸ್​ ಚಾಯ್ಸ್​ ಅವಾರ್ಡ್ಸ್​ 2023’ರ ನಾಮಿನೇಷನ್ ಪಟ್ಟಿಯನ್ನು ಬುಧವಾರ (ಡಿ.14) ಘೋಷಣೆ ಮಾಡಲಾಯಿತು. ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ವಿದೇಶಿ ಭಾಷಾ ಚಿತ್ರ, ಅತ್ಯುತ್ತಮ ವಿಶ್ಯವಲ್​ ಎಫೆಕ್ಟ್ ಹಾಗೂ ಅತ್ಯುತ್ತಮ ಹಾಡು ವಿಭಾಗಗಳಲ್ಲಿ ‘ಆರ್​ಆರ್​ಆರ್​’ ಸಿನಿಮಾ ನಾಮಿನೇಟ್​ ಆಗಿದೆ.

ಇದನ್ನೂ ಓದಿ: ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?

ಇದನ್ನೂ ಓದಿ
Image
ಬಾಕ್ಸ್​ ಆಫೀಸ್​ನಲ್ಲಿ ನೂರಾರು ಕೋಟಿ ಬಾಚಿದ ‘ಬ್ರಹ್ಮಾಸ್ತ್ರ’ ಚಿತ್ರದಿಂದ ರಾಜಮೌಳಿಗೆ ಸಿಕ್ಕ ಹಣ ಎಷ್ಟು?
Image
ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ಪಬ್ಲಿಸಿಟಿ ಸ್ಟಂಟ್ಸ್ ಎಂದ ನೆಟ್ಟಿಗರು
Image
ಕೊನೇ ಕ್ಷಣದಲ್ಲಿ ಅಮಿತ್ ಶಾ ಭೇಟಿಯಿಂದ ಹಿಂದೆ ಸರಿದ ರಾಜಮೌಳಿ? ಇದಕ್ಕಿದೆ ದೊಡ್ಡ ಕಾರಣ
Image
‘ನನ್ನ ಸಿನಿಮಾದಲ್ಲಿ ಅಂಥ ನಟರು ಇರೋದೇ ಬೇಡ’: ರಾಜಮೌಳಿಗೆ ಕಂಡೀಷನ್​ ಹಾಕಿದ ಮಹೇಶ್​ ಬಾಬು?

2022ರಲ್ಲಿ ಬಿಡುಗಡೆಯಾದ ಸಿನಿಮಾಗಳ ಪೈಕಿ ‘ಆರ್​ಆರ್​ಆರ್’ ಚಿತ್ರ ಬ್ಲಾಕ್​ ಬಸ್ಟರ್​ ಹಿಟ್​ ಎನಿಸಿಕೊಂಡಿದೆ. ಗಲ್ಲಾಪೆಟ್ಟಿಗೆಯಲ್ಲಿ ಸಾವಿರ ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿ ಸೈ ಎನಿಸಿಕೊಂಡಿದೆ. ಜಗತ್ತಿನ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆಯುವತ್ತ ಈ ಸಿನಿಮಾ ಗುರಿ ಇಟ್ಟುಕೊಂಡಿದೆ. ಸ್ವತಂತ್ರವಾಗಿ ಆಸ್ಕರ್​ ಪ್ರಶಸ್ತಿಗೂ ನಾಮನಿರ್ದೇಶನಗೊಳ್ಳಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: Oscars 2023 Nominations: ಆಸ್ಕರ್​ಗೆ ‘ಆರ್​ಆರ್​ಆರ್​’ ನಾಮಿನೇಟ್? ಸೃಷ್ಟಿಯಾಗಲಿದೆ ಹೊಸ ದಾಖಲೆ

2023ರ ಜನವರಿಯಲ್ಲಿ ‘ಕ್ರಿಟಿಕ್ಸ್​ ಚಾಯ್ಸ್​ ಅವಾರ್ಡ್ಸ್​’ ಸಮಾರಂಭ ನಡೆಯಲಿದೆ. 5 ವಿಭಾಗಗಳ ಪೈಕಿ ಯಾವೆಲ್ಲ ವಿಭಾಗಗಳಲ್ಲಿ ‘ಆರ್​ಆರ್​ಆರ್​’ ಚಿತ್ರಕ್ಕೆ ಪ್ರಶಸ್ತಿ ಒಲಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ. ಹಲವು ಪ್ರಶಸ್ತಿಗೆ ಈ ಚಿತ್ರ ನಾಮಿನೇಟ್​ ಆಗುತ್ತಿರುವುದರಿಂದ ವಿಶ್ವಾದ್ಯಂತ ಇರುವ ಸಿನಿಪ್ರಿಯರು ಈ ಚಿತ್ರದ ಬಗ್ಗೆ ಗಮನ ಹರಿಸುತ್ತಿದ್ದಾರೆ.

‘ಗೋಲ್ಡನ್​ ಗ್ಲೋಬ್​​ ಅವಾರ್ಡ್ಸ್​ 2023’:

ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿರುವ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆಯಲು ‘ಆರ್​ಆರ್​ಆರ್​’ ಚಿತ್ರ ಪ್ರಯತ್ನಿಸುತ್ತಿದೆ. 2 ವಿಭಾಗಗಳಲ್ಲಿ ಈ ಸಿನಿಮಾ ನಾಮಿನೇಟ್​ ಆಗಿದೆ. ‘ಇಂಗ್ಲಿಷ್​ ಹೊರತಾದ ಅತ್ಯುತ್ತಮ ಸಿನಿಮಾ’ ಹಾಗೂ ‘ಅತ್ಯುತ್ತಮ ಹಾಡು’ (ನಾಟು ನಾಟು) ವಿಭಾಗದಲ್ಲಿ ಪೈಪೋಟಿ ನೀಡುತ್ತಿದೆ. ಈ ಸುದ್ದಿ ಕೇಳಿ ರಾಜಮೌಳಿ ಫ್ಯಾನ್ಸ್​ ಖುಷಿ ಆಗಿದ್ದಾರೆ. ‘ಹಾಲಿವುಡ್​ ಫಾರಿನ್​ ಪ್ರೆಸ್​ ಅಸೋಸಿಯೇಷನ್​’ ಮೂಲಕ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ನೀಡಲಾಗುತ್ತದೆ. ಅಮೆರಿಕದ ಸಿನಿಮಾ ಹಾಗೂ ಕಿರುತೆರೆ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗುತ್ತಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ