AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR: ಪ್ರತಿಷ್ಠಿತ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿಯ 2 ವಿಭಾಗಗಳಿಗೆ ನಾಮಿನೇಟ್​ ಆದ ‘ಆರ್​ಆರ್​ಆರ್​’ ಚಿತ್ರ

Rajamouli | Golden Globes 2023: ‘ಹಾಲಿವುಡ್​ ಫಾರಿನ್​ ಪ್ರೆಸ್​ ಅಸೋಸಿಯೇಷನ್​’ ಮೂಲಕ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ನೀಡಲಾಗುತ್ತದೆ. ಇದರ 2 ವಿಭಾಗಗಳಲ್ಲಿ ‘ಆರ್​ಆರ್​ಆರ್​’ ಚಿತ್ರ ನಾಮಿನೇಟ್​ ಆಗಿದೆ.

RRR: ಪ್ರತಿಷ್ಠಿತ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿಯ 2 ವಿಭಾಗಗಳಿಗೆ ನಾಮಿನೇಟ್​ ಆದ ‘ಆರ್​ಆರ್​ಆರ್​’ ಚಿತ್ರ
ರಾಮ್ ಚರಣ್​, ಜೂನಿಯರ್​ ಎನ್​ಟಿಆರ್
TV9 Web
| Updated By: ಮದನ್​ ಕುಮಾರ್​|

Updated on:Dec 13, 2022 | 7:37 AM

Share

ಖ್ಯಾತ ನಿರ್ದೇಶಕ ರಾಜಮೌಳಿ (SS Rajamouli) ಅವರಿಗೆ ವಿಶ್ವಾದ್ಯಂತ ಜನಪ್ರಿಯತೆ ಇದೆ. ಈ ವರ್ಷ ಬಿಡುಗಡೆ ಆದ ‘ಆರ್​ಆರ್​ಆರ್​’ (RRR) ಸಿನಿಮಾ ಸಾಕಷ್ಟು ಸದ್ದು ಮಾಡಿದೆ. ಗಲ್ಲಾಪೆಟ್ಟಿಗೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಕಮಾಯಿ ಮಾಡಿದ ಈ ಚಿತ್ರ ಈಗ ಪ್ರಶಸ್ತಿಗಳ ಮೇಲೆ ಕಣ್ಣಿಟ್ಟಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿರುವ ‘ಗೋಲ್ಡನ್​ ಗ್ಲೋಬ್​’ (Golden Globes 2023) ಪ್ರಶಸ್ತಿ ಪಡೆಯಲು ಈ ಚಿತ್ರ ಪ್ರಯತ್ನಿಸುತ್ತಿದೆ. 2 ವಿಭಾಗಗಳಲ್ಲಿ ‘ಆರ್​ಆರ್​ಆರ್​’ ಚಿತ್ರ  ನಾಮಿನೇಟ್​ ಆಗಿದೆ. ‘ಇಂಗ್ಲಿಷ್​ ಹೊರತಾದ ಅತ್ಯುತ್ತಮ ಸಿನಿಮಾ’ ಹಾಗೂ ‘ಅತ್ಯುತ್ತಮ ಹಾಡು’ (ನಾಟು ನಾಟು) ವಿಭಾಗದಲ್ಲಿ ಈ ಚಿತ್ರ ಪೈಪೋಟಿ ನೀಡುತ್ತಿದೆ. ಈ ಸುದ್ದಿ ಕೇಳಿ ರಾಜಮೌಳಿ ಫ್ಯಾನ್ಸ್​ ಖುಷಿ ಆಗಿದ್ದಾರೆ. ಟಾಲಿವುಡ್​ ಮಂದಿ ಹೆಮ್ಮೆಯಿಂದ ಬೀಗುತ್ತಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾದಲ್ಲಿ ರಾಮ್ ಚರಣ್​, ಜೂನಿಯರ್​ ಎನ್​ಟಿಆರ್​ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅಲ್ಲುರಿ ಸೀತಾರಾಮ ರಾಜು ಪಾತ್ರವನ್ನು ರಾಮ್​ ಚರಣ್​ ನಿಭಾಯಿಸಿದ್ದರೆ, ಕೊಮರಮ್​ ಭೀಮ್​ ಪಾತ್ರಕ್ಕೆ ಜೂನಿಯರ್​ ಎನ್​ಟಿಆರ್​ ಬಣ್ಣ ಹಚ್ಚಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಿಬ್ಬರ ಕಾಲ್ಪನಿಕ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಇನ್ನುಳಿದ ಮುಖ್ಯ ಪಾತ್ರಗಳಲ್ಲಿ ಆಲಿಯಾ ಭಟ್​, ಅಜಯ್ ದೇವಗನ್​ ನಟಿಸಿದ್ದಾರೆ.

ಇದನ್ನೂ ಓದಿ
Image
SS Rajamouli: ​ಅಮೆರಿಕಾದಲ್ಲಿ ‘ಆರ್​ಆರ್​ಆರ್’ಗೆ ವಿಶೇಷ ಮನ್ನಣೆ: ರಾಜಮೌಳಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ
Image
Rajamouli: ‘ಸ್ಟಾರ್​ ವಾರ್ಸ್​’ ನಿರ್ದೇಶಕನ ಭೇಟಿ ಆದ ರಾಜಮೌಳಿ; ಹಾಲಿವುಡ್​ ಅಂಗಳದಲ್ಲೂ ಭರ್ಜರಿ ಹವಾ
Image
ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ಪಬ್ಲಿಸಿಟಿ ಸ್ಟಂಟ್ಸ್ ಎಂದ ನೆಟ್ಟಿಗರು
Image
ಕೊನೇ ಕ್ಷಣದಲ್ಲಿ ಅಮಿತ್ ಶಾ ಭೇಟಿಯಿಂದ ಹಿಂದೆ ಸರಿದ ರಾಜಮೌಳಿ? ಇದಕ್ಕಿದೆ ದೊಡ್ಡ ಕಾರಣ

ಇದನ್ನೂ ಓದಿ: Oscars 2023 Nominations: ಆಸ್ಕರ್​ಗೆ ‘ಆರ್​ಆರ್​ಆರ್​’ ನಾಮಿನೇಟ್? ಸೃಷ್ಟಿಯಾಗಲಿದೆ ಹೊಸ ದಾಖಲೆ

‘ಹಾಲಿವುಡ್​ ಫಾರಿನ್​ ಪ್ರೆಸ್​ ಅಸೋಸಿಯೇಷನ್​’ ಮೂಲಕ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ನೀಡಲಾಗುತ್ತದೆ. ಅಮೆರಿಕದ ಸಿನಿಮಾ ಹಾಗೂ ಕಿರುತೆರೆ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗುತ್ತಾರೆ. ಇಂಗ್ಲಿಷ್​ ಹೊರತಾದ 2 ವಿಭಾಗದಲ್ಲಿ ‘ಆರ್​ಆರ್​ಆರ್​’ ಚಿತ್ರ ನಾಮಿನೇಟ್​ ಆಗಿದ್ದು, ಪ್ರಶಸ್ತಿ ಗೆಲ್ಲಲಿದೆಯಾ ಎಂಬ ಕೌತುಕ ಮೂಡಿದೆ. 2023ರ ಜನವರಿ 11ರಂದು ಲಾಸ್​ ಎಂಜಲೀಸ್​ನಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಇದನ್ನೂ ಓದಿ: ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?

‘ಆಲ್​ ಕ್ವಾಯ್ಟ್​ ಆನ್​ ದಿ ವೆಸ್ಟರ್ನ್​ ಫ್ರಂಟ್​’ (ಜರ್ಮನಿ), ಅರ್ಜೆಂಟೀನಾ 1985 (ಅರ್ಜೆಂಟೀನಾ), ಕ್ಲೋಸ್​ (ಬೆಲ್ಜಿಯಂ), ಡಿಸಿಷನ್​ ಟು ಲೀವ್​ (ದಕ್ಷಿಣ ಕೋರಿಯಾ) ಚಿತ್ರಗಳು ‘ಆರ್​ಆರ್​ಆರ್​’ ಸಿನಿಮಾ ಜೊತೆ ಸೆಣೆಸುತ್ತಿವೆ. ತಮ್ಮ ಚಿತ್ರವನ್ನು ನಾಮಿನೇಟ್​ ಮಾಡಿದ್ದಕ್ಕಾಗಿ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿಯ ಜ್ಯೂರಿಗಳಿಗೆ ಹಾಗೂ ಅಭಿಮಾನಿಗಳಿಗೆ ರಾಜಮೌಳಿ ಅವರು ಧನ್ಯವಾದ ತಿಳಿಸಿದ್ದಾರೆ.

ಭಾರತದಿಂದ ಆಸ್ಕರ್​ ಪ್ರಶಸ್ತಿ ಸ್ಪರ್ಧೆಗೆ ‘ಆರ್​ಆರ್​ಆರ್​’ ಸಿನಿಮಾ ಅಧಿಕೃತವಾಗಿ ಆಯ್ಕೆ ಆಗಿಲ್ಲ. ಆದರೆ ಸ್ವಂತವಾಗಿ ನಾಮಿನೇಟ್​ ಆಗಲು ಪ್ರಯತ್ನಿಸುತ್ತಿದೆ. ಒಟ್ಟಿನಲ್ಲಿ ಈ ಸಿನಿಮಾ ಜಾಗತಿಕ ಮಟ್ಟದಲ್ಲಿ ಪ್ರಶಸ್ತಿಗಳನ್ನು ಪಡೆಯಲು ಸಕಲ ರೀತಿಯ ಪ್ರಯತ್ನ ಮಾಡುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:37 am, Tue, 13 December 22

ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್