AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

500 ಕೋಟಿ ಬಜೆಟ್​, 800 ಕೋಟಿ ಪ್ರೀ-ರಿಲೀಸ್​ ಬಿಸ್ನೆಸ್​; ‘ಆರ್​ಆರ್​ಆರ್​’ ಕುರಿತ ಅಚ್ಚರಿ ವಿಚಾರಗಳು

‘ಬಾಹುಬಲಿ 2’ ಬಳಿಕ ರಾಜಮೌಳಿ ನಿರ್ದೇಶನದಲ್ಲಿ ತೆರೆಗೆ ಬರುತ್ತಿರುವ ಸಿನಿಮಾ ಇದಾಗಿದೆ. ಈ ಎಲ್ಲಾ ಕಾರಣಕ್ಕೆ ‘ಆರ್​ಆರ್​ಆರ್​’ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾ ಬಗ್ಗೆ ಒಂದಷ್ಟು ಅಚ್ಚರಿಯ ವಿಚಾರ ಇಲ್ಲಿದೆ.

500 ಕೋಟಿ ಬಜೆಟ್​, 800 ಕೋಟಿ ಪ್ರೀ-ರಿಲೀಸ್​ ಬಿಸ್ನೆಸ್​; ‘ಆರ್​ಆರ್​ಆರ್​’ ಕುರಿತ ಅಚ್ಚರಿ ವಿಚಾರಗಳು
‘ಆರ್​ಆರ್​ಆರ್​’ ಪೋಸ್ಟರ್
TV9 Web
| Edited By: |

Updated on: Mar 24, 2022 | 4:55 PM

Share

‘ಆರ್​ಆರ್​ಆರ್​’ ಸಿನಿಮಾ (RRR Movie) ತೆರೆಗೆ ಬರೋಕೆ ಕ್ಷಣಗಣನೆ ಆರಂಭವಾಗಿದೆ. ಇಂದು (ಮಾರ್ಚ್​ 24) ಮಧ್ಯರಾತ್ರಿಯಿಂದಲೇ ಸಿನಿಮಾ ಪ್ರದರ್ಶನ ಕಾಣಲಿದೆ. ರಾಮ್​ ಚರಣ್ (Ram Charan)​, ಜ್ಯೂ.ಎನ್​ಟಿಆರ್​, ಆಲಿಯಾ ಭಟ್, ಅಜಯ್​ ದೇವಗನ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾ ದೊಡ್ಡ ಮಟ್ಟದ ಬಜೆಟ್​ನಲ್ಲಿ ಸಿದ್ಧಗೊಂಡಿದೆ. ‘ಬಾಹುಬಲಿ 2’ ಬಳಿಕ ರಾಜಮೌಳಿ (SS Rajamouli)ನಿರ್ದೇಶನದಲ್ಲಿ ತೆರೆಗೆ ಬರುತ್ತಿರುವ ಸಿನಿಮಾ ಇದಾಗಿದೆ. ಈ ಎಲ್ಲಾ ಕಾರಣಕ್ಕೆ ‘ಆರ್​ಆರ್​ಆರ್​’ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾ ಬಗ್ಗೆ ಒಂದಷ್ಟು ಅಚ್ಚರಿಯ ವಿಚಾರ ಇಲ್ಲಿದೆ.

  1. ‘ಆರ್​ಆರ್​ಆರ್​’ ಸಿನಿಮಾಗೆ ಬರೋಬ್ಬರಿ 300 ದಿನ ಶೂಟ್ ಮಾಡಲಾಗಿದೆ. ಹೈದರಾಬಾದ್​, ಪುಣೆ ಮತ್ತು ಉಕ್ರೇನ್​ ಸೇರಿ ಹಲವು ಕಡೆಗಳಲ್ಲಿ ಶೂಟ್​ ಮಾಡಲಾಗಿದೆ. ಈ ಸಿನಿಮಾ ಕೆಲಸಗಳು ಕೊವಿಡ್ ಕಾರಣದಿಂದ ವಿಳಂಬವಾಗಿತ್ತು. ಈ ಕಾರಣಕ್ಕೆ ಚಿತ್ರದ ಬಜೆಟ್​ 500 ಕೋಟಿ ರೂಪಾಯಿ ಮೀರಿದೆ.
  2. ‘ಆರ್​ಆರ್​ಆರ್’​ ರಿಲೀಸ್​ಗೂ ಮೊದಲೇ ​ಒಳ್ಳೆಯ ಬಿಸ್ನೆಸ್​ ಮಾಡಿದೆ. ಈ ಚಿತ್ರ ಪ್ರೀ-ರಿಲೀಸ್​ ಬಿಸ್ನೆಸ್​ನಲ್ಲಿ 800 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನುತ್ತಿವೆ ಮೂಲಗಳು. ತೆಲುಗು ಒಂದರಲ್ಲೇ 200 ಕೋಟಿ ರೂಪಾಯಿ ಬಾಚಿಕೊಂಡಿದೆ ಎನ್ನಲಾಗುತ್ತಿದೆ.
  3. ‘ಆರ್​ಆರ್​ಆರ್​’ 60 ರಾಷ್ಟ್ರಗಳಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ, ತೆಲುಗು, ಹಿಂದಿ ಮತ್ತು ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ.
  4. 8,000 ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಮೊದಲ ದಿನ ‘ಬಾಹುಬಲಿ 2’ ಸಿನಿಮಾ ಕಲೆಕ್ಷನ್​ ದಾಖಲೆಯನ್ನು ಈ ಚಿತ್ರ ಮುರಿಯುವ ಸಾಧ್ಯತೆ ಇದೆ.
  5. ಸಿನಿಮಾ ಪ್ರಮೋಷನ್​ಗೆ 40 ಕೋಟಿ ರೂಪಾಯಿಗೂ ಅಧಿಕ ಖರ್ಚಾಗಿದೆ. ನಾನಾ ರಾಜ್ಯಗಳಲ್ಲಿ ತೆರಳಿ ಈ ಸಿನಿಮಾದ ಪ್ರಮೋಷನ್ ಮಾಡಲಾಗಿದೆ.
  6. ಮುಂದಿನ ದಿನಗಳಲ್ಲಿ ಎರಡು ಒಟಿಟಿ ಪ್ಲಾಟ್​ಫಾರ್ಮ್​ಗಳಲ್ಲಿ ‘ಆರ್​ಆರ್​ಆರ್​’ ಸಿನಿಮಾ ರಿಲೀಸ್​ ಆಗಲಿದೆ. ‘ಆರ್​ಆರ್​ಆರ್​’ ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡ ವರ್ಷನ್ ಜೀ5 ಹಾಗೂ ಹಿಂದಿ ವರ್ಷನ್​ ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಆಗಲಿದೆ.

ಇದನ್ನೂ ಓದಿ: ‘ಆರ್​ಆರ್​ಆರ್​’ ಟೀಂ ಕಡೆಯಿಂದ ಒಂದು ಗುಡ್​ ನ್ಯೂಸ್, ಒಂದು ಬ್ಯಾಡ್​ ನ್ಯೂಸ್​

ಪ್ರಿಯಕರನ ಜತೆ ಇದ್ದಾಗಲೂ ‘ಆರ್​ಆರ್​ಆರ್​’ ಪ್ರಚಾರ ಮಾಡಿದ ನಟಿ ಆಲಿಯಾ ಭಟ್​; ವಿಡಿಯೋ ವೈರಲ್​

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?