AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

500 ಕೋಟಿ ಬಜೆಟ್​, 800 ಕೋಟಿ ಪ್ರೀ-ರಿಲೀಸ್​ ಬಿಸ್ನೆಸ್​; ‘ಆರ್​ಆರ್​ಆರ್​’ ಕುರಿತ ಅಚ್ಚರಿ ವಿಚಾರಗಳು

‘ಬಾಹುಬಲಿ 2’ ಬಳಿಕ ರಾಜಮೌಳಿ ನಿರ್ದೇಶನದಲ್ಲಿ ತೆರೆಗೆ ಬರುತ್ತಿರುವ ಸಿನಿಮಾ ಇದಾಗಿದೆ. ಈ ಎಲ್ಲಾ ಕಾರಣಕ್ಕೆ ‘ಆರ್​ಆರ್​ಆರ್​’ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾ ಬಗ್ಗೆ ಒಂದಷ್ಟು ಅಚ್ಚರಿಯ ವಿಚಾರ ಇಲ್ಲಿದೆ.

500 ಕೋಟಿ ಬಜೆಟ್​, 800 ಕೋಟಿ ಪ್ರೀ-ರಿಲೀಸ್​ ಬಿಸ್ನೆಸ್​; ‘ಆರ್​ಆರ್​ಆರ್​’ ಕುರಿತ ಅಚ್ಚರಿ ವಿಚಾರಗಳು
‘ಆರ್​ಆರ್​ಆರ್​’ ಪೋಸ್ಟರ್
TV9 Web
| Edited By: |

Updated on: Mar 24, 2022 | 4:55 PM

Share

‘ಆರ್​ಆರ್​ಆರ್​’ ಸಿನಿಮಾ (RRR Movie) ತೆರೆಗೆ ಬರೋಕೆ ಕ್ಷಣಗಣನೆ ಆರಂಭವಾಗಿದೆ. ಇಂದು (ಮಾರ್ಚ್​ 24) ಮಧ್ಯರಾತ್ರಿಯಿಂದಲೇ ಸಿನಿಮಾ ಪ್ರದರ್ಶನ ಕಾಣಲಿದೆ. ರಾಮ್​ ಚರಣ್ (Ram Charan)​, ಜ್ಯೂ.ಎನ್​ಟಿಆರ್​, ಆಲಿಯಾ ಭಟ್, ಅಜಯ್​ ದೇವಗನ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾ ದೊಡ್ಡ ಮಟ್ಟದ ಬಜೆಟ್​ನಲ್ಲಿ ಸಿದ್ಧಗೊಂಡಿದೆ. ‘ಬಾಹುಬಲಿ 2’ ಬಳಿಕ ರಾಜಮೌಳಿ (SS Rajamouli)ನಿರ್ದೇಶನದಲ್ಲಿ ತೆರೆಗೆ ಬರುತ್ತಿರುವ ಸಿನಿಮಾ ಇದಾಗಿದೆ. ಈ ಎಲ್ಲಾ ಕಾರಣಕ್ಕೆ ‘ಆರ್​ಆರ್​ಆರ್​’ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾ ಬಗ್ಗೆ ಒಂದಷ್ಟು ಅಚ್ಚರಿಯ ವಿಚಾರ ಇಲ್ಲಿದೆ.

  1. ‘ಆರ್​ಆರ್​ಆರ್​’ ಸಿನಿಮಾಗೆ ಬರೋಬ್ಬರಿ 300 ದಿನ ಶೂಟ್ ಮಾಡಲಾಗಿದೆ. ಹೈದರಾಬಾದ್​, ಪುಣೆ ಮತ್ತು ಉಕ್ರೇನ್​ ಸೇರಿ ಹಲವು ಕಡೆಗಳಲ್ಲಿ ಶೂಟ್​ ಮಾಡಲಾಗಿದೆ. ಈ ಸಿನಿಮಾ ಕೆಲಸಗಳು ಕೊವಿಡ್ ಕಾರಣದಿಂದ ವಿಳಂಬವಾಗಿತ್ತು. ಈ ಕಾರಣಕ್ಕೆ ಚಿತ್ರದ ಬಜೆಟ್​ 500 ಕೋಟಿ ರೂಪಾಯಿ ಮೀರಿದೆ.
  2. ‘ಆರ್​ಆರ್​ಆರ್’​ ರಿಲೀಸ್​ಗೂ ಮೊದಲೇ ​ಒಳ್ಳೆಯ ಬಿಸ್ನೆಸ್​ ಮಾಡಿದೆ. ಈ ಚಿತ್ರ ಪ್ರೀ-ರಿಲೀಸ್​ ಬಿಸ್ನೆಸ್​ನಲ್ಲಿ 800 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನುತ್ತಿವೆ ಮೂಲಗಳು. ತೆಲುಗು ಒಂದರಲ್ಲೇ 200 ಕೋಟಿ ರೂಪಾಯಿ ಬಾಚಿಕೊಂಡಿದೆ ಎನ್ನಲಾಗುತ್ತಿದೆ.
  3. ‘ಆರ್​ಆರ್​ಆರ್​’ 60 ರಾಷ್ಟ್ರಗಳಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ, ತೆಲುಗು, ಹಿಂದಿ ಮತ್ತು ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ.
  4. 8,000 ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಮೊದಲ ದಿನ ‘ಬಾಹುಬಲಿ 2’ ಸಿನಿಮಾ ಕಲೆಕ್ಷನ್​ ದಾಖಲೆಯನ್ನು ಈ ಚಿತ್ರ ಮುರಿಯುವ ಸಾಧ್ಯತೆ ಇದೆ.
  5. ಸಿನಿಮಾ ಪ್ರಮೋಷನ್​ಗೆ 40 ಕೋಟಿ ರೂಪಾಯಿಗೂ ಅಧಿಕ ಖರ್ಚಾಗಿದೆ. ನಾನಾ ರಾಜ್ಯಗಳಲ್ಲಿ ತೆರಳಿ ಈ ಸಿನಿಮಾದ ಪ್ರಮೋಷನ್ ಮಾಡಲಾಗಿದೆ.
  6. ಮುಂದಿನ ದಿನಗಳಲ್ಲಿ ಎರಡು ಒಟಿಟಿ ಪ್ಲಾಟ್​ಫಾರ್ಮ್​ಗಳಲ್ಲಿ ‘ಆರ್​ಆರ್​ಆರ್​’ ಸಿನಿಮಾ ರಿಲೀಸ್​ ಆಗಲಿದೆ. ‘ಆರ್​ಆರ್​ಆರ್​’ ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡ ವರ್ಷನ್ ಜೀ5 ಹಾಗೂ ಹಿಂದಿ ವರ್ಷನ್​ ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಆಗಲಿದೆ.

ಇದನ್ನೂ ಓದಿ: ‘ಆರ್​ಆರ್​ಆರ್​’ ಟೀಂ ಕಡೆಯಿಂದ ಒಂದು ಗುಡ್​ ನ್ಯೂಸ್, ಒಂದು ಬ್ಯಾಡ್​ ನ್ಯೂಸ್​

ಪ್ರಿಯಕರನ ಜತೆ ಇದ್ದಾಗಲೂ ‘ಆರ್​ಆರ್​ಆರ್​’ ಪ್ರಚಾರ ಮಾಡಿದ ನಟಿ ಆಲಿಯಾ ಭಟ್​; ವಿಡಿಯೋ ವೈರಲ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ