AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR Re-release:ಮರು ಬಿಡುಗಡೆಯಲ್ಲೂ ಮ್ಯಾಜಿಕ್ ಮಾಡಿದ ಆರ್​ಆರ್​ಆರ್, ಸಿನಿಮಾ ನೋಡಲು ಮುಗಿಬಿದ್ದ ಅಮೆರಿಕ ಜನ

ಅಮೆರಿಕದ ಹಲವು ನಗರಗಳಲ್ಲಿ ಆರ್​ಆರ್​ಆರ್ ಸಿನಿಮಾ ಮರುಬಿಡುಗಡೆ ಆಗಿದ್ದು ಸಿನಿಮಾ ನೋಡಲು ಜನ ಮುಗಿಬಿದ್ದಿದ್ದಾರೆ. 1647 ಸೀಟುಗಳು ವಿಶ್ವದ ದೊಡ್ಡ ಚಿತ್ರಮಂದಿರಗಳಲ್ಲೊಂದಾದ ಲಾಸ್ ಏಂಜಲ್ಸ್​ನ ಏಸ್ ಥಿಯೇಟರ್​ನ ಎಲ್ಲ ಟಿಕೆಟ್​ಗಳು ಸೋಲ್ಡ್ ಔಟ್ ಆಗಿವೆ.

RRR Re-release:ಮರು ಬಿಡುಗಡೆಯಲ್ಲೂ ಮ್ಯಾಜಿಕ್ ಮಾಡಿದ ಆರ್​ಆರ್​ಆರ್, ಸಿನಿಮಾ ನೋಡಲು ಮುಗಿಬಿದ್ದ ಅಮೆರಿಕ ಜನ
ಆರ್​ಆರ್​ಆರ್ ನೋಡಲು ಮುಗಿಬಿದ್ದ ಅಮೆರಿಕ ಜನ
ಮಂಜುನಾಥ ಸಿ.
|

Updated on: Mar 02, 2023 | 3:25 PM

Share

ಆರ್​ಆರ್​ಆರ್ (RRR)​ ಸಿನಿಮಾ ಬಿಡುಗಡೆ ಆಗಿ ಇನ್ನಿಪ್ಪತ್ತು ದಿನಕ್ಕೆ ವರ್ಷವಾಗುತ್ತದೆ. ಆದರೂ ಸಿನಿಮಾದ ಕ್ರೇಜ್ ಕಡಿಮೆಯಾಗಿಲ್ಲ. ಇಂದಷ್ಟೆ ಅಮೆರಿಕದ (America) ಹಲವು ಪ್ರಮುಖ ನಗರಗಳಲ್ಲಿ ಸಿನಿಮಾ ಮರುಬಿಡುಗಡೆ ಆಗಿದ್ದು ಬಹುತೇಕ ಕಡೆ ಚಿತ್ರಮಂದಿರಗಳು (Theater) ಹೌಸ್​ಫುಲ್ ಆಗಿವೆ. ಜನ ಉದ್ದನೆಯ ಸರತಿ ಸಾಲಿನಲ್ಲಿ ನಿಂತು ಟಿಕೆಟ್ ಖರೀದಿ ಮಾಡುತ್ತಿದ್ದಾರೆ. ಕೆಲವೆಡೆ ಆನ್​ಲೈನ್​ನಲ್ಲಿಯೇ ಟಿಕೆಟ್​ಗಳು ಸೋಲ್ಡ್ ಔಟ್ ಆಗುತ್ತಿವೆ.

ಆರ್​ಆರ್​ಆರ್ ಸಿನಿಮಾದ ನಾಟು-ನಾಟು ಹಾಡು ಆಸ್ಕರ್​ಗೆ (Oscar) ನಾಮಿನೇಟ್ ಆಗಿದ್ದು ಅದರ ಬೆನ್ನಲ್ಲೆ ಅಮೆರಿಕದ ಹಲವು ಕಡೆ ಸಿನಿಮಾವನ್ನು ಮರುಬಿಡುಗಡೆ ಮಾಡಲಾಗಿದೆ. ಲಾಸ್ ಏಂಜಲ್ಸ್​ನ ಅತಿ ದೊಡ್ಡ ಚಿತ್ರಮಂದಿರ ಏಸ್ ಥಿಯೇಟರ್​ನ ಎಲ್ಲ 1647 ಸೀಟುಗಳು ಭರ್ತಿಯಾಗಿದೆ. ಅಮೆರಿಕದ ಹಲವು ನಗರಗಳಲ್ಲಿ ಇದೇ ಪರಿಸ್ಥಿತಿ ಇದೆ.

ಅಮೆರಿಕದ ಜನ ಉದ್ದನೆಯ ಸರತಿ ಸಾಲಿನಲ್ಲಿ ನಿಂತು ಟಿಕೆಟ್ ಖರೀದಿಸುತ್ತಿದ್ದಾರೆ, ಚಿತ್ರಮಂದಿರದಲ್ಲಿ ನಾಟು-ನಾಟು ಹಾಡಿಗೆ ಕುಣಿದು ಕುಪ್ಪಳಿಸುತ್ತಿದ್ದಾರೆ. ತಮ್ಮ ಆರ್​ಆರ್​ಆರ್ ಸಿನಿಮಾಕ್ಕೆ ಅಮೆರಿಕ ಜನರಿಂದ ಸಿಗುತ್ತಿರುವ ಈ ಅಭೂತಪೂರ್ವ ಪ್ರತಿಕ್ರಿಯೆಯ ವಿಡಿಯೋಗಳನ್ನು ರಾಜಮೌಳಿಯ ಪುತ್ರ ಕಾರ್ತಿಕೇಯ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಮೆರಿಕದ ಹಲವು ಆರ್​ಆರ್​ಆರ್ ಅಭಿಮಾನಿಗಳು ತಾವು ಸಿನಿಮಾ ನೋಡುತ್ತಿರುವ ಚಿತ್ರಗಳನ್ನು, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

RRR New Trailer: ಆರ್​ಆರ್​ಆರ್ ಹೊಸ ಟ್ರೈಲರ್ ಬಿಡುಗಡೆ, ಸಿನಿಮಾದಲ್ಲಿಲ್ಲದ ಕೆಲ ದೃಶ್ಯಗಳ ಸೇರ್ಪಡೆ

ಅಮೆರಿಕದ ಹಲವು ನಗರಗಳ ಸುಮಾರು 150 ಚಿತ್ರಮಂದಿರಗಳಲ್ಲಿ ಆರ್​ಆರ್​ಆರ್ ಸಿನಿಮಾ ಮರು ಬಿಡುಗಡೆ ಆಗಿದೆ. ಅತಿ ದೊಡ್ಡ ಚಿತ್ರಮಂದಿರದ ಲಾಸ್ ಏಂಜಲ್ಸ್​ನ ಏಸ್ ಥಿಯೇಟರ್​ನಲ್ಲಿ ಸ್ವತಃ ರಾಜಮೌಳಿ ಸಿನಿಮಾ ಪ್ರದರ್ಶನಕ್ಕೆ ಚಾಲನೆ ನೀಡಿದ್ದಾರೆ.

ಕಳೆದ ವರ್ಷ ಮಾರ್ಚ್ 25 ರಂದು ವಿಶ್ವದಾದ್ಯಂತ ಆರ್​ಆರ್​ಆರ್ ಸಿನಿಮಾ ಬಿಡುಗಡೆ ಆಗಿತ್ತು. ಆ ಸಮಯದಲ್ಲಿ ಸುಮಾರು 1000 ಕೋಟಿಗೂ ಹೆಚ್ಚು ಗಳಿಸಿತ್ತು. ಆದರೆ ಸಿನಿಮಾವು ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆದ ಬಳಿಕ ವಿದೇಶದಲ್ಲಿ ಬೇಡಿಕೆ ಹೆಚ್ಚಾಗಿ, ಜಪಾನ್ ಸೇರಿದಂತೆ ಹಲವು ದೇಶಗಳಲ್ಲಿ ಹೊಸದಾಗಿ ಬಿಡುಗಡೆ ಆಗಿ ಮತ್ತಷ್ಟು ಹಣ ಗಳಿಸಿತು. ಇದೀಗ ಅಮೆರಿಕದಲ್ಲಿ ಮರು ಬಿಡುಗಡೆ ಆಗಿದ್ದು, ಈಗಲೂ ಉತ್ತಮ ಕಲೆಕ್ಷನ್ ಅನ್ನು ಸಿನಿಮಾ ನಿರೀಕ್ಷಿಸುತ್ತಿದೆ.

ಆರ್​ಆರ್​ಆರ್ ಸಿನಿಮಾದಲ್ಲಿ ಮೊದಲ ಬಾರಿಗೆ ಜೂ ಎನ್​ಟಿಆರ್ ಹಾಗೂ ರಾಮ್​ ಚರಣ್ ತೇಜ ಒಟ್ಟಿಗೆ ನಟಿಸಿದ್ದು, ತೆಲುಗು ರಾಜ್ಯಗಳ ಐತಿಹಾಸಿಕ ಹೋರಾಟಗಾರರಾದ ಕೋಮರಂ ಭೀಮ್ ಹಾಗೂ ಅಲ್ಲೂರಿ ಸೀತಾರಾಮ ರಾಜು ಅವರ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರು ಹೋರಾಟಗಾರರ ಕುರಿತ ಕಾಲ್ಪನಿಕ ಕತೆ ಆರ್​ಆರ್​ಆರ್ ಸಿನಿಮಾ. ರಾಜಮೌಳಿ ನಿರ್ದೇಶನದ ಈ ಸಿನಿಮಾದಲ್ಲಿ ಆಲಿಯಾ ಭಟ್, ಅಜಯ್ ದೇವಗನ್ ಹಾಗೂ ಶ್ರಿಯಾ ಶಿರಿನ್ ಸಹ ನಟಿಸಿದ್ದಾರೆ. ಸಿನಿಮಾಕ್ಕೆ ಬಂಡವಾಳ ಹೂಡಿರುವುದು ಡಿವಿವಿ ದಯಾನಂದ್. ಸಿನಿಮಾಕ್ಕೆ ಕೀರವಾಣಿ ಸಂಗೀತ ನೀಡಿದ್ದು, ಗೋಲ್ಡನ್ ಗ್ಲೋಬ್ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಸಿನಿಮಾ ಬಾಚಿಕೊಂಡಿದ್ದು, ಸಿನಿಮಾದ ನಾಟು-ನಾಟು ಹಾಡು ಆಸ್ಕರ್​ಗೆ ನಾಮಿನೇಟ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು