AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR Re Release: ಅಮೆರಿಕದ ಬಳಿಕ ಭಾರತದ ಎರಡು ರಾಜ್ಯಗಳಲ್ಲಿ ಆರ್​ಆರ್​ಆರ್ ಮರುಬಿಡುಗಡೆ

ಇತ್ತೀಚೆಗಷ್ಟೆ ಅಮೆರಿಕದಲ್ಲಿ ಮರು ಬಿಡುಗಡೆ ಆಗಿದ್ದ ಆರ್​ಆರ್​ಆರ್ ಸಿನಿಮಾ ಇದೀಗ ಭಾರತದ ಎರಡು ರಾಜ್ಯಗಳಲ್ಲಿ ಮರು ಬಿಡುಗಡೆಗೆ ಸಿದ್ಧವಾಗಿದೆ.

RRR Re Release: ಅಮೆರಿಕದ ಬಳಿಕ ಭಾರತದ ಎರಡು ರಾಜ್ಯಗಳಲ್ಲಿ ಆರ್​ಆರ್​ಆರ್ ಮರುಬಿಡುಗಡೆ
ಆರ್​ಆರ್​ಆರ್
ಮಂಜುನಾಥ ಸಿ.
|

Updated on: Mar 09, 2023 | 3:06 PM

Share

ಆರ್​ಆರ್​ಆರ್ (RRR) ಸಿನಿಮಾ ಬಿಡುಗಡೆ ಆಗಿ ಒಂದು ವರ್ಷವಾಗಲು ಕೆಲವೇ ದಿನಗಳು ಬಾಕಿ ಇದೆ. ಇನ್ನಾದರೂ ಬೇರೆ-ಬೇರೆ ದೇಶಗಳಲ್ಲಿ ಸಿನಿಮಾವು ತುಂಬಿದ ಗೃಹಗಳ ಪ್ರದರ್ಶನ ಕಾಣುತ್ತಿದೆ. ಇತ್ತೀಚೆಗಷ್ಟೆ ಅಮೆರಿಕದಲ್ಲಿ ಮರು ಬಿಡುಗಡೆ ಆಗಿದ್ದ ಆರ್​ಆರ್​ಆರ್ ಸಿನಿಮಾ ಇದೀಗ ಭಾರತದ ಎರಡು ರಾಜ್ಯಗಳಲ್ಲಿ ಮರು ಬಿಡುಗಡೆಗೆ ಸಿದ್ಧವಾಗಿದೆ.

ಆರ್​ಆರ್​ಆರ್ ಸಿನಿಮಾವು ಆಂಧ್ರ ಪ್ರದೇಶ (Andhra Pradesh) ಹಾಗೂ ತೆಲಂಗಾಣಗಳಲ್ಲಿ (Telangana) ಮಾರ್ಚ್ 10 ರಂದು ಮರು ಬಿಡುಗಡೆ ಆಗಲಿದೆ. ಆಸ್ಕರ್​ಗೆ ಎರಡು ದಿನ ಮುಂಚಿತವಾಗಿ ತೆಲುಗು ರಾಜ್ಯಗಳಲ್ಲಿ ಸಿನಿಮಾವನ್ನು ಮರುಬಿಡುಗಡೆ ಮಾಡಲಾಗುತ್ತಿದ್ದು, ಮರು ಬಿಡುಗಡೆಯಲ್ಲಿಯೂ ಕೋಟ್ಯಂತರ ಹಣ ಬಾಚುವ ನಿರೀಕ್ಷೆ ಇದೆ.

ಕಳೆದ ವರ್ಷ ಮಾರ್ಚ್ 25 ರಂದು ಆರ್​ಆರ್​ಆರ್ ಸಿನಿಮಾ ಮೊದಲ ಬಾರಿಗೆ ತೆಲುಗು ರಾಜ್ಯಗಳು ಸೇರಿದಂತೆ ವಿಶ್ವದಾದ್ಯಂತ ಬಿಡುಗಡೆ ಆಗಿತ್ತು. ಮೊದಲ ಬಿಡುಗಡೆಯಲ್ಲಿ ವಿಶ್ವದಾದ್ಯಂತ ಸುಮಾರು 1000 ಕೋಟಿ ಗಳಿಕೆ ಮಾಡಿತ್ತು ಈ ಸಿನಿಮಾ. ಅದಾದ ಬಳಿಕ ಚೀನಾ, ಜಪಾನ್ ಗಳಲ್ಲಿಯೂ ಬಿಡುಗಡೆ ಆಗಿ ದೊಡ್ಡ ಮೊತ್ತ ಕಲೆಹಾಕಿತು. ಕೆಲವು ದಿನಗಳ ಹಿಂದಷ್ಟೆ ಅಮೆರಿದಲ್ಲಿಯೂ ಈ ಸಿನಿಮಾ ಮರುಬಿಡುಗಡೆ ಕಂಡು ಸೂಪರ್ ಹಿಟ್ ಎನಿಸಿಕೊಂಡಿತು. ಈಗ ಆಂಧ್ರ-ತೆಲಂಗಾಣಗಳಲ್ಲಿಯೂ ಬಿಡುಗಡೆ ಆಗುತ್ತಿದೆ.

ಆರ್​ಆರ್​ಆರ್ ಸಿನಿಮಾದ ಆಸ್ಕರ್ ಕ್ಯಾಂಪೇನ್​ಗೆ ಚಿತ್ರತಂಡವು ಭಾರಿ ದೊಡ್ಡ ಮೊತ್ತವನ್ನು ಖರ್ಚು ಮಾಡಿದೆ. ಸುಮಾರು 80 ಕೋಟಿ ಹಣವನ್ನು ಆಸ್ಕರ್ ಕ್ಯಾಂಪೇನ್​ಗೆ ಚಿತ್ರತಂಡ ಖರ್ಚು ಮಾಡಿದ್ದು ಈ ಹಣವನ್ನು ಮರಳಿ ಖಾತೆಗೆ ಪಡೆಯಲು ಈಗ ರೀ ರಿಲೀಸ್ ಮಾಡಲಾಗುತ್ತಿದೆ ಎಂಬ ಮಾತುಗಳು ಚಾಲ್ತಿಯಲ್ಲಿವೆ.

ಆರ್​ಆರ್​ಆರ್ ಸಿನಿಮಾದ ನಾಟು-ನಾಟು ಹಾಡು ಆಸ್ಕರ್​ಗೆ ನಾಮಿನೇಟ್ ಆಗಿದ್ದು ಮಾರ್ಚ್ 12 ರಂದು ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ನಾಟು-ನಾಟುಗೆ ಪ್ರಶಸ್ತಿ ಬರುವ ನಿರೀಕ್ಷೆ ಇದೆ. ಇದೇ ಸಂದರ್ಭದಲ್ಲಿ ಸಿನಿಮಾದ ಮರುಬಿಡುಗಡೆ ಮಾಡಲು ಯೋಜಿಸಿ ಬುದ್ಧಿವಂತಿಕೆ ಮೆರಿದಿದೆ ಚಿತ್ರತಂಡ.

ಆರ್​ಆರ್​ಆರ್ ಸಿನಿಮಾವು ತೆಲುಗು ರಾಜ್ಯಗಳ ಹೋರಾಟಗಾರರಾದ ಅಲ್ಲೂರಿ ಸೀತಾರಾಮ ರಾಜು ಹಾಗೂ ಕೋಮರಂ ಭೀಮ್ ಅವರುಗಳ ಕುರಿತಾದ ಕಾಲ್ಪನಿಕ ಕತೆ ಒಳಗೊಂಡಿದೆ. ಸಿನಿಮಾದಲ್ಲಿ ಅಲ್ಲೂರಿ ಸೀತಾರಾಮ ರಾಜು ಪಾತ್ರದಲ್ಲಿ ರಾಮ್ ಚರಣ್ ತೇಜ, ಕೋಮರಮ್ ಭೀಮ್ ಪಾತ್ರದಲ್ಲಿ ಜೂ ಎನ್​ಟಿಆರ್ ನಟಿಸಿದ್ದಾರೆ. ಆಲಿಯಾ ಭಟ್, ಶ್ರಿಯಾ ಶಿರಿನ್, ಅಜಯ್ ದೇವಗನ್, ಮಕರಂದ್ ದೇಶ್​ಪಾಂಡೆ, ಸಮುದ್ರಕಿಣಿ ಇನ್ನು ಹಲವು ಪ್ರಮುಖ ನಟರು ಸಿನಿಮಾದಲ್ಲಿದ್ದಾರೆ. ರಾಜಮೌಳಿ ನಿರ್ದೇಶನ ಮಾಡಿರುವ ಈ ಸಿನಿಮಾಕ್ಕೆ ಕೀರವಾಣಿ ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ