AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR Re Release: ಅಮೆರಿಕದ ಬಳಿಕ ಭಾರತದ ಎರಡು ರಾಜ್ಯಗಳಲ್ಲಿ ಆರ್​ಆರ್​ಆರ್ ಮರುಬಿಡುಗಡೆ

ಇತ್ತೀಚೆಗಷ್ಟೆ ಅಮೆರಿಕದಲ್ಲಿ ಮರು ಬಿಡುಗಡೆ ಆಗಿದ್ದ ಆರ್​ಆರ್​ಆರ್ ಸಿನಿಮಾ ಇದೀಗ ಭಾರತದ ಎರಡು ರಾಜ್ಯಗಳಲ್ಲಿ ಮರು ಬಿಡುಗಡೆಗೆ ಸಿದ್ಧವಾಗಿದೆ.

RRR Re Release: ಅಮೆರಿಕದ ಬಳಿಕ ಭಾರತದ ಎರಡು ರಾಜ್ಯಗಳಲ್ಲಿ ಆರ್​ಆರ್​ಆರ್ ಮರುಬಿಡುಗಡೆ
ಆರ್​ಆರ್​ಆರ್
ಮಂಜುನಾಥ ಸಿ.
|

Updated on: Mar 09, 2023 | 3:06 PM

Share

ಆರ್​ಆರ್​ಆರ್ (RRR) ಸಿನಿಮಾ ಬಿಡುಗಡೆ ಆಗಿ ಒಂದು ವರ್ಷವಾಗಲು ಕೆಲವೇ ದಿನಗಳು ಬಾಕಿ ಇದೆ. ಇನ್ನಾದರೂ ಬೇರೆ-ಬೇರೆ ದೇಶಗಳಲ್ಲಿ ಸಿನಿಮಾವು ತುಂಬಿದ ಗೃಹಗಳ ಪ್ರದರ್ಶನ ಕಾಣುತ್ತಿದೆ. ಇತ್ತೀಚೆಗಷ್ಟೆ ಅಮೆರಿಕದಲ್ಲಿ ಮರು ಬಿಡುಗಡೆ ಆಗಿದ್ದ ಆರ್​ಆರ್​ಆರ್ ಸಿನಿಮಾ ಇದೀಗ ಭಾರತದ ಎರಡು ರಾಜ್ಯಗಳಲ್ಲಿ ಮರು ಬಿಡುಗಡೆಗೆ ಸಿದ್ಧವಾಗಿದೆ.

ಆರ್​ಆರ್​ಆರ್ ಸಿನಿಮಾವು ಆಂಧ್ರ ಪ್ರದೇಶ (Andhra Pradesh) ಹಾಗೂ ತೆಲಂಗಾಣಗಳಲ್ಲಿ (Telangana) ಮಾರ್ಚ್ 10 ರಂದು ಮರು ಬಿಡುಗಡೆ ಆಗಲಿದೆ. ಆಸ್ಕರ್​ಗೆ ಎರಡು ದಿನ ಮುಂಚಿತವಾಗಿ ತೆಲುಗು ರಾಜ್ಯಗಳಲ್ಲಿ ಸಿನಿಮಾವನ್ನು ಮರುಬಿಡುಗಡೆ ಮಾಡಲಾಗುತ್ತಿದ್ದು, ಮರು ಬಿಡುಗಡೆಯಲ್ಲಿಯೂ ಕೋಟ್ಯಂತರ ಹಣ ಬಾಚುವ ನಿರೀಕ್ಷೆ ಇದೆ.

ಕಳೆದ ವರ್ಷ ಮಾರ್ಚ್ 25 ರಂದು ಆರ್​ಆರ್​ಆರ್ ಸಿನಿಮಾ ಮೊದಲ ಬಾರಿಗೆ ತೆಲುಗು ರಾಜ್ಯಗಳು ಸೇರಿದಂತೆ ವಿಶ್ವದಾದ್ಯಂತ ಬಿಡುಗಡೆ ಆಗಿತ್ತು. ಮೊದಲ ಬಿಡುಗಡೆಯಲ್ಲಿ ವಿಶ್ವದಾದ್ಯಂತ ಸುಮಾರು 1000 ಕೋಟಿ ಗಳಿಕೆ ಮಾಡಿತ್ತು ಈ ಸಿನಿಮಾ. ಅದಾದ ಬಳಿಕ ಚೀನಾ, ಜಪಾನ್ ಗಳಲ್ಲಿಯೂ ಬಿಡುಗಡೆ ಆಗಿ ದೊಡ್ಡ ಮೊತ್ತ ಕಲೆಹಾಕಿತು. ಕೆಲವು ದಿನಗಳ ಹಿಂದಷ್ಟೆ ಅಮೆರಿದಲ್ಲಿಯೂ ಈ ಸಿನಿಮಾ ಮರುಬಿಡುಗಡೆ ಕಂಡು ಸೂಪರ್ ಹಿಟ್ ಎನಿಸಿಕೊಂಡಿತು. ಈಗ ಆಂಧ್ರ-ತೆಲಂಗಾಣಗಳಲ್ಲಿಯೂ ಬಿಡುಗಡೆ ಆಗುತ್ತಿದೆ.

ಆರ್​ಆರ್​ಆರ್ ಸಿನಿಮಾದ ಆಸ್ಕರ್ ಕ್ಯಾಂಪೇನ್​ಗೆ ಚಿತ್ರತಂಡವು ಭಾರಿ ದೊಡ್ಡ ಮೊತ್ತವನ್ನು ಖರ್ಚು ಮಾಡಿದೆ. ಸುಮಾರು 80 ಕೋಟಿ ಹಣವನ್ನು ಆಸ್ಕರ್ ಕ್ಯಾಂಪೇನ್​ಗೆ ಚಿತ್ರತಂಡ ಖರ್ಚು ಮಾಡಿದ್ದು ಈ ಹಣವನ್ನು ಮರಳಿ ಖಾತೆಗೆ ಪಡೆಯಲು ಈಗ ರೀ ರಿಲೀಸ್ ಮಾಡಲಾಗುತ್ತಿದೆ ಎಂಬ ಮಾತುಗಳು ಚಾಲ್ತಿಯಲ್ಲಿವೆ.

ಆರ್​ಆರ್​ಆರ್ ಸಿನಿಮಾದ ನಾಟು-ನಾಟು ಹಾಡು ಆಸ್ಕರ್​ಗೆ ನಾಮಿನೇಟ್ ಆಗಿದ್ದು ಮಾರ್ಚ್ 12 ರಂದು ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ನಾಟು-ನಾಟುಗೆ ಪ್ರಶಸ್ತಿ ಬರುವ ನಿರೀಕ್ಷೆ ಇದೆ. ಇದೇ ಸಂದರ್ಭದಲ್ಲಿ ಸಿನಿಮಾದ ಮರುಬಿಡುಗಡೆ ಮಾಡಲು ಯೋಜಿಸಿ ಬುದ್ಧಿವಂತಿಕೆ ಮೆರಿದಿದೆ ಚಿತ್ರತಂಡ.

ಆರ್​ಆರ್​ಆರ್ ಸಿನಿಮಾವು ತೆಲುಗು ರಾಜ್ಯಗಳ ಹೋರಾಟಗಾರರಾದ ಅಲ್ಲೂರಿ ಸೀತಾರಾಮ ರಾಜು ಹಾಗೂ ಕೋಮರಂ ಭೀಮ್ ಅವರುಗಳ ಕುರಿತಾದ ಕಾಲ್ಪನಿಕ ಕತೆ ಒಳಗೊಂಡಿದೆ. ಸಿನಿಮಾದಲ್ಲಿ ಅಲ್ಲೂರಿ ಸೀತಾರಾಮ ರಾಜು ಪಾತ್ರದಲ್ಲಿ ರಾಮ್ ಚರಣ್ ತೇಜ, ಕೋಮರಮ್ ಭೀಮ್ ಪಾತ್ರದಲ್ಲಿ ಜೂ ಎನ್​ಟಿಆರ್ ನಟಿಸಿದ್ದಾರೆ. ಆಲಿಯಾ ಭಟ್, ಶ್ರಿಯಾ ಶಿರಿನ್, ಅಜಯ್ ದೇವಗನ್, ಮಕರಂದ್ ದೇಶ್​ಪಾಂಡೆ, ಸಮುದ್ರಕಿಣಿ ಇನ್ನು ಹಲವು ಪ್ರಮುಖ ನಟರು ಸಿನಿಮಾದಲ್ಲಿದ್ದಾರೆ. ರಾಜಮೌಳಿ ನಿರ್ದೇಶನ ಮಾಡಿರುವ ಈ ಸಿನಿಮಾಕ್ಕೆ ಕೀರವಾಣಿ ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್