AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಯುಸಿ ಪರೀಕ್ಷೆಯಲ್ಲಿ ‘ಆರ್​​ಆರ್​ಆರ್​’ ಸಿನಿಮಾ ಕುರಿತು ಪ್ರಶ್ನೆ; ವೈರಲ್ ಆಯ್ತು ಪ್ರಶ್ನೆಪತ್ರಿಕೆ

ದ್ವಿತೀಯ ಪಿಯುಸಿ ಅವರಿಗೆ ಈ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಈ ಪ್ರಶ್ನೆಪತ್ರಿಕೆ ಸಾಕಷ್ಟು ವೈರಲ್ ಆಗುತ್ತಿದೆ. ಸಿನಿಮಾ ಬಗ್ಗೆ ಇರುವ ಕ್ರೇಜ್​ಗೆ ಈ ಪ್ರಶ್ನೆಪತ್ರಿಕೆ ಸಾಕ್ಷ್ಯ ಒದಗಿಸಿದೆ.

ಪಿಯುಸಿ ಪರೀಕ್ಷೆಯಲ್ಲಿ ‘ಆರ್​​ಆರ್​ಆರ್​’ ಸಿನಿಮಾ ಕುರಿತು ಪ್ರಶ್ನೆ; ವೈರಲ್ ಆಯ್ತು ಪ್ರಶ್ನೆಪತ್ರಿಕೆ
ಜ್ಯೂ.ಎನ್​ಟಿಆರ್
TV9 Web
| Edited By: |

Updated on:May 12, 2022 | 3:52 PM

Share

ಜ್ಯೂ.ಎನ್​ಟಿಆರ್ (Jr.Ntr) ಹಾಗೂ ರಾಮ್ ಚರಣ್ ನಟನೆಯ ‘ಆರ್​​ಆರ್​ಆರ್’ ಸಿನಿಮಾ ಇತಿಹಾಸ ಸೃಷ್ಟಿಸಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 1100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರದಿಂದ ರಾಜಮೌಳಿ (SS Rajamouli) ಖ್ಯಾತಿ ಮತ್ತಷ್ಟು ಹೆಚ್ಚಿದೆ. ಈ ಸಿನಿಮಾ ತೆರೆಕಂಡು 50 ದಿನ ಕಳೆಯುತ್ತಾ ಬಂದಿದೆ. ಆದರೆ, ಸಿನಿಮಾ ಬಗ್ಗೆ ಇರುವ ಕ್ರೇಜ್ ಮಾತ್ರ ಕಡಿಮೆ ಆಗಿಲ್ಲ. ಈಗ ತೆಲಂಗಾಣ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ‘ಆರ್​ಆರ್​ಆರ್’  ಸಿನಿಮಾ (RRR Movie)ಬಗ್ಗೆ ಪ್ರಶ್ನೆ ಕೇಳಲಾಗಿದೆ. ಈ ಪ್ರಶ್ನೆ ಪತ್ರಿಕೆ ವೈರಲ್ ಆಗುತ್ತಿದೆ.

‘ಆರ್​ಆರ್​ಆರ್’ ಸಿನಿಮಾ ಮಾರ್ಚ್​ 24ರಂದು ತೆರೆಗೆ ಬಂದಿದೆ. ಈ ಸಿನಿಮಾ ಹಲವು ದಾಖಲೆಗಳನ್ನು ಬರೆದಿದೆ. ಟಾಲಿವುಡ್​ನ ಸಿನಿಮಾ ಆದ್ದರಿಂದ ತೆಲುಗು ಮಂದಿ ಈ ಚಿತ್ರವನ್ನು ಹೆಚ್ಚು ಒಪ್ಪಿಕೊಂಡಿದ್ದಾರೆ. ಈಗ ಅಚ್ಚರಿ ಎಂಬಂತೆ ದ್ವಿತೀಯ ಪಿಯುಸಿ ಅವರಿಗೆ ಈ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಈ ಪ್ರಶ್ನೆಪತ್ರಿಕೆ ಸಾಕಷ್ಟು ವೈರಲ್ ಆಗುತ್ತಿದೆ. ಸಿನಿಮಾ ಬಗ್ಗೆ ಇರುವ ಕ್ರೇಜ್​ಗೆ ಈ ಪ್ರಶ್ನೆಪತ್ರಿಕೆ ಸಾಕ್ಷ್ಯ ಒದಗಿಸಿದೆ.

ಇದನ್ನೂ ಓದಿ
Image
RRR OTT Release: ‘ಆರ್​ಆರ್​ಆರ್​’ ಚಿತ್ರ ಒಟಿಟಿಯಲ್ಲಿ ಪ್ರಸಾರ ಆಗೋದು ಯಾವಾಗ? ಆ ದಿನಾಂಕಕ್ಕಾಗಿ ಕಾದಿರುವ ಫ್ಯಾನ್ಸ್​
Image
‘RRR​’ ಚಿತ್ರದ ಹಿಂದಿ ಕಲೆಕ್ಷನ್​ ಹಿಂದಿಕ್ಕಲು ‘ಕೆಜಿಎಫ್​ 2’ ಸಿನಿಮಾಗೆ ಇನ್ನೆಷ್ಟು ಕೋಟಿ ರೂ. ಬಾಕಿ? ​ಇಲ್ಲಿದೆ ಲೆಕ್ಕ
Image
RRR Box Office Collection: ಬಾಕ್ಸಾಫೀಸ್​ನಲ್ಲಿ ನಾಗಾಲೋಟ ಮುಂದುವರೆಸಿದ ‘ಆರ್​ಆರ್​ಆರ್​’; ಚಿತ್ರದ ಕಲೆಕ್ಷನ್ ಎಷ್ಟು ಗೊತ್ತಾ?
Image
RRR Box Office Collection: ಒಂದೇ ವಾರದಲ್ಲಿ ‘ಆರ್​ಆರ್​ಆರ್​’ ಗಳಿಸಿದ್ದು ಎಷ್ಟು ಕೋಟಿ? ಇಲ್ಲಿದೆ ನೋಡಿ ಬಾಕ್ಸಾಫೀಸ್ ಲೆಕ್ಕಾಚಾರ

‘ನೀವು ಆರ್‌ಆರ್‌ಆರ್ ಸಿನಿಮಾ ಹಾಗೂ ಕೋಮರಂ ಭೀಮ್ ಪಾತ್ರದಲ್ಲಿ ಜ್ಯೂ. ಎನ್‌ಟಿಆರ್ ಅವರ ಅಭಿನಯವನ್ನು ನೋಡಿದ್ದೀರಿ. ಸಿನಿಮಾದ ಅದ್ಭುತ ಯಶಸ್ಸಿನ ನಂತರ ನಿಮಗೆ ಪ್ರತಿಷ್ಠಿತ ಟಿವಿ ವಾಹಿನಿಯಲ್ಲಿ ಜ್ಯೂ. ಎನ್‌ಟಿಆರ್ ಅವರನ್ನು ಸಂದರ್ಶನ ಮಾಡಲು ಅವಕಾಶ ಸಿಕ್ಕಿತು ಎಂದು ಊಹಿಸಿಕೊಳ್ಳಿ’ ಎಂದು ಪ್ರಶ್ನೆ ಪತ್ರಿಕೆಯಲ್ಲಿ ಬರೆಯಲಾಗಿದೆ

‘ಕೆಳಗೆ ನೀಡಿರುವ ವಿಚಾರಗಳನ್ನು ಇಟ್ಟುಕೊಂಡು ಜ್ಯೂ.ಎನ್​ಟಿಆರ್ ಕುರಿತ ಕಾಲ್ಪನಿಕ ಸಂದರ್ಶನ ಬರೆಯಿರಿ ಚಿತ್ರದ ಸ್ವರೂಪ, ಸಿನಿಮಾ ನಿರ್ದೇಶಕರೊಂದಿಗೆ ಜ್ಯೂ.ಎನ್​ಟಿಆರ್​ ಬಾಂಧವ್ಯ, ಸಿನಿಮಾ ಸ್ಕ್ರಿಪ್ಟ್​, ಉಳಿದ ನಟರ ಪಾತ್ರ, ಸಿನಿಮಾದ ಪ್ರಭಾವ’ ಇವಿಷ್ಟು ವಿಚಾರಗಳನ್ನು ಇಟ್ಟುಕೊಂಡು ಸಂದರ್ಶನ ಬರೆಯಲು ಸೂಚಿಸಲಾಗಿದೆ.

ಸದ್ಯ, ಈ ಪ್ರಶ್ನೆ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜ್ಯೂ.ಎನ್​ಟಿಆರ್ ಅಭಿಮಾನಿಗಳು ಈ ಪ್ರಶ್ನೆ ಪತ್ರಿಕೆಯನ್ನು ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಫೇವರಿಟ್ ನಟನ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಫ್ಯಾನ್ಸ್​ ಸಂತಸ ಹೊರಹಾಕಿದ್ದಾರೆ.

ಬೆಂಗಳೂರಿನ ಖಾಸಗಿ ಶಾಲೆಯೊಂದರ ಪರೀಕ್ಷೆಯಲ್ಲಿ ಮಕ್ಕಳಿಗೆ ಪುನೀತ್​ ರಾಜ್​ಕುಮಾರ್​ ಕುರಿತು ಪ್ರಶ್ನೆ ಕೇಳಲಾಗಿತ್ತು. ನಾಲ್ಕನೇ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ವಿಷಯದ ಪರೀಕ್ಷೆ ನಡೆಸಲಾಗಿದ್ದು, ಅದರ ಪ್ರಶ್ನೆ ಪತ್ರಿಕೆಯಲ್ಲಿ ಪುನೀತ್​ ರಾಜ್​ಕುಮಾರ್​ ಕುರಿತು ಪ್ರಶ್ನೆ ಕೇಳಲಾಗಿತ್ತು. ಅದರ ಫೋಟೋ ವೈರಲ್​ ಆಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:50 pm, Thu, 12 May 22

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್