AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR ಆಸ್ಕರ್​ ಆಸೆ ಇನ್ನೂ ಜೀವಂತ; ಬೇರೆ ಮಾರ್ಗದಲ್ಲಿ ಸ್ಪರ್ಧೆಗೆ ಇಳಿದ ರಾಜಮೌಳಿ ಸಿನಿಮಾ

SS Rajamouli | Oscar Award: ‘ಆರ್​ಆರ್​ಆರ್​’ ತಂಡ For Your Consideration ಕ್ಯಾಂಪೇನ್​ ಮೂಲಕ ಆಸ್ಕರ್​ ಸ್ಪರ್ಧೆಗೆ ಎಂಟ್ರಿ ನೀಡಲು ಪ್ರಯತ್ನಿಸುತ್ತಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

RRR ಆಸ್ಕರ್​ ಆಸೆ ಇನ್ನೂ ಜೀವಂತ; ಬೇರೆ ಮಾರ್ಗದಲ್ಲಿ ಸ್ಪರ್ಧೆಗೆ ಇಳಿದ ರಾಜಮೌಳಿ ಸಿನಿಮಾ
ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​, ಆಸ್ಕರ್​ ಟ್ರೋಫಿ
TV9 Web
| Edited By: |

Updated on:Oct 06, 2022 | 8:59 AM

Share

ಭಾರತೀಯ ಚಿತ್ರರಂಗದಲ್ಲಿ ‘ಆರ್​ಆರ್​ಆರ್​’ (RRR) ಸಿನಿಮಾ ಹಲವು ದಾಖಲೆಗಳನ್ನು ಬರೆದಿದೆ. ಚಿತ್ರಮಂದಿರದಲ್ಲಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡುವಲ್ಲಿ ಈ ಚಿತ್ರ ಯಶಸ್ವಿ ಆಯಿತು. ರಾಜಮೌಳಿ (SS Rajamouli) ನಿರ್ದೇಶನಕ್ಕೆ ಎಲ್ಲರಿಂದ ಮೆಚ್ಚುಗೆ ಸಿಕ್ಕಿತು. ಆದರೆ ಭಾರತದಿಂದ ಅಧಿಕೃತವಾಗಿ ಆಸ್ಕರ್​ ಪ್ರಶಸ್ತಿ ಸ್ಪರ್ಧೆಗೆ ಆಯ್ಕೆ ಆಗುವಲ್ಲಿ ‘ಆರ್​ಆರ್​ಆರ್​’ ಚಿತ್ರ ವಿಫಲವಾಯಿತು. ಇದರಿಂದ ಅಭಿಮಾನಿಗಳಿಗೆ ಸಖತ್​ ಬೇಸರ ಆಗಿತ್ತು. ಗುಜರಾತಿ ಭಾಷೆಯ ‘ಚೆಲ್ಲೋ ಶೋ’ ಸಿನಿಮಾ ಆಸ್ಕರ್​ ಸ್ಪರ್ಧೆಗೆ ಭಾರತದಿಂದ ಆಯ್ಕೆ ಆಯಿತು. ಆಗ ರಾಜಮೌಳಿ ಅಭಿಮಾನಿಗಳು ಬೇಸರ ಮಾಡಿಕೊಂಡರು. ಆದರೆ ಈಗ ಒಂದು ಗುಡ್​ ನ್ಯೂಸ್​ ಕೇಳಿಬಂದಿದೆ. ‘For Your Consideration’ ಎಂಬ ಕ್ಯಾಂಪೇನ್​ ಮೂಲಕ ‘ಆರ್​ಆರ್​ಆರ್​’ ಸಿನಿಮಾವನ್ನು ಆಸ್ಕರ್​ (Oscar Award) ಕಣಕ್ಕೆ ಕಳಿಸಲು ಪ್ರಯತ್ನ ನಡೆದಿದೆ.

‘ಫಿಲ್ಮ್​ ಫೆಡರೇಷನ್​ ಆಫ್​ ಇಂಡಿಯಾ’ ಕಡೆಯಿಂದ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ ಸ್ಪರ್ಧೆಗೆ ಅರ್ಹತೆ ಪಡೆದಿಲ್ಲ ಎಂದ ಮಾತ್ರಕ್ಕೆ ಈ ಚಿತ್ರ ಸಮರ್ಥವಾಗಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂಬುದು ಅಭಿಮಾನಿಗಳ ವಾದ. ಹಾಗಾಗಿ ಸೋಶಿಯಲ್​ ಮೀಡಿಯಾದಲ್ಲಿ ಈ ಸಿನಿಮಾ ಪರವಾಗಿ ಅಪಾರ ಸಂಖ್ಯೆಯ ಅಭಿಮಾನಿಗಳು ಧ್ವನಿ ಎತ್ತುತ್ತಲೇ ಇದ್ದಾರೆ. ಅದರ ಬೆನ್ನಲ್ಲೇ ‘ಆರ್​ಆರ್​ಆರ್​’ ತಂಡ For Your Consideration ಕ್ಯಾಂಪೇನ್​ ಮೂಲಕ ಆಸ್ಕರ್​ ಸ್ಪರ್ಧೆಗೆ ಎಂಟ್ರಿ ನೀಡಲು ಪ್ರಯತ್ನಿಸುತ್ತಿದೆ.

ಆಸ್ಕರ್​ ಕಮಿಟಿಯ ಗಮನ ಸೆಳೆಯಲು For Your Consideration ಕಾಂಪೇನ್​ ಮಾಡಲಾಗುತ್ತದೆ. ಇದಕ್ಕೆ ಬಹುಕೋಟಿ ರೂಪಾಯಿ ಹಣ ಖರ್ಚಾಗುತ್ತದೆ. ಎಲ್ಲ ಸಿನಿಮಾಗಳಿಗೂ ಈ ಪರಿ ಹಣ ಖರ್ಚು ಮಾಡಲು ಸಾಧ್ಯವಾಗುವುದಿಲ್ಲ. ಆದರೆ ‘ಆರ್​ಆರ್​ಆರ್​’ ನಿರ್ಮಾಪಕರು ಸಾಕಷ್ಟು ಲಾಭ ಕಂಡಿರುವುದರಿಂದ For Your Consideration ಕ್ಯಾಂಪೇನ್​ಗೆ ಖರ್ಚು ಮಾಡಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ
Image
ಬಾಕ್ಸ್​ ಆಫೀಸ್​ನಲ್ಲಿ ನೂರಾರು ಕೋಟಿ ಬಾಚಿದ ‘ಬ್ರಹ್ಮಾಸ್ತ್ರ’ ಚಿತ್ರದಿಂದ ರಾಜಮೌಳಿಗೆ ಸಿಕ್ಕ ಹಣ ಎಷ್ಟು?
Image
ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ಪಬ್ಲಿಸಿಟಿ ಸ್ಟಂಟ್ಸ್ ಎಂದ ನೆಟ್ಟಿಗರು
Image
ಕೊನೇ ಕ್ಷಣದಲ್ಲಿ ಅಮಿತ್ ಶಾ ಭೇಟಿಯಿಂದ ಹಿಂದೆ ಸರಿದ ರಾಜಮೌಳಿ? ಇದಕ್ಕಿದೆ ದೊಡ್ಡ ಕಾರಣ
Image
‘ನನ್ನ ಸಿನಿಮಾದಲ್ಲಿ ಅಂಥ ನಟರು ಇರೋದೇ ಬೇಡ’: ರಾಜಮೌಳಿಗೆ ಕಂಡೀಷನ್​ ಹಾಕಿದ ಮಹೇಶ್​ ಬಾಬು?

ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಟ-ನಟಿ, ಅತ್ಯುತ್ತಮ ಪೋಷಕ ಕಲಾವಿದರು, ಅತ್ಯುತ್ತಮ ಚಿತ್ರಕಥೆ, ಅತ್ಯುತ್ತಮ ಹಾಡು ಮುಂತಾದ ವಿಭಾಗಗಳಲ್ಲಿ ನಾಮನಿರ್ದೇಶನಗೊಳ್ಳಲು ‘ಆರ್​ಆರ್​ಆರ್​’ ಚಿತ್ರ ಪ್ರಯತ್ನಿಸುತ್ತಿದೆ. ಹೀಗೆ ಸ್ವತಂತ್ರವಾಗಿ ಆಸ್ಕರ್​ಗೆ ಎಂಟ್ರಿ ನೀಡುವ ಸಾಹಸಕ್ಕೆ ಮುಂದಾಗಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

‘ಆರ್​ಆರ್​ಆರ್​’ ಸಿನಿಮಾದಲ್ಲಿ ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​, ಆಲಿಯಾ ಭಟ್​, ಅಜಯ್​ ದೇವಗನ್​, ಶ್ರೀಯಾ ಶರಣ್​ ಮುಂತಾದವರು ನಟಿಸಿದ್ದಾರೆ. ಎಂಎಂ ಕೀರವಾಣಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಮೂಡಿಬಂದ ಈ ಸಿನಿಮಾದಿಂದ ರಾಮ್​ ಚರಣ್​ ಮತ್ತು ಜೂನಿಯರ್​ ಎನ್​ಟಿಆರ್​ ಅವರ ಚಾರ್ಮ್​ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:59 am, Thu, 6 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್