AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್​’ ರಿಲೀಸ್​ ದಿನಾಂಕ ಮುಂದಕ್ಕೆ? ಚಿತ್ರತಂಡದಿಂದ ಬಂತು ಸ್ಪಷ್ಟನೆ

ಈಗಾಗಲೇ ದೇಶದಲ್ಲಿ ಕೊವಿಡ್​ ಎರಡು ಅಲೆ ಪೂರ್ಣಗೊಂಡಿದೆ. ಈ ಮೊದಲು ಜನವರಿಯಲ್ಲಿ ಕೊವಿಡ್​ ಪ್ರಕರಣ ಹೆಚ್ಚಲು ಆರಂಭವಾಗಿ ಮಾರ್ಚ್-ಏಪ್ರಿಲ್​​ ವೇಳೆಗೆ ಕೊರೊನಾ​ ಪ್ರಕರಣ ಮಿತಿ ಮೀರಿತ್ತು. ಈ ಬಾರಿ ಕೊಂಚ ಮೊದಲೇ ಕೊವಿಡ್​ ಭಯ ಹೆಚ್ಚುತ್ತಿದೆ.

‘ಆರ್​ಆರ್​ಆರ್​’ ರಿಲೀಸ್​ ದಿನಾಂಕ ಮುಂದಕ್ಕೆ? ಚಿತ್ರತಂಡದಿಂದ ಬಂತು ಸ್ಪಷ್ಟನೆ
ರಾಮ್​ ಚರಣ್​-ಜ್ಯೂ ಎನ್​ಟಿಆರ್
TV9 Web
| Edited By: |

Updated on:Dec 28, 2021 | 7:58 PM

Share

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ರಿಲೀಸ್​ಗೆ ಸಿದ್ಧತೆ ನಡೆದಿದೆ. ಇಡೀ ವಿಶ್ವಾದ್ಯಂತ ಜನವರಿ 7ರಂದು ಚಿತ್ರ ತೆರೆಗೆ ಬರಲಿದೆ. ಈ ಸಿನಿಮಾಗೆ ಈಗಾಗಲೇ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡುವ ಕಾರ್ಯ ನಡೆಯುತ್ತಿದೆ. ಈ ಮಧ್ಯೆ ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವುದರಿಂದ ಸಿನಿಮಾ ರಿಲೀಸ್​ ದಿನಾಂಕ​ ಮುಂದೂಡಲ್ಪಡುತ್ತದೆಯೇ ಎನ್ನುವ ಪ್ರಶ್ನೆ ಕಾಡಿತ್ತು. ಇದಕ್ಕೆ ಚಿತ್ರತಂಡದಿಂದ ಸ್ಪಷ್ಟನೆ ಸಿಕ್ಕಿದೆ. ಹಾಗಾದರೆ ಸಿನಿಮಾ ರಿಲೀಸ್​ ದಿನಾಂಕ ಮುಂದಕ್ಕೆ ಹೋಗುತ್ತದೆಯೇ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಈಗಾಗಲೇ ದೇಶದಲ್ಲಿ ಕೊವಿಡ್​ ಎರಡು ಅಲೆ ಪೂರ್ಣಗೊಂಡಿದೆ. ಈ ಮೊದಲು ಜನವರಿಯಲ್ಲಿ ಕೊವಿಡ್​ ಪ್ರಕರಣ ಹೆಚ್ಚಲು ಆರಂಭವಾಗಿ ಮಾರ್ಚ್-ಏಪ್ರಿಲ್​​ ವೇಳೆಗೆ ಕೊರೊನಾ​ ಪ್ರಕರಣ ಮಿತಿ ಮೀರಿತ್ತು. ಈ ಬಾರಿ ಕೊಂಚ ಮೊದಲೇ ಕೊವಿಡ್​ ಭಯ ಹೆಚ್ಚುತ್ತಿದೆ. ಹೀಗಾಗಿ, ದೇಶದಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುತ್ತಿದೆ. ಕೆಲವು ಕಡೆಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಇನ್ನೂ ಕೆಲವು ಕಡೆಗಳಲ್ಲಿ ಚಿತ್ರಮಂದಿರಗಳಲ್ಲಿ ಶೇ. 50 ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ದೆಹಲಿಯಲ್ಲಿ ಥಿಯೇಟರ್​ ಬಂದ್​ ಮಾಡಲಾಗಿದೆ. ಇದರಿಂದ ಹಿಂದಿಯ ‘ಜೆರ್ಸಿ’ ಸೇರಿದಂತೆ ಕೆಲವು ಚಿತ್ರಗಳು ರಿಲೀಸ್​ ದಿನಾಂಕ ಮುಂದೂಡಿವೆ.

‘ಆರ್​ಆರ್​ಆರ್​’ ಸಿನಿಮಾ ತಂಡ ಕೂಡ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಇದಕ್ಕೆ ಕಾರಣವೂ ಇದೆ. ‘ಆರ್​ಆರ್​ಆರ್​’ ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಸಿನಿಮಾ. ಈ ಕಾರಣಕ್ಕೆ ಇಂತಹ ಕಷ್ಟದ ಸಂದರ್ಭದಲ್ಲಿ ಸಿನಿಮಾ ರಿಲೀಸ್​ ಮಾಡಲು ಚಿತ್ರತಂಡ ಮುಂದೆ ಬರುವುದಿಲ್ಲ ಎನ್ನಲಾಗಿತ್ತು. ಆದರೆ, ಈ ಬಗ್ಗೆ ಆರ್​ಆರ್​ಆರ್​ ಟ್ವಿಟರ್​ ಖಾತೆಯಿಂದ ಟ್ವೀಟ್​ ಒಂದನ್ನು ಮಾಡಲಾಗಿದೆ. ಈ ಟ್ವೀಟ್​ನಲ್ಲಿ ಜನವರಿ 7ಕ್ಕೆ ಸಿನಿಮಾ ರಿಲೀಸ್​ ಆಗುವ ವಿಚಾರವನ್ನು ಖಚಿತಪಡಿಸಲಾಗಿದೆ.

ಜ.7ರಂದು ವಿಶ್ವಾದ್ಯಂತ ‘ಆರ್​ಆರ್​ಆರ್​’ ಸಿನಿಮಾ ಬಿಡುಗಡೆ ಆಗಲಿದೆ. ಬಾಲಿವುಡ್​ನ ಖ್ಯಾತ ನಟಿ ಆಲಿಯಾ ಭಟ್​ ಅವರು ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ನಟ ಅಜಯ್​ ದೇವಗನ್​ ಕೂಡ ಈ ಸಿನಿಮಾದಲ್ಲಿ ಮುಖ್ಯ ಪಾತ್ರ ನಿಭಾಯಿಸಿದ್ದಾರೆ. ಟ್ರೇಲರ್​ ನೋಡಿದ ಸಿನಿಪ್ರಿಯರು ಫಿದಾ ಆಗಿದ್ದಾರೆ. ‘ಜನನಿ..’ ಹಾಡು ಕೂಡ ಗಮನ ಸೆಳೆದಿದೆ.

ಟ್ರೇಲರ್​ನಲ್ಲಿ ಎಲ್ಲಾ ಪಾತ್ರಗಳ ಪರಿಚಯವಾಗಿದೆ. ಸಿನಿಮಾ ಎಷ್ಟು ಅದ್ದೂರಿಯಾಗಿ ಇರಲಿದೆ ಎನ್ನುವುದರ ಸಣ್ಣ ಝಲಕ್​ ಟ್ರೇಲರ್​ನಲ್ಲಿ ಸಿಕ್ಕಿದೆ. ‘ಆರ್​ಆರ್​ಆರ್​’ ಸಿನಿಮಾ ಮೇಕಿಂಗ್​ ಕೂಡ ಉತ್ಕೃಷ್ಟ ಮಟ್ಟದಿಂದ ಕೂಡಿರಲಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಟ್ರೇಲರ್​ ರಿಲೀಸ್​ ಆದ ನಂತರದಲ್ಲಿ ಚಿತ್ರತಂಡ ಪ್ರಚಾರಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದೆ. ಹಲವು ರಾಜ್ಯಗಳಿಗೆ ತೆರಳಿ ತಂಡ ಸಿನಿಮಾ ಪ್ರಚಾರ ಕಾರ್ಯ ನಡೆಸಿದೆ. ಬೆಂಗಳೂರಿಗೂ ಚಿತ್ರತಂಡ ಆಗಮಿಸಿತ್ತು. ರಾಮ್​ ಚರಣ್​, ಆಲಿಯಾ ಭಟ್​, ಜ್ಯೂ. ಎನ್​ಟಿಆರ್​ ಅವರು ಮಾಧ್ಯಮಗೋಷ್ಠಿ ನಡೆಸಿ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ: ಮತ್ತೊಂದು ಹಾಡಿನ ಮೂಲಕ ಸೌಂಡು ಮಾಡಲು ಸಜ್ಜಾದ ‘ಆರ್​ಆರ್​ಆರ್​’: ಜ್ಯೂ. ಎನ್​ಟಿಆರ್​ ಫ್ಯಾನ್ಸ್​ ಕಾತರ

ಆರ್​ಆರ್​ಆರ್​ ಚಿತ್ರ ಓಟಿಟಿಯಲ್ಲಿ ಬರೋದು ಯಾವಾಗ? ಕಾತರದ ಪ್ರಶ್ನೆಗೆ ಸಿಕ್ತು ಉತ್ತರ

Published On - 7:39 pm, Tue, 28 December 21

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ