AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್​’ ರಿಲೀಸ್​ ದಿನಾಂಕ ಮುಂದಕ್ಕೆ? ಚಿತ್ರತಂಡದಿಂದ ಬಂತು ಸ್ಪಷ್ಟನೆ

ಈಗಾಗಲೇ ದೇಶದಲ್ಲಿ ಕೊವಿಡ್​ ಎರಡು ಅಲೆ ಪೂರ್ಣಗೊಂಡಿದೆ. ಈ ಮೊದಲು ಜನವರಿಯಲ್ಲಿ ಕೊವಿಡ್​ ಪ್ರಕರಣ ಹೆಚ್ಚಲು ಆರಂಭವಾಗಿ ಮಾರ್ಚ್-ಏಪ್ರಿಲ್​​ ವೇಳೆಗೆ ಕೊರೊನಾ​ ಪ್ರಕರಣ ಮಿತಿ ಮೀರಿತ್ತು. ಈ ಬಾರಿ ಕೊಂಚ ಮೊದಲೇ ಕೊವಿಡ್​ ಭಯ ಹೆಚ್ಚುತ್ತಿದೆ.

‘ಆರ್​ಆರ್​ಆರ್​’ ರಿಲೀಸ್​ ದಿನಾಂಕ ಮುಂದಕ್ಕೆ? ಚಿತ್ರತಂಡದಿಂದ ಬಂತು ಸ್ಪಷ್ಟನೆ
ರಾಮ್​ ಚರಣ್​-ಜ್ಯೂ ಎನ್​ಟಿಆರ್
TV9 Web
| Edited By: |

Updated on:Dec 28, 2021 | 7:58 PM

Share

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ರಿಲೀಸ್​ಗೆ ಸಿದ್ಧತೆ ನಡೆದಿದೆ. ಇಡೀ ವಿಶ್ವಾದ್ಯಂತ ಜನವರಿ 7ರಂದು ಚಿತ್ರ ತೆರೆಗೆ ಬರಲಿದೆ. ಈ ಸಿನಿಮಾಗೆ ಈಗಾಗಲೇ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡುವ ಕಾರ್ಯ ನಡೆಯುತ್ತಿದೆ. ಈ ಮಧ್ಯೆ ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವುದರಿಂದ ಸಿನಿಮಾ ರಿಲೀಸ್​ ದಿನಾಂಕ​ ಮುಂದೂಡಲ್ಪಡುತ್ತದೆಯೇ ಎನ್ನುವ ಪ್ರಶ್ನೆ ಕಾಡಿತ್ತು. ಇದಕ್ಕೆ ಚಿತ್ರತಂಡದಿಂದ ಸ್ಪಷ್ಟನೆ ಸಿಕ್ಕಿದೆ. ಹಾಗಾದರೆ ಸಿನಿಮಾ ರಿಲೀಸ್​ ದಿನಾಂಕ ಮುಂದಕ್ಕೆ ಹೋಗುತ್ತದೆಯೇ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಈಗಾಗಲೇ ದೇಶದಲ್ಲಿ ಕೊವಿಡ್​ ಎರಡು ಅಲೆ ಪೂರ್ಣಗೊಂಡಿದೆ. ಈ ಮೊದಲು ಜನವರಿಯಲ್ಲಿ ಕೊವಿಡ್​ ಪ್ರಕರಣ ಹೆಚ್ಚಲು ಆರಂಭವಾಗಿ ಮಾರ್ಚ್-ಏಪ್ರಿಲ್​​ ವೇಳೆಗೆ ಕೊರೊನಾ​ ಪ್ರಕರಣ ಮಿತಿ ಮೀರಿತ್ತು. ಈ ಬಾರಿ ಕೊಂಚ ಮೊದಲೇ ಕೊವಿಡ್​ ಭಯ ಹೆಚ್ಚುತ್ತಿದೆ. ಹೀಗಾಗಿ, ದೇಶದಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುತ್ತಿದೆ. ಕೆಲವು ಕಡೆಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಇನ್ನೂ ಕೆಲವು ಕಡೆಗಳಲ್ಲಿ ಚಿತ್ರಮಂದಿರಗಳಲ್ಲಿ ಶೇ. 50 ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ದೆಹಲಿಯಲ್ಲಿ ಥಿಯೇಟರ್​ ಬಂದ್​ ಮಾಡಲಾಗಿದೆ. ಇದರಿಂದ ಹಿಂದಿಯ ‘ಜೆರ್ಸಿ’ ಸೇರಿದಂತೆ ಕೆಲವು ಚಿತ್ರಗಳು ರಿಲೀಸ್​ ದಿನಾಂಕ ಮುಂದೂಡಿವೆ.

‘ಆರ್​ಆರ್​ಆರ್​’ ಸಿನಿಮಾ ತಂಡ ಕೂಡ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಇದಕ್ಕೆ ಕಾರಣವೂ ಇದೆ. ‘ಆರ್​ಆರ್​ಆರ್​’ ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಸಿನಿಮಾ. ಈ ಕಾರಣಕ್ಕೆ ಇಂತಹ ಕಷ್ಟದ ಸಂದರ್ಭದಲ್ಲಿ ಸಿನಿಮಾ ರಿಲೀಸ್​ ಮಾಡಲು ಚಿತ್ರತಂಡ ಮುಂದೆ ಬರುವುದಿಲ್ಲ ಎನ್ನಲಾಗಿತ್ತು. ಆದರೆ, ಈ ಬಗ್ಗೆ ಆರ್​ಆರ್​ಆರ್​ ಟ್ವಿಟರ್​ ಖಾತೆಯಿಂದ ಟ್ವೀಟ್​ ಒಂದನ್ನು ಮಾಡಲಾಗಿದೆ. ಈ ಟ್ವೀಟ್​ನಲ್ಲಿ ಜನವರಿ 7ಕ್ಕೆ ಸಿನಿಮಾ ರಿಲೀಸ್​ ಆಗುವ ವಿಚಾರವನ್ನು ಖಚಿತಪಡಿಸಲಾಗಿದೆ.

ಜ.7ರಂದು ವಿಶ್ವಾದ್ಯಂತ ‘ಆರ್​ಆರ್​ಆರ್​’ ಸಿನಿಮಾ ಬಿಡುಗಡೆ ಆಗಲಿದೆ. ಬಾಲಿವುಡ್​ನ ಖ್ಯಾತ ನಟಿ ಆಲಿಯಾ ಭಟ್​ ಅವರು ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ನಟ ಅಜಯ್​ ದೇವಗನ್​ ಕೂಡ ಈ ಸಿನಿಮಾದಲ್ಲಿ ಮುಖ್ಯ ಪಾತ್ರ ನಿಭಾಯಿಸಿದ್ದಾರೆ. ಟ್ರೇಲರ್​ ನೋಡಿದ ಸಿನಿಪ್ರಿಯರು ಫಿದಾ ಆಗಿದ್ದಾರೆ. ‘ಜನನಿ..’ ಹಾಡು ಕೂಡ ಗಮನ ಸೆಳೆದಿದೆ.

ಟ್ರೇಲರ್​ನಲ್ಲಿ ಎಲ್ಲಾ ಪಾತ್ರಗಳ ಪರಿಚಯವಾಗಿದೆ. ಸಿನಿಮಾ ಎಷ್ಟು ಅದ್ದೂರಿಯಾಗಿ ಇರಲಿದೆ ಎನ್ನುವುದರ ಸಣ್ಣ ಝಲಕ್​ ಟ್ರೇಲರ್​ನಲ್ಲಿ ಸಿಕ್ಕಿದೆ. ‘ಆರ್​ಆರ್​ಆರ್​’ ಸಿನಿಮಾ ಮೇಕಿಂಗ್​ ಕೂಡ ಉತ್ಕೃಷ್ಟ ಮಟ್ಟದಿಂದ ಕೂಡಿರಲಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಟ್ರೇಲರ್​ ರಿಲೀಸ್​ ಆದ ನಂತರದಲ್ಲಿ ಚಿತ್ರತಂಡ ಪ್ರಚಾರಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದೆ. ಹಲವು ರಾಜ್ಯಗಳಿಗೆ ತೆರಳಿ ತಂಡ ಸಿನಿಮಾ ಪ್ರಚಾರ ಕಾರ್ಯ ನಡೆಸಿದೆ. ಬೆಂಗಳೂರಿಗೂ ಚಿತ್ರತಂಡ ಆಗಮಿಸಿತ್ತು. ರಾಮ್​ ಚರಣ್​, ಆಲಿಯಾ ಭಟ್​, ಜ್ಯೂ. ಎನ್​ಟಿಆರ್​ ಅವರು ಮಾಧ್ಯಮಗೋಷ್ಠಿ ನಡೆಸಿ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ: ಮತ್ತೊಂದು ಹಾಡಿನ ಮೂಲಕ ಸೌಂಡು ಮಾಡಲು ಸಜ್ಜಾದ ‘ಆರ್​ಆರ್​ಆರ್​’: ಜ್ಯೂ. ಎನ್​ಟಿಆರ್​ ಫ್ಯಾನ್ಸ್​ ಕಾತರ

ಆರ್​ಆರ್​ಆರ್​ ಚಿತ್ರ ಓಟಿಟಿಯಲ್ಲಿ ಬರೋದು ಯಾವಾಗ? ಕಾತರದ ಪ್ರಶ್ನೆಗೆ ಸಿಕ್ತು ಉತ್ತರ

Published On - 7:39 pm, Tue, 28 December 21

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ