AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೋಲ್ಡನ್​ ಗ್ಲೋಬ್​​’ ಬಳಿಕ ವಿದೇಶದಲ್ಲಿ ಮತ್ತೆರಡು ಪ್ರಶಸ್ತಿ ಬಾಚಿಕೊಂಡ ‘ಆರ್​ಆರ್​ಆರ್​’ ಚಿತ್ರ

ಈಗ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್ ಅವಾರ್ಡ್ಸ್​​ ಪಡೆಯುವ ರೇಸ್​ನಲ್ಲಿದೆ. ಈ ಚಿತ್ರ ಆಸ್ಕರ್ ಗೆದ್ದರೆ ಹೊಸ ದಾಖಲೆ ನಿರ್ಮಾಣ ಆಗಲಿದೆ.

‘ಗೋಲ್ಡನ್​ ಗ್ಲೋಬ್​​’ ಬಳಿಕ ವಿದೇಶದಲ್ಲಿ ಮತ್ತೆರಡು ಪ್ರಶಸ್ತಿ ಬಾಚಿಕೊಂಡ ‘ಆರ್​ಆರ್​ಆರ್​’ ಚಿತ್ರ
ಆರ್​ಆರ್​ಆರ್​ ಚಿತ್ರದಲ್ಲಿ ರಾಮ್ ಚರಣ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 16, 2023 | 8:32 AM

Share

ನಿರ್ದೇಶಕ ರಾಜಮೌಳಿ (SS Rajamouli) ಸಿನಿಮಾಗಳು ಬಾಕ್ಸ್​ ಆಫೀಸ್​​ನಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದವು. ಈ ಬಾರಿ ಅವರ ಸಿನಿಮಾ ‘ಆರ್​ಆರ್​ಆರ್​’ ಬಾಕ್ಸ್ ಆಫೀಸ್​ ಗಳಿಕೆಗೆ ಸೀಮಿತ ಆಗಿಲ್ಲ. ಈ ಚಿತ್ರ ಪ್ರಶಸ್ತಿಗಳ ಮೇಲೆ ಕಣ್ಣಿಟ್ಟಿದೆ. ಪ್ರತಿಷ್ಠಿತ ‘ಗೋಲ್ಡನ್ ಗ್ಲೋಬ್​​’ನಲ್ಲಿ ‘ಆರ್​ಆರ್​ಆರ್​’ (RRR Movie) ಚಿತ್ರದ ‘ನಾಟು ನಾಟು..’ ಪ್ರಶಸ್ತಿ ಪಡೆಯಿತು. ಈ ಸಂತಸ ಇನ್ನೂ ಹಾಗೆಯೇ ಇರುವಾಗ ಮತ್ತೊಂದು ಪ್ರಶಸ್ತಿಯನ್ನು ‘ಆರ್​ಆರ್​ಆರ್​’ ಚಿತ್ರ ಹೊತ್ತು ತಂದಿದೆ. ಹೌದು, ಕ್ರಿಟಿಕ್ಸ್ ಚಾಯ್ಸ್​ ಅವಾರ್ಡ್ಸ್​ 2023ರಲ್ಲಿ ‘ಅತ್ಯುತ್ತಮ ವಿದೇಶಿ ಭಾಷೆ ಚಿತ್ರ’ ಪ್ರಶಸ್ತಿಯನ್ನು ‘ಆರ್​ಆರ್​ಆರ್​’ ಪಡೆದುಕೊಂಡಿದೆ. ಈ ಅವಾರ್ಡ್ ಪಡೆಯಲು ಹಲವು ಸೂಪರ್ ಹಿಟ್ ಚಿತ್ರಗಳು ಸ್ಪರ್ಧೆ ಮಾಡಿದ್ದವು. ಅಂತಿಮವಾಗಿ ‘ಆರ್​ಆರ್​ಆರ್​’ ಚಿತ್ರಕ್ಕೆ ಅವಾರ್ಡ್ ಸಿಕ್ಕಿದೆ. ‘ನಾಟು ನಾಟು..’ ಹಾಡಿಗೂ ಅವಾರ್ಡ್​ ಒಲಿದಿದೆ.

‘ಕ್ರಿಟಿಕ್ಸ್​ ಚಾಯ್ಸ್​ನಲ್ಲಿ ಅತ್ಯುತ್ತಮ ವಿದೇಶಿ ಭಾಷೆಯ ಸಿನಿಮಾ ಅವಾರ್ಡ್ ಹಾಗೂ ನಾಟು ನಾಟು.. ಹಾಡು ಅತ್ಯುತ್ತಮ ಒರಿಜನಲ್ ಸಾಂಗ್ ಪ್ರಶಸ್ತಿ ಪಡೆದಿದ್ದಕ್ಕೆ ಆರ್​ಆರ್​ಆರ್​ ತಂಡಕ್ಕೆ ಧನ್ಯವಾದಗಳು’ ಎಂದು ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್​ ಟ್ವಿಟರ್ ಖಾತೆ ಮೂಲಕ ಟ್ವೀಟ್ ಮಾಡಲಾಗಿದೆ.

ಈ ಪ್ರಶಸ್ತಿಯನ್ನು ಪಡೆಯುವಾಗ ರಾಜಮೌಳಿ ಅವರು ತಾಯಿ ಹಾಗೂ ಪತ್ನಿಗೆ ಧನ್ಯವಾದ ಹೇಳಿದ್ದಾರೆ. ‘ನನ್ನ ತಾಯಿ ಚಿಕ್ಕ ವಯಸ್ಸಿನಲ್ಲಿ ಕಾಮಿಕ್ಸ್ ಹಾಗೂ ಕಥೆ ಪುಸ್ತಕ ಓದಲು ಹೆಚ್ಚು ಉತ್ತೇಜನ ನೀಡುತ್ತಿದ್ದರು. ಇದರಿಂದ ನನಗೆ ಸಿನಿಮಾ ಬಗ್ಗೆ ಆಸಕ್ತಿ ಬಂತು. ಇನ್ನು ನನ್ನ ಪತ್ನಿ ನನ್ನ ಜೀವನದ ಡಿಸೈನರ್. ಅವರಿಗೆ ಧನ್ಯವಾದ​’ ಎಂದಿದ್ದಾರೆ ರಾಜಮೌಳಿ.

ಇದನ್ನೂ ಓದಿ
Image
ಬಾಕ್ಸ್​ ಆಫೀಸ್​ನಲ್ಲಿ ನೂರಾರು ಕೋಟಿ ಬಾಚಿದ ‘ಬ್ರಹ್ಮಾಸ್ತ್ರ’ ಚಿತ್ರದಿಂದ ರಾಜಮೌಳಿಗೆ ಸಿಕ್ಕ ಹಣ ಎಷ್ಟು?
Image
ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ಪಬ್ಲಿಸಿಟಿ ಸ್ಟಂಟ್ಸ್ ಎಂದ ನೆಟ್ಟಿಗರು
Image
ಕೊನೇ ಕ್ಷಣದಲ್ಲಿ ಅಮಿತ್ ಶಾ ಭೇಟಿಯಿಂದ ಹಿಂದೆ ಸರಿದ ರಾಜಮೌಳಿ? ಇದಕ್ಕಿದೆ ದೊಡ್ಡ ಕಾರಣ
Image
‘ನನ್ನ ಸಿನಿಮಾದಲ್ಲಿ ಅಂಥ ನಟರು ಇರೋದೇ ಬೇಡ’: ರಾಜಮೌಳಿಗೆ ಕಂಡೀಷನ್​ ಹಾಕಿದ ಮಹೇಶ್​ ಬಾಬು?

ರಾಜಮೌಳಿ ಆಸ್ಕರ್ ಮೇಲೆಯೂ ಕಣ್ಣಿಟ್ಟಿದ್ದಾರೆ. ಭಾರತದ ಯಾವ ಚಿತ್ರಕ್ಕೂ ಆಸ್ಕರ್ ಪ್ರಶಸ್ತಿ ಸಿಕ್ಕಿಲ್ಲ. ಈಗ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್ ಅವಾರ್ಡ್ಸ್​​ ಪಡೆಯುವ ರೇಸ್​ನಲ್ಲಿದೆ. ಈ ಚಿತ್ರ ಆಸ್ಕರ್ ಗೆದ್ದರೆ ಹೊಸ ದಾಖಲೆ ನಿರ್ಮಾಣ ಆಗಲಿದೆ.

ಇದನ್ನೂ ಓದಿ: SS Rajamouli: ‘RRR ಬಾಲಿವುಡ್​ ಚಿತ್ರವಲ್ಲ’: ರಾಜಮೌಳಿ ಹೇಳಿಕೆಗೆ ಹಿಂದಿ ಮಂದಿ ಅಸಮಾಧಾನ

‘ಆರ್​ಆರ್​ಆರ್​’ ಸಿನಿಮಾ ಇತ್ತೀಚೆಗೆ ‘ಗೋಲ್ಡನ್ ಗ್ಲೋಬ್​’ ಅವಾರ್ಡ್​​ನಲ್ಲಿ ಪ್ರಶಸ್ತಿ ಬಾಚಿಕೊಂಡಿತ್ತು. ಆಗ ಇಡೀ ತಂಡ ಅಲ್ಲಿಗೆ ಹಾಜರಾಗಿ ಪ್ರಶಸ್ತಿ ಪಡೆದು ಸಂಭ್ರಮಿಸಿತ್ತು. ‘ಆರ್​ಆರ್​ಆರ್​’ ಚಿತ್ರದಿಂದ ರಾಜಮೌಳಿ ಖ್ಯಾತಿ ಹೆಚ್ಚಿದೆ. ವಿದೇಶದಲ್ಲೂ ಈ ನಿರ್ದೇಶಕನ ಬಗ್ಗೆ ಎಲ್ಲರೂ ಮಾತನಾಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ