Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR New Poster: ರಾಮ್​ ಚರಣ್ ಜನ್ಮದಿನಕ್ಕೂ ಮೊದಲೇ ಸರ್ಪ್ರೈಸ್​ ಗಿಫ್ಟ್​

ರಾಮ್​ ಚರಣ್​ ಹಿಂದೆಂದೂ ಕಾಣಿಸಿಕೊಳ್ಳದ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿಲ್ಲು-ಬಾಣ ಹಿಡಿದು ಆಗಸದತ್ತ ರಾಮ್​ ಚರಣ್​ ಮುಖ ಮಾಡಿದ್ದಾರೆ. ಅವರ ಡಿಫರೆಂಟ್​ ಲುಕ್​ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

RRR New Poster: ರಾಮ್​ ಚರಣ್ ಜನ್ಮದಿನಕ್ಕೂ ಮೊದಲೇ ಸರ್ಪ್ರೈಸ್​ ಗಿಫ್ಟ್​
ರಾಮ್​ ಚರಣ್​
Follow us
ರಾಜೇಶ್ ದುಗ್ಗುಮನೆ
|

Updated on:Mar 26, 2021 | 9:19 PM

ಟಾಲಿವುಡ್​ ನಟ ರಾಮ್​ ಚರಣ್​ ಶನಿವಾರ (ಮಾರ್ಚ್ 27) 36ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಜನ್ಮದಿನಕ್ಕೂ ಮೊದಲೇ ಅಭಿಮಾನಿಗಳು ಸಂಭ್ರಮಾಚರಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ವಿಶೇಷ ಎಂದರೆ ಹುಟ್ಟುಹಬ್ಬಕ್ಕೂ ಮೊದಲೇ ರಾಮ್​ ಚರಣ್​ಗೆ ಸರ್​ಪ್ರೈಸ್​ ಗಿಫ್ಟ್​ ಒಂದು ಸಿಕ್ಕಿದೆ. ಆರ್​ಆರ್​ಆರ್​ ಚಿತ್ರದಲ್ಲಿ ರಾಮ್​ ಚರಣ್​ ಪಾತ್ರ ಹೇಗಿರಲಿದೆ ಎಂಬುದನ್ನು ಚಿತ್ರತಂಡ ಅನಾವರಣ ಮಾಡಿದೆ. ರಾಮ್​ ಚರಣ್​ ಆರ್​ಆರ್​ಆರ್​ ಸಿನಿಮಾದಲ್ಲಿ ಅಲ್ಲುರಿ ಸೀತಾ ರಾಮರಾಜು ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ಹೀಗಾಗಿ ರಾಮ್​ ಚರಣ್​ ಜನ್ಮದಿನಕ್ಕೆ ಆರ್​ಆರ್​ಆರ್​ ಚಿತ್ರದ ನಿರ್ದೇಶಕ ಎಸ್​.ಎಸ್​. ರಾಜಮೌಳಿ ಫಸ್ಟ್​ ಲುಕ್​ ಗಿಫ್ಟ್​ ಆಗಿ ನೀಡಿದ್ದಾರೆ. ಇದು ರಾಮ್​ ಚರಣ್​ ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿದೆ.

ರಾಮ್​ ಚರಣ್​ ಹಿಂದೆಂದೂ ಕಾಣಿಸಿಕೊಳ್ಳದ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿಲ್ಲು-ಬಾಣ ಹಿಡಿದು ಆಗಸದತ್ತ ರಾಮ್​ ಚರಣ್​ ಮುಖ ಮಾಡಿದ್ದಾರೆ. ಅವರ ಡಿಫರೆಂಟ್​ ಲುಕ್​ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಪೋಸ್ಟರ್​ ಅನ್ನು ನಟಿ ಆಲಿಯಾ ಭಟ್, ಎಸ್​.ಎಸ್.​ ರಾಜಮೌಳಿ​ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಚಿತ್ರದಲ್ಲಿ ರಾಮ್​​ ಚರಣ್​ ಹಾಗೂ ಜೂ.ಎನ್​ಟಿಆರ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಜಮೌಳಿ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಆಲಿಯಾ ಭಟ್​, ಅಜಯ್​ ದೇವಗನ್​ ಕೂಡ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ.

View this post on Instagram

A post shared by SS Rajamouli (@ssrajamouli)

ಈ ಮೊದಲು ಜೂ.ಎನ್​ಟಿಆರ್​ ಲುಕ್​ ರಿಲೀಸ್​ ಆಗಿತ್ತು. ಕೋಮರಾಮ್​ ಭೀಮ್​ ಆಗಿ ಜೂ.ಎನ್​ಟಿಆರ್​ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಆಲಿಯಾ ಜನ್ಮದಿನದ ಅಂಗವಾಗಿ ಸೀತಾ ಪಾತ್ರವನ್ನು ರಾಜಮೌಳಿ ಅನಾವರಣ ಮಾಡಿದ್ದರು.

ಇದನ್ನೂ ಓದಿ: ಆಲಿಯಾ ಭಟ್​ ಜನ್ಮದಿನಕ್ಕೆ RRR ನಿರ್ದೇಶಕ ರಾಜಮೌಳಿ ಕಡೆಯಿಂದ ಭರ್ಜರಿ ಗಿಫ್ಟ್​! ಫ್ಯಾನ್ಸ್​ ಫಿದಾ

ಸೂಪರ್​ ಸ್ಟಾರ್​ ಪಟ್ಟಕ್ಕೇರಲು ರಶ್ಮಿಕಾ ಹರಸಾಹಸ, ರಾಮ್‌ ಚರಣ್ ಜೊತೆ ನಟಿಸಲು ಕಷ್ಟಪಟ್ಟು ಡೇಟ್‌ ಹೊಂದಿಸಿಕೊಳ್ತಿದ್ದಾರಂತೆ..

Published On - 9:17 pm, Fri, 26 March 21

ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು